Homeಮುಖಪುಟ‘ನನ್ನ ತಂದೆಯನ್ನು ಕೊಂದು, ನನ್ನನ್ನು ನೋಡಿ ನಗುತ್ತಿದ್ದರು’ - ಕಾಶ್ಮೀರಿ ಬಾಲಕಿ

‘ನನ್ನ ತಂದೆಯನ್ನು ಕೊಂದು, ನನ್ನನ್ನು ನೋಡಿ ನಗುತ್ತಿದ್ದರು’ – ಕಾಶ್ಮೀರಿ ಬಾಲಕಿ

- Advertisement -
- Advertisement -

13 ವರ್ಷದ ಕಾಶ್ಮೀರಿ ಬಾಲಕಿಯೊಬ್ಬರು ಜಮ್ಮು ಕಾಶ್ಮೀರದಲ್ಲಿ ಸೋಮವಾರ ನಡೆದ ಭದ್ರತಾ ಕಾರ್ಯಾಚರಣೆ ವೇಳೆ ಹತ್ಯೆಗೀಡಾದ ತನ್ನ ತಂದೆಯ ಬಗ್ಗೆ ಮಾತನಾಡುತ್ತಾ ಅಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. “ತಂದೆಯನ್ನು ಕೊಂದು ನನ್ನನ್ನು ನೋಡಿ ನಗುತ್ತಿದ್ದರು” ಎಂದು ಬಾಲಕಿ ವಿಡಿಯೊದಲ್ಲಿ ಬಿಕ್ಕಳಿಸುತ್ತಾ ಹೇಳಿದ್ದಾರೆ.

ಶ್ರೀನಗರದ ವಾಣಿಜ್ಯ ಸಂಕೀರ್ಣದಲ್ಲಿ ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಈ ವೇಳೆ ಮೃತಪಟ್ಟವರಲ್ಲಿ ಬಾಲಕಿಯ ತಂದೆ ಉದ್ಯಮಿ ಮೊಹಮ್ಮದ್ ಅಲ್ತಾಫ್ ಭಟ್ ಕೂಡಾ ಸೇರಿದ್ದಾರೆ. ಒಬ್ಬ ಪಾಕಿಸ್ತಾನಿ ಭಯೋತ್ಪಾದಕ ಮತ್ತು ಅವನ ಸಹಚರನನ್ನು ಪಡೆಗಳು ಕೊಂದಿದ್ದಾರೆ ಪೊಲೀಸರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಯಾರೊಬ್ಬರು ಉಸಿರಾಡಲೂ ಆಗುತ್ತಿಲ್ಲ: ಮೆಹಬೂಬಾ ಮುಫ್ತಿ

ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಅಲ್ತಾಫ್ ಭಟ್ ಮತ್ತು ಮತ್ತೊಬ್ಬ ಉದ್ಯಮಿ ಭಯೋತ್ಪಾದಕರ ಗುಂಡಿಗೆ ಬಲಿಯಾಗಿದ್ದರು ಎಂದು ಪೊಲೀಸರು ಮೊದಲು ಹೇಳಿದ್ದರು. ಆದರೆ ನಂತರ ಮಾತು ಬದಲಿಸಿದ ಪೊಲೀಸರು ಅವರಿಬ್ಬರು ಕ್ರಾಸ್ ಫೈರ್‌ನಲ್ಲಿ ಸಾವನ್ನಪ್ಪಿರಬಹುದು ಎಂದು ಹೇಳಿದ್ದರು. ಅದರ ನಂತರ, ಕಾಂಪ್ಲೆಕ್ಸ್ ಮಾಲೀಕ ಅಲ್ತಾಫ್ ಭಟ್ ತನ್ನ ಬಾಡಿಗೆದಾರರ ಬಗ್ಗೆ ಅಧಿಕಾರಿಗಳಿಗೆ ತಿಳಿಸದ ಕಾರಣ ಅವರನ್ನು ‘ಭಯೋತ್ಪಾದಕರ ಸಹಚರರು’ ಎಂದು ಪರಿಗಣಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಅವರ ಕಾಂಪ್ಲೆಕ್ಸ್‌ನಲ್ಲಿದ್ದ ಬಾಡಿಗೆದಾರರಲ್ಲಿ ಒಬ್ಬ ಭಯೋತ್ಪಾದಕನಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ ಎಂದು ಎನ್‌ಡಿಟಿವಿ ತನ್ನ ವರದಿಯಲ್ಲಿ ತಿಳಿಸಿದೆ.

