Homeಮುಖಪುಟ‘ನನ್ನ ತಂದೆಯನ್ನು ಕೊಂದು, ನನ್ನನ್ನು ನೋಡಿ ನಗುತ್ತಿದ್ದರು’ - ಕಾಶ್ಮೀರಿ ಬಾಲಕಿ

‘ನನ್ನ ತಂದೆಯನ್ನು ಕೊಂದು, ನನ್ನನ್ನು ನೋಡಿ ನಗುತ್ತಿದ್ದರು’ – ಕಾಶ್ಮೀರಿ ಬಾಲಕಿ

- Advertisement -
- Advertisement -

13 ವರ್ಷದ ಕಾಶ್ಮೀರಿ ಬಾಲಕಿಯೊಬ್ಬರು ಜಮ್ಮು ಕಾಶ್ಮೀರದಲ್ಲಿ ಸೋಮವಾರ ನಡೆದ ಭದ್ರತಾ ಕಾರ್ಯಾಚರಣೆ ವೇಳೆ ಹತ್ಯೆಗೀಡಾದ ತನ್ನ ತಂದೆಯ ಬಗ್ಗೆ ಮಾತನಾಡುತ್ತಾ ಅಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. “ತಂದೆಯನ್ನು ಕೊಂದು ನನ್ನನ್ನು ನೋಡಿ ನಗುತ್ತಿದ್ದರು” ಎಂದು ಬಾಲಕಿ ವಿಡಿಯೊದಲ್ಲಿ ಬಿಕ್ಕಳಿಸುತ್ತಾ ಹೇಳಿದ್ದಾರೆ.

ಶ್ರೀನಗರದ ವಾಣಿಜ್ಯ ಸಂಕೀರ್ಣದಲ್ಲಿ ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಈ ವೇಳೆ ಮೃತಪಟ್ಟವರಲ್ಲಿ ಬಾಲಕಿಯ ತಂದೆ ಉದ್ಯಮಿ ಮೊಹಮ್ಮದ್ ಅಲ್ತಾಫ್ ಭಟ್ ಕೂಡಾ ಸೇರಿದ್ದಾರೆ. ಒಬ್ಬ ಪಾಕಿಸ್ತಾನಿ ಭಯೋತ್ಪಾದಕ ಮತ್ತು ಅವನ ಸಹಚರನನ್ನು ಪಡೆಗಳು ಕೊಂದಿದ್ದಾರೆ ಪೊಲೀಸರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಯಾರೊಬ್ಬರು ಉಸಿರಾಡಲೂ ಆಗುತ್ತಿಲ್ಲ: ಮೆಹಬೂಬಾ ಮುಫ್ತಿ

ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಅಲ್ತಾಫ್ ಭಟ್ ಮತ್ತು ಮತ್ತೊಬ್ಬ ಉದ್ಯಮಿ ಭಯೋತ್ಪಾದಕರ ಗುಂಡಿಗೆ ಬಲಿಯಾಗಿದ್ದರು ಎಂದು ಪೊಲೀಸರು ಮೊದಲು ಹೇಳಿದ್ದರು. ಆದರೆ ನಂತರ ಮಾತು ಬದಲಿಸಿದ ಪೊಲೀಸರು ಅವರಿಬ್ಬರು ಕ್ರಾಸ್ ಫೈರ್‌ನಲ್ಲಿ ಸಾವನ್ನಪ್ಪಿರಬಹುದು ಎಂದು ಹೇಳಿದ್ದರು. ಅದರ ನಂತರ, ಕಾಂಪ್ಲೆಕ್ಸ್ ಮಾಲೀಕ ಅಲ್ತಾಫ್ ಭಟ್ ತನ್ನ ಬಾಡಿಗೆದಾರರ ಬಗ್ಗೆ ಅಧಿಕಾರಿಗಳಿಗೆ ತಿಳಿಸದ ಕಾರಣ ಅವರನ್ನು ‘ಭಯೋತ್ಪಾದಕರ ಸಹಚರರು’ ಎಂದು ಪರಿಗಣಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಅವರ ಕಾಂಪ್ಲೆಕ್ಸ್‌ನಲ್ಲಿದ್ದ ಬಾಡಿಗೆದಾರರಲ್ಲಿ ಒಬ್ಬ ಭಯೋತ್ಪಾದಕನಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ ಎಂದು ಎನ್‌ಡಿಟಿವಿ ತನ್ನ ವರದಿಯಲ್ಲಿ ತಿಳಿಸಿದೆ.

