Homeಕರ್ನಾಟಕನನ್ನ ಚಲನವಲನ ತಿಳಿಯಲು ನಾಗಪುರದಿಂದ ತಂಡ ಕಳುಸಿದ್ದಾರೆ, ಅದಕ್ಕೆ ನಾನು ಹೆದರುವುದಿಲ್ಲ: ಜಗದೀಶ್ ಶೆಟ್ಟರ್

ನನ್ನ ಚಲನವಲನ ತಿಳಿಯಲು ನಾಗಪುರದಿಂದ ತಂಡ ಕಳುಸಿದ್ದಾರೆ, ಅದಕ್ಕೆ ನಾನು ಹೆದರುವುದಿಲ್ಲ: ಜಗದೀಶ್ ಶೆಟ್ಟರ್

- Advertisement -
- Advertisement -

ರಾಜ್ಯದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ. ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಕಾಂಗ್ರೆಸ್‌ ಸೇರ್ಪಡೆಯಾದಾಗಿನಿಂದ ಬಿಜೆಪಿ ಹಾಗೂ ಸಂಘಪರಿವಾರದ ನಾಯಕರು ಅವರನ್ನು ಸೋಲಿಸಲು ಪಣ ತೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ”ನನ್ನ ಚಲನವಲನಗಳ ಬಗ್ಗೆ ತಿಳಿಯಲು ನಾಗಪುರದಿಂದ ತಂಡವನ್ನು ಕಳುಹಿಸಿದ್ದಾರೆ. ಇದಕ್ಕೆಲ್ಲ ನಾನು ಹೆದರುವುದಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

”ನನ್ನ ಚಲನವಲನ ಗಮನಿಸಲು ನಾಗಪುರದಿಂದ ತಂಡ ಬಂದಿದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ಒಂದು ವೇಳೆ ಬಂದಿದ್ದರೆ ನನ್ನ ಚಲನವಲನ ಗಮನಿಸುವುದರೊಳಗಾಗಿ ಚುನಾವಣೆಯೇ ಮುಗಿದಿರುತ್ತದೆ” ಎಂದು ಶೆಟ್ಟರ್ ಹೇಳಿದರು.

”ಬಿಜೆಪಿಯವರು ಲಿಂಗಾಯತ ಸಮುದಾಯಕ್ಕೆ ಮಾಡುತ್ತಿರುವ ಅವಮಾನದ ಬಗ್ಗೆ ರಾಹುಲ್ ಗಾಂಧಿ ಜೊತೆ ಗಂಭೀರ ಚರ್ಚೆ ಮಾಡಲಾಗಿದೆ. ಅವರು ಕೂಡ ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆದಿದ್ದೂ, ನಾನು ಮಾಹಿತಿ ನೀಡಿದ್ದೇನೆ” ಎಂದರು.

”ನಾಗಪುರದಲ್ಲಿ ಅಷ್ಟೊಂದು ಎಕ್ಸಪರ್ಟ್ ತಂಡಗಳು ಇದ್ದಿದದ್ದರೆ, ಇತ್ತೀಚೆಗೆ ಅಲ್ಲಿ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಏಕೆ ಸೋಲನ್ನು ಅನುಭವಿಸುತ್ತಿತ್ತು?” ಎಂದು ಪ್ರಶ್ನಿಸಿದ್ದಾರೆ.

”ಚುನಾವಣೆ ಎಂದ ಮೇಲೆ ನಕರಾತ್ಮಕ ಹಾಗೂ ಧನಾತ್ಮಕ ಅಭಿಪ್ರಾಯಗಳು ಬಂದೇ ಬರುತ್ತವೆ. ನನ್ನ ಬಗ್ಗೆಯೂ ಇದೀಗ ನೆಗೆಟೀವ್ ಅಭಿಪ್ರಾಯಗಳು ಬಂದಿವೆ. ಈ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಇಂತಹ ಹಲವು ನೆಗೇಟಿವ್ ಅಭಿಪ್ರಾಯಗಳನ್ನು ನಾನು ಎದುರಿಸಿದ್ದೇನೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ನನ್ನನ್ನು ಸೋಲಿಸಲು ಸಾಧ್ಯವಿಲ್ಲ. ಇದರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ” ಎಂದರು.

