Homeಮುಖಪುಟ‘ನನ್ನ ತಂದೆಯನ್ನು ಕೊಂದು, ನನ್ನನ್ನು ನೋಡಿ ನಗುತ್ತಿದ್ದರು’ - ಕಾಶ್ಮೀರಿ ಬಾಲಕಿ

‘ನನ್ನ ತಂದೆಯನ್ನು ಕೊಂದು, ನನ್ನನ್ನು ನೋಡಿ ನಗುತ್ತಿದ್ದರು’ – ಕಾಶ್ಮೀರಿ ಬಾಲಕಿ

- Advertisement -
- Advertisement -

13 ವರ್ಷದ ಕಾಶ್ಮೀರಿ ಬಾಲಕಿಯೊಬ್ಬರು ಜಮ್ಮು ಕಾಶ್ಮೀರದಲ್ಲಿ ಸೋಮವಾರ ನಡೆದ ಭದ್ರತಾ ಕಾರ್ಯಾಚರಣೆ ವೇಳೆ ಹತ್ಯೆಗೀಡಾದ ತನ್ನ ತಂದೆಯ ಬಗ್ಗೆ ಮಾತನಾಡುತ್ತಾ ಅಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. “ತಂದೆಯನ್ನು ಕೊಂದು ನನ್ನನ್ನು ನೋಡಿ ನಗುತ್ತಿದ್ದರು” ಎಂದು ಬಾಲಕಿ ವಿಡಿಯೊದಲ್ಲಿ ಬಿಕ್ಕಳಿಸುತ್ತಾ ಹೇಳಿದ್ದಾರೆ.

ಶ್ರೀನಗರದ ವಾಣಿಜ್ಯ ಸಂಕೀರ್ಣದಲ್ಲಿ ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಈ ವೇಳೆ ಮೃತಪಟ್ಟವರಲ್ಲಿ ಬಾಲಕಿಯ ತಂದೆ ಉದ್ಯಮಿ ಮೊಹಮ್ಮದ್ ಅಲ್ತಾಫ್ ಭಟ್ ಕೂಡಾ ಸೇರಿದ್ದಾರೆ. ಒಬ್ಬ ಪಾಕಿಸ್ತಾನಿ ಭಯೋತ್ಪಾದಕ ಮತ್ತು ಅವನ ಸಹಚರನನ್ನು ಪಡೆಗಳು ಕೊಂದಿದ್ದಾರೆ ಪೊಲೀಸರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಯಾರೊಬ್ಬರು ಉಸಿರಾಡಲೂ ಆಗುತ್ತಿಲ್ಲ: ಮೆಹಬೂಬಾ ಮುಫ್ತಿ

ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಅಲ್ತಾಫ್ ಭಟ್ ಮತ್ತು ಮತ್ತೊಬ್ಬ ಉದ್ಯಮಿ ಭಯೋತ್ಪಾದಕರ ಗುಂಡಿಗೆ ಬಲಿಯಾಗಿದ್ದರು ಎಂದು ಪೊಲೀಸರು ಮೊದಲು ಹೇಳಿದ್ದರು. ಆದರೆ ನಂತರ ಮಾತು ಬದಲಿಸಿದ ಪೊಲೀಸರು ಅವರಿಬ್ಬರು ಕ್ರಾಸ್ ಫೈರ್‌ನಲ್ಲಿ ಸಾವನ್ನಪ್ಪಿರಬಹುದು ಎಂದು ಹೇಳಿದ್ದರು. ಅದರ ನಂತರ, ಕಾಂಪ್ಲೆಕ್ಸ್ ಮಾಲೀಕ ಅಲ್ತಾಫ್ ಭಟ್ ತನ್ನ ಬಾಡಿಗೆದಾರರ ಬಗ್ಗೆ ಅಧಿಕಾರಿಗಳಿಗೆ ತಿಳಿಸದ ಕಾರಣ ಅವರನ್ನು ‘ಭಯೋತ್ಪಾದಕರ ಸಹಚರರು’ ಎಂದು ಪರಿಗಣಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಅವರ ಕಾಂಪ್ಲೆಕ್ಸ್‌ನಲ್ಲಿದ್ದ ಬಾಡಿಗೆದಾರರಲ್ಲಿ ಒಬ್ಬ ಭಯೋತ್ಪಾದಕನಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ ಎಂದು ಎನ್‌ಡಿಟಿವಿ ತನ್ನ ವರದಿಯಲ್ಲಿ ತಿಳಿಸಿದೆ.

