Homeಅಂಕಣಗಳುಸಾಚಾರ್ ವರದಿಯ ನಂತರವೂ ಇದ್ದ ನಾಲ್ಕು ಪರಸೆಂಟ್ ಮೀಸಲಾತಿ ಕಿತ್ತುಕೊಂಡರಲ್ಲಾ

ಸಾಚಾರ್ ವರದಿಯ ನಂತರವೂ ಇದ್ದ ನಾಲ್ಕು ಪರಸೆಂಟ್ ಮೀಸಲಾತಿ ಕಿತ್ತುಕೊಂಡರಲ್ಲಾ

- Advertisement -
- Advertisement -

ಆ ದೇವೇಂದ್ರನೇ ಎರಡನೇ ಬಾರಿಗೆ ಬಂದಾಗ ನೋಡುಗರಿಗೆ ಯಾವ ಉತ್ಸಾಹವೂ ಇರುವುದಿಲ್ಲವಂತೆ; ಅದರಿಂದ ದಾವಣಗೆರೆಯಿಂದ ಶಿವಮೊಗ್ಗಕ್ಕೆ ಹೋಗಿ ಮೋದಿ ಫ್ಲೈಟ್ ಹತ್ತುವಾಗ ಆ ಪ್ರದೇಶದಲ್ಲಿ ಯಾವ ಕುತೂಹಲವೂ ಇರಲಿಲ್ಲ. ಏಕೆಂದರೆ ಅವರ ಪಾರ್ಟಿಯ ಮಾಡಾಳು ವಿರುಪಾಕ್ಷಪ್ಪ ಜೈಲುಪಾಲಾಗಿದ್ದರು; ಹಿಂದೊಮ್ಮೆ ಅಡ್ವಾನಿ ಕರ್ನಾಟಕಕ್ಕೆ ಬಂದಾಗ ಎಡೂರಪ್ಪನವರು ಜೈಲುಪಾಲಾಗಿದ್ದರು. ಆಗ ಅಡ್ವಾನಿ ತಮ್ಮ ಪಕ್ಷದವರ ಬಗ್ಗೆ ಯಾವ ಮುಲಾಜು ಇಲ್ಲದೆ ಕರ್ನಾಟಕದ ಬಿಜೆಪಿ ಸರಕಾರ ಶುದ್ಧ ಜೇಬುಗಳ್ಳರ ಪಕ್ಷವಾಗಿವೆ ಎಂದು ಟಿಕೀಸಿದ್ದರು; ಆದರೆ ಈಗ ಆ ಜೇಬುಗಳ್ಳರು ದರೋಡೆಕೋರರಾಗಿದ್ದಾರೆ! ದರೋಡೆಕೋರರು ಬಲಿಷ್ಠರಾಗಿರುತ್ತಾರೆ. ಅವರಿಗೆ ಯಾವ ಭಯವೂ ಇರುವುದಿಲ್ಲ; ಜನರ ಭಯವಂತೂ ಇಲ್ಲವೇಇಲ್ಲ. ಸಾಮಾನ್ಯವಾಗಿ ದರೋಡೆಕೋರರ ಲೀಡರು ದೋಚಿದ್ದರಲ್ಲಿ ಒಂದಿಷ್ಟು ದಾನವನ್ನ ಮಾಡುತ್ತಾನಂತೆ. ಹಾಗೆಯೇ ಅಂತಹ ಕರ್ನಾಟಕದ ಲೀಡರ್ ಉದ್ಯೋಗವೇ ಇಲ್ಲದ ಸಮಯದಲ್ಲಿ ಮೀಸಲಾತಿ ಹಂಚುತ್ತಿದ್ದಾರಲ್ಲ, ಥೂತ್ತೇರಿ.

