Homeಮುಖಪುಟಅವರು ನಿಮ್ಮ ಮನೆಯ ಹೆಣ್ಣು ಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ: ಶಾಹೀನ್ ಬಾಗ್ ಪ್ರತಿಭಟನಾಕಾರರ ಬಗ್ಗೆ ಕೆಟ್ಟದಾಗಿ...

ಅವರು ನಿಮ್ಮ ಮನೆಯ ಹೆಣ್ಣು ಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ: ಶಾಹೀನ್ ಬಾಗ್ ಪ್ರತಿಭಟನಾಕಾರರ ಬಗ್ಗೆ ಕೆಟ್ಟದಾಗಿ ಮಾತನಾಡಿದ ಬಿಜೆಪಿ ಸಂಸದ

- Advertisement -
- Advertisement -

ಪಶ್ಚಿಮ ದೆಹಲಿಯ ಸಂಸದ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ಅವರು ದೆಹಲಿ ಚುನಾವಣಾ ಪ್ರಚಾರದ ವೇಳೆ ಶಾಹೀನ್‌ ಬಾಗ್‌ ಪ್ರತಿಭಟನಾಕಾರರ ಮೇಲೆ ಹರಿಹಾಯ್ದಿದ್ದು ಕೆಟ್ಟದಾಗಿ ಮಾತನಾಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಲಕ್ಷಾಂತರ ಜನರು ಶಾಹೀನ್ ಬಾಗ್‌ನಲ್ಲಿ ಸೇರುತ್ತಾರೆ.  ಅವರು ನಿಮ್ಮ ಮನೆಗಳಿಗೆ ಪ್ರವೇಶಿಸುತ್ತಾರೆ, ನಿಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ, ಅವರನ್ನು ಕೊಲ್ಲುತ್ತಾರೆ. ಮೋದಿಜಿ ಮತ್ತು ಅಮಿತ್ ಶಾ ನಾಳೆ ನಿಮ್ಮನ್ನು ಉಳಿಸಲು ಬರುವುದಿಲ್ಲ… ಇಂದು ಸಮಯವಿದೆ ದೆಹಲಿಯ ಜನರು ಯೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಅವರು ತಮ್ಮ ನಾಲಿಗೆಯನ್ನು ಹರಿಯಬಿಟ್ಟಿದ್ದಾರೆ.

ಮುಂದಿನ ತಿಂಗಳು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ವಿಕಾಸ್ಪುರಿಯಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಮಾತನಾಡಿದ ಅವರು ದೆಹಲಿಯ ಶಹೀನ್ ಬಾಗ್‌ನಲ್ಲಿನ ಪ್ರತಿಭಟನಾಕಾರರನ್ನು ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಒಂದು ಗಂಟೆಯಲ್ಲಿ ತೆರವುಗೊಳ್ಳಲಾಗುವುದು ಎಂದು ಘೋಷಿಸಿದ್ದಾರೆ.

“ಇದು ಕೇವಲ ಮತ್ತೊಂದು ಚುನಾವಣೆಯಲ್ಲ. ಇದು ಒಂದು ರಾಷ್ಟ್ರದ ಐಕ್ಯತೆಯನ್ನು ನಿರ್ಧರಿಸುವ ಚುನಾವಣೆಯಾಗಿದೆ. ಫೆಬ್ರವರಿ 11 ರಂದು ಬಿಜೆಪಿ ಅಧಿಕಾರಕ್ಕೆ ಬಂದರೆ, ಒಂದು ಗಂಟೆಯೊಳಗೆ ನೀವು ಅಲ್ಲಿ ಒಬ್ಬ ಪ್ರತಿಭಟನಾಕಾರರನ್ನು ಕಾಣುವುದಿಲ್ಲ. ಹಾಗೆಯೇ ಒಂದು ತಿಂಗಳೊಳಗೆ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲಾದ ಒಂದೇ ಒಂದು ಮಸೀದಿಯನ್ನು ಉಳಿಸವುದಿಲ್ಲ”ಎಂದು ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ಹೇಳಿದ್ದಾರೆ.

ಸಿಎಎ ವಿರುದ್ಧ ನಿರಂತರ ವಿರೋಧವನ್ನು ಎದುರಿಸುತ್ತಿರುವ ಬಿಜೆಪಿ ಪಕ್ಷವು ಚುನಾವಣೆಯನ್ನು ನಿಭಾಯಿಸಲು ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಹಾಗಾಗಿ ಅದು ಶಾಹೀನ್ ಬಾಗ್ ಪ್ರತಿಭಟನೆಯನ್ನು ದೆಹಲಿ ಚುನಾವಣಾ ಪ್ರಚಾರದ ವಿಷಯವನ್ನಾಗಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್‌ ಮತ್ತು ಎಎಪಿಯನ್ನು ಅದರೊಂದಿಗೆ ಸೇರಿಸಿ ಜನರನ್ನು ಗೆದ್ದುಕೊಳ್ಳಲು ಪಕ್ಷವು ಯಶಸ್ವಿಯಾಗಬಹುದು ಎಂದು ಬಿಜೆಪಿಯ ಉನ್ನತ ನಾಯಕರು ಭಾವಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪರ್ವೇಶ್ ವರ್ಮಾ ಅವರ ಹೇಳಿಕೆಯು ಅದನ್ನು ಪ್ರತಿಬಿಂಬಿಸುತ್ತಿದೆ.  ಈ ಹಿಂದೆ ಬಿಜೆಪಿ ಅಭ್ಯರ್ಥಿ ಕಪಿಲ್‌ ಮಿಶ್ರಾ ದೆಹಲಿ ಚುನಾವಣೆಯಲ್ಲಿ ಭಾರತ ಪಾಕ್‌ ಯುದ್ಧಕ್ಕೆ ಹೋಲಿಸಿದ್ದರು. ಹಾಗಾಗಿ ಚುನಾವಣಾ ಆಯೋಗ ಅವರನ್ನು ಎರಡು ದಿನಗಳ ಕಾಲ ಚುನಾವಣಾ ಪ್ರಚಾರದಿಂದ ಬ್ಯಾನ್‌ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...