Homeಮುಖಪುಟ‘ನನ್ನ ತಂದೆಯನ್ನು ಕೊಂದು, ನನ್ನನ್ನು ನೋಡಿ ನಗುತ್ತಿದ್ದರು’ - ಕಾಶ್ಮೀರಿ ಬಾಲಕಿ

‘ನನ್ನ ತಂದೆಯನ್ನು ಕೊಂದು, ನನ್ನನ್ನು ನೋಡಿ ನಗುತ್ತಿದ್ದರು’ – ಕಾಶ್ಮೀರಿ ಬಾಲಕಿ

- Advertisement -
- Advertisement -

13 ವರ್ಷದ ಕಾಶ್ಮೀರಿ ಬಾಲಕಿಯೊಬ್ಬರು ಜಮ್ಮು ಕಾಶ್ಮೀರದಲ್ಲಿ ಸೋಮವಾರ ನಡೆದ ಭದ್ರತಾ ಕಾರ್ಯಾಚರಣೆ ವೇಳೆ ಹತ್ಯೆಗೀಡಾದ ತನ್ನ ತಂದೆಯ ಬಗ್ಗೆ ಮಾತನಾಡುತ್ತಾ ಅಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. “ತಂದೆಯನ್ನು ಕೊಂದು ನನ್ನನ್ನು ನೋಡಿ ನಗುತ್ತಿದ್ದರು” ಎಂದು ಬಾಲಕಿ ವಿಡಿಯೊದಲ್ಲಿ ಬಿಕ್ಕಳಿಸುತ್ತಾ ಹೇಳಿದ್ದಾರೆ.

ಶ್ರೀನಗರದ ವಾಣಿಜ್ಯ ಸಂಕೀರ್ಣದಲ್ಲಿ ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಈ ವೇಳೆ ಮೃತಪಟ್ಟವರಲ್ಲಿ ಬಾಲಕಿಯ ತಂದೆ ಉದ್ಯಮಿ ಮೊಹಮ್ಮದ್ ಅಲ್ತಾಫ್ ಭಟ್ ಕೂಡಾ ಸೇರಿದ್ದಾರೆ. ಒಬ್ಬ ಪಾಕಿಸ್ತಾನಿ ಭಯೋತ್ಪಾದಕ ಮತ್ತು ಅವನ ಸಹಚರನನ್ನು ಪಡೆಗಳು ಕೊಂದಿದ್ದಾರೆ ಪೊಲೀಸರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಯಾರೊಬ್ಬರು ಉಸಿರಾಡಲೂ ಆಗುತ್ತಿಲ್ಲ: ಮೆಹಬೂಬಾ ಮುಫ್ತಿ

ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಅಲ್ತಾಫ್ ಭಟ್ ಮತ್ತು ಮತ್ತೊಬ್ಬ ಉದ್ಯಮಿ ಭಯೋತ್ಪಾದಕರ ಗುಂಡಿಗೆ ಬಲಿಯಾಗಿದ್ದರು ಎಂದು ಪೊಲೀಸರು ಮೊದಲು ಹೇಳಿದ್ದರು. ಆದರೆ ನಂತರ ಮಾತು ಬದಲಿಸಿದ ಪೊಲೀಸರು ಅವರಿಬ್ಬರು ಕ್ರಾಸ್ ಫೈರ್‌ನಲ್ಲಿ ಸಾವನ್ನಪ್ಪಿರಬಹುದು ಎಂದು ಹೇಳಿದ್ದರು. ಅದರ ನಂತರ, ಕಾಂಪ್ಲೆಕ್ಸ್ ಮಾಲೀಕ ಅಲ್ತಾಫ್ ಭಟ್ ತನ್ನ ಬಾಡಿಗೆದಾರರ ಬಗ್ಗೆ ಅಧಿಕಾರಿಗಳಿಗೆ ತಿಳಿಸದ ಕಾರಣ ಅವರನ್ನು ‘ಭಯೋತ್ಪಾದಕರ ಸಹಚರರು’ ಎಂದು ಪರಿಗಣಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಅವರ ಕಾಂಪ್ಲೆಕ್ಸ್‌ನಲ್ಲಿದ್ದ ಬಾಡಿಗೆದಾರರಲ್ಲಿ ಒಬ್ಬ ಭಯೋತ್ಪಾದಕನಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ ಎಂದು ಎನ್‌ಡಿಟಿವಿ ತನ್ನ ವರದಿಯಲ್ಲಿ ತಿಳಿಸಿದೆ.

