Homeಮುಖಪುಟ"ಅವರು ನನ್ನನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಲು ಮುಂದಾಗಿದ್ದರು": ಗೋಮಾಂಸ ಶಂಕೆಯಿಂದ ಹಲ್ಲೆಗೊಳಗಾದ ಮುಸ್ಲಿಂ ವೃದ್ದ

“ಅವರು ನನ್ನನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಲು ಮುಂದಾಗಿದ್ದರು”: ಗೋಮಾಂಸ ಶಂಕೆಯಿಂದ ಹಲ್ಲೆಗೊಳಗಾದ ಮುಸ್ಲಿಂ ವೃದ್ದ

- Advertisement -
- Advertisement -

ಅವರ ಹೆಸರು ಅಶ್ರಫ್ ಅಲೀ ಸೈಯ್ಯದ್ ಹುಸೈನ್, ವಯಸ್ಸು 72 ವರ್ಷ. ಮಹಾರಾಷ್ಟ್ರದ ಜಲಗಾಂವ್‌ನಿಂದ ಕಲ್ಯಾಣ್‌ಗೆ ರೈಲಿನ ಮೂಲಕ ಆಗಾಗ ಪ್ರಯಾಣಿಸುತ್ತಿದ್ದರು. ಕಲ್ಯಾಣ್‌ ಜಂಕ್ಷನ್ ರೈಲು ನಿಲ್ದಾಣದಲ್ಲಿ ಇಳಿದು, ಅಲ್ಲಿಂದ ಆಟೋ ರಿಕ್ಷಾ ಹಿಡಿದು ನಾಲಕ್ಕು ಕಿ.ಮೀ ಪ್ರಯಾಣಿಸಿ ನಗರದ ಹೊರಗಿನ ಕೊಂಗಾವ್ ಎಂಬ ಹಳ್ಳಿಗೆ ತಲುಪುತ್ತಿದ್ದರು. ಅಲ್ಲಿ ಅವರ ಮಗಳ ಮನೆಯಿತ್ತು.

ಪ್ರತೀ ಬಾರಿ ರೈಲಿನ ಮೂಲಕ ಮಗಳ ಮನೆಗೆ ತೆರಳುತ್ತಿದ್ದ ಅಶ್ರಫ್ ಅಲೀ ಅವರಿಗೆ ಆಗಸ್ಟ್ 30ರಂದು ಆಘಾತ ಕಾದಿತ್ತು. ರೈಲಿನಲ್ಲಿ ಅವರ ಮುಂದಿನ ಆಸನದಲ್ಲಿ ಕುಳಿತಿದ್ದ ಸುಮಾರು 20-25 ವರ್ಷ ಆಸುಪಾಸಿನ ಯುವಕರ ಗುಂಪೊಂದು ಗೋಮಾಂಸ ಸಾಗಾಟದ ಆರೋಪ ಹೊರಿಸಿ ವಯಸ್ಸಿನ ಹಿರಿತನ ನೋಡದೆ ಅಶ್ರಫ್ ಅಲೀ ಅವರಿಗೆ ಥಳಿಸಿದ್ದರು. ಅದಕ್ಕಿಂತಲೂ ಹೆಚ್ಚಾಗಿ ಇತರ ಪ್ರಯಾಣಿಕರ ಮುಂದೆ ಅವಮಾನಿಸಿ ಮಾನಸಿಕ ಹಿಂಸೆ ನೀಡಿದ್ದರು. ಹಲ್ಲೆ ಮಾಡಿದವರೆಲ್ಲರೂ ಪೊಲೀಸ್ ಹುದ್ದೆಯ ಪರೀಕ್ಷೆ ಬರೆಯಲು ಮುಂಬೈಗೆ ತೆರಳುತ್ತಿದ್ದವರು ಎಂಬುವುದು ಆತಂಕದ ವಿಷಯ.

ಅಶ್ರಫ್ ಅಲೀ ಅವರಿಗೆ ಹಲ್ಲೆ ಮಾಡಿದವರು ಪೊಲೀಸರಾಗಿ ಸಂವಿಧಾನದಡಿ ಕಾನೂನು ಕಾಪಾಡಲು ಹೊರಟವರಾಗಿದ್ದರು. ಆದರೆ, ಅವರೇ ಗೋಮಾಂಸದ ಆರೋಪ ಹೊರಿಸಿ ಅಶ್ರಫ್ ಅಲೀ ಅವರ ಮುಖ, ಎದೆ, ಹೊಟ್ಟೆ ಎಂದು ನೋಡದೆ ಥಳಿಸಿದ್ದರು. ಅಶ್ರಫ್ ಅಲೀ ಅವರ ಮೊಬೈಲ್ ಫೋನ್ ಕಸಿದುಕೊಂಡಿದ್ದರು. ತಮ್ಮ ದುಷ್ಕೃತ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದ್ದರು.