****

ಈಜುಬಾರದೆ ಮುಳುಗುತ್ತಿರುವ ವ್ಯಕ್ತಿ ಕೈಗೆ ಸಿಕ್ಕಿದ್ದನ್ನೆಲ್ಲಾ ಹಿಡಿಯುವಂತೆ ಮನೆಗೆ ಹೊರಟಿರುವ ಬೊಮ್ಮಾಯಿ ಸಿಕ್ಕಸಿಕ್ಕವರಿಗೆಲ್ಲಾ ಮೀಸಲಾತಿ ಹಂಚುತ್ತ, ಬಿಜೆಪಿಗಳ ಅಜೆಂಡಾದಂತೆ ಮುಸ್ಲಿಮರನ್ನ ಸಂಪೂರ್ಣ ಮೀಸಲಾತಿಯಿಂದ ಹೊರಗಿಡಲು ನಿಂತಿದ್ದಾರಲ್ಲ. ಅವರ ತಟ್ಟೆಯಲ್ಲಿದ್ದ ನಾಲ್ಕು ಪೀಸು ಮಟನ್ ಎಗರಿಸಿ ಅದರಲ್ಲಿ ಲಿಂಗಾಯಿತರಿಗೆ ಎರಡು ಪೀಸು ಮತ್ತು ಒಕ್ಕಲಿಗರಿಗೆ ಎರಡು ಪೀಸು ಎಸೆದುಬಿಟ್ಟರಲ್ಲಾ. ಈ ಕೃತ್ಯದಿಂದ ಸಿಟ್ಟುಗೊಂಡು, ಒಕ್ಕಲಿಗ ಮತ್ತು ಲಿಂಗಾಯಿತರು ಇನ್ನೊಬ್ಬರಿಂದ ಕಸಿದುಕೊಟ್ಟದ್ದು ಬೇಡವೆಂದು ಭುಗಿಲೇಳುತ್ತಾರೆಂದು ಕಾದರೆ ಹಾಗೇನೂ ಆಗದೆ ಸುಮ್ಮನಿದ್ದಾರಂತಲ್ಲಾ. ಲಿಂಗಾಯಿತರು ಹಿಂದೆ ಬಸವ ತತ್ವವಿದೆ ಒಕ್ಕಲಿಗರ ಹಿಂದೆ ವಿಶ್ವಮಾನವ ತತ್ವವಿದೆ ಮತ್ತು ಸರ್ವಜನಾಂಗದ ಹಿತವಿದೆ ಎಂದು ಭಾವಿಸಿದ್ದವರೆಲ್ಲಾ ಬೇಸ್ತು ಬೀಳುವಂತೆ ಈ ಬಲಾಢ್ಯ ಕೋಮುಗಳು ಯಾರ ತಟ್ಟೆಯಿಂದ ಕಿತ್ತುಕೊಟ್ಟರೇನು, ಅಂತೂ ದಕ್ಕಿತಲ್ಲಾ ಎಂಬಂತೆ ಸುಮ್ಮನಾಗಿರುವಾಗ, ಸರಕಾರ ಸೃಷ್ಟಿಮಾಡುವ ಉದ್ಯೋಗದ ಕಡೆ ಸಾಮಾನ್ಯವಾಗಿ ಹೆಚ್ಚು ತಿರುಗಿ ನೋಡದ ಮುಸಲ್ಮಾನರು, ಇಂತಹ ಬಿಕ್ಕಟ್ಟಿನ ಸಮಯದಲ್ಲಿ, ತಮ್ಮ ಜನಾಂಗದ ರಾಜಕಾರಣಿಗಳು ಮತ್ತು ಮುಲ್ಲಾಗಳ ವ್ಯಾಪ್ತಿಗೆ ಮೀಸಲಾತಿ ವಿಷಯ ಬಿಟ್ಟು ತಮ್ಮ ಕೆಲಸದಲ್ಲಿ ನಿರತರಾಗಿದ್ದಾರಂತಲ್ಲಾ, ಥೂತ್ತೇರಿ.

