Homeಕರ್ನಾಟಕನನ್ನ ಚಲನವಲನ ತಿಳಿಯಲು ನಾಗಪುರದಿಂದ ತಂಡ ಕಳುಸಿದ್ದಾರೆ, ಅದಕ್ಕೆ ನಾನು ಹೆದರುವುದಿಲ್ಲ: ಜಗದೀಶ್ ಶೆಟ್ಟರ್

ನನ್ನ ಚಲನವಲನ ತಿಳಿಯಲು ನಾಗಪುರದಿಂದ ತಂಡ ಕಳುಸಿದ್ದಾರೆ, ಅದಕ್ಕೆ ನಾನು ಹೆದರುವುದಿಲ್ಲ: ಜಗದೀಶ್ ಶೆಟ್ಟರ್

- Advertisement -
- Advertisement -

ರಾಜ್ಯದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ. ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಕಾಂಗ್ರೆಸ್‌ ಸೇರ್ಪಡೆಯಾದಾಗಿನಿಂದ ಬಿಜೆಪಿ ಹಾಗೂ ಸಂಘಪರಿವಾರದ ನಾಯಕರು ಅವರನ್ನು ಸೋಲಿಸಲು ಪಣ ತೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ”ನನ್ನ ಚಲನವಲನಗಳ ಬಗ್ಗೆ ತಿಳಿಯಲು ನಾಗಪುರದಿಂದ ತಂಡವನ್ನು ಕಳುಹಿಸಿದ್ದಾರೆ. ಇದಕ್ಕೆಲ್ಲ ನಾನು ಹೆದರುವುದಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

”ನನ್ನ ಚಲನವಲನ ಗಮನಿಸಲು ನಾಗಪುರದಿಂದ ತಂಡ ಬಂದಿದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ಒಂದು ವೇಳೆ ಬಂದಿದ್ದರೆ ನನ್ನ ಚಲನವಲನ ಗಮನಿಸುವುದರೊಳಗಾಗಿ ಚುನಾವಣೆಯೇ ಮುಗಿದಿರುತ್ತದೆ” ಎಂದು ಶೆಟ್ಟರ್ ಹೇಳಿದರು.

”ಬಿಜೆಪಿಯವರು ಲಿಂಗಾಯತ ಸಮುದಾಯಕ್ಕೆ ಮಾಡುತ್ತಿರುವ ಅವಮಾನದ ಬಗ್ಗೆ ರಾಹುಲ್ ಗಾಂಧಿ ಜೊತೆ ಗಂಭೀರ ಚರ್ಚೆ ಮಾಡಲಾಗಿದೆ. ಅವರು ಕೂಡ ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆದಿದ್ದೂ, ನಾನು ಮಾಹಿತಿ ನೀಡಿದ್ದೇನೆ” ಎಂದರು.

”ನಾಗಪುರದಲ್ಲಿ ಅಷ್ಟೊಂದು ಎಕ್ಸಪರ್ಟ್ ತಂಡಗಳು ಇದ್ದಿದದ್ದರೆ, ಇತ್ತೀಚೆಗೆ ಅಲ್ಲಿ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಏಕೆ ಸೋಲನ್ನು ಅನುಭವಿಸುತ್ತಿತ್ತು?” ಎಂದು ಪ್ರಶ್ನಿಸಿದ್ದಾರೆ.

”ಚುನಾವಣೆ ಎಂದ ಮೇಲೆ ನಕರಾತ್ಮಕ ಹಾಗೂ ಧನಾತ್ಮಕ ಅಭಿಪ್ರಾಯಗಳು ಬಂದೇ ಬರುತ್ತವೆ. ನನ್ನ ಬಗ್ಗೆಯೂ ಇದೀಗ ನೆಗೆಟೀವ್ ಅಭಿಪ್ರಾಯಗಳು ಬಂದಿವೆ. ಈ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಇಂತಹ ಹಲವು ನೆಗೇಟಿವ್ ಅಭಿಪ್ರಾಯಗಳನ್ನು ನಾನು ಎದುರಿಸಿದ್ದೇನೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ನನ್ನನ್ನು ಸೋಲಿಸಲು ಸಾಧ್ಯವಿಲ್ಲ. ಇದರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ” ಎಂದರು.