ಇದೀಗ, ಅಲ್ತಾಫ್ ಭಟ್‌ ಅವರ 13 ವರ್ಷದ ಮಗಳು ನೀಡಿರುವ ಹೇಳಿಕೆಯ ವಿಡಿಯೊ ವ್ಯಾಪಕವಾಗಿ ವೈರಲ್‌ ಆಗಿದೆ. ಅದರಲ್ಲಿ ಬಾಲಕಿಯು ಕಣ್ಣೀರಿಡುತ್ತಾ ಅಂದಿನ ಘಟನೆಯನ್ನು ವಿವರಿಸಿದ್ದಾರೆ.

“ನನ್ನ ಚಿಕ್ಕಪ್ಪ 10 ಗಂಟೆಯ ಸುಮಾರಿಗೆ ಫೋನ್‌‌ ಮಾಡಿ, ಅಳಲು ಪ್ರಾರಂಭಿಸಿದರು…ಆಗ ನಾನು ಮನೆಯಲ್ಲಿದ್ದೆ…ಈ ವೇಳೆ ನಾನು ಕೂಗು ಮತ್ತು ಕಿರುಚಾಟದ ಶಬ್ದಗಳನ್ನು ಕೇಳಿದೆ…ನಾನು ಓಡಿಹೋದೆ. ನಾನು ಅಲ್ಲಾನನ್ನು ಪ್ರಾರ್ಥಿಸುತ್ತಿದ್ದೆ” ಎಂದು ಅವರು ಅಳುತ್ತಾ ಹೇಳುತ್ತಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಈ ಗೋಹತ್ಯೆಯನ್ನು ತಡೆಯುತ್ತಿರುವುದು ಶ್ರೀನಗರದ ಕಾಶ್ಮೀರಿ ಪಂಡಿತ್ ಅಲ್ಲ, ಮುಸ್ಲಿಂ ಯುವಕ!

“ನನ್ನ ತಂದೆಯನ್ನು ಮೂರು ಬಾರಿ ಕರೆದುಕೊಂಡು ಹೋಗಲಾಯಿತು ಎಂದು ನನ್ನ ನನ್ನ ಸೋದರಸಂಬಂಧಿ ನನಗೆ ಹೇಳಿದರು. ಎರಡು ಭಾರಿ ಅವರನ್ನು ಬಿಟ್ಟು, ಮೂರನೇ ಬಾರಿ ಅವರನ್ನು ಕೊಲ್ಲಲಾಯಿತು. ಇದರ ಅರ್ಥವೇನು? ಇತರನ್ನೂ ಕೂಡಾ ಕೊಲ್ಲಲಾಯಿತು, ಏನಿದೆಲ್ಲಾ?”

ಬಾಲಕಿಯು ಅಂದಿನ ನೆನಪುಗಳನ್ನು ಹೇಳುವಾಗ ಬಿಕ್ಕಳಿಸುತ್ತಾ ಹೆಚ್ಚು ಹೆಚ್ಚು ವಿಚಲಿತಳಾಗುತ್ತಾರೆ. “ನಾನು ಅವರ ಬಳಿ ಕೇಳುತ್ತೇನೆ, ಅಂಕಲ್ ಏನಿದು? ಏನು ಮಾಡಿದ್ರಿ ನೀವು? ಇವರು ನನ್ನ ತಂದೆ, ನಿಮಗೆ ಹೇಗೆ ಅನಿಸ್ತು ಇವರು ‘ಅವರು’ (ಭಯೋತ್ಪಾದಕ) ಎಂದು?… ಈ ಸಂದರ್ಭದಲ್ಲಿ ಅವರು ನನ್ನನ್ನು ನೋಡಿ ನಗುತ್ತಾರೆ. ನಾನು ಅವರಿಗೆ ಏನು ಪ್ರತಿಕ್ರಿಯೆ ನೀಡಬಹುದು? ಅವರು ನಗುತ್ತಿದ್ದರು…ನಾಚಿಕೆಯಿಲ್ಲದೆ ನಗುತ್ತಿದ್ದರು ನಾನು ಅವರಿಗೆ ಏನು ಹೇಳಲಿ?” ಎಂದು ಬಾಲಕಿ ದುಃಖತಪ್ತರಾಗಿ ಹೇಳುತ್ತಾರೆ.