****

ಇಸ್ಲಾಂ ಧರ್ಮದಲ್ಲಿ ಬಡವರಿರಬಹುದು, ನಿರ್ಗತಿಕರೂ ಇದ್ದಾರೆ ಆದರೆ ಶ್ರೇಣಿಕರಣವಿಲ್ಲ. ಅಲ್ಲಿನ ಮಸೀದಿಯಲ್ಲಿ ಜಟಕಾ ಗಾಡಿ ಓಡಿಸುವ ಮುಸ್ಲಿಂ ವ್ಯಕ್ತಿಯ ಜೊತೆಗೆ ರತ್ನದ ವ್ಯಾಪಾರಿಯೂ ನಿಂತು ನಮಾಜು ಮಾಡುತ್ತಾನೆ, ಇಂತಹ ಸಮಾನತೆಗಾಗಿಯೇ ಆ ಧರ್ಮ ಜಗತ್ತಿನಾದ್ಯಂತ ವೇಗವಾಗಿ ಹಬ್ಬಿದ್ದು ಎನ್ನಲಾಗುತ್ತದೆ. ದುಡಿದು ತಿನ್ನುವಂತೆ ಪೈಗಂಬರರೇ ಶಾಸನಮಾಡಿರುವುದರಿಂದ ದುಡಿದು ತಿನ್ನುವ ಮುಸ್ಲಿಮರು ದೇಶದ ಸಂಪತ್ತು ಹೆಚ್ಚಿಸುವ ಶ್ರಮಜೀವಿಗಳು. ಅದಕ್ಕೆ ಅಲ್ಲಿ ಏನಾದರೊಂದು ಕೆಲಸ ಮಾಡಿಕೊಂಡು ಬದುಕು ಕಟ್ಟಿಕೊಳ್ಳುವುದು ಸಾಮಾನ್ಯ. ತನ್ನ ಓದಿಗೆ ತಕ್ಕ ಕೆಲಸ ಬೇಕೆಂದು ಹಠ ಹಿಡಿದು ಕೂತಿರುವ ಇತರ ಕೋಮುಗಳಲ್ಲೇ ನಿರುದ್ಯೋಗ ಜಾಸ್ತಿ. ಇನ್ನೊಂದು ಮುಖ್ಯ ಸಂಗತಿ ಯಾವುದೆಂದರೆ ಭಾರತದಲ್ಲಿ ನಿರುದ್ಯೋಗ ಭೀಕರವಾಗಿರುವುದು. ಹೀಗೆ ದುಡಿದು ತಿನ್ನುವ ಮುಸ್ಲಿಮರು ಎಲ್ಲ ಜನಾಂಗಕ್ಕೂ ಮಾದರಿಯಾದವರು. ಸಾಚಾರ್ ವರದಿಯ ನಂತರವೂ ಸರಕಾರ ಅವರ ಕಡೆ ತಿರುಗಿಯೂ ನೋಡದೆ ಇದ್ದ ನಾಲ್ಕು ಪರಸೆಂಟ್ ಮೀಸಲಾತಿ ಕಿತ್ತುಕೊಂಡರಲ್ಲಾ. ಹೀಗೆ ಕಿತ್ತುಕೊಳ್ಳಲು ಮುಂದಾದವರು, ಮಿಕವನ್ನು ಜೀವಂತವಾಗಿಯೇ ಹಿಂದಿನಿಂದ ಬಾಯಿಹಾಕಿ ತಿನ್ನುವ ಹೈನಾಗಳ ಮನಸ್ಥಿತಿಯವರಂಥಲ್ಲಾ, ಥೂತ್ತೇರಿ.

****

ಜೆಡಿಎಸ್ ಮತ್ತು ಕಾಂಗ್ರೆಸ್ ಪಾರ್ಟಿಗೆ ಬೇಡವಾದ ಶಿವರಾಮೇಗೌಡರನ್ನ ಬಿಜೆಪಿ ಆಹ್ವಾನಿಸಿದೆ. ಈಗಾಗಲೇ ಚುನಾವಣೆಗಾಗಿ ಸಿಕ್ಕಾಪಟ್ಟೆ ಹಣ ಚೆಲ್ಲಿರುವ ಫೈಟರ್ ರವಿ ಎಂಬ ಮೋದಿ ಅಭಿಮಾನಿ, ’ಯಾವ ಕಾರಣಕ್ಕೂ ನಾನು ಹಿಂದೆ ಸರಿಯುವುದಿಲ್ಲ ನನಗೇ ಬಿಜೆಪಿ ಟಿಕೆಟ್ ಕೊಡಿ ಎಂದು ಕೇಳುತ್ತಿದ್ದಾರಂತಲ್ಲಾ. ಆತನ ಮೇಲಿದ್ದ ಪೋಲಿಸ್ ಕೇಸುಗಳನ್ನು ಜ್ಞಾಪಿಸಿ ಸುಮ್ಮನಿರುವಂತೆ ಮಾಡುವುದು ಬಿಜೆಪಿಗೆ ಅಸಾಧ್ಯವಾದ ಕೆಲಸವೇನಲ್ಲ ಎಂದು ವಾದಿಸುತ್ತಿರುವ ಶಿವರಾಮೇಗೌಡರ ಕಡೆಯ ಪಡ್ಡೆ ಹುಡುಗರಾಗಲೇ, ಆ ಗಿರೀಶ್ ಕಾರ್ನಾಡ್ ನಮಗೆ ಸಿಗಬೇಕಿತ್ತು; ಈ ಸಾಹಿತಿಗಳು ಏನೇನೂ ಬಾಯಿಗೆ ಬಂದಂತೆ ಮಾತನಾಡುತ್ತಾರಂತೆ. ಉರಿಗೌಡ ನಂಜೇಗೌಡ ನಮ್ಮ ತಾಲೂಕಿನವರು. ಅದರಲ್ಲೂ ನಂಜೇಗೌಡ ನಮ್ಮ ಜನಾಂಗದ ಇತಿಹಾಸ ಸಂಶೋಧಕ ಹ.ಕ. ರಾಜೇಗೌಡರ ಊರಿನವನು. ಯಾರೂ ಕೊಲ್ಲಲಾಗದ ಟಿಪ್ಪು ಸುಲ್ತಾನನ ಎದೆಗೆ ಭರ್ಜಿ ಹಾಕಿ ಸಾಯಿಸಿದವರು ನಮ್ಮ ಉರಿಗೌಡ ನಂಜೇಗೌಡ ಗೊತ್ತ? ಎಂದು ಚುನಾವಣಾ ಪ್ರಚಾರವನ್ನೇ ಆರಂಭಿಸಿದ್ದಾರಂತಲ್ಲಾ. ಹಾಗಾದರೆ ಈ ಮುಗ್ದ ಹುಡುಗರು ಮುಂದೆ ಇನ್ನೂ ಏನೇನು ಮಾತನಾಡಬಹುದೆಂದು ಊಹಿಸಲಾಗದೆ, ಪ್ರಜ್ಞಾವಂತ ಜನ ಉರಿಯತ್ತಿಸಿಕೊಂಡು ಕಂಗಾಲಾಗಿದ್ದಾರಂತಲ್ಲಾ, ಥೂತ್ತೇರಿ.

