Homeಅಂಕಣಗಳುಸಾಚಾರ್ ವರದಿಯ ನಂತರವೂ ಇದ್ದ ನಾಲ್ಕು ಪರಸೆಂಟ್ ಮೀಸಲಾತಿ ಕಿತ್ತುಕೊಂಡರಲ್ಲಾ

ಸಾಚಾರ್ ವರದಿಯ ನಂತರವೂ ಇದ್ದ ನಾಲ್ಕು ಪರಸೆಂಟ್ ಮೀಸಲಾತಿ ಕಿತ್ತುಕೊಂಡರಲ್ಲಾ

- Advertisement -
- Advertisement -

ಆ ದೇವೇಂದ್ರನೇ ಎರಡನೇ ಬಾರಿಗೆ ಬಂದಾಗ ನೋಡುಗರಿಗೆ ಯಾವ ಉತ್ಸಾಹವೂ ಇರುವುದಿಲ್ಲವಂತೆ; ಅದರಿಂದ ದಾವಣಗೆರೆಯಿಂದ ಶಿವಮೊಗ್ಗಕ್ಕೆ ಹೋಗಿ ಮೋದಿ ಫ್ಲೈಟ್ ಹತ್ತುವಾಗ ಆ ಪ್ರದೇಶದಲ್ಲಿ ಯಾವ ಕುತೂಹಲವೂ ಇರಲಿಲ್ಲ. ಏಕೆಂದರೆ ಅವರ ಪಾರ್ಟಿಯ ಮಾಡಾಳು ವಿರುಪಾಕ್ಷಪ್ಪ ಜೈಲುಪಾಲಾಗಿದ್ದರು; ಹಿಂದೊಮ್ಮೆ ಅಡ್ವಾನಿ ಕರ್ನಾಟಕಕ್ಕೆ ಬಂದಾಗ ಎಡೂರಪ್ಪನವರು ಜೈಲುಪಾಲಾಗಿದ್ದರು. ಆಗ ಅಡ್ವಾನಿ ತಮ್ಮ ಪಕ್ಷದವರ ಬಗ್ಗೆ ಯಾವ ಮುಲಾಜು ಇಲ್ಲದೆ ಕರ್ನಾಟಕದ ಬಿಜೆಪಿ ಸರಕಾರ ಶುದ್ಧ ಜೇಬುಗಳ್ಳರ ಪಕ್ಷವಾಗಿವೆ ಎಂದು ಟಿಕೀಸಿದ್ದರು; ಆದರೆ ಈಗ ಆ ಜೇಬುಗಳ್ಳರು ದರೋಡೆಕೋರರಾಗಿದ್ದಾರೆ! ದರೋಡೆಕೋರರು ಬಲಿಷ್ಠರಾಗಿರುತ್ತಾರೆ. ಅವರಿಗೆ ಯಾವ ಭಯವೂ ಇರುವುದಿಲ್ಲ; ಜನರ ಭಯವಂತೂ ಇಲ್ಲವೇಇಲ್ಲ. ಸಾಮಾನ್ಯವಾಗಿ ದರೋಡೆಕೋರರ ಲೀಡರು ದೋಚಿದ್ದರಲ್ಲಿ ಒಂದಿಷ್ಟು ದಾನವನ್ನ ಮಾಡುತ್ತಾನಂತೆ. ಹಾಗೆಯೇ ಅಂತಹ ಕರ್ನಾಟಕದ ಲೀಡರ್ ಉದ್ಯೋಗವೇ ಇಲ್ಲದ ಸಮಯದಲ್ಲಿ ಮೀಸಲಾತಿ ಹಂಚುತ್ತಿದ್ದಾರಲ್ಲ, ಥೂತ್ತೇರಿ.

