Homeಮುಖಪುಟ"ಅವರು ನನ್ನನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಲು ಮುಂದಾಗಿದ್ದರು": ಗೋಮಾಂಸ ಶಂಕೆಯಿಂದ ಹಲ್ಲೆಗೊಳಗಾದ ಮುಸ್ಲಿಂ ವೃದ್ದ

“ಅವರು ನನ್ನನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಲು ಮುಂದಾಗಿದ್ದರು”: ಗೋಮಾಂಸ ಶಂಕೆಯಿಂದ ಹಲ್ಲೆಗೊಳಗಾದ ಮುಸ್ಲಿಂ ವೃದ್ದ

- Advertisement -
- Advertisement -

ಅವರ ಹೆಸರು ಅಶ್ರಫ್ ಅಲೀ ಸೈಯ್ಯದ್ ಹುಸೈನ್, ವಯಸ್ಸು 72 ವರ್ಷ. ಮಹಾರಾಷ್ಟ್ರದ ಜಲಗಾಂವ್‌ನಿಂದ ಕಲ್ಯಾಣ್‌ಗೆ ರೈಲಿನ ಮೂಲಕ ಆಗಾಗ ಪ್ರಯಾಣಿಸುತ್ತಿದ್ದರು. ಕಲ್ಯಾಣ್‌ ಜಂಕ್ಷನ್ ರೈಲು ನಿಲ್ದಾಣದಲ್ಲಿ ಇಳಿದು, ಅಲ್ಲಿಂದ ಆಟೋ ರಿಕ್ಷಾ ಹಿಡಿದು ನಾಲಕ್ಕು ಕಿ.ಮೀ ಪ್ರಯಾಣಿಸಿ ನಗರದ ಹೊರಗಿನ ಕೊಂಗಾವ್ ಎಂಬ ಹಳ್ಳಿಗೆ ತಲುಪುತ್ತಿದ್ದರು. ಅಲ್ಲಿ ಅವರ ಮಗಳ ಮನೆಯಿತ್ತು.

ಪ್ರತೀ ಬಾರಿ ರೈಲಿನ ಮೂಲಕ ಮಗಳ ಮನೆಗೆ ತೆರಳುತ್ತಿದ್ದ ಅಶ್ರಫ್ ಅಲೀ ಅವರಿಗೆ ಆಗಸ್ಟ್ 30ರಂದು ಆಘಾತ ಕಾದಿತ್ತು. ರೈಲಿನಲ್ಲಿ ಅವರ ಮುಂದಿನ ಆಸನದಲ್ಲಿ ಕುಳಿತಿದ್ದ ಸುಮಾರು 20-25 ವರ್ಷ ಆಸುಪಾಸಿನ ಯುವಕರ ಗುಂಪೊಂದು ಗೋಮಾಂಸ ಸಾಗಾಟದ ಆರೋಪ ಹೊರಿಸಿ ವಯಸ್ಸಿನ ಹಿರಿತನ ನೋಡದೆ ಅಶ್ರಫ್ ಅಲೀ ಅವರಿಗೆ ಥಳಿಸಿದ್ದರು. ಅದಕ್ಕಿಂತಲೂ ಹೆಚ್ಚಾಗಿ ಇತರ ಪ್ರಯಾಣಿಕರ ಮುಂದೆ ಅವಮಾನಿಸಿ ಮಾನಸಿಕ ಹಿಂಸೆ ನೀಡಿದ್ದರು. ಹಲ್ಲೆ ಮಾಡಿದವರೆಲ್ಲರೂ ಪೊಲೀಸ್ ಹುದ್ದೆಯ ಪರೀಕ್ಷೆ ಬರೆಯಲು ಮುಂಬೈಗೆ ತೆರಳುತ್ತಿದ್ದವರು ಎಂಬುವುದು ಆತಂಕದ ವಿಷಯ.

ಅಶ್ರಫ್ ಅಲೀ ಅವರಿಗೆ ಹಲ್ಲೆ ಮಾಡಿದವರು ಪೊಲೀಸರಾಗಿ ಸಂವಿಧಾನದಡಿ ಕಾನೂನು ಕಾಪಾಡಲು ಹೊರಟವರಾಗಿದ್ದರು. ಆದರೆ, ಅವರೇ ಗೋಮಾಂಸದ ಆರೋಪ ಹೊರಿಸಿ ಅಶ್ರಫ್ ಅಲೀ ಅವರ ಮುಖ, ಎದೆ, ಹೊಟ್ಟೆ ಎಂದು ನೋಡದೆ ಥಳಿಸಿದ್ದರು. ಅಶ್ರಫ್ ಅಲೀ ಅವರ ಮೊಬೈಲ್ ಫೋನ್ ಕಸಿದುಕೊಂಡಿದ್ದರು. ತಮ್ಮ ದುಷ್ಕೃತ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದ್ದರು.

