Homeಮುಖಪುಟ"ಅವರು ನನ್ನನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಲು ಮುಂದಾಗಿದ್ದರು": ಗೋಮಾಂಸ ಶಂಕೆಯಿಂದ ಹಲ್ಲೆಗೊಳಗಾದ ಮುಸ್ಲಿಂ ವೃದ್ದ

“ಅವರು ನನ್ನನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಲು ಮುಂದಾಗಿದ್ದರು”: ಗೋಮಾಂಸ ಶಂಕೆಯಿಂದ ಹಲ್ಲೆಗೊಳಗಾದ ಮುಸ್ಲಿಂ ವೃದ್ದ

- Advertisement -
- Advertisement -

ಅವರ ಹೆಸರು ಅಶ್ರಫ್ ಅಲೀ ಸೈಯ್ಯದ್ ಹುಸೈನ್, ವಯಸ್ಸು 72 ವರ್ಷ. ಮಹಾರಾಷ್ಟ್ರದ ಜಲಗಾಂವ್‌ನಿಂದ ಕಲ್ಯಾಣ್‌ಗೆ ರೈಲಿನ ಮೂಲಕ ಆಗಾಗ ಪ್ರಯಾಣಿಸುತ್ತಿದ್ದರು. ಕಲ್ಯಾಣ್‌ ಜಂಕ್ಷನ್ ರೈಲು ನಿಲ್ದಾಣದಲ್ಲಿ ಇಳಿದು, ಅಲ್ಲಿಂದ ಆಟೋ ರಿಕ್ಷಾ ಹಿಡಿದು ನಾಲಕ್ಕು ಕಿ.ಮೀ ಪ್ರಯಾಣಿಸಿ ನಗರದ ಹೊರಗಿನ ಕೊಂಗಾವ್ ಎಂಬ ಹಳ್ಳಿಗೆ ತಲುಪುತ್ತಿದ್ದರು. ಅಲ್ಲಿ ಅವರ ಮಗಳ ಮನೆಯಿತ್ತು.

ಪ್ರತೀ ಬಾರಿ ರೈಲಿನ ಮೂಲಕ ಮಗಳ ಮನೆಗೆ ತೆರಳುತ್ತಿದ್ದ ಅಶ್ರಫ್ ಅಲೀ ಅವರಿಗೆ ಆಗಸ್ಟ್ 30ರಂದು ಆಘಾತ ಕಾದಿತ್ತು. ರೈಲಿನಲ್ಲಿ ಅವರ ಮುಂದಿನ ಆಸನದಲ್ಲಿ ಕುಳಿತಿದ್ದ ಸುಮಾರು 20-25 ವರ್ಷ ಆಸುಪಾಸಿನ ಯುವಕರ ಗುಂಪೊಂದು ಗೋಮಾಂಸ ಸಾಗಾಟದ ಆರೋಪ ಹೊರಿಸಿ ವಯಸ್ಸಿನ ಹಿರಿತನ ನೋಡದೆ ಅಶ್ರಫ್ ಅಲೀ ಅವರಿಗೆ ಥಳಿಸಿದ್ದರು. ಅದಕ್ಕಿಂತಲೂ ಹೆಚ್ಚಾಗಿ ಇತರ ಪ್ರಯಾಣಿಕರ ಮುಂದೆ ಅವಮಾನಿಸಿ ಮಾನಸಿಕ ಹಿಂಸೆ ನೀಡಿದ್ದರು. ಹಲ್ಲೆ ಮಾಡಿದವರೆಲ್ಲರೂ ಪೊಲೀಸ್ ಹುದ್ದೆಯ ಪರೀಕ್ಷೆ ಬರೆಯಲು ಮುಂಬೈಗೆ ತೆರಳುತ್ತಿದ್ದವರು ಎಂಬುವುದು ಆತಂಕದ ವಿಷಯ.

ಅಶ್ರಫ್ ಅಲೀ ಅವರಿಗೆ ಹಲ್ಲೆ ಮಾಡಿದವರು ಪೊಲೀಸರಾಗಿ ಸಂವಿಧಾನದಡಿ ಕಾನೂನು ಕಾಪಾಡಲು ಹೊರಟವರಾಗಿದ್ದರು. ಆದರೆ, ಅವರೇ ಗೋಮಾಂಸದ ಆರೋಪ ಹೊರಿಸಿ ಅಶ್ರಫ್ ಅಲೀ ಅವರ ಮುಖ, ಎದೆ, ಹೊಟ್ಟೆ ಎಂದು ನೋಡದೆ ಥಳಿಸಿದ್ದರು. ಅಶ್ರಫ್ ಅಲೀ ಅವರ ಮೊಬೈಲ್ ಫೋನ್ ಕಸಿದುಕೊಂಡಿದ್ದರು. ತಮ್ಮ ದುಷ್ಕೃತ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದ್ದರು.

