Homeಕರ್ನಾಟಕನನ್ನ ಚಲನವಲನ ತಿಳಿಯಲು ನಾಗಪುರದಿಂದ ತಂಡ ಕಳುಸಿದ್ದಾರೆ, ಅದಕ್ಕೆ ನಾನು ಹೆದರುವುದಿಲ್ಲ: ಜಗದೀಶ್ ಶೆಟ್ಟರ್

ನನ್ನ ಚಲನವಲನ ತಿಳಿಯಲು ನಾಗಪುರದಿಂದ ತಂಡ ಕಳುಸಿದ್ದಾರೆ, ಅದಕ್ಕೆ ನಾನು ಹೆದರುವುದಿಲ್ಲ: ಜಗದೀಶ್ ಶೆಟ್ಟರ್

- Advertisement -
- Advertisement -

ರಾಜ್ಯದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ. ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಕಾಂಗ್ರೆಸ್‌ ಸೇರ್ಪಡೆಯಾದಾಗಿನಿಂದ ಬಿಜೆಪಿ ಹಾಗೂ ಸಂಘಪರಿವಾರದ ನಾಯಕರು ಅವರನ್ನು ಸೋಲಿಸಲು ಪಣ ತೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ”ನನ್ನ ಚಲನವಲನಗಳ ಬಗ್ಗೆ ತಿಳಿಯಲು ನಾಗಪುರದಿಂದ ತಂಡವನ್ನು ಕಳುಹಿಸಿದ್ದಾರೆ. ಇದಕ್ಕೆಲ್ಲ ನಾನು ಹೆದರುವುದಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

”ನನ್ನ ಚಲನವಲನ ಗಮನಿಸಲು ನಾಗಪುರದಿಂದ ತಂಡ ಬಂದಿದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ಒಂದು ವೇಳೆ ಬಂದಿದ್ದರೆ ನನ್ನ ಚಲನವಲನ ಗಮನಿಸುವುದರೊಳಗಾಗಿ ಚುನಾವಣೆಯೇ ಮುಗಿದಿರುತ್ತದೆ” ಎಂದು ಶೆಟ್ಟರ್ ಹೇಳಿದರು.

”ಬಿಜೆಪಿಯವರು ಲಿಂಗಾಯತ ಸಮುದಾಯಕ್ಕೆ ಮಾಡುತ್ತಿರುವ ಅವಮಾನದ ಬಗ್ಗೆ ರಾಹುಲ್ ಗಾಂಧಿ ಜೊತೆ ಗಂಭೀರ ಚರ್ಚೆ ಮಾಡಲಾಗಿದೆ. ಅವರು ಕೂಡ ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆದಿದ್ದೂ, ನಾನು ಮಾಹಿತಿ ನೀಡಿದ್ದೇನೆ” ಎಂದರು.

”ನಾಗಪುರದಲ್ಲಿ ಅಷ್ಟೊಂದು ಎಕ್ಸಪರ್ಟ್ ತಂಡಗಳು ಇದ್ದಿದದ್ದರೆ, ಇತ್ತೀಚೆಗೆ ಅಲ್ಲಿ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಏಕೆ ಸೋಲನ್ನು ಅನುಭವಿಸುತ್ತಿತ್ತು?” ಎಂದು ಪ್ರಶ್ನಿಸಿದ್ದಾರೆ.

”ಚುನಾವಣೆ ಎಂದ ಮೇಲೆ ನಕರಾತ್ಮಕ ಹಾಗೂ ಧನಾತ್ಮಕ ಅಭಿಪ್ರಾಯಗಳು ಬಂದೇ ಬರುತ್ತವೆ. ನನ್ನ ಬಗ್ಗೆಯೂ ಇದೀಗ ನೆಗೆಟೀವ್ ಅಭಿಪ್ರಾಯಗಳು ಬಂದಿವೆ. ಈ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಇಂತಹ ಹಲವು ನೆಗೇಟಿವ್ ಅಭಿಪ್ರಾಯಗಳನ್ನು ನಾನು ಎದುರಿಸಿದ್ದೇನೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ನನ್ನನ್ನು ಸೋಲಿಸಲು ಸಾಧ್ಯವಿಲ್ಲ. ಇದರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ” ಎಂದರು.