ಇದೀಗ, ಅಲ್ತಾಫ್ ಭಟ್‌ ಅವರ 13 ವರ್ಷದ ಮಗಳು ನೀಡಿರುವ ಹೇಳಿಕೆಯ ವಿಡಿಯೊ ವ್ಯಾಪಕವಾಗಿ ವೈರಲ್‌ ಆಗಿದೆ. ಅದರಲ್ಲಿ ಬಾಲಕಿಯು ಕಣ್ಣೀರಿಡುತ್ತಾ ಅಂದಿನ ಘಟನೆಯನ್ನು ವಿವರಿಸಿದ್ದಾರೆ.

“ನನ್ನ ಚಿಕ್ಕಪ್ಪ 10 ಗಂಟೆಯ ಸುಮಾರಿಗೆ ಫೋನ್‌‌ ಮಾಡಿ, ಅಳಲು ಪ್ರಾರಂಭಿಸಿದರು…ಆಗ ನಾನು ಮನೆಯಲ್ಲಿದ್ದೆ…ಈ ವೇಳೆ ನಾನು ಕೂಗು ಮತ್ತು ಕಿರುಚಾಟದ ಶಬ್ದಗಳನ್ನು ಕೇಳಿದೆ…ನಾನು ಓಡಿಹೋದೆ. ನಾನು ಅಲ್ಲಾನನ್ನು ಪ್ರಾರ್ಥಿಸುತ್ತಿದ್ದೆ” ಎಂದು ಅವರು ಅಳುತ್ತಾ ಹೇಳುತ್ತಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಈ ಗೋಹತ್ಯೆಯನ್ನು ತಡೆಯುತ್ತಿರುವುದು ಶ್ರೀನಗರದ ಕಾಶ್ಮೀರಿ ಪಂಡಿತ್ ಅಲ್ಲ, ಮುಸ್ಲಿಂ ಯುವಕ!

“ನನ್ನ ತಂದೆಯನ್ನು ಮೂರು ಬಾರಿ ಕರೆದುಕೊಂಡು ಹೋಗಲಾಯಿತು ಎಂದು ನನ್ನ ನನ್ನ ಸೋದರಸಂಬಂಧಿ ನನಗೆ ಹೇಳಿದರು. ಎರಡು ಭಾರಿ ಅವರನ್ನು ಬಿಟ್ಟು, ಮೂರನೇ ಬಾರಿ ಅವರನ್ನು ಕೊಲ್ಲಲಾಯಿತು. ಇದರ ಅರ್ಥವೇನು? ಇತರನ್ನೂ ಕೂಡಾ ಕೊಲ್ಲಲಾಯಿತು, ಏನಿದೆಲ್ಲಾ?”

ಬಾಲಕಿಯು ಅಂದಿನ ನೆನಪುಗಳನ್ನು ಹೇಳುವಾಗ ಬಿಕ್ಕಳಿಸುತ್ತಾ ಹೆಚ್ಚು ಹೆಚ್ಚು ವಿಚಲಿತಳಾಗುತ್ತಾರೆ. “ನಾನು ಅವರ ಬಳಿ ಕೇಳುತ್ತೇನೆ, ಅಂಕಲ್ ಏನಿದು? ಏನು ಮಾಡಿದ್ರಿ ನೀವು? ಇವರು ನನ್ನ ತಂದೆ, ನಿಮಗೆ ಹೇಗೆ ಅನಿಸ್ತು ಇವರು ‘ಅವರು’ (ಭಯೋತ್ಪಾದಕ) ಎಂದು?… ಈ ಸಂದರ್ಭದಲ್ಲಿ ಅವರು ನನ್ನನ್ನು ನೋಡಿ ನಗುತ್ತಾರೆ. ನಾನು ಅವರಿಗೆ ಏನು ಪ್ರತಿಕ್ರಿಯೆ ನೀಡಬಹುದು? ಅವರು ನಗುತ್ತಿದ್ದರು…ನಾಚಿಕೆಯಿಲ್ಲದೆ ನಗುತ್ತಿದ್ದರು ನಾನು ಅವರಿಗೆ ಏನು ಹೇಳಲಿ?” ಎಂದು ಬಾಲಕಿ ದುಃಖತಪ್ತರಾಗಿ ಹೇಳುತ್ತಾರೆ.