ಈ ಘಟನೆ ಸಂಬಂಧ ಥಾಣೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರಂಭದಲ್ಲಿ ಆಕಾಶ್ ಅಹ್ವಾದ್, ನೀಲೇಶ್ ಅಹಿರೆ ಮತ್ತು ಜಯೇಶ್ ಮೋಹಿತೆ ಎಂಬ ಮೂವರನ್ನು ಬಂಧಿಸಿದ್ದರು. ಆದರೆ, ಹಲ್ಲೆ ನಡೆಸಿರುವ ವಿಡಿಯೋ ಸಾಕ್ಷಿಯ ಹೊರತಾಗಿಯೂ ಆರೋಪಿಗಳ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಜಾಮೀನು ಪಡೆಯಬಹುದಾದ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದರು. ಹಾಗಾಗಿ, ಆರೋಪಿಗಳು ಬಂಧನಕ್ಕೊಳಗಾದ ಮರುದಿನವೇ ಬಿಡುಗಡೆಯಾಗಿದ್ದಾರೆ.

ತನ್ನ ಮೇಲಿನ ಹಲ್ಲೆ ಘಟನೆಯನ್ನು ದಿ ವೈರ್  ಸುದ್ದಿ ಸಂಸ್ಥೆಗೆ ವಿವರಿಸಿರುವ ಅಶ್ರಫ್ ಅಲೀ “ನನ್ನ ಮೇಲಿನ ದಾಳಿ ಅಪ್ರಚೋದಿತವಾಗಿದೆ. ಜಲಗಾಂವ್‌ನ ಚಾಲಿಸ್‌ಗಾಂವ್ ನಿಲ್ದಾಣದಲ್ಲಿ ನಾನು ರೈಲು ಹತ್ತಿದ್ದೆ. ರೈಲಿನಲ್ಲಿ ಜನಸಂದಣಿ ಇತ್ತು. ಹಾಗಾಗಿ ರೈಲು ನಾಸಿಕ್ ರೈಲು ನಿಲ್ದಾಣಕ್ಕೆ ಹತ್ತಿರವಾಗುವವರೆಗೂ ನಿಂತುಕೊಂಡೇ ಇದ್ದೆ. ನಂತರ ಮೇಲಿನ ಬರ್ತ್‌ನಲ್ಲಿ ಕುಳಿತಿದ್ದ ಒಬ್ಬಳು ಹುಡುಗಿ ತನ್ನ ಸೀಟಿನಿಂದ ಇಳಿದಳು. ನಾನು ಆ ಸ್ಥಳಕ್ಕೆ ಹೋದೆ. ಆಗ ನನ್ನ ಪಕ್ಕದಲ್ಲಿ ನಿಂತಿದ್ದ ಸುಮಾರು 24-25 ವರ್ಷ ವಯಸ್ಸಿನ ಯುವಕ, ತನಗೆ ಜಾಗ ಕೊಡಿ ಎಂದು ಕೇಳಿದ. ಇನ್ನೊಬ್ಬ ವ್ಯಕ್ತಿ ಕೂರಲು ಜಾಗ ಇಲ್ಲದ ಕಾರಣ ನಾನು ಮಡಿಲಲ್ಲಿ ಕೂರುತ್ತೀರಾ? ಎಂದು ಆ ಯುವಕನಿಗೆ ಕೇಳಿದೆ. ಅದು ಆ ಯುವಕ ಮತ್ತು ಆತನ ಜೊತೆ ನಿಂತಿದ್ದವರಿಗೆ ಕೋಪ ತರಿಸಿತು” ಎಂದಿದ್ದಾರೆ.