”ಕಾಂಗ್ರೆಸ್ ಪಕ್ಷ ಎಲ್ಲ ಸ್ಥಾನಮಾನ ನೀಡಿದೆ. ಈ ಬಾರಿ ಚುನಾವಣೆಯಲ್ಲಿ ಐವತ್ತು ಲಿಂಗಾಯತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ರಾಹುಲ್ ಗಾಂಧಿ ಪ್ರಚಾರ ಮಾಡುತ್ತಾರೆ. ಹಾಗೆಯೆ ಹಾನಗಲ್‌, ಹುಬ್ಬಳ್ಳಿ-ಧಾರವಾಡದಲ್ಲೂ ಪ್ರಚಾರ ಕಾರ್ಯವನ್ನು ಕೈಗೊಳ್ಳಲಿದ್ದಾರೆ. ಅಲ್ಲದೆ ನನಗೂ ಪ್ರಚಾರಕ್ಕಾಗಿ ಕರೆಯುತ್ತಿದ್ದಾರೆ” ಎಂದು ತಿಳಿಸಿದರು.

ರಾಹುಲ್ ಜೊತೆ ಶೆಟ್ಟರ್ ಮುಕ್ತ ಚರ್ಚೆ:

”ರಾಹುಲ್ ಗಾಂಧಿ ಅವರು ರಾಜ್ಯ ರಾಜಕಾರಣ ಹಾಗೂ ಇತರ ವಿಷಯಗಳ ಬಗ್ಗೆ ಮುಕ್ತವಾಗಿ ನನ್ನೊಂದಿಗೆ ಚರ್ಚಿಸಿದರು. ಬಿಜೆಪಿ ಒಳಗಿನ ಬೆಳವಣಿಗೆ ಮತ್ತು ಲಿಂಗಾಯತರ ಕಡೆಗಣನೆ ಬಗ್ಗೆಯೂ ಚರ್ಚೆ ನಡೆಯಿತು. ಆಗ ಶಾಸಕ ಪ್ರಸಾದ ಅಬ್ಬಯ್ಯ ಕೂಡ ಜೊತೆಗಿದ್ದರು” ಎಂದು ಪ್ರಶ್ನೆಯೊಂದಕ್ಕೆ ಶೆಟ್ಟರ್ ಪ್ರತಿಕ್ರಿಯೆ ನೀಡಿದರು.

”ಹಾನಗಲ್‌ನಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಗೆ ಬರುವಂತೆ ನನಗೂ ಆಹ್ವಾನ ನೀಡಿದ್ದಾರೆ. ಉತ್ತರ ಕರ್ನಾಟಕದ ವಿವಿಧೆಡೆ ಪ್ರಚಾರಕ್ಕೆ ಬರುವಂತೆ ಒತ್ತಡ ಬರುತ್ತಿದೆ. ಈ ಕುರಿತು ನನ್ನೊಂದಿಗೆ ಚರ್ಚಿಸಿ ವೇಳಾಪಟ್ಟಿ ಸಿದ್ದಪಡಿಸುವುದಾಗಿ ಕಾಂಗ್ರೆಸ್‌ನ ವೇಣುಗೋಪಾಲ್ ಅವರು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸಹ ರಾಹುಲ್ ಅವರು ಪ್ರಚಾರ ಮಾಡುವ ಸಾಧ್ಯತೆ ಇದ್ದು, ರಾಜ್ಯದ ನಾಯಕರು ಅದನ್ನು ಖಚಿತಪಡಿಸಲಿದ್ದಾರೆ” ಎಂದು ತಿಳಿಸಿದ್ದಾರೆ.

”ಕಾಂಗ್ರೆಸ್ ಈ ಸಲ‌ ಐವತ್ತಕ್ಕೂ ಹೆಚ್ಚು ಸೀಟುಗಳನ್ನು ಲಿಂಗಾಯತ ಸಮುದಾಯಕ್ಕೆ ನೀಡಿದೆ‌. ನನ್ನ ಕ್ಷೇತ್ರದಲ್ಲಿ ಬಂಡಾಯವಾಗಿ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ನ ಅಲ್ತಾಫ‌ ಕಿತ್ತೂರ ಅವರೊಂದಿಗೆ ಪಕ್ಷದ ಮುಖಂಡರು ಈಗಾಗಲೇ ಮಾತನಾಡಿದ್ದಾರೆ. ನಾನೂ ಸಹ ಮಾತುಕತೆ ನಡೆಸಲಿದ್ದೇನೆ. ಸದ್ಯದಲ್ಲೇ ಎಲ್ಲವೂ ಬಗೆಹರಿಯಲಿದೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...