Homeಕರ್ನಾಟಕಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರು ರಾಜ್ಯದ ‘ಅಪೌಷ್ಟಿಕತೆ’ ತಿಳಿದಿಲ್ಲವೇ? ಬಸವಣ್ಣನವರ ವಚನ ಓದಿಲ್ಲವೇ?

ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರು ರಾಜ್ಯದ ‘ಅಪೌಷ್ಟಿಕತೆ’ ತಿಳಿದಿಲ್ಲವೇ? ಬಸವಣ್ಣನವರ ವಚನ ಓದಿಲ್ಲವೇ?

ಮಾಂಸಾಹಾರಕ್ಕೆ ಸಸ್ಯಾಹಾರ ಪರ್ಯಾಯವಲ್ಲ ಎನ್ನುತ್ತಾರೆ ಡಾ.ಶ್ರೀನಿವಾಸ ಕಕ್ಕಿಲ್ಲಾಯ.

- Advertisement -
- Advertisement -

ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಕೋಳಿ ಮೊಟ್ಟೆ ಕೊಡುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಬೀದರ್‌ ನಗರದಲ್ಲಿ ರಾಷ್ಟ್ರೀಯ ಬಸವ ದಳ, ಲಿಂಗಾಯತ ಧರ್ಮ ಮಹಾಸಭಾ, ಅಕ್ಕನಾಗಲಾಂಬಿಕಾ ಮಹಿಳಾ ಗಣ ಹಾಗೂ ಲಿಂಗಾಯತ ಸಮಾಜದ ಆಶ್ರಯದಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಬೀದರ್‌ ನಗರದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಿ, ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಡಳಿತದ ಅಧಿಕಾರಿಗೆ ಪ್ರತಿಭಟನಾಕಾರರು ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿರುವ ಬಸವ ಮಂಟಪದ ಪ್ರಧಾನ ಸಂಚಾಲಕರಾದ ಮಾತೆ ಸತ್ಯಾದೇವಿ, “ಅನುದಾನಿತ ಮತ್ತು ಸರ್ಕಾರಿ ಶಾಲೆಗಳ 1 ರಿಂದ 8ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಕೋಳಿಮೊಟ್ಟೆ ಕೊಡುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ಮೊಟ್ಟೆ ಮಾಂಸಾಹಾರ, ಇದರಿಂದ ಮಕ್ಕಳ ಮಾನಸಿಕತೆ ಮೇಲೆ ದುಷ್ಪರಿಣಾಮ ಬೀರಲಿದೆ. ಮಕ್ಕಳಲ್ಲಿ ಪೌಷ್ಠಿಕತೆ ಹೆಚ್ಚಿಸುವ ಕಳಕಳಿ ಇದ್ದಲ್ಲಿ ಹಣ್ಣು, ದ್ವಿದಳ ಧಾನ್ಯಗಳು ಮತ್ತು ಮೊಳಕೆ ಕಾಳು ಕೊಡುವ ವ್ಯವಸ್ಥೆ ಮಾಡಲಿ” ಎಂದು ಸಲಹೆ ನೀಡಿದ್ದಾರೆ.