”ಕಾಂಗ್ರೆಸ್ ಪಕ್ಷ ಎಲ್ಲ ಸ್ಥಾನಮಾನ ನೀಡಿದೆ. ಈ ಬಾರಿ ಚುನಾವಣೆಯಲ್ಲಿ ಐವತ್ತು ಲಿಂಗಾಯತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ರಾಹುಲ್ ಗಾಂಧಿ ಪ್ರಚಾರ ಮಾಡುತ್ತಾರೆ. ಹಾಗೆಯೆ ಹಾನಗಲ್‌, ಹುಬ್ಬಳ್ಳಿ-ಧಾರವಾಡದಲ್ಲೂ ಪ್ರಚಾರ ಕಾರ್ಯವನ್ನು ಕೈಗೊಳ್ಳಲಿದ್ದಾರೆ. ಅಲ್ಲದೆ ನನಗೂ ಪ್ರಚಾರಕ್ಕಾಗಿ ಕರೆಯುತ್ತಿದ್ದಾರೆ” ಎಂದು ತಿಳಿಸಿದರು.

ರಾಹುಲ್ ಜೊತೆ ಶೆಟ್ಟರ್ ಮುಕ್ತ ಚರ್ಚೆ:

”ರಾಹುಲ್ ಗಾಂಧಿ ಅವರು ರಾಜ್ಯ ರಾಜಕಾರಣ ಹಾಗೂ ಇತರ ವಿಷಯಗಳ ಬಗ್ಗೆ ಮುಕ್ತವಾಗಿ ನನ್ನೊಂದಿಗೆ ಚರ್ಚಿಸಿದರು. ಬಿಜೆಪಿ ಒಳಗಿನ ಬೆಳವಣಿಗೆ ಮತ್ತು ಲಿಂಗಾಯತರ ಕಡೆಗಣನೆ ಬಗ್ಗೆಯೂ ಚರ್ಚೆ ನಡೆಯಿತು. ಆಗ ಶಾಸಕ ಪ್ರಸಾದ ಅಬ್ಬಯ್ಯ ಕೂಡ ಜೊತೆಗಿದ್ದರು” ಎಂದು ಪ್ರಶ್ನೆಯೊಂದಕ್ಕೆ ಶೆಟ್ಟರ್ ಪ್ರತಿಕ್ರಿಯೆ ನೀಡಿದರು.

”ಹಾನಗಲ್‌ನಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಗೆ ಬರುವಂತೆ ನನಗೂ ಆಹ್ವಾನ ನೀಡಿದ್ದಾರೆ. ಉತ್ತರ ಕರ್ನಾಟಕದ ವಿವಿಧೆಡೆ ಪ್ರಚಾರಕ್ಕೆ ಬರುವಂತೆ ಒತ್ತಡ ಬರುತ್ತಿದೆ. ಈ ಕುರಿತು ನನ್ನೊಂದಿಗೆ ಚರ್ಚಿಸಿ ವೇಳಾಪಟ್ಟಿ ಸಿದ್ದಪಡಿಸುವುದಾಗಿ ಕಾಂಗ್ರೆಸ್‌ನ ವೇಣುಗೋಪಾಲ್ ಅವರು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸಹ ರಾಹುಲ್ ಅವರು ಪ್ರಚಾರ ಮಾಡುವ ಸಾಧ್ಯತೆ ಇದ್ದು, ರಾಜ್ಯದ ನಾಯಕರು ಅದನ್ನು ಖಚಿತಪಡಿಸಲಿದ್ದಾರೆ” ಎಂದು ತಿಳಿಸಿದ್ದಾರೆ.

”ಕಾಂಗ್ರೆಸ್ ಈ ಸಲ‌ ಐವತ್ತಕ್ಕೂ ಹೆಚ್ಚು ಸೀಟುಗಳನ್ನು ಲಿಂಗಾಯತ ಸಮುದಾಯಕ್ಕೆ ನೀಡಿದೆ‌. ನನ್ನ ಕ್ಷೇತ್ರದಲ್ಲಿ ಬಂಡಾಯವಾಗಿ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ನ ಅಲ್ತಾಫ‌ ಕಿತ್ತೂರ ಅವರೊಂದಿಗೆ ಪಕ್ಷದ ಮುಖಂಡರು ಈಗಾಗಲೇ ಮಾತನಾಡಿದ್ದಾರೆ. ನಾನೂ ಸಹ ಮಾತುಕತೆ ನಡೆಸಲಿದ್ದೇನೆ. ಸದ್ಯದಲ್ಲೇ ಎಲ್ಲವೂ ಬಗೆಹರಿಯಲಿದೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...