ಈ ಘಟನೆ ಸಂಬಂಧ ಥಾಣೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರಂಭದಲ್ಲಿ ಆಕಾಶ್ ಅಹ್ವಾದ್, ನೀಲೇಶ್ ಅಹಿರೆ ಮತ್ತು ಜಯೇಶ್ ಮೋಹಿತೆ ಎಂಬ ಮೂವರನ್ನು ಬಂಧಿಸಿದ್ದರು. ಆದರೆ, ಹಲ್ಲೆ ನಡೆಸಿರುವ ವಿಡಿಯೋ ಸಾಕ್ಷಿಯ ಹೊರತಾಗಿಯೂ ಆರೋಪಿಗಳ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಜಾಮೀನು ಪಡೆಯಬಹುದಾದ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದರು. ಹಾಗಾಗಿ, ಆರೋಪಿಗಳು ಬಂಧನಕ್ಕೊಳಗಾದ ಮರುದಿನವೇ ಬಿಡುಗಡೆಯಾಗಿದ್ದಾರೆ.

ತನ್ನ ಮೇಲಿನ ಹಲ್ಲೆ ಘಟನೆಯನ್ನು ದಿ ವೈರ್  ಸುದ್ದಿ ಸಂಸ್ಥೆಗೆ ವಿವರಿಸಿರುವ ಅಶ್ರಫ್ ಅಲೀ “ನನ್ನ ಮೇಲಿನ ದಾಳಿ ಅಪ್ರಚೋದಿತವಾಗಿದೆ. ಜಲಗಾಂವ್‌ನ ಚಾಲಿಸ್‌ಗಾಂವ್ ನಿಲ್ದಾಣದಲ್ಲಿ ನಾನು ರೈಲು ಹತ್ತಿದ್ದೆ. ರೈಲಿನಲ್ಲಿ ಜನಸಂದಣಿ ಇತ್ತು. ಹಾಗಾಗಿ ರೈಲು ನಾಸಿಕ್ ರೈಲು ನಿಲ್ದಾಣಕ್ಕೆ ಹತ್ತಿರವಾಗುವವರೆಗೂ ನಿಂತುಕೊಂಡೇ ಇದ್ದೆ. ನಂತರ ಮೇಲಿನ ಬರ್ತ್‌ನಲ್ಲಿ ಕುಳಿತಿದ್ದ ಒಬ್ಬಳು ಹುಡುಗಿ ತನ್ನ ಸೀಟಿನಿಂದ ಇಳಿದಳು. ನಾನು ಆ ಸ್ಥಳಕ್ಕೆ ಹೋದೆ. ಆಗ ನನ್ನ ಪಕ್ಕದಲ್ಲಿ ನಿಂತಿದ್ದ ಸುಮಾರು 24-25 ವರ್ಷ ವಯಸ್ಸಿನ ಯುವಕ, ತನಗೆ ಜಾಗ ಕೊಡಿ ಎಂದು ಕೇಳಿದ. ಇನ್ನೊಬ್ಬ ವ್ಯಕ್ತಿ ಕೂರಲು ಜಾಗ ಇಲ್ಲದ ಕಾರಣ ನಾನು ಮಡಿಲಲ್ಲಿ ಕೂರುತ್ತೀರಾ? ಎಂದು ಆ ಯುವಕನಿಗೆ ಕೇಳಿದೆ. ಅದು ಆ ಯುವಕ ಮತ್ತು ಆತನ ಜೊತೆ ನಿಂತಿದ್ದವರಿಗೆ ಕೋಪ ತರಿಸಿತು” ಎಂದಿದ್ದಾರೆ.

