Homeಮುಖಪುಟ'ಕಾರ್ಯತಂತ್ರದ ಭಾಗವಾಗಿ ನನ್ನನ್ನು ಕಾಂಗ್ರೆಸ್‌ಗೆ ಕಳುಹಿಸಿದ್ದರು..'; ಮಧ್ಯಪ್ರದೇಶ ಬಿಜೆಪಿ ನಾಯಕನ ಸ್ಪೋಟಕ ಹೇಳಿಕೆ

‘ಕಾರ್ಯತಂತ್ರದ ಭಾಗವಾಗಿ ನನ್ನನ್ನು ಕಾಂಗ್ರೆಸ್‌ಗೆ ಕಳುಹಿಸಿದ್ದರು..’; ಮಧ್ಯಪ್ರದೇಶ ಬಿಜೆಪಿ ನಾಯಕನ ಸ್ಪೋಟಕ ಹೇಳಿಕೆ

- Advertisement -
- Advertisement -

‘ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ತನ್ನ ಕಾರ್ಯತಂತ್ರದ ಭಾಗವಾಗಿ ರಾಜ್ಯ ಚುನಾವಣೆಗೆ ಮುನ್ನ ನನ್ನನ್ನು ಕಾಂಗ್ರೆಸ್‌ಗೆ ಕಳುಹಿಸಿತ್ತು’ ಎಂದು ಮಧ್ಯಪ್ರದೇಶದ ಬಿಜೆಪಿ ನಾಯಕರೊಬ್ಬರು ಹೇಳುವ ಮೂಲಕ ರಾಜಕೀಯ ಬಿರುಗಾಳಿ ಎಬ್ಬಿಸಿದ್ದಾರೆ.

ಬಿಜೆಪಿ ನಾಯಕ ರಾಮಕಿಶೋರ್ ಶುಕ್ಲಾ, ಅಕಾ ಭಯ್ಯಾ ಜಿ, ಕಾಂಗ್ರೆಸ್ ಟಿಕೆಟ್‌ನಲ್ಲಿ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ವಿಫಲರಾಗಿ ಕೆಲವು ದಿನಗಳ ಹಿಂದೆ ಕೇಸರಿ ಪಕ್ಷಕ್ಕೆ ಮರಳಿದರು. ಶುಕ್ಲಾ ಅವರ ಸ್ಪರ್ಧೆಯಿಂದ ವಿಧಾನಸಭಾ ಕ್ಷೇತ್ರದಲ್ಲಿ ತ್ರಿಕೋನ ಹೋರಾಟವನ್ನು ಏರ್ಪಟ್ಟಿತ್ತು. ಆದರೆ, ಇವರು 29,144 ಮತಗಳನ್ನು ಗಳಿಸುವ ಮೂಲಕ ಮೂರನೇ ಸ್ಥಾನದಲ್ಲಿದ್ದರೆ, ಬಿಜೆಪಿಯ ಉಷಾ ಬಾಬು ಸಿಂಗ್ ಠಾಕೂರ್ ಅವರು 1,02,989 ಮತಗಳನ್ನು ಪಡೆದು ಜಯಗಳಿಸಿದರು. ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಂತರಸಿಂಗ್ ದರ್ಬಾರ್ ಅವರು ಸ್ವತಂತ್ರ ಅಭ್ಯರ್ಥಿಯಾಗಿ 68,597 ಮತಗಳನ್ನು ಪಡೆದಿದ್ದರು.

“ನಾನು ವಿಧಾನಸಭಾ ಚುನಾವಣೆಗೆ ಮುಂಚೆಯೇ ಕಾಂಗ್ರೆಸ್‌ ಸೇರಿದ್ದೆ, ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋತಿದ್ದೇನೆ. ಇದೆಲ್ಲವನ್ನೂ ಚುನಾವಣಾ ಕಾರ್ಯತಂತ್ರದ ಭಾಗವಾಗಿ ಮಾಡಲಾಗಿದೆ ಮತ್ತು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹಿರಿಯ ಆರ್‌ಎಸ್‌ಎಸ್ ನಾಯಕರ ನಿರ್ದೇಶನದ ಮೇರೆಗೆ ನಾನು ಹಾಗೆ ಮಾಡಿದ್ದೇನೆ’ ಎಂದು ಶುಕ್ಲಾ ಬುಧವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಇದಕ್ಕೆ ಕಾರಣ ಬಿಜೆಪಿ ಅಭ್ಯರ್ಥಿ ಉಷಾ ಠಾಕೂರ್ ಅವರ ದುರ್ಬಲ ಸ್ಥಾನ, ಪಕ್ಷದೊಳಗೇ ದೊಡ್ಡ ಮಟ್ಟದ ವಿರೋಧ ವ್ಯಕ್ತವಾಗಿತ್ತು. ಕಾಂಗ್ರೆಸ್‌ನ ಮಾಜಿ ಶಾಸಕ ಅನಂತ್‌ ಸಿಂಗ್‌ ದರ್ಬಾರ್‌ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಈ ಎಲ್ಲಾ ಸಮೀಕರಣಗಳನ್ನು ನೋಡಿ ನಾನು ತ್ಯಾಗಕ್ಕೆ ಸಿದ್ಧನಾದೆ ಎಂದು ಅವರು ಹೇಳಿದ್ದಾರೆ.

ಆರ್‌ಎಸ್‌ಎಸ್ ನಾಯಕನ ಹೆಸರು ಹೇಳಲು ಕೇಳಿದಾಗ, ವಿಎಚ್‌ಪಿಯ ಇಂದೋರ್ ವಿಭಾಗ್ ಸಂಘಟನೆಯ ಮಂತ್ರಿ ಅಭಿಷೇಕ್ ಉದೇನಿಯಾ ಅವರನ್ನು ಕಾಂಗ್ರೆಸ್‌ಗೆ ಕಳುಹಿಸಿದ್ದಾರೆ ಎಂದು ಶುಕ್ಲಾ ಹೇಳಿದರು.

ಬಿಜೆಪಿ ಶಾಸಕಿ ಉಷಾ ಬಾಬು ಸಿಂಗ್ ಠಾಕೂರ್ ಅವರು “ಆಧಾರರಹಿತ” ಎಂದು ಶುಕ್ಲಾ ಹೇಳಿಕೆಗಳನ್ನು ತಳ್ಳಿಹಾಕಿದ್ದಾರೆ. ಪಕ್ಷವನ್ನು ಬಿಡುವ ಮೊದಲು ಅವರು ನನ್ನನ್ನು ಭೇಟಿಯಾಗಿದ್ದರು; ಅವರು ತುಂಬಾ ದುಃಖಿತರಾಗಿ ಅಳುತ್ತಿದ್ದರು. ನಾನು ನನ್ನ ಕೈಲಾದಷ್ಟು ಪ್ರಯತ್ನಿಸಿದ್ದೇನೆ ಮತ್ತು ನಾನು ಪಕ್ಷದ ರಾಜ್ಯ ಮುಖ್ಯಸ್ಥ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿಯೊಂದಿಗೆ ಮಾತನಾಡಿದ್ದೇನೆ ಎಂದು ನಾನು ಅವರಿಗೆ ತಿಳಿಸಿದ್ದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ; ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಇಬ್ಬರು ಶಂಕಿತರನ್ನು ಬಂಧಿಸಿದ ಭಯೋತ್ಪಾದನಾ ನಿಗ್ರಹ ದಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...