****

ಎಡೂರಪ್ಪನವರ ರಾಜಕೀಯ ಇತಿಹಾಸದಲ್ಲಿ ಪಾರ್ಟಿಗಾಗಿ ಕೆಲವು ಜನಗಳ ಬಗ್ಗೆ ಕೆಲವು ಕೆಟ್ಟ ಮಾತುಗಳನ್ನು ಮಾತನಾಡಿರಬಹುದೇ ಹೊರತು ಎಂದೂ ಯಾವ ಜನಾಂಗವನ್ನ ನಿಂದಿಸಿದವರಲ್ಲ. ಹಾಗಾಗಿ ಶಿಕಾರಿಪುರದಲ್ಲಿ ಮುಸ್ಲಿಮರು ಮತ್ತು ಲಂಬಾಣಿಗರು ಅವರನ್ನ ಪೂರ್ಣ ಬೆಂಬಲಿಸುತ್ತಿದ್ದರು. ಅದರಲ್ಲೂ ಕುವೆಂಪು ಯೂನಿಯರ್ಸಿಟಿಯಲ್ಲಿ ನಡೆದ ಪೇಕ್ ಸರ್ಟಿಫಿಕೇಟ್ ಮಾರಾಟದ ದಂಧೆಯಲ್ಲಿ ಸಿಕ್ಕ ಮುಕ್ಕಾಲು ಜನ ಲಂಬಾಣಿಗರು; ಅವರನ್ನೆಲ್ಲಾ ಬಚಾವು ಮಾಡಲು ಓಡಾಡಿದವರು ರಾಘವೇಂದ್ರ. ಆದರೀಗ ಒಳಮೀಸಲು ಜಾರಿ ಶಿಫಾರಸ್ಸಿನಿಂದ ಸಿಟ್ಟಾದ ಲಂಬಾಣಿಗರು, ಎಡೂರಪ್ಪನ ಮನೆಗೆ ಎರ್ರಾಬಿರ್ರಿ ಕಲ್ಲು ಬೀರಿದ್ದಾರಲ್ಲಾ. ಒಳ ಮೀಸಲು ಜಾರಿ ಶಿಫಾರಸ್ಸು ಮಾಡಿದವರು ಬೊಮ್ಮಾಯಿ. ಕಲ್ಲು ಬೀಸಿಸಿಕೊಂಡವರು ಎಡೂರಪ್ಪ. ಈ ಕೃತ್ಯದಿಂದ ಜಮದಗ್ನಿಯುಂತಾಗಿರುವ ಎಡೂರಪ್ಪ ಯಾವಾಗ ಭುಗಿಲೇಳುತ್ತಾರೊ ಏನೋ ಅಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...