ಇದೀಗ, ಅಲ್ತಾಫ್ ಭಟ್‌ ಅವರ 13 ವರ್ಷದ ಮಗಳು ನೀಡಿರುವ ಹೇಳಿಕೆಯ ವಿಡಿಯೊ ವ್ಯಾಪಕವಾಗಿ ವೈರಲ್‌ ಆಗಿದೆ. ಅದರಲ್ಲಿ ಬಾಲಕಿಯು ಕಣ್ಣೀರಿಡುತ್ತಾ ಅಂದಿನ ಘಟನೆಯನ್ನು ವಿವರಿಸಿದ್ದಾರೆ.

“ನನ್ನ ಚಿಕ್ಕಪ್ಪ 10 ಗಂಟೆಯ ಸುಮಾರಿಗೆ ಫೋನ್‌‌ ಮಾಡಿ, ಅಳಲು ಪ್ರಾರಂಭಿಸಿದರು…ಆಗ ನಾನು ಮನೆಯಲ್ಲಿದ್ದೆ…ಈ ವೇಳೆ ನಾನು ಕೂಗು ಮತ್ತು ಕಿರುಚಾಟದ ಶಬ್ದಗಳನ್ನು ಕೇಳಿದೆ…ನಾನು ಓಡಿಹೋದೆ. ನಾನು ಅಲ್ಲಾನನ್ನು ಪ್ರಾರ್ಥಿಸುತ್ತಿದ್ದೆ” ಎಂದು ಅವರು ಅಳುತ್ತಾ ಹೇಳುತ್ತಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಈ ಗೋಹತ್ಯೆಯನ್ನು ತಡೆಯುತ್ತಿರುವುದು ಶ್ರೀನಗರದ ಕಾಶ್ಮೀರಿ ಪಂಡಿತ್ ಅಲ್ಲ, ಮುಸ್ಲಿಂ ಯುವಕ!

“ನನ್ನ ತಂದೆಯನ್ನು ಮೂರು ಬಾರಿ ಕರೆದುಕೊಂಡು ಹೋಗಲಾಯಿತು ಎಂದು ನನ್ನ ನನ್ನ ಸೋದರಸಂಬಂಧಿ ನನಗೆ ಹೇಳಿದರು. ಎರಡು ಭಾರಿ ಅವರನ್ನು ಬಿಟ್ಟು, ಮೂರನೇ ಬಾರಿ ಅವರನ್ನು ಕೊಲ್ಲಲಾಯಿತು. ಇದರ ಅರ್ಥವೇನು? ಇತರನ್ನೂ ಕೂಡಾ ಕೊಲ್ಲಲಾಯಿತು, ಏನಿದೆಲ್ಲಾ?”

ಬಾಲಕಿಯು ಅಂದಿನ ನೆನಪುಗಳನ್ನು ಹೇಳುವಾಗ ಬಿಕ್ಕಳಿಸುತ್ತಾ ಹೆಚ್ಚು ಹೆಚ್ಚು ವಿಚಲಿತಳಾಗುತ್ತಾರೆ. “ನಾನು ಅವರ ಬಳಿ ಕೇಳುತ್ತೇನೆ, ಅಂಕಲ್ ಏನಿದು? ಏನು ಮಾಡಿದ್ರಿ ನೀವು? ಇವರು ನನ್ನ ತಂದೆ, ನಿಮಗೆ ಹೇಗೆ ಅನಿಸ್ತು ಇವರು ‘ಅವರು’ (ಭಯೋತ್ಪಾದಕ) ಎಂದು?… ಈ ಸಂದರ್ಭದಲ್ಲಿ ಅವರು ನನ್ನನ್ನು ನೋಡಿ ನಗುತ್ತಾರೆ. ನಾನು ಅವರಿಗೆ ಏನು ಪ್ರತಿಕ್ರಿಯೆ ನೀಡಬಹುದು? ಅವರು ನಗುತ್ತಿದ್ದರು…ನಾಚಿಕೆಯಿಲ್ಲದೆ ನಗುತ್ತಿದ್ದರು ನಾನು ಅವರಿಗೆ ಏನು ಹೇಳಲಿ?” ಎಂದು ಬಾಲಕಿ ದುಃಖತಪ್ತರಾಗಿ ಹೇಳುತ್ತಾರೆ.

