ಪಶ್ಚಿಮ ದೆಹಲಿಯ ಸಂಸದ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ಅವರು ದೆಹಲಿ ಚುನಾವಣಾ ಪ್ರಚಾರದ ವೇಳೆ ಶಾಹೀನ್ ಬಾಗ್ ಪ್ರತಿಭಟನಾಕಾರರ ಮೇಲೆ ಹರಿಹಾಯ್ದಿದ್ದು ಕೆಟ್ಟದಾಗಿ ಮಾತನಾಡಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಲಕ್ಷಾಂತರ ಜನರು ಶಾಹೀನ್ ಬಾಗ್ನಲ್ಲಿ ಸೇರುತ್ತಾರೆ. ಅವರು ನಿಮ್ಮ ಮನೆಗಳಿಗೆ ಪ್ರವೇಶಿಸುತ್ತಾರೆ, ನಿಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ, ಅವರನ್ನು ಕೊಲ್ಲುತ್ತಾರೆ. ಮೋದಿಜಿ ಮತ್ತು ಅಮಿತ್ ಶಾ ನಾಳೆ ನಿಮ್ಮನ್ನು ಉಳಿಸಲು ಬರುವುದಿಲ್ಲ… ಇಂದು ಸಮಯವಿದೆ ದೆಹಲಿಯ ಜನರು ಯೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಅವರು ತಮ್ಮ ನಾಲಿಗೆಯನ್ನು ಹರಿಯಬಿಟ್ಟಿದ್ದಾರೆ.
#WATCH: BJP MP Parvesh Verma says, "…Lakhs of people gather there (Shaheen Bagh). People of Delhi will have to think & take a decision. They'll enter your houses, rape your sisters&daughters, kill them. There's time today, Modi ji & Amit Shah won't come to save you tomorrow…" pic.twitter.com/1G801z5ZbM
— ANI (@ANI) January 28, 2020
ಮುಂದಿನ ತಿಂಗಳು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ವಿಕಾಸ್ಪುರಿಯಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಮಾತನಾಡಿದ ಅವರು ದೆಹಲಿಯ ಶಹೀನ್ ಬಾಗ್ನಲ್ಲಿನ ಪ್ರತಿಭಟನಾಕಾರರನ್ನು ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಒಂದು ಗಂಟೆಯಲ್ಲಿ ತೆರವುಗೊಳ್ಳಲಾಗುವುದು ಎಂದು ಘೋಷಿಸಿದ್ದಾರೆ.
“ಇದು ಕೇವಲ ಮತ್ತೊಂದು ಚುನಾವಣೆಯಲ್ಲ. ಇದು ಒಂದು ರಾಷ್ಟ್ರದ ಐಕ್ಯತೆಯನ್ನು ನಿರ್ಧರಿಸುವ ಚುನಾವಣೆಯಾಗಿದೆ. ಫೆಬ್ರವರಿ 11 ರಂದು ಬಿಜೆಪಿ ಅಧಿಕಾರಕ್ಕೆ ಬಂದರೆ, ಒಂದು ಗಂಟೆಯೊಳಗೆ ನೀವು ಅಲ್ಲಿ ಒಬ್ಬ ಪ್ರತಿಭಟನಾಕಾರರನ್ನು ಕಾಣುವುದಿಲ್ಲ. ಹಾಗೆಯೇ ಒಂದು ತಿಂಗಳೊಳಗೆ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲಾದ ಒಂದೇ ಒಂದು ಮಸೀದಿಯನ್ನು ಉಳಿಸವುದಿಲ್ಲ”ಎಂದು ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ಹೇಳಿದ್ದಾರೆ.
ಸಿಎಎ ವಿರುದ್ಧ ನಿರಂತರ ವಿರೋಧವನ್ನು ಎದುರಿಸುತ್ತಿರುವ ಬಿಜೆಪಿ ಪಕ್ಷವು ಚುನಾವಣೆಯನ್ನು ನಿಭಾಯಿಸಲು ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಹಾಗಾಗಿ ಅದು ಶಾಹೀನ್ ಬಾಗ್ ಪ್ರತಿಭಟನೆಯನ್ನು ದೆಹಲಿ ಚುನಾವಣಾ ಪ್ರಚಾರದ ವಿಷಯವನ್ನಾಗಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಮತ್ತು ಎಎಪಿಯನ್ನು ಅದರೊಂದಿಗೆ ಸೇರಿಸಿ ಜನರನ್ನು ಗೆದ್ದುಕೊಳ್ಳಲು ಪಕ್ಷವು ಯಶಸ್ವಿಯಾಗಬಹುದು ಎಂದು ಬಿಜೆಪಿಯ ಉನ್ನತ ನಾಯಕರು ಭಾವಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪರ್ವೇಶ್ ವರ್ಮಾ ಅವರ ಹೇಳಿಕೆಯು ಅದನ್ನು ಪ್ರತಿಬಿಂಬಿಸುತ್ತಿದೆ. ಈ ಹಿಂದೆ ಬಿಜೆಪಿ ಅಭ್ಯರ್ಥಿ ಕಪಿಲ್ ಮಿಶ್ರಾ ದೆಹಲಿ ಚುನಾವಣೆಯಲ್ಲಿ ಭಾರತ ಪಾಕ್ ಯುದ್ಧಕ್ಕೆ ಹೋಲಿಸಿದ್ದರು. ಹಾಗಾಗಿ ಚುನಾವಣಾ ಆಯೋಗ ಅವರನ್ನು ಎರಡು ದಿನಗಳ ಕಾಲ ಚುನಾವಣಾ ಪ್ರಚಾರದಿಂದ ಬ್ಯಾನ್ ಮಾಡಿತ್ತು.