Homeಮುಖಪುಟ‘ನನ್ನ ತಂದೆಯನ್ನು ಕೊಂದು, ನನ್ನನ್ನು ನೋಡಿ ನಗುತ್ತಿದ್ದರು’ - ಕಾಶ್ಮೀರಿ ಬಾಲಕಿ

‘ನನ್ನ ತಂದೆಯನ್ನು ಕೊಂದು, ನನ್ನನ್ನು ನೋಡಿ ನಗುತ್ತಿದ್ದರು’ – ಕಾಶ್ಮೀರಿ ಬಾಲಕಿ

- Advertisement -
- Advertisement -

13 ವರ್ಷದ ಕಾಶ್ಮೀರಿ ಬಾಲಕಿಯೊಬ್ಬರು ಜಮ್ಮು ಕಾಶ್ಮೀರದಲ್ಲಿ ಸೋಮವಾರ ನಡೆದ ಭದ್ರತಾ ಕಾರ್ಯಾಚರಣೆ ವೇಳೆ ಹತ್ಯೆಗೀಡಾದ ತನ್ನ ತಂದೆಯ ಬಗ್ಗೆ ಮಾತನಾಡುತ್ತಾ ಅಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. “ತಂದೆಯನ್ನು ಕೊಂದು ನನ್ನನ್ನು ನೋಡಿ ನಗುತ್ತಿದ್ದರು” ಎಂದು ಬಾಲಕಿ ವಿಡಿಯೊದಲ್ಲಿ ಬಿಕ್ಕಳಿಸುತ್ತಾ ಹೇಳಿದ್ದಾರೆ.

ಶ್ರೀನಗರದ ವಾಣಿಜ್ಯ ಸಂಕೀರ್ಣದಲ್ಲಿ ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಈ ವೇಳೆ ಮೃತಪಟ್ಟವರಲ್ಲಿ ಬಾಲಕಿಯ ತಂದೆ ಉದ್ಯಮಿ ಮೊಹಮ್ಮದ್ ಅಲ್ತಾಫ್ ಭಟ್ ಕೂಡಾ ಸೇರಿದ್ದಾರೆ. ಒಬ್ಬ ಪಾಕಿಸ್ತಾನಿ ಭಯೋತ್ಪಾದಕ ಮತ್ತು ಅವನ ಸಹಚರನನ್ನು ಪಡೆಗಳು ಕೊಂದಿದ್ದಾರೆ ಪೊಲೀಸರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಯಾರೊಬ್ಬರು ಉಸಿರಾಡಲೂ ಆಗುತ್ತಿಲ್ಲ: ಮೆಹಬೂಬಾ ಮುಫ್ತಿ

ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಅಲ್ತಾಫ್ ಭಟ್ ಮತ್ತು ಮತ್ತೊಬ್ಬ ಉದ್ಯಮಿ ಭಯೋತ್ಪಾದಕರ ಗುಂಡಿಗೆ ಬಲಿಯಾಗಿದ್ದರು ಎಂದು ಪೊಲೀಸರು ಮೊದಲು ಹೇಳಿದ್ದರು. ಆದರೆ ನಂತರ ಮಾತು ಬದಲಿಸಿದ ಪೊಲೀಸರು ಅವರಿಬ್ಬರು ಕ್ರಾಸ್ ಫೈರ್‌ನಲ್ಲಿ ಸಾವನ್ನಪ್ಪಿರಬಹುದು ಎಂದು ಹೇಳಿದ್ದರು. ಅದರ ನಂತರ, ಕಾಂಪ್ಲೆಕ್ಸ್ ಮಾಲೀಕ ಅಲ್ತಾಫ್ ಭಟ್ ತನ್ನ ಬಾಡಿಗೆದಾರರ ಬಗ್ಗೆ ಅಧಿಕಾರಿಗಳಿಗೆ ತಿಳಿಸದ ಕಾರಣ ಅವರನ್ನು ‘ಭಯೋತ್ಪಾದಕರ ಸಹಚರರು’ ಎಂದು ಪರಿಗಣಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಅವರ ಕಾಂಪ್ಲೆಕ್ಸ್‌ನಲ್ಲಿದ್ದ ಬಾಡಿಗೆದಾರರಲ್ಲಿ ಒಬ್ಬ ಭಯೋತ್ಪಾದಕನಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ ಎಂದು ಎನ್‌ಡಿಟಿವಿ ತನ್ನ ವರದಿಯಲ್ಲಿ ತಿಳಿಸಿದೆ.