“ಶಾಲೆಯಲ್ಲಿ ಮುಗ್ಧ ಮಕ್ಕಳಿಗೆ ಕೋಳಿಮೊಟ್ಟೆ ನೀಡಿದರೆ ಉದ್ದೇಶಪೂರ್ವಕವಾಗಿ ಮಾಂಸಾಹಾರಕ್ಕೆ ಪ್ರಚೋದನೆ ನೀಡಿದಂತಾಗುತ್ತದೆ. ಮೊಟ್ಟೆ ತಿನ್ನುವ ಮಕ್ಕಳು ಮತ್ತು ತಿನ್ನದ ಮಕ್ಕಳೆಂದು ಶಾಲೆಯಲ್ಲಿ ನೀವೇ ಭೇದಭಾವ ಮೂಡಿಸಿದಂತಾಗುತ್ತದೆ. ಜೈನ ಮತ್ತು ಲಿಂಗಾಯತ ಧರ್ಮದ ಪ್ರಕಾರ ಮೊಟ್ಟೆ ಮಾಂಸಾಹಾರ ಪದ್ಧತಿಯಾಗಿದೆ. ಇದರಿಂದ ಸಸ್ಯಾಹಾರಿ ಪದ್ಧತಿ ಅಳವಡಿಸಿಕೊಂಡವರಿಗೆ ಇದು ಅವಮಾನ ಮಾಡಿದಂತಾಗುತ್ತದೆ. ಆದ್ದರಿಂದ ಸರ್ಕಾರ ಕೂಡಲೇ ಈ ನಿರ್ಣಯವನ್ನು ಹಿಂಪಡೆಯಬೇಕು” ಎಂದು ಮಾತಾಜಿ ಆಗ್ರಹಿಸಿದ್ದಾರೆ.

“ಮೊಟ್ಟೆ ಸಸ್ಯಾಹಾರ, ಮಾಂಸಾಹಾರ ಅಲ್ಲ. ಅದು ಪೌಷ್ಟಿಕಾಂಶಗಳಿಂದ ತುಂಬಿದ ದ್ರವ. ಮೊಟ್ಟೆಗೆ ಧರ್ಮ, ಜಾತಿ ಲೇಪನ ಮಾಡಬಾರದು” ಎಂದು ಆರ್‌ಪಿಐ, ಭಾರತೀಯ ವಿದ್ಯಾರ್ಥಿ ಸಂಘಟನೆಗಳು ಹೇಳಿವೆ. ಮೊಟ್ಟೆಯನ್ನು ಸಸ್ಯಾಹಾರವೆಂದು ಬಣ್ಣಿಸಿ, ಅದರ ಉಪಯೋಗವನ್ನು ಪಡೆಯುವುದು ಮತ್ತೊಂದು ರೀತಿಯ ದ್ವಂದ್ವ ನಿಲುವು. ಆದರೆ ಎಲ್ಲ ಚರ್ಚೆಗಳಾಚೆಗೆ ‘ಮೊಟ್ಟೆ’ ಪೌಷ್ಟಿಕಯುಕ್ತ ಆಹಾರ ಎಂಬುದು ಎಲ್ಲ ವೈದ್ಯರ ಅಭಿಪ್ರಾಯ.

ಮಾಂಸಾಹಾರಕ್ಕೆ ಸಸ್ಯಾಹಾರ ಪರಿಹಾರವಲ್ಲ: ಡಾ.ಕಕ್ಕಿಲ್ಲಾಯ

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲೆಯ ಖ್ಯಾತ ವೈದ್ಯರಾದ ಶ್ರೀನಿವಾಸ ಕಕ್ಕಿಲ್ಲಾಯ ಅವರು, “ಕೇರಳ ಮತ್ತು ತಮಿಳುನಾಡಿನಲ್ಲಿ ವಾರಕ್ಕೆ ಐದು ದಿನ ಮಕ್ಕಳಿಗೆ ಮೊಟ್ಟೆ ಕೊಡುತ್ತಿದ್ದಾರೆ. ಅಲ್ಲಿ ಮಕ್ಕಳ ಕುಪೋಷಣೆ ಇಡೀ ದೇಶದಲ್ಲಿ ಕನಿಷ್ಠ ಮಟ್ಟದಲ್ಲಿದೆ. ಕರ್ನಾಟಕದಲ್ಲಿ 2007-2008ರಲ್ಲಿ ಈ ಪ್ರಸ್ತಾಪ ಬಂದ ದಿನದಿಂದ ಈ ಕಾಟವನ್ನು ಸ್ವಾಮೀಜಿಗಳು ಕೊಡುತ್ತಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಮಕ್ಕಳಲ್ಲಿ ಕುಪೋಷಣೆ ಶೇ. 38 ಇದೆ. ಹಿಂದುಳಿದ ಜಿಲ್ಲೆಗಳಲ್ಲಿ ಈ ಪ್ರಮಾಣ ಇನ್ನೂ ಹೆಚ್ಚಾಗಿದೆ. ವೈಜ್ಞಾನಿಕ ಕಾರಣದಿಂದ ಈ ಹಿಂದುಳಿದ ಜಿಲ್ಲೆಗಳಲ್ಲಿ ಮೊಟ್ಟೆಯನ್ನು ಕೊಡಲು ಸರ್ಕಾರ ಮುಂದಾಗಿದೆ. ಇದಕ್ಕೆ ವಿರೋಧ ಸಲ್ಲದು” ಎಂದರು.