”ಕಾಂಗ್ರೆಸ್ ಪಕ್ಷ ಎಲ್ಲ ಸ್ಥಾನಮಾನ ನೀಡಿದೆ. ಈ ಬಾರಿ ಚುನಾವಣೆಯಲ್ಲಿ ಐವತ್ತು ಲಿಂಗಾಯತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ರಾಹುಲ್ ಗಾಂಧಿ ಪ್ರಚಾರ ಮಾಡುತ್ತಾರೆ. ಹಾಗೆಯೆ ಹಾನಗಲ್‌, ಹುಬ್ಬಳ್ಳಿ-ಧಾರವಾಡದಲ್ಲೂ ಪ್ರಚಾರ ಕಾರ್ಯವನ್ನು ಕೈಗೊಳ್ಳಲಿದ್ದಾರೆ. ಅಲ್ಲದೆ ನನಗೂ ಪ್ರಚಾರಕ್ಕಾಗಿ ಕರೆಯುತ್ತಿದ್ದಾರೆ” ಎಂದು ತಿಳಿಸಿದರು.

ರಾಹುಲ್ ಜೊತೆ ಶೆಟ್ಟರ್ ಮುಕ್ತ ಚರ್ಚೆ:

”ರಾಹುಲ್ ಗಾಂಧಿ ಅವರು ರಾಜ್ಯ ರಾಜಕಾರಣ ಹಾಗೂ ಇತರ ವಿಷಯಗಳ ಬಗ್ಗೆ ಮುಕ್ತವಾಗಿ ನನ್ನೊಂದಿಗೆ ಚರ್ಚಿಸಿದರು. ಬಿಜೆಪಿ ಒಳಗಿನ ಬೆಳವಣಿಗೆ ಮತ್ತು ಲಿಂಗಾಯತರ ಕಡೆಗಣನೆ ಬಗ್ಗೆಯೂ ಚರ್ಚೆ ನಡೆಯಿತು. ಆಗ ಶಾಸಕ ಪ್ರಸಾದ ಅಬ್ಬಯ್ಯ ಕೂಡ ಜೊತೆಗಿದ್ದರು” ಎಂದು ಪ್ರಶ್ನೆಯೊಂದಕ್ಕೆ ಶೆಟ್ಟರ್ ಪ್ರತಿಕ್ರಿಯೆ ನೀಡಿದರು.

”ಹಾನಗಲ್‌ನಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಗೆ ಬರುವಂತೆ ನನಗೂ ಆಹ್ವಾನ ನೀಡಿದ್ದಾರೆ. ಉತ್ತರ ಕರ್ನಾಟಕದ ವಿವಿಧೆಡೆ ಪ್ರಚಾರಕ್ಕೆ ಬರುವಂತೆ ಒತ್ತಡ ಬರುತ್ತಿದೆ. ಈ ಕುರಿತು ನನ್ನೊಂದಿಗೆ ಚರ್ಚಿಸಿ ವೇಳಾಪಟ್ಟಿ ಸಿದ್ದಪಡಿಸುವುದಾಗಿ ಕಾಂಗ್ರೆಸ್‌ನ ವೇಣುಗೋಪಾಲ್ ಅವರು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸಹ ರಾಹುಲ್ ಅವರು ಪ್ರಚಾರ ಮಾಡುವ ಸಾಧ್ಯತೆ ಇದ್ದು, ರಾಜ್ಯದ ನಾಯಕರು ಅದನ್ನು ಖಚಿತಪಡಿಸಲಿದ್ದಾರೆ” ಎಂದು ತಿಳಿಸಿದ್ದಾರೆ.

”ಕಾಂಗ್ರೆಸ್ ಈ ಸಲ‌ ಐವತ್ತಕ್ಕೂ ಹೆಚ್ಚು ಸೀಟುಗಳನ್ನು ಲಿಂಗಾಯತ ಸಮುದಾಯಕ್ಕೆ ನೀಡಿದೆ‌. ನನ್ನ ಕ್ಷೇತ್ರದಲ್ಲಿ ಬಂಡಾಯವಾಗಿ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ನ ಅಲ್ತಾಫ‌ ಕಿತ್ತೂರ ಅವರೊಂದಿಗೆ ಪಕ್ಷದ ಮುಖಂಡರು ಈಗಾಗಲೇ ಮಾತನಾಡಿದ್ದಾರೆ. ನಾನೂ ಸಹ ಮಾತುಕತೆ ನಡೆಸಲಿದ್ದೇನೆ. ಸದ್ಯದಲ್ಲೇ ಎಲ್ಲವೂ ಬಗೆಹರಿಯಲಿದೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...