Homeಮುಖಪುಟಪೊಲೀಸ್ ಮನೆಯಲ್ಲಿ ಕಳ್ಳತನ ಮಾಡಿ, ಕ್ಷಮಿಸು ಗೆಳೆಯ ಎಂದು ಪತ್ರ ಬರೆದಿಟ್ಟ ಕಳ್ಳ

ಪೊಲೀಸ್ ಮನೆಯಲ್ಲಿ ಕಳ್ಳತನ ಮಾಡಿ, ಕ್ಷಮಿಸು ಗೆಳೆಯ ಎಂದು ಪತ್ರ ಬರೆದಿಟ್ಟ ಕಳ್ಳ

- Advertisement -
- Advertisement -

ಪೊಲೀಸ್ ಸಿಬ್ಬಂದಿಯೊಬ್ಬರ ಮನೆಯಲ್ಲಿ ಕಳ್ಳನೊಬ್ಬ ಕಳ್ಳತನ ಮಾಡಿ, ಕ್ಷಮಿಸು ಎಂದು ಕ್ಷಮಾಪಣಾ ಪತ್ರ ಬರೆದಿಟ್ಟು ಹೋಗಿರುವ ಘಟನೆ ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ನಡೆದಿದೆ.

ಛತ್ತೀಸ್‌ಗಢದ ಕೊತ್ವಾಲಿ ಪೊಲೀಸ್ ಸ್ಟೇಷನ್‌ನಲ್ಲಿ ಅಸಿಸ್ಟೆಂಟ್‌ ಸಬ್ ಇನ್ಸ್‌ಪೆಕ್ಟರ್‌ ಆಗಿ ಕಾರ್ಯ ನಿರ್ವಹಿಸುತ್ತಿರುವ ಕಮಲೇಶ್ ಕಠಾರೆ ಮನೆಯಲ್ಲಿ ಕಳ್ಳತನ ನಡೆದಿತ್ತು. ಕಮಲೇಶ್ ಕಠಾರೆ ಅವರ ಕುಟುಂಬವು ಭಿಂದ್‌ನಲ್ಲಿ ನೆಲೆಸಿದೆ.

ತನಿಖೆ ನಡೆಸಿರುವ ಪೊಲೀಸರಿಗೆ, ಮನೆಯಲ್ಲಿ ಕಳ್ಳ ಬರೆದಿರುವ ಪತ್ರ ದೊರೆತಿದೆ. “ಕ್ಷಮಿಸು ಗೆಳೆಯ..  ಅನಿವಾರ್ಯ ಕಾರಣಗಳಿಂದ ಮತ್ತು ಅಸಹಾಯಕತೆಯಿಂದ ನಾನು ನಿಮ್ಮ ಮನೆ ಕಳ್ಳತನ ಮಾಡಿದ್ದೇನೆ” ಎಂದು ಬರೆಯಲಾಗಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ಒಂದೇ ಕುಟುಂಬದ ಐವರನ್ನು ಕೊಲೆಗೈದು 8 ಅಡಿ ಆಳದ ಗುಂಡಿಯಲ್ಲಿ ಹೂತಿದ್ದ ಕೊಲೆಗಡುಕರು

“ಇಂತಹ ಕೃತ್ಯವನ್ನು ನಾನು ಎಂದೂ ಮಾಡಿಲ್ಲ. ಆದರೆ, ನನ್ನ ಸ್ನೇಹಿತನ ಜೀವವನ್ನು ಉಳಿಸಲು ನಾನು ಈ ಕೆಲಸ ಮಾಡಬೇಕಾಗಿದೆ. ಕಳ್ಳತನ ಮಾಡಿದಂತಹ ಬೆಲೆಬಾಳುವ ಆಭರಣಗಳು ಮತ್ತು ದುಡ್ಡನ್ನು ಅತಿ ಬೇಗನೆ ಹಿಂದಿರುಗಿಸುತ್ತೇನೆ. ನಾನು ಕಳ್ಳತನ ಮಾಡದೆ ಇದ್ದರೆ ನನ್ನ ಸ್ನೇಹಿತನ ಪ್ರಾಣ ಉಳಿಸುವುದು ಕಷ್ಟ” ಎಂದು ಪತ್ರ ಬರೆದಿಟ್ಟು ಹೋಗಿದ್ದಾನೆ.

ಮನೆಯಲ್ಲಿದ್ದ ಕಮಲೇಶ್ ಕಠಾರೆ ಪತ್ನಿ ಮತ್ತು ಮಕ್ಕಳು ತಮ್ಮ ಸಂಬಂಧಿಕರ ಮನೆಗೆ ಜೂನ್ 30ಕ್ಕೆ ತೆರಳಿದ್ದರು. ಸೋಮವಾರ ರಾತ್ರಿ ಮನೆಗೆ ಹಿಂದಿರುಗಿದಾಗ ಮನೆಯ ಬೀಗ ಮುರಿದು ಮನೆಯಲ್ಲಿದ್ದ ಎಲ್ಲಾ ವಸ್ತುಗಳು ಚೆಲ್ಲಾಪಿಲ್ಲಿಯಾಗಿರುವುದನ್ನು ಗಮನಿಸಿದ್ದಾರೆ. ಮನೆಯಲ್ಲಿದ್ದ ಬೆಳ್ಳಿ, ಬಂಗಾರ ಮತ್ತು ಹಣವನ್ನು ಕಳ್ಳತನ ಮಾಡಿರುವುದು ಕಂಡು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಇನ್ನು ಕ್ಷಮಾಪಣೆ ಪತ್ರವನ್ನು ನೋಡಿದ ಪೊಲೀಸರು ಈ ಕೃತ್ಯದಲ್ಲಿ ದೂರದ ಸಂಬಂಧಿಕರ ಕೈವಾಡ ಇರಬಹುದೆಂದು ಶಂಕಿಸಿ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಈ ಹಿಂದೆ ಹರಿಯಾಣದ ಜಿಂದ್‌ನಲ್ಲಿ 1,700 ಡೋಸ್‌ಗಳಷ್ಟು ಕೊರೊನಾ ಲಸಿಕೆಗಳು ಇದ್ದ ಬ್ಯಾಗ್ ಕದ್ದು ಪರಾರಿಯಾಗಿದ್ದ ಕಳ್ಳ, ವಾಪಸ್ ತಂದು ಇಟ್ಟು ಕ್ಷಮೆ ಕೇಳಿರುವ ಘಟನೆ ನಡೆದಿತ್ತು. “ಕ್ಷಮಿಸಿ, ಇದು ಕೊರೊನಾಗೆ ಇರುವ ಔಷಧಿಗಳೆಂದು ನನಗೆ ತಿಳಿದಿರಲಿಲ್ಲ” ಎಂದು ಹಿಂದಿ ಭಾಷೆಯಲ್ಲಿ ಪತ್ರ ಬರೆದು ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಲಸಿಕೆಗಳಿಂದ ತುಂಬಿದ ಬ್ಯಾಗ್‌ ಪೊಲೀಸ್ ಠಾಣೆ ಬಳಿ ಅಂಗಡಿಯಲ್ಲಿದ್ದ ವ್ಯಕ್ತಿಗೆ ಕೊಟ್ಟು ಹೋಗಿದ್ದ ಘಟನೆ ನಡೆದಿತ್ತು.


ಇದನ್ನೂ ಓದಿ: ಮಧ್ಯಪ್ರದೇಶ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಆರ್‌ಎಸ್‌ಎಸ್‌ ಮುಖಂಡ, ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...