****

ಈಜುಬಾರದೆ ಮುಳುಗುತ್ತಿರುವ ವ್ಯಕ್ತಿ ಕೈಗೆ ಸಿಕ್ಕಿದ್ದನ್ನೆಲ್ಲಾ ಹಿಡಿಯುವಂತೆ ಮನೆಗೆ ಹೊರಟಿರುವ ಬೊಮ್ಮಾಯಿ ಸಿಕ್ಕಸಿಕ್ಕವರಿಗೆಲ್ಲಾ ಮೀಸಲಾತಿ ಹಂಚುತ್ತ, ಬಿಜೆಪಿಗಳ ಅಜೆಂಡಾದಂತೆ ಮುಸ್ಲಿಮರನ್ನ ಸಂಪೂರ್ಣ ಮೀಸಲಾತಿಯಿಂದ ಹೊರಗಿಡಲು ನಿಂತಿದ್ದಾರಲ್ಲ. ಅವರ ತಟ್ಟೆಯಲ್ಲಿದ್ದ ನಾಲ್ಕು ಪೀಸು ಮಟನ್ ಎಗರಿಸಿ ಅದರಲ್ಲಿ ಲಿಂಗಾಯಿತರಿಗೆ ಎರಡು ಪೀಸು ಮತ್ತು ಒಕ್ಕಲಿಗರಿಗೆ ಎರಡು ಪೀಸು ಎಸೆದುಬಿಟ್ಟರಲ್ಲಾ. ಈ ಕೃತ್ಯದಿಂದ ಸಿಟ್ಟುಗೊಂಡು, ಒಕ್ಕಲಿಗ ಮತ್ತು ಲಿಂಗಾಯಿತರು ಇನ್ನೊಬ್ಬರಿಂದ ಕಸಿದುಕೊಟ್ಟದ್ದು ಬೇಡವೆಂದು ಭುಗಿಲೇಳುತ್ತಾರೆಂದು ಕಾದರೆ ಹಾಗೇನೂ ಆಗದೆ ಸುಮ್ಮನಿದ್ದಾರಂತಲ್ಲಾ. ಲಿಂಗಾಯಿತರು ಹಿಂದೆ ಬಸವ ತತ್ವವಿದೆ ಒಕ್ಕಲಿಗರ ಹಿಂದೆ ವಿಶ್ವಮಾನವ ತತ್ವವಿದೆ ಮತ್ತು ಸರ್ವಜನಾಂಗದ ಹಿತವಿದೆ ಎಂದು ಭಾವಿಸಿದ್ದವರೆಲ್ಲಾ ಬೇಸ್ತು ಬೀಳುವಂತೆ ಈ ಬಲಾಢ್ಯ ಕೋಮುಗಳು ಯಾರ ತಟ್ಟೆಯಿಂದ ಕಿತ್ತುಕೊಟ್ಟರೇನು, ಅಂತೂ ದಕ್ಕಿತಲ್ಲಾ ಎಂಬಂತೆ ಸುಮ್ಮನಾಗಿರುವಾಗ, ಸರಕಾರ ಸೃಷ್ಟಿಮಾಡುವ ಉದ್ಯೋಗದ ಕಡೆ ಸಾಮಾನ್ಯವಾಗಿ ಹೆಚ್ಚು ತಿರುಗಿ ನೋಡದ ಮುಸಲ್ಮಾನರು, ಇಂತಹ ಬಿಕ್ಕಟ್ಟಿನ ಸಮಯದಲ್ಲಿ, ತಮ್ಮ ಜನಾಂಗದ ರಾಜಕಾರಣಿಗಳು ಮತ್ತು ಮುಲ್ಲಾಗಳ ವ್ಯಾಪ್ತಿಗೆ ಮೀಸಲಾತಿ ವಿಷಯ ಬಿಟ್ಟು ತಮ್ಮ ಕೆಲಸದಲ್ಲಿ ನಿರತರಾಗಿದ್ದಾರಂತಲ್ಲಾ, ಥೂತ್ತೇರಿ.