ಇದೀಗ, ಅಲ್ತಾಫ್ ಭಟ್‌ ಅವರ 13 ವರ್ಷದ ಮಗಳು ನೀಡಿರುವ ಹೇಳಿಕೆಯ ವಿಡಿಯೊ ವ್ಯಾಪಕವಾಗಿ ವೈರಲ್‌ ಆಗಿದೆ. ಅದರಲ್ಲಿ ಬಾಲಕಿಯು ಕಣ್ಣೀರಿಡುತ್ತಾ ಅಂದಿನ ಘಟನೆಯನ್ನು ವಿವರಿಸಿದ್ದಾರೆ.

“ನನ್ನ ಚಿಕ್ಕಪ್ಪ 10 ಗಂಟೆಯ ಸುಮಾರಿಗೆ ಫೋನ್‌‌ ಮಾಡಿ, ಅಳಲು ಪ್ರಾರಂಭಿಸಿದರು…ಆಗ ನಾನು ಮನೆಯಲ್ಲಿದ್ದೆ…ಈ ವೇಳೆ ನಾನು ಕೂಗು ಮತ್ತು ಕಿರುಚಾಟದ ಶಬ್ದಗಳನ್ನು ಕೇಳಿದೆ…ನಾನು ಓಡಿಹೋದೆ. ನಾನು ಅಲ್ಲಾನನ್ನು ಪ್ರಾರ್ಥಿಸುತ್ತಿದ್ದೆ” ಎಂದು ಅವರು ಅಳುತ್ತಾ ಹೇಳುತ್ತಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಈ ಗೋಹತ್ಯೆಯನ್ನು ತಡೆಯುತ್ತಿರುವುದು ಶ್ರೀನಗರದ ಕಾಶ್ಮೀರಿ ಪಂಡಿತ್ ಅಲ್ಲ, ಮುಸ್ಲಿಂ ಯುವಕ!

“ನನ್ನ ತಂದೆಯನ್ನು ಮೂರು ಬಾರಿ ಕರೆದುಕೊಂಡು ಹೋಗಲಾಯಿತು ಎಂದು ನನ್ನ ನನ್ನ ಸೋದರಸಂಬಂಧಿ ನನಗೆ ಹೇಳಿದರು. ಎರಡು ಭಾರಿ ಅವರನ್ನು ಬಿಟ್ಟು, ಮೂರನೇ ಬಾರಿ ಅವರನ್ನು ಕೊಲ್ಲಲಾಯಿತು. ಇದರ ಅರ್ಥವೇನು? ಇತರನ್ನೂ ಕೂಡಾ ಕೊಲ್ಲಲಾಯಿತು, ಏನಿದೆಲ್ಲಾ?”

ಬಾಲಕಿಯು ಅಂದಿನ ನೆನಪುಗಳನ್ನು ಹೇಳುವಾಗ ಬಿಕ್ಕಳಿಸುತ್ತಾ ಹೆಚ್ಚು ಹೆಚ್ಚು ವಿಚಲಿತಳಾಗುತ್ತಾರೆ. “ನಾನು ಅವರ ಬಳಿ ಕೇಳುತ್ತೇನೆ, ಅಂಕಲ್ ಏನಿದು? ಏನು ಮಾಡಿದ್ರಿ ನೀವು? ಇವರು ನನ್ನ ತಂದೆ, ನಿಮಗೆ ಹೇಗೆ ಅನಿಸ್ತು ಇವರು ‘ಅವರು’ (ಭಯೋತ್ಪಾದಕ) ಎಂದು?… ಈ ಸಂದರ್ಭದಲ್ಲಿ ಅವರು ನನ್ನನ್ನು ನೋಡಿ ನಗುತ್ತಾರೆ. ನಾನು ಅವರಿಗೆ ಏನು ಪ್ರತಿಕ್ರಿಯೆ ನೀಡಬಹುದು? ಅವರು ನಗುತ್ತಿದ್ದರು…ನಾಚಿಕೆಯಿಲ್ಲದೆ ನಗುತ್ತಿದ್ದರು ನಾನು ಅವರಿಗೆ ಏನು ಹೇಳಲಿ?” ಎಂದು ಬಾಲಕಿ ದುಃಖತಪ್ತರಾಗಿ ಹೇಳುತ್ತಾರೆ.