ಇದೀಗ, ಅಲ್ತಾಫ್ ಭಟ್‌ ಅವರ 13 ವರ್ಷದ ಮಗಳು ನೀಡಿರುವ ಹೇಳಿಕೆಯ ವಿಡಿಯೊ ವ್ಯಾಪಕವಾಗಿ ವೈರಲ್‌ ಆಗಿದೆ. ಅದರಲ್ಲಿ ಬಾಲಕಿಯು ಕಣ್ಣೀರಿಡುತ್ತಾ ಅಂದಿನ ಘಟನೆಯನ್ನು ವಿವರಿಸಿದ್ದಾರೆ.

“ನನ್ನ ಚಿಕ್ಕಪ್ಪ 10 ಗಂಟೆಯ ಸುಮಾರಿಗೆ ಫೋನ್‌‌ ಮಾಡಿ, ಅಳಲು ಪ್ರಾರಂಭಿಸಿದರು…ಆಗ ನಾನು ಮನೆಯಲ್ಲಿದ್ದೆ…ಈ ವೇಳೆ ನಾನು ಕೂಗು ಮತ್ತು ಕಿರುಚಾಟದ ಶಬ್ದಗಳನ್ನು ಕೇಳಿದೆ…ನಾನು ಓಡಿಹೋದೆ. ನಾನು ಅಲ್ಲಾನನ್ನು ಪ್ರಾರ್ಥಿಸುತ್ತಿದ್ದೆ” ಎಂದು ಅವರು ಅಳುತ್ತಾ ಹೇಳುತ್ತಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಈ ಗೋಹತ್ಯೆಯನ್ನು ತಡೆಯುತ್ತಿರುವುದು ಶ್ರೀನಗರದ ಕಾಶ್ಮೀರಿ ಪಂಡಿತ್ ಅಲ್ಲ, ಮುಸ್ಲಿಂ ಯುವಕ!

“ನನ್ನ ತಂದೆಯನ್ನು ಮೂರು ಬಾರಿ ಕರೆದುಕೊಂಡು ಹೋಗಲಾಯಿತು ಎಂದು ನನ್ನ ನನ್ನ ಸೋದರಸಂಬಂಧಿ ನನಗೆ ಹೇಳಿದರು. ಎರಡು ಭಾರಿ ಅವರನ್ನು ಬಿಟ್ಟು, ಮೂರನೇ ಬಾರಿ ಅವರನ್ನು ಕೊಲ್ಲಲಾಯಿತು. ಇದರ ಅರ್ಥವೇನು? ಇತರನ್ನೂ ಕೂಡಾ ಕೊಲ್ಲಲಾಯಿತು, ಏನಿದೆಲ್ಲಾ?”

ಬಾಲಕಿಯು ಅಂದಿನ ನೆನಪುಗಳನ್ನು ಹೇಳುವಾಗ ಬಿಕ್ಕಳಿಸುತ್ತಾ ಹೆಚ್ಚು ಹೆಚ್ಚು ವಿಚಲಿತಳಾಗುತ್ತಾರೆ. “ನಾನು ಅವರ ಬಳಿ ಕೇಳುತ್ತೇನೆ, ಅಂಕಲ್ ಏನಿದು? ಏನು ಮಾಡಿದ್ರಿ ನೀವು? ಇವರು ನನ್ನ ತಂದೆ, ನಿಮಗೆ ಹೇಗೆ ಅನಿಸ್ತು ಇವರು ‘ಅವರು’ (ಭಯೋತ್ಪಾದಕ) ಎಂದು?… ಈ ಸಂದರ್ಭದಲ್ಲಿ ಅವರು ನನ್ನನ್ನು ನೋಡಿ ನಗುತ್ತಾರೆ. ನಾನು ಅವರಿಗೆ ಏನು ಪ್ರತಿಕ್ರಿಯೆ ನೀಡಬಹುದು? ಅವರು ನಗುತ್ತಿದ್ದರು…ನಾಚಿಕೆಯಿಲ್ಲದೆ ನಗುತ್ತಿದ್ದರು ನಾನು ಅವರಿಗೆ ಏನು ಹೇಳಲಿ?” ಎಂದು ಬಾಲಕಿ ದುಃಖತಪ್ತರಾಗಿ ಹೇಳುತ್ತಾರೆ.