****

ಇಸ್ಲಾಂ ಧರ್ಮದಲ್ಲಿ ಬಡವರಿರಬಹುದು, ನಿರ್ಗತಿಕರೂ ಇದ್ದಾರೆ ಆದರೆ ಶ್ರೇಣಿಕರಣವಿಲ್ಲ. ಅಲ್ಲಿನ ಮಸೀದಿಯಲ್ಲಿ ಜಟಕಾ ಗಾಡಿ ಓಡಿಸುವ ಮುಸ್ಲಿಂ ವ್ಯಕ್ತಿಯ ಜೊತೆಗೆ ರತ್ನದ ವ್ಯಾಪಾರಿಯೂ ನಿಂತು ನಮಾಜು ಮಾಡುತ್ತಾನೆ, ಇಂತಹ ಸಮಾನತೆಗಾಗಿಯೇ ಆ ಧರ್ಮ ಜಗತ್ತಿನಾದ್ಯಂತ ವೇಗವಾಗಿ ಹಬ್ಬಿದ್ದು ಎನ್ನಲಾಗುತ್ತದೆ. ದುಡಿದು ತಿನ್ನುವಂತೆ ಪೈಗಂಬರರೇ ಶಾಸನಮಾಡಿರುವುದರಿಂದ ದುಡಿದು ತಿನ್ನುವ ಮುಸ್ಲಿಮರು ದೇಶದ ಸಂಪತ್ತು ಹೆಚ್ಚಿಸುವ ಶ್ರಮಜೀವಿಗಳು. ಅದಕ್ಕೆ ಅಲ್ಲಿ ಏನಾದರೊಂದು ಕೆಲಸ ಮಾಡಿಕೊಂಡು ಬದುಕು ಕಟ್ಟಿಕೊಳ್ಳುವುದು ಸಾಮಾನ್ಯ. ತನ್ನ ಓದಿಗೆ ತಕ್ಕ ಕೆಲಸ ಬೇಕೆಂದು ಹಠ ಹಿಡಿದು ಕೂತಿರುವ ಇತರ ಕೋಮುಗಳಲ್ಲೇ ನಿರುದ್ಯೋಗ ಜಾಸ್ತಿ. ಇನ್ನೊಂದು ಮುಖ್ಯ ಸಂಗತಿ ಯಾವುದೆಂದರೆ ಭಾರತದಲ್ಲಿ ನಿರುದ್ಯೋಗ ಭೀಕರವಾಗಿರುವುದು. ಹೀಗೆ ದುಡಿದು ತಿನ್ನುವ ಮುಸ್ಲಿಮರು ಎಲ್ಲ ಜನಾಂಗಕ್ಕೂ ಮಾದರಿಯಾದವರು. ಸಾಚಾರ್ ವರದಿಯ ನಂತರವೂ ಸರಕಾರ ಅವರ ಕಡೆ ತಿರುಗಿಯೂ ನೋಡದೆ ಇದ್ದ ನಾಲ್ಕು ಪರಸೆಂಟ್ ಮೀಸಲಾತಿ ಕಿತ್ತುಕೊಂಡರಲ್ಲಾ. ಹೀಗೆ ಕಿತ್ತುಕೊಳ್ಳಲು ಮುಂದಾದವರು, ಮಿಕವನ್ನು ಜೀವಂತವಾಗಿಯೇ ಹಿಂದಿನಿಂದ ಬಾಯಿಹಾಕಿ ತಿನ್ನುವ ಹೈನಾಗಳ ಮನಸ್ಥಿತಿಯವರಂಥಲ್ಲಾ, ಥೂತ್ತೇರಿ.

****

ಜೆಡಿಎಸ್ ಮತ್ತು ಕಾಂಗ್ರೆಸ್ ಪಾರ್ಟಿಗೆ ಬೇಡವಾದ ಶಿವರಾಮೇಗೌಡರನ್ನ ಬಿಜೆಪಿ ಆಹ್ವಾನಿಸಿದೆ. ಈಗಾಗಲೇ ಚುನಾವಣೆಗಾಗಿ ಸಿಕ್ಕಾಪಟ್ಟೆ ಹಣ ಚೆಲ್ಲಿರುವ ಫೈಟರ್ ರವಿ ಎಂಬ ಮೋದಿ ಅಭಿಮಾನಿ, ’ಯಾವ ಕಾರಣಕ್ಕೂ ನಾನು ಹಿಂದೆ ಸರಿಯುವುದಿಲ್ಲ ನನಗೇ ಬಿಜೆಪಿ ಟಿಕೆಟ್ ಕೊಡಿ ಎಂದು ಕೇಳುತ್ತಿದ್ದಾರಂತಲ್ಲಾ. ಆತನ ಮೇಲಿದ್ದ ಪೋಲಿಸ್ ಕೇಸುಗಳನ್ನು ಜ್ಞಾಪಿಸಿ ಸುಮ್ಮನಿರುವಂತೆ ಮಾಡುವುದು ಬಿಜೆಪಿಗೆ ಅಸಾಧ್ಯವಾದ ಕೆಲಸವೇನಲ್ಲ ಎಂದು ವಾದಿಸುತ್ತಿರುವ ಶಿವರಾಮೇಗೌಡರ ಕಡೆಯ ಪಡ್ಡೆ ಹುಡುಗರಾಗಲೇ, ಆ ಗಿರೀಶ್ ಕಾರ್ನಾಡ್ ನಮಗೆ ಸಿಗಬೇಕಿತ್ತು; ಈ ಸಾಹಿತಿಗಳು ಏನೇನೂ ಬಾಯಿಗೆ ಬಂದಂತೆ ಮಾತನಾಡುತ್ತಾರಂತೆ. ಉರಿಗೌಡ ನಂಜೇಗೌಡ ನಮ್ಮ ತಾಲೂಕಿನವರು. ಅದರಲ್ಲೂ ನಂಜೇಗೌಡ ನಮ್ಮ ಜನಾಂಗದ ಇತಿಹಾಸ ಸಂಶೋಧಕ ಹ.ಕ. ರಾಜೇಗೌಡರ ಊರಿನವನು. ಯಾರೂ ಕೊಲ್ಲಲಾಗದ ಟಿಪ್ಪು ಸುಲ್ತಾನನ ಎದೆಗೆ ಭರ್ಜಿ ಹಾಕಿ ಸಾಯಿಸಿದವರು ನಮ್ಮ ಉರಿಗೌಡ ನಂಜೇಗೌಡ ಗೊತ್ತ? ಎಂದು ಚುನಾವಣಾ ಪ್ರಚಾರವನ್ನೇ ಆರಂಭಿಸಿದ್ದಾರಂತಲ್ಲಾ. ಹಾಗಾದರೆ ಈ ಮುಗ್ದ ಹುಡುಗರು ಮುಂದೆ ಇನ್ನೂ ಏನೇನು ಮಾತನಾಡಬಹುದೆಂದು ಊಹಿಸಲಾಗದೆ, ಪ್ರಜ್ಞಾವಂತ ಜನ ಉರಿಯತ್ತಿಸಿಕೊಂಡು ಕಂಗಾಲಾಗಿದ್ದಾರಂತಲ್ಲಾ, ಥೂತ್ತೇರಿ.