“ನನ್ನ ತಮ್ಮ ಎರಡನೆ ಕ್ಲಾಸ್‌ನಲ್ಲಿದ್ದಾನೆ. ಅವನು ತುಂಬಾ ಚಿಕ್ಕವನು. ಅವನಿಗೆ ನಾವು ಏನು ಹೇಳಬೇಕು? ಅವನಿಗೆ ಏನೂ ಗೊತ್ತಿಲ್ಲ. ಅವನು ತಂದೆಯನ್ನು ತುಂಬಾ ಹಚ್ಚಿಕೊಂಡಿದ್ದ. ನಾನು ಕೂಡಾ ತಂದೆಯನ್ನು ತುಂಬಾ ಹಚ್ಚಿಕೊಂಡಿದ್ದೆ. ಈಗ ನಾನು ಏನು ಮಾಡಲಿ? ನನ್ನ ತಾಯಿಯನ್ನು ಹೇಗೆ ಸಮಾಧಾನ ಪಡಿಸಲಿ? ಅವಳು ಈಗ ಏನನ್ನೂ ತಿನ್ನುತ್ತಿಲ್ಲ, ಒಂದೇ ಸಮನೆ ಅಳುತ್ತಿದ್ದಾರೆ, ನಾನು ಏನು ಮಾಡಲಿ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಾಶ್ಮೀರ: ಸಿಆರ್‌ಪಿಎಫ್‌ ಯೋಧರಿಂದ ಕಾರ್ಮಿಕನ ಹತ್ಯೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಸೇರಿದಂತೆ ರಾಜಕೀಯ ನಾಯಕರು ಶ್ರೀನಗರದ ಎನ್‌ಕೌಂಟರ್ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.

ಅಂದು ಇಬ್ಬರೂ ಉದ್ಯಮಿಗಳನ್ನು ಭದ್ರತಾ ಪಡೆಗಳೆ ಕೊಂದಿವೆ ಎಂದು ಕುಟುಂಬಗಳು ಆರೋಪಿಸಿವೆ. ಜೊತೆಗೆ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳ ಕಾರಣಕ್ಕಾಗಿ ಪೊಲೀಸರು ಮೃತದೇಹಗಳನ್ನು ಹಸ್ತಾಂತರಿಸಲು ನಿರಾಕರಿಸಿದರು ಎಂದು ಅವರು ಹೇಳಿದ್ದಾರೆ.

ಅಂದು ಕೊಲ್ಲಲ್ಪಟ್ಟವರಲ್ಲಿ ತನ್ನ ಮಗನೂ ಇದ್ದು, ಅವನನ್ನು ಭಯೋತ್ಪಾದಕ ಎಂದು ಹೆಸರಿಸಲಾಗಿದೆ ಎಂದು ಭಯೋತ್ಪಾದನಾ ವಿರೋಧಿ ಹೋರಾಟಗಾರ ಅಬ್ದುಲ್ ಲತೀಫ್ ಮಗ್ರೆ ಹೇಳಿದ್ದಾರೆ. ಅವರು 2005 ರಲ್ಲಿ ರಾಂಬನ್‌ನಲ್ಲಿ ಭಯೋತ್ಪಾದಕನನ್ನು ಕಲ್ಲಿನಿಂದ ಕೊಂದಿದ್ದರು. ಲತೀಫ್‌ ಹೇಳುವಂತೆ ಅವರ ಮಗ ಅಮೀರ್ ಮುಗ್ಧನಾಗಿದ್ದು, ಕಾರ್ಮಿಕನಾಗಿದ್ದನು. ಆದರೆ, ಪೊಲೀಸರು ಅಮೀರ್ ಅವರನ್ನು ‘ಹೈಬ್ರಿಡ್’ ಭಯೋತ್ಪಾದಕ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಪಾಕ್ ಗೆಲುವಿಗೆ ಸಂಭ್ರಮ ಆರೋಪ: ಜಮ್ಮು-ಕಾಶ್ಮೀರ ವಿದ್ಯಾರ್ಥಿಗಳ ಮೇಲೆ UAPA ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭಯೋತ್ಪಾದನೆಯ ಹೆಸರಿನಲ್ಲಿ ನಮ್ಮದೇ ದೇಶದ ಪ್ರಜೆಗಳನ್ನು ಕೊಲ್ಲುವುದರಿಂದ ಭಯೋತ್ಪಾದನೆ ಕಡಿಮೆ ಆಗುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...