ಮುಂದುವರಿದು “ನಾನು ಇಳಿಯಬೇಕಿದ್ದ ನಿಲ್ದಾಣ ಕಲ್ಯಾಣ್‌ಗೆ ರೈಲು ಬರುವವರೆಗೂ ಕುಳಿತಿದ್ದೆ. ನನ್ನ ಜೊತೆ ಚೀಲವೊಂದಿತ್ತು. ಅದರಲ್ಲಿ ಎರಡು ಪ್ಲಾಸ್ಟಿಕ್‌ ಡಬ್ಬಗಳಲ್ಲಿ ಎಮ್ಮೆ ಮಾಂಸ ಇತ್ತು. ಮಹಾರಾಷ್ಟ್ರದಲ್ಲಿ ಎಮ್ಮೆ ಮಾಂಸ ಸೇವನೆ ಕಾನೂನು ಬದ್ಧವಾಗಿದೆ. ಯುವಕರ ಗುಂಪು ಏಕಾಏಕಿ ನನ್ನ ಬ್ಯಾಗ್ ತೆರೆದು ಅವರಿಗೆ ತೋರಿಸಲು ಒತ್ತಾಯಿಸಿದರು. ನನ್ನನ್ನು ದಬಾಯಿಸಲು ಪ್ರಾರಂಭಿಸಿದರು. ಬ್ಯಾಗ್‌ನಲ್ಲಿ ಏನಿದೆ? ಎಂದು ಕೇಳಿದರು. ನನಗೆ ಗೊಂದಲವುಂಟಾಯಿತು. ಗೂಳಿ ಮಾಂಸ ಎಂದೆ. ತಕ್ಷಣ ಯುವಕರು ನನಗೆ ಥಳಿಸಲು ಪ್ರಾರಂಭಿಸಿದರು” ಎಂದು ಹುಸೈನ್‌ ಎಫ್‌ಐಆರ್‌ನಲ್ಲಿ ವಿವರಿಸಿದ್ದಾರೆ ಎಂದು ದಿ ವೈರ್ ಹೇಳಿದೆ.

“ಅವನನ್ನು ರೈಲಿನಿಂದ ಹೊರಕ್ಕೆ ತಳ್ಳಿ”

“ರೈಲು ಕಲ್ಯಾಣ್ ನಿಲ್ದಾಣಕ್ಕೆ ಸಮೀಪಿಸುತ್ತಿದ್ದಂತೆ ನಾನು ಇಳಿಯಲು ಮುಂದಾದೆ. ಆದರೆ, ಆ ಯುವಕರು ನನ್ನನ್ನು ಬಿಡಲಿಲ್ಲ. ಅವರಲ್ಲಿ ಕೆಲವರು ” ಅವನನ್ನು ರೈಲಿನಿಂದ ಹೊರಕ್ಕೆ ತಳ್ಳಿ” ಎಂದರು. ರೈಲಿನಲ್ಲಿದ್ದ ಕೆಲವರು ನನಗೆ ಹೊಡೆಯದಂತೆ ಕೇಳಿಕೊಂಡರೂ, ಯುವಕರು ತಲೆಕೆಡಿಸಿಕೊಳ್ಳದೆ ಹಲ್ಲೆ ಮಾಡುವುದನ್ನು ಮುಂದುವರೆಸಿದರು” ಎಂದು ಅಶ್ರಫ್ ಅಲೀ ನೆನಪಿಸಿಕೊಂಡಿದ್ದಾರೆ.

“ಆರೋಪಿಗಳು ಪೊಲೀಸರಿಗೆ ದೂರು ನೀಡಿದರೆ ನನ್ನನ್ನು ಕೊಲ್ಲುವುದಾಗಿ ಮತ್ತು ನನ್ನ ಕುಟುಂಬದ ಮಹಿಳೆಯರನ್ನು ಅತ್ಯಾಚಾರವೆಸಗುವುದಾಗಿ ಬೆದರಿಕೆ ಹಾಕಿದ್ದಾರೆ. ಅವರು ದೇಶದ ಹಲವೆಡೆ ಗುಂಪು ಹತ್ಯೆಗಳನ್ನು ನಡೆಸುತ್ತಿರುವ ಸ್ವಯಂ ಘೋಷಿತ ಗೋರಕ್ಷರು ಮತ್ತು ಬಜರಂಗದಳದ ಜೊತೆಗಿನ ತಮ್ಮ ಸಂಪರ್ಕದ ಬಗ್ಗೆ ಹೇಳಿ ಹೆಮ್ಮೆಪಟ್ಟುಕೊಳ್ಳುತ್ತಿದ್ದರು” ಎಂದು ಅಶ್ರಫ್ ಅಲೀ ಹೇಳಿದ್ದಾರೆ.