“ನನ್ನ ತಮ್ಮ ಎರಡನೆ ಕ್ಲಾಸ್‌ನಲ್ಲಿದ್ದಾನೆ. ಅವನು ತುಂಬಾ ಚಿಕ್ಕವನು. ಅವನಿಗೆ ನಾವು ಏನು ಹೇಳಬೇಕು? ಅವನಿಗೆ ಏನೂ ಗೊತ್ತಿಲ್ಲ. ಅವನು ತಂದೆಯನ್ನು ತುಂಬಾ ಹಚ್ಚಿಕೊಂಡಿದ್ದ. ನಾನು ಕೂಡಾ ತಂದೆಯನ್ನು ತುಂಬಾ ಹಚ್ಚಿಕೊಂಡಿದ್ದೆ. ಈಗ ನಾನು ಏನು ಮಾಡಲಿ? ನನ್ನ ತಾಯಿಯನ್ನು ಹೇಗೆ ಸಮಾಧಾನ ಪಡಿಸಲಿ? ಅವಳು ಈಗ ಏನನ್ನೂ ತಿನ್ನುತ್ತಿಲ್ಲ, ಒಂದೇ ಸಮನೆ ಅಳುತ್ತಿದ್ದಾರೆ, ನಾನು ಏನು ಮಾಡಲಿ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಾಶ್ಮೀರ: ಸಿಆರ್‌ಪಿಎಫ್‌ ಯೋಧರಿಂದ ಕಾರ್ಮಿಕನ ಹತ್ಯೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಸೇರಿದಂತೆ ರಾಜಕೀಯ ನಾಯಕರು ಶ್ರೀನಗರದ ಎನ್‌ಕೌಂಟರ್ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.

ಅಂದು ಇಬ್ಬರೂ ಉದ್ಯಮಿಗಳನ್ನು ಭದ್ರತಾ ಪಡೆಗಳೆ ಕೊಂದಿವೆ ಎಂದು ಕುಟುಂಬಗಳು ಆರೋಪಿಸಿವೆ. ಜೊತೆಗೆ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳ ಕಾರಣಕ್ಕಾಗಿ ಪೊಲೀಸರು ಮೃತದೇಹಗಳನ್ನು ಹಸ್ತಾಂತರಿಸಲು ನಿರಾಕರಿಸಿದರು ಎಂದು ಅವರು ಹೇಳಿದ್ದಾರೆ.

ಅಂದು ಕೊಲ್ಲಲ್ಪಟ್ಟವರಲ್ಲಿ ತನ್ನ ಮಗನೂ ಇದ್ದು, ಅವನನ್ನು ಭಯೋತ್ಪಾದಕ ಎಂದು ಹೆಸರಿಸಲಾಗಿದೆ ಎಂದು ಭಯೋತ್ಪಾದನಾ ವಿರೋಧಿ ಹೋರಾಟಗಾರ ಅಬ್ದುಲ್ ಲತೀಫ್ ಮಗ್ರೆ ಹೇಳಿದ್ದಾರೆ. ಅವರು 2005 ರಲ್ಲಿ ರಾಂಬನ್‌ನಲ್ಲಿ ಭಯೋತ್ಪಾದಕನನ್ನು ಕಲ್ಲಿನಿಂದ ಕೊಂದಿದ್ದರು. ಲತೀಫ್‌ ಹೇಳುವಂತೆ ಅವರ ಮಗ ಅಮೀರ್ ಮುಗ್ಧನಾಗಿದ್ದು, ಕಾರ್ಮಿಕನಾಗಿದ್ದನು. ಆದರೆ, ಪೊಲೀಸರು ಅಮೀರ್ ಅವರನ್ನು ‘ಹೈಬ್ರಿಡ್’ ಭಯೋತ್ಪಾದಕ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಪಾಕ್ ಗೆಲುವಿಗೆ ಸಂಭ್ರಮ ಆರೋಪ: ಜಮ್ಮು-ಕಾಶ್ಮೀರ ವಿದ್ಯಾರ್ಥಿಗಳ ಮೇಲೆ UAPA ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭಯೋತ್ಪಾದನೆಯ ಹೆಸರಿನಲ್ಲಿ ನಮ್ಮದೇ ದೇಶದ ಪ್ರಜೆಗಳನ್ನು ಕೊಲ್ಲುವುದರಿಂದ ಭಯೋತ್ಪಾದನೆ ಕಡಿಮೆ ಆಗುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....