Homeಮುಖಪುಟ‘ನನ್ನ ತಂದೆಯನ್ನು ಕೊಂದು, ನನ್ನನ್ನು ನೋಡಿ ನಗುತ್ತಿದ್ದರು’ - ಕಾಶ್ಮೀರಿ ಬಾಲಕಿ

‘ನನ್ನ ತಂದೆಯನ್ನು ಕೊಂದು, ನನ್ನನ್ನು ನೋಡಿ ನಗುತ್ತಿದ್ದರು’ – ಕಾಶ್ಮೀರಿ ಬಾಲಕಿ

- Advertisement -
- Advertisement -

13 ವರ್ಷದ ಕಾಶ್ಮೀರಿ ಬಾಲಕಿಯೊಬ್ಬರು ಜಮ್ಮು ಕಾಶ್ಮೀರದಲ್ಲಿ ಸೋಮವಾರ ನಡೆದ ಭದ್ರತಾ ಕಾರ್ಯಾಚರಣೆ ವೇಳೆ ಹತ್ಯೆಗೀಡಾದ ತನ್ನ ತಂದೆಯ ಬಗ್ಗೆ ಮಾತನಾಡುತ್ತಾ ಅಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. “ತಂದೆಯನ್ನು ಕೊಂದು ನನ್ನನ್ನು ನೋಡಿ ನಗುತ್ತಿದ್ದರು” ಎಂದು ಬಾಲಕಿ ವಿಡಿಯೊದಲ್ಲಿ ಬಿಕ್ಕಳಿಸುತ್ತಾ ಹೇಳಿದ್ದಾರೆ.

ಶ್ರೀನಗರದ ವಾಣಿಜ್ಯ ಸಂಕೀರ್ಣದಲ್ಲಿ ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಈ ವೇಳೆ ಮೃತಪಟ್ಟವರಲ್ಲಿ ಬಾಲಕಿಯ ತಂದೆ ಉದ್ಯಮಿ ಮೊಹಮ್ಮದ್ ಅಲ್ತಾಫ್ ಭಟ್ ಕೂಡಾ ಸೇರಿದ್ದಾರೆ. ಒಬ್ಬ ಪಾಕಿಸ್ತಾನಿ ಭಯೋತ್ಪಾದಕ ಮತ್ತು ಅವನ ಸಹಚರನನ್ನು ಪಡೆಗಳು ಕೊಂದಿದ್ದಾರೆ ಪೊಲೀಸರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಯಾರೊಬ್ಬರು ಉಸಿರಾಡಲೂ ಆಗುತ್ತಿಲ್ಲ: ಮೆಹಬೂಬಾ ಮುಫ್ತಿ

ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಅಲ್ತಾಫ್ ಭಟ್ ಮತ್ತು ಮತ್ತೊಬ್ಬ ಉದ್ಯಮಿ ಭಯೋತ್ಪಾದಕರ ಗುಂಡಿಗೆ ಬಲಿಯಾಗಿದ್ದರು ಎಂದು ಪೊಲೀಸರು ಮೊದಲು ಹೇಳಿದ್ದರು. ಆದರೆ ನಂತರ ಮಾತು ಬದಲಿಸಿದ ಪೊಲೀಸರು ಅವರಿಬ್ಬರು ಕ್ರಾಸ್ ಫೈರ್‌ನಲ್ಲಿ ಸಾವನ್ನಪ್ಪಿರಬಹುದು ಎಂದು ಹೇಳಿದ್ದರು. ಅದರ ನಂತರ, ಕಾಂಪ್ಲೆಕ್ಸ್ ಮಾಲೀಕ ಅಲ್ತಾಫ್ ಭಟ್ ತನ್ನ ಬಾಡಿಗೆದಾರರ ಬಗ್ಗೆ ಅಧಿಕಾರಿಗಳಿಗೆ ತಿಳಿಸದ ಕಾರಣ ಅವರನ್ನು ‘ಭಯೋತ್ಪಾದಕರ ಸಹಚರರು’ ಎಂದು ಪರಿಗಣಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಅವರ ಕಾಂಪ್ಲೆಕ್ಸ್‌ನಲ್ಲಿದ್ದ ಬಾಡಿಗೆದಾರರಲ್ಲಿ ಒಬ್ಬ ಭಯೋತ್ಪಾದಕನಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ ಎಂದು ಎನ್‌ಡಿಟಿವಿ ತನ್ನ ವರದಿಯಲ್ಲಿ ತಿಳಿಸಿದೆ.