“ನನ್ನ ತಮ್ಮ ಎರಡನೆ ಕ್ಲಾಸ್‌ನಲ್ಲಿದ್ದಾನೆ. ಅವನು ತುಂಬಾ ಚಿಕ್ಕವನು. ಅವನಿಗೆ ನಾವು ಏನು ಹೇಳಬೇಕು? ಅವನಿಗೆ ಏನೂ ಗೊತ್ತಿಲ್ಲ. ಅವನು ತಂದೆಯನ್ನು ತುಂಬಾ ಹಚ್ಚಿಕೊಂಡಿದ್ದ. ನಾನು ಕೂಡಾ ತಂದೆಯನ್ನು ತುಂಬಾ ಹಚ್ಚಿಕೊಂಡಿದ್ದೆ. ಈಗ ನಾನು ಏನು ಮಾಡಲಿ? ನನ್ನ ತಾಯಿಯನ್ನು ಹೇಗೆ ಸಮಾಧಾನ ಪಡಿಸಲಿ? ಅವಳು ಈಗ ಏನನ್ನೂ ತಿನ್ನುತ್ತಿಲ್ಲ, ಒಂದೇ ಸಮನೆ ಅಳುತ್ತಿದ್ದಾರೆ, ನಾನು ಏನು ಮಾಡಲಿ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಾಶ್ಮೀರ: ಸಿಆರ್‌ಪಿಎಫ್‌ ಯೋಧರಿಂದ ಕಾರ್ಮಿಕನ ಹತ್ಯೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಸೇರಿದಂತೆ ರಾಜಕೀಯ ನಾಯಕರು ಶ್ರೀನಗರದ ಎನ್‌ಕೌಂಟರ್ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.

ಅಂದು ಇಬ್ಬರೂ ಉದ್ಯಮಿಗಳನ್ನು ಭದ್ರತಾ ಪಡೆಗಳೆ ಕೊಂದಿವೆ ಎಂದು ಕುಟುಂಬಗಳು ಆರೋಪಿಸಿವೆ. ಜೊತೆಗೆ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳ ಕಾರಣಕ್ಕಾಗಿ ಪೊಲೀಸರು ಮೃತದೇಹಗಳನ್ನು ಹಸ್ತಾಂತರಿಸಲು ನಿರಾಕರಿಸಿದರು ಎಂದು ಅವರು ಹೇಳಿದ್ದಾರೆ.

ಅಂದು ಕೊಲ್ಲಲ್ಪಟ್ಟವರಲ್ಲಿ ತನ್ನ ಮಗನೂ ಇದ್ದು, ಅವನನ್ನು ಭಯೋತ್ಪಾದಕ ಎಂದು ಹೆಸರಿಸಲಾಗಿದೆ ಎಂದು ಭಯೋತ್ಪಾದನಾ ವಿರೋಧಿ ಹೋರಾಟಗಾರ ಅಬ್ದುಲ್ ಲತೀಫ್ ಮಗ್ರೆ ಹೇಳಿದ್ದಾರೆ. ಅವರು 2005 ರಲ್ಲಿ ರಾಂಬನ್‌ನಲ್ಲಿ ಭಯೋತ್ಪಾದಕನನ್ನು ಕಲ್ಲಿನಿಂದ ಕೊಂದಿದ್ದರು. ಲತೀಫ್‌ ಹೇಳುವಂತೆ ಅವರ ಮಗ ಅಮೀರ್ ಮುಗ್ಧನಾಗಿದ್ದು, ಕಾರ್ಮಿಕನಾಗಿದ್ದನು. ಆದರೆ, ಪೊಲೀಸರು ಅಮೀರ್ ಅವರನ್ನು ‘ಹೈಬ್ರಿಡ್’ ಭಯೋತ್ಪಾದಕ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಪಾಕ್ ಗೆಲುವಿಗೆ ಸಂಭ್ರಮ ಆರೋಪ: ಜಮ್ಮು-ಕಾಶ್ಮೀರ ವಿದ್ಯಾರ್ಥಿಗಳ ಮೇಲೆ UAPA ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭಯೋತ್ಪಾದನೆಯ ಹೆಸರಿನಲ್ಲಿ ನಮ್ಮದೇ ದೇಶದ ಪ್ರಜೆಗಳನ್ನು ಕೊಲ್ಲುವುದರಿಂದ ಭಯೋತ್ಪಾದನೆ ಕಡಿಮೆ ಆಗುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...