“ನನ್ನ ತಮ್ಮ ಎರಡನೆ ಕ್ಲಾಸ್‌ನಲ್ಲಿದ್ದಾನೆ. ಅವನು ತುಂಬಾ ಚಿಕ್ಕವನು. ಅವನಿಗೆ ನಾವು ಏನು ಹೇಳಬೇಕು? ಅವನಿಗೆ ಏನೂ ಗೊತ್ತಿಲ್ಲ. ಅವನು ತಂದೆಯನ್ನು ತುಂಬಾ ಹಚ್ಚಿಕೊಂಡಿದ್ದ. ನಾನು ಕೂಡಾ ತಂದೆಯನ್ನು ತುಂಬಾ ಹಚ್ಚಿಕೊಂಡಿದ್ದೆ. ಈಗ ನಾನು ಏನು ಮಾಡಲಿ? ನನ್ನ ತಾಯಿಯನ್ನು ಹೇಗೆ ಸಮಾಧಾನ ಪಡಿಸಲಿ? ಅವಳು ಈಗ ಏನನ್ನೂ ತಿನ್ನುತ್ತಿಲ್ಲ, ಒಂದೇ ಸಮನೆ ಅಳುತ್ತಿದ್ದಾರೆ, ನಾನು ಏನು ಮಾಡಲಿ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಾಶ್ಮೀರ: ಸಿಆರ್‌ಪಿಎಫ್‌ ಯೋಧರಿಂದ ಕಾರ್ಮಿಕನ ಹತ್ಯೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಸೇರಿದಂತೆ ರಾಜಕೀಯ ನಾಯಕರು ಶ್ರೀನಗರದ ಎನ್‌ಕೌಂಟರ್ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.

ಅಂದು ಇಬ್ಬರೂ ಉದ್ಯಮಿಗಳನ್ನು ಭದ್ರತಾ ಪಡೆಗಳೆ ಕೊಂದಿವೆ ಎಂದು ಕುಟುಂಬಗಳು ಆರೋಪಿಸಿವೆ. ಜೊತೆಗೆ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳ ಕಾರಣಕ್ಕಾಗಿ ಪೊಲೀಸರು ಮೃತದೇಹಗಳನ್ನು ಹಸ್ತಾಂತರಿಸಲು ನಿರಾಕರಿಸಿದರು ಎಂದು ಅವರು ಹೇಳಿದ್ದಾರೆ.

ಅಂದು ಕೊಲ್ಲಲ್ಪಟ್ಟವರಲ್ಲಿ ತನ್ನ ಮಗನೂ ಇದ್ದು, ಅವನನ್ನು ಭಯೋತ್ಪಾದಕ ಎಂದು ಹೆಸರಿಸಲಾಗಿದೆ ಎಂದು ಭಯೋತ್ಪಾದನಾ ವಿರೋಧಿ ಹೋರಾಟಗಾರ ಅಬ್ದುಲ್ ಲತೀಫ್ ಮಗ್ರೆ ಹೇಳಿದ್ದಾರೆ. ಅವರು 2005 ರಲ್ಲಿ ರಾಂಬನ್‌ನಲ್ಲಿ ಭಯೋತ್ಪಾದಕನನ್ನು ಕಲ್ಲಿನಿಂದ ಕೊಂದಿದ್ದರು. ಲತೀಫ್‌ ಹೇಳುವಂತೆ ಅವರ ಮಗ ಅಮೀರ್ ಮುಗ್ಧನಾಗಿದ್ದು, ಕಾರ್ಮಿಕನಾಗಿದ್ದನು. ಆದರೆ, ಪೊಲೀಸರು ಅಮೀರ್ ಅವರನ್ನು ‘ಹೈಬ್ರಿಡ್’ ಭಯೋತ್ಪಾದಕ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಪಾಕ್ ಗೆಲುವಿಗೆ ಸಂಭ್ರಮ ಆರೋಪ: ಜಮ್ಮು-ಕಾಶ್ಮೀರ ವಿದ್ಯಾರ್ಥಿಗಳ ಮೇಲೆ UAPA ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭಯೋತ್ಪಾದನೆಯ ಹೆಸರಿನಲ್ಲಿ ನಮ್ಮದೇ ದೇಶದ ಪ್ರಜೆಗಳನ್ನು ಕೊಲ್ಲುವುದರಿಂದ ಭಯೋತ್ಪಾದನೆ ಕಡಿಮೆ ಆಗುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...