ಈ ಘಟನೆ ಸಂಬಂಧ ಥಾಣೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರಂಭದಲ್ಲಿ ಆಕಾಶ್ ಅಹ್ವಾದ್, ನೀಲೇಶ್ ಅಹಿರೆ ಮತ್ತು ಜಯೇಶ್ ಮೋಹಿತೆ ಎಂಬ ಮೂವರನ್ನು ಬಂಧಿಸಿದ್ದರು. ಆದರೆ, ಹಲ್ಲೆ ನಡೆಸಿರುವ ವಿಡಿಯೋ ಸಾಕ್ಷಿಯ ಹೊರತಾಗಿಯೂ ಆರೋಪಿಗಳ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಜಾಮೀನು ಪಡೆಯಬಹುದಾದ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದರು. ಹಾಗಾಗಿ, ಆರೋಪಿಗಳು ಬಂಧನಕ್ಕೊಳಗಾದ ಮರುದಿನವೇ ಬಿಡುಗಡೆಯಾಗಿದ್ದಾರೆ.

ತನ್ನ ಮೇಲಿನ ಹಲ್ಲೆ ಘಟನೆಯನ್ನು ದಿ ವೈರ್  ಸುದ್ದಿ ಸಂಸ್ಥೆಗೆ ವಿವರಿಸಿರುವ ಅಶ್ರಫ್ ಅಲೀ “ನನ್ನ ಮೇಲಿನ ದಾಳಿ ಅಪ್ರಚೋದಿತವಾಗಿದೆ. ಜಲಗಾಂವ್‌ನ ಚಾಲಿಸ್‌ಗಾಂವ್ ನಿಲ್ದಾಣದಲ್ಲಿ ನಾನು ರೈಲು ಹತ್ತಿದ್ದೆ. ರೈಲಿನಲ್ಲಿ ಜನಸಂದಣಿ ಇತ್ತು. ಹಾಗಾಗಿ ರೈಲು ನಾಸಿಕ್ ರೈಲು ನಿಲ್ದಾಣಕ್ಕೆ ಹತ್ತಿರವಾಗುವವರೆಗೂ ನಿಂತುಕೊಂಡೇ ಇದ್ದೆ. ನಂತರ ಮೇಲಿನ ಬರ್ತ್‌ನಲ್ಲಿ ಕುಳಿತಿದ್ದ ಒಬ್ಬಳು ಹುಡುಗಿ ತನ್ನ ಸೀಟಿನಿಂದ ಇಳಿದಳು. ನಾನು ಆ ಸ್ಥಳಕ್ಕೆ ಹೋದೆ. ಆಗ ನನ್ನ ಪಕ್ಕದಲ್ಲಿ ನಿಂತಿದ್ದ ಸುಮಾರು 24-25 ವರ್ಷ ವಯಸ್ಸಿನ ಯುವಕ, ತನಗೆ ಜಾಗ ಕೊಡಿ ಎಂದು ಕೇಳಿದ. ಇನ್ನೊಬ್ಬ ವ್ಯಕ್ತಿ ಕೂರಲು ಜಾಗ ಇಲ್ಲದ ಕಾರಣ ನಾನು ಮಡಿಲಲ್ಲಿ ಕೂರುತ್ತೀರಾ? ಎಂದು ಆ ಯುವಕನಿಗೆ ಕೇಳಿದೆ. ಅದು ಆ ಯುವಕ ಮತ್ತು ಆತನ ಜೊತೆ ನಿಂತಿದ್ದವರಿಗೆ ಕೋಪ ತರಿಸಿತು” ಎಂದಿದ್ದಾರೆ.