ಮುಂದುವರಿದು “ನಾನು ಇಳಿಯಬೇಕಿದ್ದ ನಿಲ್ದಾಣ ಕಲ್ಯಾಣ್‌ಗೆ ರೈಲು ಬರುವವರೆಗೂ ಕುಳಿತಿದ್ದೆ. ನನ್ನ ಜೊತೆ ಚೀಲವೊಂದಿತ್ತು. ಅದರಲ್ಲಿ ಎರಡು ಪ್ಲಾಸ್ಟಿಕ್‌ ಡಬ್ಬಗಳಲ್ಲಿ ಎಮ್ಮೆ ಮಾಂಸ ಇತ್ತು. ಮಹಾರಾಷ್ಟ್ರದಲ್ಲಿ ಎಮ್ಮೆ ಮಾಂಸ ಸೇವನೆ ಕಾನೂನು ಬದ್ಧವಾಗಿದೆ. ಯುವಕರ ಗುಂಪು ಏಕಾಏಕಿ ನನ್ನ ಬ್ಯಾಗ್ ತೆರೆದು ಅವರಿಗೆ ತೋರಿಸಲು ಒತ್ತಾಯಿಸಿದರು. ನನ್ನನ್ನು ದಬಾಯಿಸಲು ಪ್ರಾರಂಭಿಸಿದರು. ಬ್ಯಾಗ್‌ನಲ್ಲಿ ಏನಿದೆ? ಎಂದು ಕೇಳಿದರು. ನನಗೆ ಗೊಂದಲವುಂಟಾಯಿತು. ಗೂಳಿ ಮಾಂಸ ಎಂದೆ. ತಕ್ಷಣ ಯುವಕರು ನನಗೆ ಥಳಿಸಲು ಪ್ರಾರಂಭಿಸಿದರು” ಎಂದು ಹುಸೈನ್‌ ಎಫ್‌ಐಆರ್‌ನಲ್ಲಿ ವಿವರಿಸಿದ್ದಾರೆ ಎಂದು ದಿ ವೈರ್ ಹೇಳಿದೆ.

“ಅವನನ್ನು ರೈಲಿನಿಂದ ಹೊರಕ್ಕೆ ತಳ್ಳಿ”

“ರೈಲು ಕಲ್ಯಾಣ್ ನಿಲ್ದಾಣಕ್ಕೆ ಸಮೀಪಿಸುತ್ತಿದ್ದಂತೆ ನಾನು ಇಳಿಯಲು ಮುಂದಾದೆ. ಆದರೆ, ಆ ಯುವಕರು ನನ್ನನ್ನು ಬಿಡಲಿಲ್ಲ. ಅವರಲ್ಲಿ ಕೆಲವರು ” ಅವನನ್ನು ರೈಲಿನಿಂದ ಹೊರಕ್ಕೆ ತಳ್ಳಿ” ಎಂದರು. ರೈಲಿನಲ್ಲಿದ್ದ ಕೆಲವರು ನನಗೆ ಹೊಡೆಯದಂತೆ ಕೇಳಿಕೊಂಡರೂ, ಯುವಕರು ತಲೆಕೆಡಿಸಿಕೊಳ್ಳದೆ ಹಲ್ಲೆ ಮಾಡುವುದನ್ನು ಮುಂದುವರೆಸಿದರು” ಎಂದು ಅಶ್ರಫ್ ಅಲೀ ನೆನಪಿಸಿಕೊಂಡಿದ್ದಾರೆ.

“ಆರೋಪಿಗಳು ಪೊಲೀಸರಿಗೆ ದೂರು ನೀಡಿದರೆ ನನ್ನನ್ನು ಕೊಲ್ಲುವುದಾಗಿ ಮತ್ತು ನನ್ನ ಕುಟುಂಬದ ಮಹಿಳೆಯರನ್ನು ಅತ್ಯಾಚಾರವೆಸಗುವುದಾಗಿ ಬೆದರಿಕೆ ಹಾಕಿದ್ದಾರೆ. ಅವರು ದೇಶದ ಹಲವೆಡೆ ಗುಂಪು ಹತ್ಯೆಗಳನ್ನು ನಡೆಸುತ್ತಿರುವ ಸ್ವಯಂ ಘೋಷಿತ ಗೋರಕ್ಷರು ಮತ್ತು ಬಜರಂಗದಳದ ಜೊತೆಗಿನ ತಮ್ಮ ಸಂಪರ್ಕದ ಬಗ್ಗೆ ಹೇಳಿ ಹೆಮ್ಮೆಪಟ್ಟುಕೊಳ್ಳುತ್ತಿದ್ದರು” ಎಂದು ಅಶ್ರಫ್ ಅಲೀ ಹೇಳಿದ್ದಾರೆ.

