Homeಕರ್ನಾಟಕನನ್ನ ಚಲನವಲನ ತಿಳಿಯಲು ನಾಗಪುರದಿಂದ ತಂಡ ಕಳುಸಿದ್ದಾರೆ, ಅದಕ್ಕೆ ನಾನು ಹೆದರುವುದಿಲ್ಲ: ಜಗದೀಶ್ ಶೆಟ್ಟರ್

ನನ್ನ ಚಲನವಲನ ತಿಳಿಯಲು ನಾಗಪುರದಿಂದ ತಂಡ ಕಳುಸಿದ್ದಾರೆ, ಅದಕ್ಕೆ ನಾನು ಹೆದರುವುದಿಲ್ಲ: ಜಗದೀಶ್ ಶೆಟ್ಟರ್

- Advertisement -
- Advertisement -

ರಾಜ್ಯದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ. ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಕಾಂಗ್ರೆಸ್‌ ಸೇರ್ಪಡೆಯಾದಾಗಿನಿಂದ ಬಿಜೆಪಿ ಹಾಗೂ ಸಂಘಪರಿವಾರದ ನಾಯಕರು ಅವರನ್ನು ಸೋಲಿಸಲು ಪಣ ತೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ”ನನ್ನ ಚಲನವಲನಗಳ ಬಗ್ಗೆ ತಿಳಿಯಲು ನಾಗಪುರದಿಂದ ತಂಡವನ್ನು ಕಳುಹಿಸಿದ್ದಾರೆ. ಇದಕ್ಕೆಲ್ಲ ನಾನು ಹೆದರುವುದಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

”ನನ್ನ ಚಲನವಲನ ಗಮನಿಸಲು ನಾಗಪುರದಿಂದ ತಂಡ ಬಂದಿದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ಒಂದು ವೇಳೆ ಬಂದಿದ್ದರೆ ನನ್ನ ಚಲನವಲನ ಗಮನಿಸುವುದರೊಳಗಾಗಿ ಚುನಾವಣೆಯೇ ಮುಗಿದಿರುತ್ತದೆ” ಎಂದು ಶೆಟ್ಟರ್ ಹೇಳಿದರು.

”ಬಿಜೆಪಿಯವರು ಲಿಂಗಾಯತ ಸಮುದಾಯಕ್ಕೆ ಮಾಡುತ್ತಿರುವ ಅವಮಾನದ ಬಗ್ಗೆ ರಾಹುಲ್ ಗಾಂಧಿ ಜೊತೆ ಗಂಭೀರ ಚರ್ಚೆ ಮಾಡಲಾಗಿದೆ. ಅವರು ಕೂಡ ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆದಿದ್ದೂ, ನಾನು ಮಾಹಿತಿ ನೀಡಿದ್ದೇನೆ” ಎಂದರು.

”ನಾಗಪುರದಲ್ಲಿ ಅಷ್ಟೊಂದು ಎಕ್ಸಪರ್ಟ್ ತಂಡಗಳು ಇದ್ದಿದದ್ದರೆ, ಇತ್ತೀಚೆಗೆ ಅಲ್ಲಿ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಏಕೆ ಸೋಲನ್ನು ಅನುಭವಿಸುತ್ತಿತ್ತು?” ಎಂದು ಪ್ರಶ್ನಿಸಿದ್ದಾರೆ.

”ಚುನಾವಣೆ ಎಂದ ಮೇಲೆ ನಕರಾತ್ಮಕ ಹಾಗೂ ಧನಾತ್ಮಕ ಅಭಿಪ್ರಾಯಗಳು ಬಂದೇ ಬರುತ್ತವೆ. ನನ್ನ ಬಗ್ಗೆಯೂ ಇದೀಗ ನೆಗೆಟೀವ್ ಅಭಿಪ್ರಾಯಗಳು ಬಂದಿವೆ. ಈ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಇಂತಹ ಹಲವು ನೆಗೇಟಿವ್ ಅಭಿಪ್ರಾಯಗಳನ್ನು ನಾನು ಎದುರಿಸಿದ್ದೇನೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ನನ್ನನ್ನು ಸೋಲಿಸಲು ಸಾಧ್ಯವಿಲ್ಲ. ಇದರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ” ಎಂದರು.