ಮುಂದುವರಿದು “ನಾನು ಇಳಿಯಬೇಕಿದ್ದ ನಿಲ್ದಾಣ ಕಲ್ಯಾಣ್‌ಗೆ ರೈಲು ಬರುವವರೆಗೂ ಕುಳಿತಿದ್ದೆ. ನನ್ನ ಜೊತೆ ಚೀಲವೊಂದಿತ್ತು. ಅದರಲ್ಲಿ ಎರಡು ಪ್ಲಾಸ್ಟಿಕ್‌ ಡಬ್ಬಗಳಲ್ಲಿ ಎಮ್ಮೆ ಮಾಂಸ ಇತ್ತು. ಮಹಾರಾಷ್ಟ್ರದಲ್ಲಿ ಎಮ್ಮೆ ಮಾಂಸ ಸೇವನೆ ಕಾನೂನು ಬದ್ಧವಾಗಿದೆ. ಯುವಕರ ಗುಂಪು ಏಕಾಏಕಿ ನನ್ನ ಬ್ಯಾಗ್ ತೆರೆದು ಅವರಿಗೆ ತೋರಿಸಲು ಒತ್ತಾಯಿಸಿದರು. ನನ್ನನ್ನು ದಬಾಯಿಸಲು ಪ್ರಾರಂಭಿಸಿದರು. ಬ್ಯಾಗ್‌ನಲ್ಲಿ ಏನಿದೆ? ಎಂದು ಕೇಳಿದರು. ನನಗೆ ಗೊಂದಲವುಂಟಾಯಿತು. ಗೂಳಿ ಮಾಂಸ ಎಂದೆ. ತಕ್ಷಣ ಯುವಕರು ನನಗೆ ಥಳಿಸಲು ಪ್ರಾರಂಭಿಸಿದರು” ಎಂದು ಹುಸೈನ್‌ ಎಫ್‌ಐಆರ್‌ನಲ್ಲಿ ವಿವರಿಸಿದ್ದಾರೆ ಎಂದು ದಿ ವೈರ್ ಹೇಳಿದೆ.

“ಅವನನ್ನು ರೈಲಿನಿಂದ ಹೊರಕ್ಕೆ ತಳ್ಳಿ”

“ರೈಲು ಕಲ್ಯಾಣ್ ನಿಲ್ದಾಣಕ್ಕೆ ಸಮೀಪಿಸುತ್ತಿದ್ದಂತೆ ನಾನು ಇಳಿಯಲು ಮುಂದಾದೆ. ಆದರೆ, ಆ ಯುವಕರು ನನ್ನನ್ನು ಬಿಡಲಿಲ್ಲ. ಅವರಲ್ಲಿ ಕೆಲವರು ” ಅವನನ್ನು ರೈಲಿನಿಂದ ಹೊರಕ್ಕೆ ತಳ್ಳಿ” ಎಂದರು. ರೈಲಿನಲ್ಲಿದ್ದ ಕೆಲವರು ನನಗೆ ಹೊಡೆಯದಂತೆ ಕೇಳಿಕೊಂಡರೂ, ಯುವಕರು ತಲೆಕೆಡಿಸಿಕೊಳ್ಳದೆ ಹಲ್ಲೆ ಮಾಡುವುದನ್ನು ಮುಂದುವರೆಸಿದರು” ಎಂದು ಅಶ್ರಫ್ ಅಲೀ ನೆನಪಿಸಿಕೊಂಡಿದ್ದಾರೆ.

“ಆರೋಪಿಗಳು ಪೊಲೀಸರಿಗೆ ದೂರು ನೀಡಿದರೆ ನನ್ನನ್ನು ಕೊಲ್ಲುವುದಾಗಿ ಮತ್ತು ನನ್ನ ಕುಟುಂಬದ ಮಹಿಳೆಯರನ್ನು ಅತ್ಯಾಚಾರವೆಸಗುವುದಾಗಿ ಬೆದರಿಕೆ ಹಾಕಿದ್ದಾರೆ. ಅವರು ದೇಶದ ಹಲವೆಡೆ ಗುಂಪು ಹತ್ಯೆಗಳನ್ನು ನಡೆಸುತ್ತಿರುವ ಸ್ವಯಂ ಘೋಷಿತ ಗೋರಕ್ಷರು ಮತ್ತು ಬಜರಂಗದಳದ ಜೊತೆಗಿನ ತಮ್ಮ ಸಂಪರ್ಕದ ಬಗ್ಗೆ ಹೇಳಿ ಹೆಮ್ಮೆಪಟ್ಟುಕೊಳ್ಳುತ್ತಿದ್ದರು” ಎಂದು ಅಶ್ರಫ್ ಅಲೀ ಹೇಳಿದ್ದಾರೆ.

