Homeಮುಖಪುಟಅವರು ನಿಮ್ಮ ಮನೆಯ ಹೆಣ್ಣು ಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ: ಶಾಹೀನ್ ಬಾಗ್ ಪ್ರತಿಭಟನಾಕಾರರ ಬಗ್ಗೆ ಕೆಟ್ಟದಾಗಿ...

ಅವರು ನಿಮ್ಮ ಮನೆಯ ಹೆಣ್ಣು ಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ: ಶಾಹೀನ್ ಬಾಗ್ ಪ್ರತಿಭಟನಾಕಾರರ ಬಗ್ಗೆ ಕೆಟ್ಟದಾಗಿ ಮಾತನಾಡಿದ ಬಿಜೆಪಿ ಸಂಸದ

- Advertisement -
- Advertisement -

ಪಶ್ಚಿಮ ದೆಹಲಿಯ ಸಂಸದ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ಅವರು ದೆಹಲಿ ಚುನಾವಣಾ ಪ್ರಚಾರದ ವೇಳೆ ಶಾಹೀನ್‌ ಬಾಗ್‌ ಪ್ರತಿಭಟನಾಕಾರರ ಮೇಲೆ ಹರಿಹಾಯ್ದಿದ್ದು ಕೆಟ್ಟದಾಗಿ ಮಾತನಾಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಲಕ್ಷಾಂತರ ಜನರು ಶಾಹೀನ್ ಬಾಗ್‌ನಲ್ಲಿ ಸೇರುತ್ತಾರೆ.  ಅವರು ನಿಮ್ಮ ಮನೆಗಳಿಗೆ ಪ್ರವೇಶಿಸುತ್ತಾರೆ, ನಿಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ, ಅವರನ್ನು ಕೊಲ್ಲುತ್ತಾರೆ. ಮೋದಿಜಿ ಮತ್ತು ಅಮಿತ್ ಶಾ ನಾಳೆ ನಿಮ್ಮನ್ನು ಉಳಿಸಲು ಬರುವುದಿಲ್ಲ… ಇಂದು ಸಮಯವಿದೆ ದೆಹಲಿಯ ಜನರು ಯೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಅವರು ತಮ್ಮ ನಾಲಿಗೆಯನ್ನು ಹರಿಯಬಿಟ್ಟಿದ್ದಾರೆ.

ಮುಂದಿನ ತಿಂಗಳು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ವಿಕಾಸ್ಪುರಿಯಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಮಾತನಾಡಿದ ಅವರು ದೆಹಲಿಯ ಶಹೀನ್ ಬಾಗ್‌ನಲ್ಲಿನ ಪ್ರತಿಭಟನಾಕಾರರನ್ನು ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಒಂದು ಗಂಟೆಯಲ್ಲಿ ತೆರವುಗೊಳ್ಳಲಾಗುವುದು ಎಂದು ಘೋಷಿಸಿದ್ದಾರೆ.

“ಇದು ಕೇವಲ ಮತ್ತೊಂದು ಚುನಾವಣೆಯಲ್ಲ. ಇದು ಒಂದು ರಾಷ್ಟ್ರದ ಐಕ್ಯತೆಯನ್ನು ನಿರ್ಧರಿಸುವ ಚುನಾವಣೆಯಾಗಿದೆ. ಫೆಬ್ರವರಿ 11 ರಂದು ಬಿಜೆಪಿ ಅಧಿಕಾರಕ್ಕೆ ಬಂದರೆ, ಒಂದು ಗಂಟೆಯೊಳಗೆ ನೀವು ಅಲ್ಲಿ ಒಬ್ಬ ಪ್ರತಿಭಟನಾಕಾರರನ್ನು ಕಾಣುವುದಿಲ್ಲ. ಹಾಗೆಯೇ ಒಂದು ತಿಂಗಳೊಳಗೆ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲಾದ ಒಂದೇ ಒಂದು ಮಸೀದಿಯನ್ನು ಉಳಿಸವುದಿಲ್ಲ”ಎಂದು ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ಹೇಳಿದ್ದಾರೆ.

ಸಿಎಎ ವಿರುದ್ಧ ನಿರಂತರ ವಿರೋಧವನ್ನು ಎದುರಿಸುತ್ತಿರುವ ಬಿಜೆಪಿ ಪಕ್ಷವು ಚುನಾವಣೆಯನ್ನು ನಿಭಾಯಿಸಲು ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಹಾಗಾಗಿ ಅದು ಶಾಹೀನ್ ಬಾಗ್ ಪ್ರತಿಭಟನೆಯನ್ನು ದೆಹಲಿ ಚುನಾವಣಾ ಪ್ರಚಾರದ ವಿಷಯವನ್ನಾಗಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್‌ ಮತ್ತು ಎಎಪಿಯನ್ನು ಅದರೊಂದಿಗೆ ಸೇರಿಸಿ ಜನರನ್ನು ಗೆದ್ದುಕೊಳ್ಳಲು ಪಕ್ಷವು ಯಶಸ್ವಿಯಾಗಬಹುದು ಎಂದು ಬಿಜೆಪಿಯ ಉನ್ನತ ನಾಯಕರು ಭಾವಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪರ್ವೇಶ್ ವರ್ಮಾ ಅವರ ಹೇಳಿಕೆಯು ಅದನ್ನು ಪ್ರತಿಬಿಂಬಿಸುತ್ತಿದೆ.  ಈ ಹಿಂದೆ ಬಿಜೆಪಿ ಅಭ್ಯರ್ಥಿ ಕಪಿಲ್‌ ಮಿಶ್ರಾ ದೆಹಲಿ ಚುನಾವಣೆಯಲ್ಲಿ ಭಾರತ ಪಾಕ್‌ ಯುದ್ಧಕ್ಕೆ ಹೋಲಿಸಿದ್ದರು. ಹಾಗಾಗಿ ಚುನಾವಣಾ ಆಯೋಗ ಅವರನ್ನು ಎರಡು ದಿನಗಳ ಕಾಲ ಚುನಾವಣಾ ಪ್ರಚಾರದಿಂದ ಬ್ಯಾನ್‌ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...