“ನನ್ನ ತಮ್ಮ ಎರಡನೆ ಕ್ಲಾಸ್‌ನಲ್ಲಿದ್ದಾನೆ. ಅವನು ತುಂಬಾ ಚಿಕ್ಕವನು. ಅವನಿಗೆ ನಾವು ಏನು ಹೇಳಬೇಕು? ಅವನಿಗೆ ಏನೂ ಗೊತ್ತಿಲ್ಲ. ಅವನು ತಂದೆಯನ್ನು ತುಂಬಾ ಹಚ್ಚಿಕೊಂಡಿದ್ದ. ನಾನು ಕೂಡಾ ತಂದೆಯನ್ನು ತುಂಬಾ ಹಚ್ಚಿಕೊಂಡಿದ್ದೆ. ಈಗ ನಾನು ಏನು ಮಾಡಲಿ? ನನ್ನ ತಾಯಿಯನ್ನು ಹೇಗೆ ಸಮಾಧಾನ ಪಡಿಸಲಿ? ಅವಳು ಈಗ ಏನನ್ನೂ ತಿನ್ನುತ್ತಿಲ್ಲ, ಒಂದೇ ಸಮನೆ ಅಳುತ್ತಿದ್ದಾರೆ, ನಾನು ಏನು ಮಾಡಲಿ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಾಶ್ಮೀರ: ಸಿಆರ್‌ಪಿಎಫ್‌ ಯೋಧರಿಂದ ಕಾರ್ಮಿಕನ ಹತ್ಯೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಸೇರಿದಂತೆ ರಾಜಕೀಯ ನಾಯಕರು ಶ್ರೀನಗರದ ಎನ್‌ಕೌಂಟರ್ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.

ಅಂದು ಇಬ್ಬರೂ ಉದ್ಯಮಿಗಳನ್ನು ಭದ್ರತಾ ಪಡೆಗಳೆ ಕೊಂದಿವೆ ಎಂದು ಕುಟುಂಬಗಳು ಆರೋಪಿಸಿವೆ. ಜೊತೆಗೆ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳ ಕಾರಣಕ್ಕಾಗಿ ಪೊಲೀಸರು ಮೃತದೇಹಗಳನ್ನು ಹಸ್ತಾಂತರಿಸಲು ನಿರಾಕರಿಸಿದರು ಎಂದು ಅವರು ಹೇಳಿದ್ದಾರೆ.

ಅಂದು ಕೊಲ್ಲಲ್ಪಟ್ಟವರಲ್ಲಿ ತನ್ನ ಮಗನೂ ಇದ್ದು, ಅವನನ್ನು ಭಯೋತ್ಪಾದಕ ಎಂದು ಹೆಸರಿಸಲಾಗಿದೆ ಎಂದು ಭಯೋತ್ಪಾದನಾ ವಿರೋಧಿ ಹೋರಾಟಗಾರ ಅಬ್ದುಲ್ ಲತೀಫ್ ಮಗ್ರೆ ಹೇಳಿದ್ದಾರೆ. ಅವರು 2005 ರಲ್ಲಿ ರಾಂಬನ್‌ನಲ್ಲಿ ಭಯೋತ್ಪಾದಕನನ್ನು ಕಲ್ಲಿನಿಂದ ಕೊಂದಿದ್ದರು. ಲತೀಫ್‌ ಹೇಳುವಂತೆ ಅವರ ಮಗ ಅಮೀರ್ ಮುಗ್ಧನಾಗಿದ್ದು, ಕಾರ್ಮಿಕನಾಗಿದ್ದನು. ಆದರೆ, ಪೊಲೀಸರು ಅಮೀರ್ ಅವರನ್ನು ‘ಹೈಬ್ರಿಡ್’ ಭಯೋತ್ಪಾದಕ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಪಾಕ್ ಗೆಲುವಿಗೆ ಸಂಭ್ರಮ ಆರೋಪ: ಜಮ್ಮು-ಕಾಶ್ಮೀರ ವಿದ್ಯಾರ್ಥಿಗಳ ಮೇಲೆ UAPA ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭಯೋತ್ಪಾದನೆಯ ಹೆಸರಿನಲ್ಲಿ ನಮ್ಮದೇ ದೇಶದ ಪ್ರಜೆಗಳನ್ನು ಕೊಲ್ಲುವುದರಿಂದ ಭಯೋತ್ಪಾದನೆ ಕಡಿಮೆ ಆಗುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...