ಇದೀಗ, ಅಲ್ತಾಫ್ ಭಟ್‌ ಅವರ 13 ವರ್ಷದ ಮಗಳು ನೀಡಿರುವ ಹೇಳಿಕೆಯ ವಿಡಿಯೊ ವ್ಯಾಪಕವಾಗಿ ವೈರಲ್‌ ಆಗಿದೆ. ಅದರಲ್ಲಿ ಬಾಲಕಿಯು ಕಣ್ಣೀರಿಡುತ್ತಾ ಅಂದಿನ ಘಟನೆಯನ್ನು ವಿವರಿಸಿದ್ದಾರೆ.

“ನನ್ನ ಚಿಕ್ಕಪ್ಪ 10 ಗಂಟೆಯ ಸುಮಾರಿಗೆ ಫೋನ್‌‌ ಮಾಡಿ, ಅಳಲು ಪ್ರಾರಂಭಿಸಿದರು…ಆಗ ನಾನು ಮನೆಯಲ್ಲಿದ್ದೆ…ಈ ವೇಳೆ ನಾನು ಕೂಗು ಮತ್ತು ಕಿರುಚಾಟದ ಶಬ್ದಗಳನ್ನು ಕೇಳಿದೆ…ನಾನು ಓಡಿಹೋದೆ. ನಾನು ಅಲ್ಲಾನನ್ನು ಪ್ರಾರ್ಥಿಸುತ್ತಿದ್ದೆ” ಎಂದು ಅವರು ಅಳುತ್ತಾ ಹೇಳುತ್ತಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಈ ಗೋಹತ್ಯೆಯನ್ನು ತಡೆಯುತ್ತಿರುವುದು ಶ್ರೀನಗರದ ಕಾಶ್ಮೀರಿ ಪಂಡಿತ್ ಅಲ್ಲ, ಮುಸ್ಲಿಂ ಯುವಕ!

“ನನ್ನ ತಂದೆಯನ್ನು ಮೂರು ಬಾರಿ ಕರೆದುಕೊಂಡು ಹೋಗಲಾಯಿತು ಎಂದು ನನ್ನ ನನ್ನ ಸೋದರಸಂಬಂಧಿ ನನಗೆ ಹೇಳಿದರು. ಎರಡು ಭಾರಿ ಅವರನ್ನು ಬಿಟ್ಟು, ಮೂರನೇ ಬಾರಿ ಅವರನ್ನು ಕೊಲ್ಲಲಾಯಿತು. ಇದರ ಅರ್ಥವೇನು? ಇತರನ್ನೂ ಕೂಡಾ ಕೊಲ್ಲಲಾಯಿತು, ಏನಿದೆಲ್ಲಾ?”

ಬಾಲಕಿಯು ಅಂದಿನ ನೆನಪುಗಳನ್ನು ಹೇಳುವಾಗ ಬಿಕ್ಕಳಿಸುತ್ತಾ ಹೆಚ್ಚು ಹೆಚ್ಚು ವಿಚಲಿತಳಾಗುತ್ತಾರೆ. “ನಾನು ಅವರ ಬಳಿ ಕೇಳುತ್ತೇನೆ, ಅಂಕಲ್ ಏನಿದು? ಏನು ಮಾಡಿದ್ರಿ ನೀವು? ಇವರು ನನ್ನ ತಂದೆ, ನಿಮಗೆ ಹೇಗೆ ಅನಿಸ್ತು ಇವರು ‘ಅವರು’ (ಭಯೋತ್ಪಾದಕ) ಎಂದು?… ಈ ಸಂದರ್ಭದಲ್ಲಿ ಅವರು ನನ್ನನ್ನು ನೋಡಿ ನಗುತ್ತಾರೆ. ನಾನು ಅವರಿಗೆ ಏನು ಪ್ರತಿಕ್ರಿಯೆ ನೀಡಬಹುದು? ಅವರು ನಗುತ್ತಿದ್ದರು…ನಾಚಿಕೆಯಿಲ್ಲದೆ ನಗುತ್ತಿದ್ದರು ನಾನು ಅವರಿಗೆ ಏನು ಹೇಳಲಿ?” ಎಂದು ಬಾಲಕಿ ದುಃಖತಪ್ತರಾಗಿ ಹೇಳುತ್ತಾರೆ.