“ಮಾಂಸಾಹಾರಕ್ಕೆ ಪರ್ಯಾಯ ಇಲ್ಲ. ಮಕ್ಕಳಿಗೆ ಬೇಕಾದಷ್ಟು ಪ್ರೋಟೀನ್‌‌ ಯಾವುದೇ ಸಸ್ಯಾಹಾರದಲ್ಲಿ ಸಿಗುವುದಿಲ್ಲ. ರಾಜ್ಯದಲ್ಲಿ ಶೇ. 80ರಿಂದ 88ರಷ್ಟು ಜನರು ಮಾಂಸಾಹಾರವನ್ನು ಸೇವಿಸುತ್ತಾರೆ. 12ರಿಂದ 20 ಶೇಕಡಾ ಜನರು ಮನೆಯಲ್ಲಿ ಸಸ್ಯಾಹಾರಿಗಳು. ಇವರ ಮಕ್ಕಳಿಗೆ ಮನೆಯಲ್ಲಿ ಮೊಟ್ಟೆಯನ್ನು ಕೊಡಬೇಡಿ” ಎಂಬುದು ಡಾ.ಶ್ರೀನಿವಾಸ ಕಕ್ಕಿಲ್ಲಾಯ ಅವರ ಅಭಿಪ್ರಾಯ.

ಅಪೌಷ್ಟಿಕತೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಐದನೇ ಸ್ಥಾನ

“ಭಾರತದಲ್ಲಿ 33 ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ನರಳುತ್ತಿದ್ದಾರೆ, ಮಹಾರಾಷ್ಟ್ರ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಅಪೌಷ್ಟಿಕ ಮಕ್ಕಳಿದ್ದಾರೆ” ಎಂದು ಪಿಟಿಐ ವರದಿ ಮಾಡಿತ್ತು. ಪಿಟಿಐ ಸುದ್ದಿಸಂಸ್ಥೆಯು ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಈ ಮಾಹಿತಿಯನ್ನು ಪಡೆದುಕೊಂಡಿತ್ತು.

ಮಹಿಳಾ ಮತ್ತು ಮಕ್ಕಳ ಸಬಲೀಕರಣ ಸಚಿವಾಲಯದ ಅಕ್ಟೋಬರ್‌ 14ರವರೆಗಿನ ಮಾಹಿತಿ ಪ್ರಕಾರ, ಅಪೌಷ್ಟಿಕತೆಯನ್ನು ಹೊಂದಿರುವ ಅರ್ಧದಷ್ಟು ಮಕ್ಕಳು ತೀವ್ರತರನಾದ ಅಪೌಷ್ಟಿಕತೆಯನ್ನು ಹೊಂದಿವೆ. 17,76,902 ಮಕ್ಕಳಲ್ಲಿ ತೀವ್ರ ಅಪೌಷ್ಟಿಕತೆ ಇದ್ದು, 15,46,420 ಮಕ್ಕಳಲ್ಲಿ ಮಧ್ಯಮ ತೀವ್ರ ಅಪೌಷ್ಟಿಕತೆ ಇದೆ.