****

ಎಡೂರಪ್ಪನವರ ರಾಜಕೀಯ ಇತಿಹಾಸದಲ್ಲಿ ಪಾರ್ಟಿಗಾಗಿ ಕೆಲವು ಜನಗಳ ಬಗ್ಗೆ ಕೆಲವು ಕೆಟ್ಟ ಮಾತುಗಳನ್ನು ಮಾತನಾಡಿರಬಹುದೇ ಹೊರತು ಎಂದೂ ಯಾವ ಜನಾಂಗವನ್ನ ನಿಂದಿಸಿದವರಲ್ಲ. ಹಾಗಾಗಿ ಶಿಕಾರಿಪುರದಲ್ಲಿ ಮುಸ್ಲಿಮರು ಮತ್ತು ಲಂಬಾಣಿಗರು ಅವರನ್ನ ಪೂರ್ಣ ಬೆಂಬಲಿಸುತ್ತಿದ್ದರು. ಅದರಲ್ಲೂ ಕುವೆಂಪು ಯೂನಿಯರ್ಸಿಟಿಯಲ್ಲಿ ನಡೆದ ಪೇಕ್ ಸರ್ಟಿಫಿಕೇಟ್ ಮಾರಾಟದ ದಂಧೆಯಲ್ಲಿ ಸಿಕ್ಕ ಮುಕ್ಕಾಲು ಜನ ಲಂಬಾಣಿಗರು; ಅವರನ್ನೆಲ್ಲಾ ಬಚಾವು ಮಾಡಲು ಓಡಾಡಿದವರು ರಾಘವೇಂದ್ರ. ಆದರೀಗ ಒಳಮೀಸಲು ಜಾರಿ ಶಿಫಾರಸ್ಸಿನಿಂದ ಸಿಟ್ಟಾದ ಲಂಬಾಣಿಗರು, ಎಡೂರಪ್ಪನ ಮನೆಗೆ ಎರ್ರಾಬಿರ್ರಿ ಕಲ್ಲು ಬೀರಿದ್ದಾರಲ್ಲಾ. ಒಳ ಮೀಸಲು ಜಾರಿ ಶಿಫಾರಸ್ಸು ಮಾಡಿದವರು ಬೊಮ್ಮಾಯಿ. ಕಲ್ಲು ಬೀಸಿಸಿಕೊಂಡವರು ಎಡೂರಪ್ಪ. ಈ ಕೃತ್ಯದಿಂದ ಜಮದಗ್ನಿಯುಂತಾಗಿರುವ ಎಡೂರಪ್ಪ ಯಾವಾಗ ಭುಗಿಲೇಳುತ್ತಾರೊ ಏನೋ ಅಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...