“ಕಲ್ಯಾಣ್ ನಿಲ್ದಾಣದಲ್ಲಿ ರೈಲಿನಿಂದ ಇಳಿಯಬೇಕಾಗಿದ್ದ ನಾನು ಕೊನೆಗೆ ಥಾಣೆ ನಿಲ್ದಾಣದಲ್ಲಿ ಇಳಿದೆ. ಬಳಿಕ ಪೊಲೀಸ್ ಠಾಣೆಗೆ ಹೋದೆ. ನನಗೆ ಥಳಿಸಿದ್ದಾರೆ ಎಂದು ಪೊಲೀಸರಿಗೆ ಹೇಳಿದೆ. ನನ್ನ ಮುಖ ಊದಿಕೊಂಡಿತ್ತು. ದೇಹದ ತುಂಬಾ ನೋವಿತ್ತು. ಕಣ್ಣಿನ ಕುಳಿ ಕಪ್ಪು ಬಣ್ಣಕ್ಕೆ ತಿರುಗಿತ್ತು. ಆದರೆ, ಪೊಲೀಸರು ನನ್ನ ಪರಿಸ್ಥಿತಿಯನ್ನು ನಿರ್ಲಕ್ಷಿಸಿದರು. ಕೋಮು ಆಯಾಮದಲ್ಲಿ ನನ್ನ ಮೇಲೆ ನಡೆದ ದಾಳಿಯನ್ನು ಸಾಮಾನ್ಯ ಹಲ್ಲೆ ಘಟನೆಯೆಂದು ಪರಿಗಣಿಸಿದರು. ಸಾಮಾನ್ಯ ಕಾಗದಲ್ಲಿ ಏನೋ ಬರೆದು ಸಹಿ ಮಾಡುವಂತೆ ಹೇಳಿದರು. ನಾನು ಸಹಿ ಮಾಡಿ ಹೊರಟೆ” ಎಂದು ಅಶ್ರಫ್ ಅಲೀ ತಿಳಿಸಿದ್ದಾರೆ.

“ಥಾಣೆಯಿಂದ ನಾನು ವಾಪಸ್ ಕಲ್ಯಾಣ್‌ಗೆ ಬಂದು ಮಗಳ ಊರಾದ ಕೊಂಗಾವ್‌ಗೆ ಹೋದೆ. ಯುವಕರು ನನ್ನ ಮೇಲೆ ಹಲ್ಲೆ ಮಾಡಿರುವುದು ನನ್ನ ಜೊತೆಗಿದ್ದ ಮಾಂಸದ ಕಾರಣಕ್ಕೆ ಎಂದು ನನಗೆ ಗೊತ್ತಾಯಿತು. ಅದಕ್ಕೆ ಆ ಮಾಂಸವನ್ನು ಮಗಳ ಮನೆಯ ದಾರಿ ಮಧ್ಯೆ ಹರಿಯುವ ನೀರಿಗೆ ಎಸೆದೆ. ನನ್ನ ಮೇಲೆ ನಡೆದ ಹಲ್ಲೆಯನ್ನು ಯಾರಿಗೂ ಗೊತ್ತಾಗದಂತೆ ಮುಚ್ಚಿಟ್ಟಿದ್ದೆ. ಆದರೆ, ಅಷ್ಟರಲ್ಲಿ ವಿಡಿಯೋ ಎಲ್ಲೆಡೆ ಹರಿದಾಡಿತ್ತು” ಎಂದಿದ್ದಾರೆ.

“ಪೊಲೀಸರು ಸರಳ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದಾರೆ”

ಅಶ್ರಫ್ ಅಲೀ ಅವರ ಮೇಲೆ ಕೋಮುದಾಳಿ ನಡೆದಿದೆ. ಅವರು ಮುಸ್ಲಿಂ ಧರ್ಮದವರು ಮತ್ತು ಗೋಮಾಂಸ ಸಾಗಿಸುತ್ತಿದ್ದರು ಎಂದು ಥಳಿಸಲಾಗಿದೆ. ಆದರೆ, ಥಾಣೆ ರೈಲ್ವೆ ಪೊಲೀಸರು ಸಾಮಾನ್ಯ ಹಲ್ಲೆ ಪ್ರಕರಣ ದಾಖಲಿಸಿದ್ದಾರೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಎಸ್‌ಡಿಪಿಐ ಆಕ್ರೋಶ ವ್ಯಕ್ತಪಡಿಸಿದೆ ಎಂದು ದಿ ವೈರ್ ವರದಿ ಮಾಡಿದೆ.

ಕೃಪೆ: thewire.in

ಇದನ್ನೂ ಓದಿ : ಮುಸ್ಲಿಂ ವಿರೋಧಿ ದ್ವೇಷ ಭಾಷಣದ ಆರೋಪ; ಮಹಾರಾಷ್ಟ್ರ ಬಿಜೆಪಿ ಶಾಸಕ ನಿತೇಶ್ ರಾಣೆ ವಿರುದ್ಧ ಎಫ್‌ಐಆರ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...