ಎತ್ತರಕ್ಕೆ ಅನುಗುಣವಾಗಿ ಇಲ್ಲದ ತೂಕ, ತೋಳಿನ ಮಧ್ಯದ ಸುತ್ತಳತೆ 115 ಮಿಲಿಮೀಟರ್‌ಗಿಂತ ಕಡಿಮೆ ಇರುವುದು ತೀವ್ರ ಅಪೌಷ್ಟಿಕತೆಯನ್ನು ಸೂಚಿಸುತ್ತದೆ ಎಂದು ವಿಶ್ವಸಂಸ್ಥೆ ಹೇಳಿದೆ. ತೋಳಿನ ಮಧ್ಯದ ಸುತ್ತಳತೆ 115 ಮಿಲಿಮೀಟರ್‌ಗಳಿಗಿಂತ ಹೆಚ್ಚು ಆದರೆ 125 ಮಿಲಿಮೀಟರ್‌ಗಳಿಗಿಂತ ಕಡಿಮೆ ಇದ್ದರೆ ಅದನ್ನು ಮಧ್ಯಮ ತೀವ್ರ ಅಪೌಷ್ಟಿಕತೆ ಎಂದು ವಿಶ್ವಸಂಸ್ಥೆ ವ್ಯಾಖ್ಯಾನಿಸಿದೆ.

ವರದಿಯ ಪ್ರಕಾರ, 6,16,772 ಅಪೌಷ್ಟಿಕ ಮಕ್ಕಳನ್ನು ಹೊಂದಿರುವ ಮಹಾರಾಷ್ಟ್ರ ರಾಜ್ಯ ಮೊದಲ ಸ್ಥಾನದಲ್ಲಿದೆ. ಬಿಹಾರದಲ್ಲಿ 4,75,824, ಗುಜರಾತ್‌ನಲ್ಲಿ 3,20,465, ಆಂಧ್ರಪ್ರದೇಶದಲ್ಲಿ 2,67,228, ಕರ್ನಾಟಕದಲ್ಲಿ 2,49,463, ಉತ್ತರ ಪ್ರದೇಶದಲ್ಲಿ 1,86,640 ಅಪೌಷ್ಟಿಕ ಮಕ್ಕಳಿದ್ದಾರೆ.

ನವೆಂಬರ್ 2020 ಮತ್ತು ಈ ವರ್ಷದ ಅಕ್ಟೋಬರ್ 14ರ ನಡುವೆ ತೀವ್ರತರವಾದ ಅಪೌಷ್ಟಿಕತೆಯ ಮಕ್ಕಳ ಸಂಖ್ಯೆಯಲ್ಲಿ 91% ಏರಿಕೆಯಾಗಿದೆ. ನವೆಂಬರ್ 2020ರಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ 9,27,606 ಆಗಿತ್ತು. ಪಿಟಿಐ ವರದಿ ಪ್ರಕಾರ, ಎರಡು ವಿಧದಲ್ಲಿ ಅಪೌಷ್ಟಿಕ ಮಕ್ಕಳ ಅಂಕಿ-ಅಂಶಗಳನ್ನು ಸರ್ಕಾರ ದಾಖಲಿಸಿದೆ. ಕಳೆದ ವರ್ಷದ ಅಂಕಿಅಂಶಗಳನ್ನು ರಾಜ್ಯ ಸರ್ಕಾರಗಳು ಸಂಗ್ರಹಿಸಿ ಕೇಂದ್ರಕ್ಕೆ ರವಾನಿಸಿದ್ದರೆ, ಈ ವರ್ಷದ ಅಂಕಿಅಂಶಗಳನ್ನು ಅಂಗನವಾಡಿ ಕಾರ್ಯಕರ್ತೆಯರು ನೇರವಾಗಿ ಪೋಷಣ್‌ ಟ್ರ್ಯಾಕರ್ ಅಪ್ಲಿಕೇಶನ್‌ನಲ್ಲಿ ನಮೂದಿಸಿ ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದಾರೆ.

