Homeಮುಖಪುಟಪೊಲೀಸ್ ಮನೆಯಲ್ಲಿ ಕಳ್ಳತನ ಮಾಡಿ, ಕ್ಷಮಿಸು ಗೆಳೆಯ ಎಂದು ಪತ್ರ ಬರೆದಿಟ್ಟ ಕಳ್ಳ

ಪೊಲೀಸ್ ಮನೆಯಲ್ಲಿ ಕಳ್ಳತನ ಮಾಡಿ, ಕ್ಷಮಿಸು ಗೆಳೆಯ ಎಂದು ಪತ್ರ ಬರೆದಿಟ್ಟ ಕಳ್ಳ

- Advertisement -
- Advertisement -

ಪೊಲೀಸ್ ಸಿಬ್ಬಂದಿಯೊಬ್ಬರ ಮನೆಯಲ್ಲಿ ಕಳ್ಳನೊಬ್ಬ ಕಳ್ಳತನ ಮಾಡಿ, ಕ್ಷಮಿಸು ಎಂದು ಕ್ಷಮಾಪಣಾ ಪತ್ರ ಬರೆದಿಟ್ಟು ಹೋಗಿರುವ ಘಟನೆ ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ನಡೆದಿದೆ.

ಛತ್ತೀಸ್‌ಗಢದ ಕೊತ್ವಾಲಿ ಪೊಲೀಸ್ ಸ್ಟೇಷನ್‌ನಲ್ಲಿ ಅಸಿಸ್ಟೆಂಟ್‌ ಸಬ್ ಇನ್ಸ್‌ಪೆಕ್ಟರ್‌ ಆಗಿ ಕಾರ್ಯ ನಿರ್ವಹಿಸುತ್ತಿರುವ ಕಮಲೇಶ್ ಕಠಾರೆ ಮನೆಯಲ್ಲಿ ಕಳ್ಳತನ ನಡೆದಿತ್ತು. ಕಮಲೇಶ್ ಕಠಾರೆ ಅವರ ಕುಟುಂಬವು ಭಿಂದ್‌ನಲ್ಲಿ ನೆಲೆಸಿದೆ.

ತನಿಖೆ ನಡೆಸಿರುವ ಪೊಲೀಸರಿಗೆ, ಮನೆಯಲ್ಲಿ ಕಳ್ಳ ಬರೆದಿರುವ ಪತ್ರ ದೊರೆತಿದೆ. “ಕ್ಷಮಿಸು ಗೆಳೆಯ..  ಅನಿವಾರ್ಯ ಕಾರಣಗಳಿಂದ ಮತ್ತು ಅಸಹಾಯಕತೆಯಿಂದ ನಾನು ನಿಮ್ಮ ಮನೆ ಕಳ್ಳತನ ಮಾಡಿದ್ದೇನೆ” ಎಂದು ಬರೆಯಲಾಗಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ಒಂದೇ ಕುಟುಂಬದ ಐವರನ್ನು ಕೊಲೆಗೈದು 8 ಅಡಿ ಆಳದ ಗುಂಡಿಯಲ್ಲಿ ಹೂತಿದ್ದ ಕೊಲೆಗಡುಕರು

“ಇಂತಹ ಕೃತ್ಯವನ್ನು ನಾನು ಎಂದೂ ಮಾಡಿಲ್ಲ. ಆದರೆ, ನನ್ನ ಸ್ನೇಹಿತನ ಜೀವವನ್ನು ಉಳಿಸಲು ನಾನು ಈ ಕೆಲಸ ಮಾಡಬೇಕಾಗಿದೆ. ಕಳ್ಳತನ ಮಾಡಿದಂತಹ ಬೆಲೆಬಾಳುವ ಆಭರಣಗಳು ಮತ್ತು ದುಡ್ಡನ್ನು ಅತಿ ಬೇಗನೆ ಹಿಂದಿರುಗಿಸುತ್ತೇನೆ. ನಾನು ಕಳ್ಳತನ ಮಾಡದೆ ಇದ್ದರೆ ನನ್ನ ಸ್ನೇಹಿತನ ಪ್ರಾಣ ಉಳಿಸುವುದು ಕಷ್ಟ” ಎಂದು ಪತ್ರ ಬರೆದಿಟ್ಟು ಹೋಗಿದ್ದಾನೆ.

ಮನೆಯಲ್ಲಿದ್ದ ಕಮಲೇಶ್ ಕಠಾರೆ ಪತ್ನಿ ಮತ್ತು ಮಕ್ಕಳು ತಮ್ಮ ಸಂಬಂಧಿಕರ ಮನೆಗೆ ಜೂನ್ 30ಕ್ಕೆ ತೆರಳಿದ್ದರು. ಸೋಮವಾರ ರಾತ್ರಿ ಮನೆಗೆ ಹಿಂದಿರುಗಿದಾಗ ಮನೆಯ ಬೀಗ ಮುರಿದು ಮನೆಯಲ್ಲಿದ್ದ ಎಲ್ಲಾ ವಸ್ತುಗಳು ಚೆಲ್ಲಾಪಿಲ್ಲಿಯಾಗಿರುವುದನ್ನು ಗಮನಿಸಿದ್ದಾರೆ. ಮನೆಯಲ್ಲಿದ್ದ ಬೆಳ್ಳಿ, ಬಂಗಾರ ಮತ್ತು ಹಣವನ್ನು ಕಳ್ಳತನ ಮಾಡಿರುವುದು ಕಂಡು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಇನ್ನು ಕ್ಷಮಾಪಣೆ ಪತ್ರವನ್ನು ನೋಡಿದ ಪೊಲೀಸರು ಈ ಕೃತ್ಯದಲ್ಲಿ ದೂರದ ಸಂಬಂಧಿಕರ ಕೈವಾಡ ಇರಬಹುದೆಂದು ಶಂಕಿಸಿ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಈ ಹಿಂದೆ ಹರಿಯಾಣದ ಜಿಂದ್‌ನಲ್ಲಿ 1,700 ಡೋಸ್‌ಗಳಷ್ಟು ಕೊರೊನಾ ಲಸಿಕೆಗಳು ಇದ್ದ ಬ್ಯಾಗ್ ಕದ್ದು ಪರಾರಿಯಾಗಿದ್ದ ಕಳ್ಳ, ವಾಪಸ್ ತಂದು ಇಟ್ಟು ಕ್ಷಮೆ ಕೇಳಿರುವ ಘಟನೆ ನಡೆದಿತ್ತು. “ಕ್ಷಮಿಸಿ, ಇದು ಕೊರೊನಾಗೆ ಇರುವ ಔಷಧಿಗಳೆಂದು ನನಗೆ ತಿಳಿದಿರಲಿಲ್ಲ” ಎಂದು ಹಿಂದಿ ಭಾಷೆಯಲ್ಲಿ ಪತ್ರ ಬರೆದು ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಲಸಿಕೆಗಳಿಂದ ತುಂಬಿದ ಬ್ಯಾಗ್‌ ಪೊಲೀಸ್ ಠಾಣೆ ಬಳಿ ಅಂಗಡಿಯಲ್ಲಿದ್ದ ವ್ಯಕ್ತಿಗೆ ಕೊಟ್ಟು ಹೋಗಿದ್ದ ಘಟನೆ ನಡೆದಿತ್ತು.


ಇದನ್ನೂ ಓದಿ: ಮಧ್ಯಪ್ರದೇಶ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಆರ್‌ಎಸ್‌ಎಸ್‌ ಮುಖಂಡ, ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...