”ಕಾಂಗ್ರೆಸ್ ಪಕ್ಷ ಎಲ್ಲ ಸ್ಥಾನಮಾನ ನೀಡಿದೆ. ಈ ಬಾರಿ ಚುನಾವಣೆಯಲ್ಲಿ ಐವತ್ತು ಲಿಂಗಾಯತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ರಾಹುಲ್ ಗಾಂಧಿ ಪ್ರಚಾರ ಮಾಡುತ್ತಾರೆ. ಹಾಗೆಯೆ ಹಾನಗಲ್‌, ಹುಬ್ಬಳ್ಳಿ-ಧಾರವಾಡದಲ್ಲೂ ಪ್ರಚಾರ ಕಾರ್ಯವನ್ನು ಕೈಗೊಳ್ಳಲಿದ್ದಾರೆ. ಅಲ್ಲದೆ ನನಗೂ ಪ್ರಚಾರಕ್ಕಾಗಿ ಕರೆಯುತ್ತಿದ್ದಾರೆ” ಎಂದು ತಿಳಿಸಿದರು.

ರಾಹುಲ್ ಜೊತೆ ಶೆಟ್ಟರ್ ಮುಕ್ತ ಚರ್ಚೆ:

”ರಾಹುಲ್ ಗಾಂಧಿ ಅವರು ರಾಜ್ಯ ರಾಜಕಾರಣ ಹಾಗೂ ಇತರ ವಿಷಯಗಳ ಬಗ್ಗೆ ಮುಕ್ತವಾಗಿ ನನ್ನೊಂದಿಗೆ ಚರ್ಚಿಸಿದರು. ಬಿಜೆಪಿ ಒಳಗಿನ ಬೆಳವಣಿಗೆ ಮತ್ತು ಲಿಂಗಾಯತರ ಕಡೆಗಣನೆ ಬಗ್ಗೆಯೂ ಚರ್ಚೆ ನಡೆಯಿತು. ಆಗ ಶಾಸಕ ಪ್ರಸಾದ ಅಬ್ಬಯ್ಯ ಕೂಡ ಜೊತೆಗಿದ್ದರು” ಎಂದು ಪ್ರಶ್ನೆಯೊಂದಕ್ಕೆ ಶೆಟ್ಟರ್ ಪ್ರತಿಕ್ರಿಯೆ ನೀಡಿದರು.

”ಹಾನಗಲ್‌ನಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಗೆ ಬರುವಂತೆ ನನಗೂ ಆಹ್ವಾನ ನೀಡಿದ್ದಾರೆ. ಉತ್ತರ ಕರ್ನಾಟಕದ ವಿವಿಧೆಡೆ ಪ್ರಚಾರಕ್ಕೆ ಬರುವಂತೆ ಒತ್ತಡ ಬರುತ್ತಿದೆ. ಈ ಕುರಿತು ನನ್ನೊಂದಿಗೆ ಚರ್ಚಿಸಿ ವೇಳಾಪಟ್ಟಿ ಸಿದ್ದಪಡಿಸುವುದಾಗಿ ಕಾಂಗ್ರೆಸ್‌ನ ವೇಣುಗೋಪಾಲ್ ಅವರು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸಹ ರಾಹುಲ್ ಅವರು ಪ್ರಚಾರ ಮಾಡುವ ಸಾಧ್ಯತೆ ಇದ್ದು, ರಾಜ್ಯದ ನಾಯಕರು ಅದನ್ನು ಖಚಿತಪಡಿಸಲಿದ್ದಾರೆ” ಎಂದು ತಿಳಿಸಿದ್ದಾರೆ.

”ಕಾಂಗ್ರೆಸ್ ಈ ಸಲ‌ ಐವತ್ತಕ್ಕೂ ಹೆಚ್ಚು ಸೀಟುಗಳನ್ನು ಲಿಂಗಾಯತ ಸಮುದಾಯಕ್ಕೆ ನೀಡಿದೆ‌. ನನ್ನ ಕ್ಷೇತ್ರದಲ್ಲಿ ಬಂಡಾಯವಾಗಿ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ನ ಅಲ್ತಾಫ‌ ಕಿತ್ತೂರ ಅವರೊಂದಿಗೆ ಪಕ್ಷದ ಮುಖಂಡರು ಈಗಾಗಲೇ ಮಾತನಾಡಿದ್ದಾರೆ. ನಾನೂ ಸಹ ಮಾತುಕತೆ ನಡೆಸಲಿದ್ದೇನೆ. ಸದ್ಯದಲ್ಲೇ ಎಲ್ಲವೂ ಬಗೆಹರಿಯಲಿದೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...