Homeಮುಖಪುಟಪೊಲೀಸ್ ಮನೆಯಲ್ಲಿ ಕಳ್ಳತನ ಮಾಡಿ, ಕ್ಷಮಿಸು ಗೆಳೆಯ ಎಂದು ಪತ್ರ ಬರೆದಿಟ್ಟ ಕಳ್ಳ

ಪೊಲೀಸ್ ಮನೆಯಲ್ಲಿ ಕಳ್ಳತನ ಮಾಡಿ, ಕ್ಷಮಿಸು ಗೆಳೆಯ ಎಂದು ಪತ್ರ ಬರೆದಿಟ್ಟ ಕಳ್ಳ

- Advertisement -
- Advertisement -

ಪೊಲೀಸ್ ಸಿಬ್ಬಂದಿಯೊಬ್ಬರ ಮನೆಯಲ್ಲಿ ಕಳ್ಳನೊಬ್ಬ ಕಳ್ಳತನ ಮಾಡಿ, ಕ್ಷಮಿಸು ಎಂದು ಕ್ಷಮಾಪಣಾ ಪತ್ರ ಬರೆದಿಟ್ಟು ಹೋಗಿರುವ ಘಟನೆ ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ನಡೆದಿದೆ.

ಛತ್ತೀಸ್‌ಗಢದ ಕೊತ್ವಾಲಿ ಪೊಲೀಸ್ ಸ್ಟೇಷನ್‌ನಲ್ಲಿ ಅಸಿಸ್ಟೆಂಟ್‌ ಸಬ್ ಇನ್ಸ್‌ಪೆಕ್ಟರ್‌ ಆಗಿ ಕಾರ್ಯ ನಿರ್ವಹಿಸುತ್ತಿರುವ ಕಮಲೇಶ್ ಕಠಾರೆ ಮನೆಯಲ್ಲಿ ಕಳ್ಳತನ ನಡೆದಿತ್ತು. ಕಮಲೇಶ್ ಕಠಾರೆ ಅವರ ಕುಟುಂಬವು ಭಿಂದ್‌ನಲ್ಲಿ ನೆಲೆಸಿದೆ.

ತನಿಖೆ ನಡೆಸಿರುವ ಪೊಲೀಸರಿಗೆ, ಮನೆಯಲ್ಲಿ ಕಳ್ಳ ಬರೆದಿರುವ ಪತ್ರ ದೊರೆತಿದೆ. “ಕ್ಷಮಿಸು ಗೆಳೆಯ..  ಅನಿವಾರ್ಯ ಕಾರಣಗಳಿಂದ ಮತ್ತು ಅಸಹಾಯಕತೆಯಿಂದ ನಾನು ನಿಮ್ಮ ಮನೆ ಕಳ್ಳತನ ಮಾಡಿದ್ದೇನೆ” ಎಂದು ಬರೆಯಲಾಗಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ಒಂದೇ ಕುಟುಂಬದ ಐವರನ್ನು ಕೊಲೆಗೈದು 8 ಅಡಿ ಆಳದ ಗುಂಡಿಯಲ್ಲಿ ಹೂತಿದ್ದ ಕೊಲೆಗಡುಕರು

“ಇಂತಹ ಕೃತ್ಯವನ್ನು ನಾನು ಎಂದೂ ಮಾಡಿಲ್ಲ. ಆದರೆ, ನನ್ನ ಸ್ನೇಹಿತನ ಜೀವವನ್ನು ಉಳಿಸಲು ನಾನು ಈ ಕೆಲಸ ಮಾಡಬೇಕಾಗಿದೆ. ಕಳ್ಳತನ ಮಾಡಿದಂತಹ ಬೆಲೆಬಾಳುವ ಆಭರಣಗಳು ಮತ್ತು ದುಡ್ಡನ್ನು ಅತಿ ಬೇಗನೆ ಹಿಂದಿರುಗಿಸುತ್ತೇನೆ. ನಾನು ಕಳ್ಳತನ ಮಾಡದೆ ಇದ್ದರೆ ನನ್ನ ಸ್ನೇಹಿತನ ಪ್ರಾಣ ಉಳಿಸುವುದು ಕಷ್ಟ” ಎಂದು ಪತ್ರ ಬರೆದಿಟ್ಟು ಹೋಗಿದ್ದಾನೆ.

ಮನೆಯಲ್ಲಿದ್ದ ಕಮಲೇಶ್ ಕಠಾರೆ ಪತ್ನಿ ಮತ್ತು ಮಕ್ಕಳು ತಮ್ಮ ಸಂಬಂಧಿಕರ ಮನೆಗೆ ಜೂನ್ 30ಕ್ಕೆ ತೆರಳಿದ್ದರು. ಸೋಮವಾರ ರಾತ್ರಿ ಮನೆಗೆ ಹಿಂದಿರುಗಿದಾಗ ಮನೆಯ ಬೀಗ ಮುರಿದು ಮನೆಯಲ್ಲಿದ್ದ ಎಲ್ಲಾ ವಸ್ತುಗಳು ಚೆಲ್ಲಾಪಿಲ್ಲಿಯಾಗಿರುವುದನ್ನು ಗಮನಿಸಿದ್ದಾರೆ. ಮನೆಯಲ್ಲಿದ್ದ ಬೆಳ್ಳಿ, ಬಂಗಾರ ಮತ್ತು ಹಣವನ್ನು ಕಳ್ಳತನ ಮಾಡಿರುವುದು ಕಂಡು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಇನ್ನು ಕ್ಷಮಾಪಣೆ ಪತ್ರವನ್ನು ನೋಡಿದ ಪೊಲೀಸರು ಈ ಕೃತ್ಯದಲ್ಲಿ ದೂರದ ಸಂಬಂಧಿಕರ ಕೈವಾಡ ಇರಬಹುದೆಂದು ಶಂಕಿಸಿ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಈ ಹಿಂದೆ ಹರಿಯಾಣದ ಜಿಂದ್‌ನಲ್ಲಿ 1,700 ಡೋಸ್‌ಗಳಷ್ಟು ಕೊರೊನಾ ಲಸಿಕೆಗಳು ಇದ್ದ ಬ್ಯಾಗ್ ಕದ್ದು ಪರಾರಿಯಾಗಿದ್ದ ಕಳ್ಳ, ವಾಪಸ್ ತಂದು ಇಟ್ಟು ಕ್ಷಮೆ ಕೇಳಿರುವ ಘಟನೆ ನಡೆದಿತ್ತು. “ಕ್ಷಮಿಸಿ, ಇದು ಕೊರೊನಾಗೆ ಇರುವ ಔಷಧಿಗಳೆಂದು ನನಗೆ ತಿಳಿದಿರಲಿಲ್ಲ” ಎಂದು ಹಿಂದಿ ಭಾಷೆಯಲ್ಲಿ ಪತ್ರ ಬರೆದು ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಲಸಿಕೆಗಳಿಂದ ತುಂಬಿದ ಬ್ಯಾಗ್‌ ಪೊಲೀಸ್ ಠಾಣೆ ಬಳಿ ಅಂಗಡಿಯಲ್ಲಿದ್ದ ವ್ಯಕ್ತಿಗೆ ಕೊಟ್ಟು ಹೋಗಿದ್ದ ಘಟನೆ ನಡೆದಿತ್ತು.


ಇದನ್ನೂ ಓದಿ: ಮಧ್ಯಪ್ರದೇಶ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಆರ್‌ಎಸ್‌ಎಸ್‌ ಮುಖಂಡ, ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...