ಕಳೆದ ವರ್ಷದ ದತ್ತಾಂಶವು ಆರು ತಿಂಗಳಿಂದ ಆರು ವರ್ಷಗಳವರೆಗಿನ ಮಕ್ಕಳ ಗುಂಪಿಗೆ ಸಂಬಂಧಿಸಿದ್ದು, ಈ ವರ್ಷದ ದತ್ತಾಂಶದಲ್ಲಿ ಮಕ್ಕಳ ವಯಸ್ಸಿನ ಗುಂಪನ್ನು ನಿರ್ದಿಷ್ಟಪಡಿಸಲಾಗಿಲ್ಲ. ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಅವುಗಳ ಫಲಾನುಭವಿಗಳನ್ನು ಪತ್ತೆಹಚ್ಚಲು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಪೋಷಣ್‌ ಟ್ರ್ಯಾಕರ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಿದೆ.

ಹಿಂದಿನ ಅಂಕಿ-ಅಂಶಗಳ ಪ್ರಕಾರ ಅಪೌಷ್ಟಿಕತೆ, ರಕ್ತಹೀನತೆ ಹೊಂದಿರುವ ಶಾಲಾ ಮಕ್ಕಳ ಶೇಕಡಾವಾರು ಪ್ರಮಾಣ ಕರ್ನಾಟಕದಲ್ಲಿ ತೀವ್ರತರನಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ ಶೇ. 74ರಷ್ಟು ಅಪೌಷ್ಟಿಕತೆ ಇದೆ. ಕಲಬುರಗಿಯಲ್ಲಿ ಶೇ. 72.4, ಬಳ್ಳಾರಿಯಲ್ಲಿ ಶೇ. 72.3, ಕೊಪ್ಪಳದಲ್ಲಿ ಶೇ. 70.7, ರಾಯಚೂರಿನಲ್ಲಿ ಶೇ. 70.6, ಬೀದರ್‌ನಲ್ಲಿ ಶೇ. 69.1, ವಿಜಯಪುರದಲ್ಲಿ ಶೇ. 68ರಷ್ಟು ಅಪೌಷ್ಟಿಕತೆ ವರದಿಯಾಗಿದೆ.

ಸಸ್ಯಾಹಾರ, ಮಾಂಸಾಹಾರ ಭಿನ್ನತೆ ಸಲ್ಲದು ಎಂದಿದ್ದರು ಬಸವಣ್ಣ

ಮೊಟ್ಟೆ ಮಾಂಸಾಹಾರವಾಗಿದ್ದು, ಅದನ್ನು ಮಕ್ಕಳಿಗೆ ಕೊಡಬೇಡಿ ಎಂದು ಇಂದು ದನಿ ಎತ್ತಿರುವವರು ಬಸವಣ್ಣನವರ ಅನುಯಾಯಿಗಳು ಎಂದು ಬಿಂಬಿಸಿಕೊಂಡಿದ್ದಾರೆ. ಆಹಾರ ಸಂಸ್ಕೃತಿಯ ಕುರಿತು ಬಸವಣ್ಣ ಇಂತಹ ಯಾವುದೇ ತಾತ್ಸರವನ್ನು ಹೊಂದಿರಲಿಲ್ಲ. ಬಸವಣ್ಣನವರ ಒಂದು ವಚನ ನಮ್ಮನ್ನು ಚಿಂತನೆಗೆ ಹಚ್ಚಬೇಕು.

“ಮರ ಗಿಡ ಬಳ್ಳಿ ಧಾನ್ಯಂಗಳ ಬೆಳಸೆಲ್ಲವ ತರಿತರಿದು

ಪ್ರಾಣವ ಕೊಂದುಂಡು, ಶರೀರವ ಹೊರೆವ ದೋಷಕ್ಕೆ

ಇನ್ಯಾವುದು ವಿಧಿಯಯ್ಯಾ

ಒಂದಿಂದ್ರಿಯ ಮೊದಲಾಗಿ ಐದಿಂದ್ರಿಯ ಕಡೆಯಾದ

ಜೀವಜಾಲದಲ್ಲಿದೆ ಚರಾಚರವೆಲ್ಲ

ಅದು ಕಾರಣ,

ಕೂಡಲ ಸಂಗನ ಶರಣರು ಲಿಂಗಕ್ಕರ್ಪಿಸಿ ಪ್ರಸಾದವ ಕೊಂಡು

ನಿರ್ದೋಷಿಗಳಾಗಿ ಬದುಕಿದರು.