“ನನ್ನ ತಮ್ಮ ಎರಡನೆ ಕ್ಲಾಸ್‌ನಲ್ಲಿದ್ದಾನೆ. ಅವನು ತುಂಬಾ ಚಿಕ್ಕವನು. ಅವನಿಗೆ ನಾವು ಏನು ಹೇಳಬೇಕು? ಅವನಿಗೆ ಏನೂ ಗೊತ್ತಿಲ್ಲ. ಅವನು ತಂದೆಯನ್ನು ತುಂಬಾ ಹಚ್ಚಿಕೊಂಡಿದ್ದ. ನಾನು ಕೂಡಾ ತಂದೆಯನ್ನು ತುಂಬಾ ಹಚ್ಚಿಕೊಂಡಿದ್ದೆ. ಈಗ ನಾನು ಏನು ಮಾಡಲಿ? ನನ್ನ ತಾಯಿಯನ್ನು ಹೇಗೆ ಸಮಾಧಾನ ಪಡಿಸಲಿ? ಅವಳು ಈಗ ಏನನ್ನೂ ತಿನ್ನುತ್ತಿಲ್ಲ, ಒಂದೇ ಸಮನೆ ಅಳುತ್ತಿದ್ದಾರೆ, ನಾನು ಏನು ಮಾಡಲಿ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಾಶ್ಮೀರ: ಸಿಆರ್‌ಪಿಎಫ್‌ ಯೋಧರಿಂದ ಕಾರ್ಮಿಕನ ಹತ್ಯೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಸೇರಿದಂತೆ ರಾಜಕೀಯ ನಾಯಕರು ಶ್ರೀನಗರದ ಎನ್‌ಕೌಂಟರ್ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.

ಅಂದು ಇಬ್ಬರೂ ಉದ್ಯಮಿಗಳನ್ನು ಭದ್ರತಾ ಪಡೆಗಳೆ ಕೊಂದಿವೆ ಎಂದು ಕುಟುಂಬಗಳು ಆರೋಪಿಸಿವೆ. ಜೊತೆಗೆ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳ ಕಾರಣಕ್ಕಾಗಿ ಪೊಲೀಸರು ಮೃತದೇಹಗಳನ್ನು ಹಸ್ತಾಂತರಿಸಲು ನಿರಾಕರಿಸಿದರು ಎಂದು ಅವರು ಹೇಳಿದ್ದಾರೆ.

ಅಂದು ಕೊಲ್ಲಲ್ಪಟ್ಟವರಲ್ಲಿ ತನ್ನ ಮಗನೂ ಇದ್ದು, ಅವನನ್ನು ಭಯೋತ್ಪಾದಕ ಎಂದು ಹೆಸರಿಸಲಾಗಿದೆ ಎಂದು ಭಯೋತ್ಪಾದನಾ ವಿರೋಧಿ ಹೋರಾಟಗಾರ ಅಬ್ದುಲ್ ಲತೀಫ್ ಮಗ್ರೆ ಹೇಳಿದ್ದಾರೆ. ಅವರು 2005 ರಲ್ಲಿ ರಾಂಬನ್‌ನಲ್ಲಿ ಭಯೋತ್ಪಾದಕನನ್ನು ಕಲ್ಲಿನಿಂದ ಕೊಂದಿದ್ದರು. ಲತೀಫ್‌ ಹೇಳುವಂತೆ ಅವರ ಮಗ ಅಮೀರ್ ಮುಗ್ಧನಾಗಿದ್ದು, ಕಾರ್ಮಿಕನಾಗಿದ್ದನು. ಆದರೆ, ಪೊಲೀಸರು ಅಮೀರ್ ಅವರನ್ನು ‘ಹೈಬ್ರಿಡ್’ ಭಯೋತ್ಪಾದಕ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಪಾಕ್ ಗೆಲುವಿಗೆ ಸಂಭ್ರಮ ಆರೋಪ: ಜಮ್ಮು-ಕಾಶ್ಮೀರ ವಿದ್ಯಾರ್ಥಿಗಳ ಮೇಲೆ UAPA ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭಯೋತ್ಪಾದನೆಯ ಹೆಸರಿನಲ್ಲಿ ನಮ್ಮದೇ ದೇಶದ ಪ್ರಜೆಗಳನ್ನು ಕೊಲ್ಲುವುದರಿಂದ ಭಯೋತ್ಪಾದನೆ ಕಡಿಮೆ ಆಗುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...