“ಕಲ್ಯಾಣ್ ನಿಲ್ದಾಣದಲ್ಲಿ ರೈಲಿನಿಂದ ಇಳಿಯಬೇಕಾಗಿದ್ದ ನಾನು ಕೊನೆಗೆ ಥಾಣೆ ನಿಲ್ದಾಣದಲ್ಲಿ ಇಳಿದೆ. ಬಳಿಕ ಪೊಲೀಸ್ ಠಾಣೆಗೆ ಹೋದೆ. ನನಗೆ ಥಳಿಸಿದ್ದಾರೆ ಎಂದು ಪೊಲೀಸರಿಗೆ ಹೇಳಿದೆ. ನನ್ನ ಮುಖ ಊದಿಕೊಂಡಿತ್ತು. ದೇಹದ ತುಂಬಾ ನೋವಿತ್ತು. ಕಣ್ಣಿನ ಕುಳಿ ಕಪ್ಪು ಬಣ್ಣಕ್ಕೆ ತಿರುಗಿತ್ತು. ಆದರೆ, ಪೊಲೀಸರು ನನ್ನ ಪರಿಸ್ಥಿತಿಯನ್ನು ನಿರ್ಲಕ್ಷಿಸಿದರು. ಕೋಮು ಆಯಾಮದಲ್ಲಿ ನನ್ನ ಮೇಲೆ ನಡೆದ ದಾಳಿಯನ್ನು ಸಾಮಾನ್ಯ ಹಲ್ಲೆ ಘಟನೆಯೆಂದು ಪರಿಗಣಿಸಿದರು. ಸಾಮಾನ್ಯ ಕಾಗದಲ್ಲಿ ಏನೋ ಬರೆದು ಸಹಿ ಮಾಡುವಂತೆ ಹೇಳಿದರು. ನಾನು ಸಹಿ ಮಾಡಿ ಹೊರಟೆ” ಎಂದು ಅಶ್ರಫ್ ಅಲೀ ತಿಳಿಸಿದ್ದಾರೆ.

“ಥಾಣೆಯಿಂದ ನಾನು ವಾಪಸ್ ಕಲ್ಯಾಣ್‌ಗೆ ಬಂದು ಮಗಳ ಊರಾದ ಕೊಂಗಾವ್‌ಗೆ ಹೋದೆ. ಯುವಕರು ನನ್ನ ಮೇಲೆ ಹಲ್ಲೆ ಮಾಡಿರುವುದು ನನ್ನ ಜೊತೆಗಿದ್ದ ಮಾಂಸದ ಕಾರಣಕ್ಕೆ ಎಂದು ನನಗೆ ಗೊತ್ತಾಯಿತು. ಅದಕ್ಕೆ ಆ ಮಾಂಸವನ್ನು ಮಗಳ ಮನೆಯ ದಾರಿ ಮಧ್ಯೆ ಹರಿಯುವ ನೀರಿಗೆ ಎಸೆದೆ. ನನ್ನ ಮೇಲೆ ನಡೆದ ಹಲ್ಲೆಯನ್ನು ಯಾರಿಗೂ ಗೊತ್ತಾಗದಂತೆ ಮುಚ್ಚಿಟ್ಟಿದ್ದೆ. ಆದರೆ, ಅಷ್ಟರಲ್ಲಿ ವಿಡಿಯೋ ಎಲ್ಲೆಡೆ ಹರಿದಾಡಿತ್ತು” ಎಂದಿದ್ದಾರೆ.

“ಪೊಲೀಸರು ಸರಳ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದಾರೆ”

ಅಶ್ರಫ್ ಅಲೀ ಅವರ ಮೇಲೆ ಕೋಮುದಾಳಿ ನಡೆದಿದೆ. ಅವರು ಮುಸ್ಲಿಂ ಧರ್ಮದವರು ಮತ್ತು ಗೋಮಾಂಸ ಸಾಗಿಸುತ್ತಿದ್ದರು ಎಂದು ಥಳಿಸಲಾಗಿದೆ. ಆದರೆ, ಥಾಣೆ ರೈಲ್ವೆ ಪೊಲೀಸರು ಸಾಮಾನ್ಯ ಹಲ್ಲೆ ಪ್ರಕರಣ ದಾಖಲಿಸಿದ್ದಾರೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಎಸ್‌ಡಿಪಿಐ ಆಕ್ರೋಶ ವ್ಯಕ್ತಪಡಿಸಿದೆ ಎಂದು ದಿ ವೈರ್ ವರದಿ ಮಾಡಿದೆ.

ಕೃಪೆ: thewire.in

ಇದನ್ನೂ ಓದಿ : ಮುಸ್ಲಿಂ ವಿರೋಧಿ ದ್ವೇಷ ಭಾಷಣದ ಆರೋಪ; ಮಹಾರಾಷ್ಟ್ರ ಬಿಜೆಪಿ ಶಾಸಕ ನಿತೇಶ್ ರಾಣೆ ವಿರುದ್ಧ ಎಫ್‌ಐಆರ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...