“ಕಲ್ಯಾಣ್ ನಿಲ್ದಾಣದಲ್ಲಿ ರೈಲಿನಿಂದ ಇಳಿಯಬೇಕಾಗಿದ್ದ ನಾನು ಕೊನೆಗೆ ಥಾಣೆ ನಿಲ್ದಾಣದಲ್ಲಿ ಇಳಿದೆ. ಬಳಿಕ ಪೊಲೀಸ್ ಠಾಣೆಗೆ ಹೋದೆ. ನನಗೆ ಥಳಿಸಿದ್ದಾರೆ ಎಂದು ಪೊಲೀಸರಿಗೆ ಹೇಳಿದೆ. ನನ್ನ ಮುಖ ಊದಿಕೊಂಡಿತ್ತು. ದೇಹದ ತುಂಬಾ ನೋವಿತ್ತು. ಕಣ್ಣಿನ ಕುಳಿ ಕಪ್ಪು ಬಣ್ಣಕ್ಕೆ ತಿರುಗಿತ್ತು. ಆದರೆ, ಪೊಲೀಸರು ನನ್ನ ಪರಿಸ್ಥಿತಿಯನ್ನು ನಿರ್ಲಕ್ಷಿಸಿದರು. ಕೋಮು ಆಯಾಮದಲ್ಲಿ ನನ್ನ ಮೇಲೆ ನಡೆದ ದಾಳಿಯನ್ನು ಸಾಮಾನ್ಯ ಹಲ್ಲೆ ಘಟನೆಯೆಂದು ಪರಿಗಣಿಸಿದರು. ಸಾಮಾನ್ಯ ಕಾಗದಲ್ಲಿ ಏನೋ ಬರೆದು ಸಹಿ ಮಾಡುವಂತೆ ಹೇಳಿದರು. ನಾನು ಸಹಿ ಮಾಡಿ ಹೊರಟೆ” ಎಂದು ಅಶ್ರಫ್ ಅಲೀ ತಿಳಿಸಿದ್ದಾರೆ.

“ಥಾಣೆಯಿಂದ ನಾನು ವಾಪಸ್ ಕಲ್ಯಾಣ್‌ಗೆ ಬಂದು ಮಗಳ ಊರಾದ ಕೊಂಗಾವ್‌ಗೆ ಹೋದೆ. ಯುವಕರು ನನ್ನ ಮೇಲೆ ಹಲ್ಲೆ ಮಾಡಿರುವುದು ನನ್ನ ಜೊತೆಗಿದ್ದ ಮಾಂಸದ ಕಾರಣಕ್ಕೆ ಎಂದು ನನಗೆ ಗೊತ್ತಾಯಿತು. ಅದಕ್ಕೆ ಆ ಮಾಂಸವನ್ನು ಮಗಳ ಮನೆಯ ದಾರಿ ಮಧ್ಯೆ ಹರಿಯುವ ನೀರಿಗೆ ಎಸೆದೆ. ನನ್ನ ಮೇಲೆ ನಡೆದ ಹಲ್ಲೆಯನ್ನು ಯಾರಿಗೂ ಗೊತ್ತಾಗದಂತೆ ಮುಚ್ಚಿಟ್ಟಿದ್ದೆ. ಆದರೆ, ಅಷ್ಟರಲ್ಲಿ ವಿಡಿಯೋ ಎಲ್ಲೆಡೆ ಹರಿದಾಡಿತ್ತು” ಎಂದಿದ್ದಾರೆ.

“ಪೊಲೀಸರು ಸರಳ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದಾರೆ”

ಅಶ್ರಫ್ ಅಲೀ ಅವರ ಮೇಲೆ ಕೋಮುದಾಳಿ ನಡೆದಿದೆ. ಅವರು ಮುಸ್ಲಿಂ ಧರ್ಮದವರು ಮತ್ತು ಗೋಮಾಂಸ ಸಾಗಿಸುತ್ತಿದ್ದರು ಎಂದು ಥಳಿಸಲಾಗಿದೆ. ಆದರೆ, ಥಾಣೆ ರೈಲ್ವೆ ಪೊಲೀಸರು ಸಾಮಾನ್ಯ ಹಲ್ಲೆ ಪ್ರಕರಣ ದಾಖಲಿಸಿದ್ದಾರೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಎಸ್‌ಡಿಪಿಐ ಆಕ್ರೋಶ ವ್ಯಕ್ತಪಡಿಸಿದೆ ಎಂದು ದಿ ವೈರ್ ವರದಿ ಮಾಡಿದೆ.

ಕೃಪೆ: thewire.in

ಇದನ್ನೂ ಓದಿ : ಮುಸ್ಲಿಂ ವಿರೋಧಿ ದ್ವೇಷ ಭಾಷಣದ ಆರೋಪ; ಮಹಾರಾಷ್ಟ್ರ ಬಿಜೆಪಿ ಶಾಸಕ ನಿತೇಶ್ ರಾಣೆ ವಿರುದ್ಧ ಎಫ್‌ಐಆರ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...