ಇತ್ತೀಚೆಗೆ ಮಧುಮೇಹದ ಕುರಿತು ಮಾತನಾಡುತ್ತಾ ಡಾ.ಶ್ರೀನಿವಾಸ ಕಕ್ಕಿಲ್ಲಾಯ ಅವರು ಬಸವಣ್ಣನವರ ಈ ವಚನವನ್ನು ಉಲ್ಲೇಖಿಸಿದ್ದರು. “ನಾವು ಮರ, ಗಿಡ, ಬಳ್ಳಿಗಳನ್ನೆಲ್ಲ ಕತ್ತರಿಸಿ ತಿನ್ನುತ್ತೇವೆ, ಪ್ರಾಣಿಗಳನ್ನು ಕೊಂದು ತಿನ್ನುತ್ತೇವೆ. ಈ ಇವುಗಳಿಂದ ಶರೀರವನ್ನು ಹೊರೆಯುತ್ತೇವೆ. ಇವೆಲ್ಲವೂ ಆಹಾರವೇ. ಇದು ದೋಷ. ಇದಕ್ಕೆ ಉತ್ತರ ಏನು? ಬಸವಣ್ಣ ಹೇಳುತ್ತಾರೆ- ಒಂದಿದ್ರಿಯ ಮೊದಲಾಗಿ ಐದಿಂದ್ರಿಯ ಕಡೆಯಾದ ಜೀವಜಾಲದಲ್ಲಿದೆ ಚರ ಅಚರವೆಲ್ಲ; ಅದು ಕಾರಣ ಕೂಡಲ ಸಂಗನ ಶರಣರು ಲಿಂಗಕ್ಕರ್ಪಿಸಿ ಪ್ರಸಾದವ ಕೊಂಡು ನಿರ್ದೋರ್ಷಿಗಳಾಗಿ ಬದುಕಿದರು- ಎಂದು. ಅಂದರೆ ಮಾಂಸಾಹಾರ ತಿಂದರೂ, ಸಸ್ಯಾಹಾರ ತಿಂದರೂ ಜೀವಹಾನಿಯನ್ನು ಮಾಡಿದ ಹಾಗೆಯೇ. ನಾವು ಬದುಕಬೇಕಾದರೆ ನಾವು ಜೀವಿಗಳನ್ನೇ ತಿನ್ನಬೇಕಾಗುತ್ತದೆ. ಎಲ್ಲ ಜೀವಿಗಳಿಗೂ ಸಂವೇದನೆ ಇದೆ. ಅದು ಒಂದಿದ್ರಿಯ ಜೀವಿಯಾಗಲೀ, ಐದಿಂದ್ರಿಯ ಜೀವಿಯಾಗಿರಲಿ. ಹೀಗಾಗಿ ಪ್ರಕೃತಿ ಕೊಟ್ಟಿದ್ದನ್ನು ಲಿಂಗಕ್ಕೆ ಅರ್ಪಿಸಿ, ನೀವು ಇದನ್ನು ಸ್ವೀಕರಿಸಿದರೆ ಇದು ದೋಷ ಅನಿಸುವುದಿಲ್ಲ ಎಂದು ಹನ್ನೆರಡನೇ ಶತನಮಾನದಲ್ಲೇ ಹೇಳಿದ ಬಹುದೊಡ್ಡ ದಾರ್ಶನಿಕ ಬಸವಣ್ಣ” ಎನ್ನುತ್ತಾರೆ ಡಾ.ಶ್ರೀನಿವಾಸ ಕಕ್ಕಿಲ್ಲಾಯ.

ಬಸವಣ್ಣನವರ ಬ್ಯಾನರ್‌ ಹಿಡಿದು ಮಾಂಸಾಹಾರ, ಸಸ್ಯಾಹಾರದ ವಿವಾದ ಸೃಷ್ಟಿಸುವವರಿಗೆ ಇದು ಅರ್ಥವಾಗುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...