Homeಮುಖಪುಟಮಹಾರಾಷ್ಟ್ರ ಚುನಾವಣೆ: ಬಿಜೆಪಿ, ಶಿವಸೇನೆ ಮೈತ್ರಿ ನಡುವೆ ಬಿರುಕು..

ಮಹಾರಾಷ್ಟ್ರ ಚುನಾವಣೆ: ಬಿಜೆಪಿ, ಶಿವಸೇನೆ ಮೈತ್ರಿ ನಡುವೆ ಬಿರುಕು..

- Advertisement -
- Advertisement -

ಮಹಾರಾಷ್ಟ್ರದ ಆಡಳಿತಾರೂಡ ಬಿಜೆಪಿ ಮತ್ತು ಶಿವಸೇನೆ ಪಕ್ಷಗಳು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯ ಮೈತ್ರಿಯಲ್ಲಿ ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಕಾಂಗ್ರೆಸ್ ಮತ್ತು ಶರದ್ ಪವಾರ್ ಅವರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್.ಸಿ.ಪಿ) ಸುಮಾರು 30 ನಾಯಕರು ಬಿಜೆಪಿ ಸೇರಿದ್ದಾರೆ. ಇದರಿಂದಾಗಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ ಪಕ್ಷಗಳು ಮೈತ್ರಿಕೂಟವಾಗಿ ಸ್ಪರ್ಧಿಸುತ್ತವೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅವರು ಹಾಗೆ ಮಾಡಿದರೆ, ಈಗ ಬಿಜೆಪಿ ಸೇರಿರುವ ನಾಯಕರಿಗೆ ಟಿಕೆಟ್ ಕೊಡುವುದು ವಾಗುತ್ತದೆ.

ಜೊತೆಗೆ ಮುಖ್ಯಮಂತ್ರಿ ಹುದ್ದೆಯ ಮೇಲೆ ಉಭಯ ಪಕ್ಷಗಳು ಕಣ್ಣಿಟ್ಟಿವೆ. ಟಿಕೆಟ್ ಹಂಚಿಕೆ ಮತ್ತು ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿಯಿಂದಾಗಿ ಕೊನೆಗೆ ಈ ಚುನಾವಣೆಯು ಬಿಜೆಪಿ ಮತ್ತು ಶಿವಸೇನೆ ನಡುವಿನ ಯುದ್ಧವಾಗಿ ಕೊನೆಗೊಳ್ಳಬಹುದು ಎಂಬ ಉಹಾಪೋಹಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ. ಮೈತ್ರಿ ಮುರಿದುಕೊಳ್ಳಲು ಶಿವಸೇನಾ ಉತ್ಸುಕನಾಗಿಲ್ಲ. ಆದರೆ ಅಂತಿಮವಾಗಿ ಅಂತಹ ಪರಿಸ್ಥಿತಿ ಬಂದರೆ ಹೇಗೆ ಎದುರಿಸಬೇಕು ಎಂಬುದರ ಕುರಿತಾಗಿ ಈಗಾಗಲೇ ಸಿದ್ಧತೆ ನಡೆಸುತ್ತಿದೆ.

ಬಿಜೆಪಿ ಈಗ “ದೊಡ್ಡಣ್ಣನಂತೆ” ವರ್ತಿಸುತ್ತಿದೆ. ಜೊತೆಗೆ ರಾಜ್ಯದ 288 ಸ್ಥಾನಗಳಲ್ಲಿ 120 ಕ್ಕಿಂತ ಹೆಚ್ಚಿನದನ್ನು ಶಿವಸೇನೆಗೆ ನೀಡಬಾರದು ಎಂದು ಬಿಜೆಪಿ ಭಾವಿಸಿದೆ. ಬೃಹತ್ ಸಂಪನ್ಮೂಲಗಳನ್ನು ಹೊಂದಿರುವ ಇದು ತನ್ನದೇ ಸ್ವಂತ ಬಲದಲ್ಲಿ ಬಹುಮತವನ್ನು ಗಳಿಸಬಹುದು ಮತ್ತು ತನ್ನ ಉದ್ರಿಕ್ತ ಮಿತ್ರನನ್ನು ಸೋಲಿಸಬಹುದೆಂದು ಭಾವಿಸುತ್ತಿದೆ. ಆದರೆ ಇದು ಈಗಲೂ ಆರೆ ಕಾಲೋನಿಯಲ್ಲಿ ಮರಗಳನ್ನು ಕಡಿಯುವುದರ ವಿರುದ್ಧ ಮತ್ತು ಆರ್ಥಿಕತೆಯ ಬಗ್ಗೆ ಸರ್ಕಾರ ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ರವರ ಮಾತನ್ನು ಕೇಳಬೇಕು ಮುಂತಾದ ವಿಷಯಗಳ ಬಗ್ಗೆ ಟೀಕೆಯನ್ನು ಎದುರಿಸುತ್ತಿದೆ.

ಮೈತ್ರಿಕೂಟವನ್ನು ಮುರಿಯಲು ಶಿವಸೇನೆ ಉತ್ಸುಕನಾಗಿಲ್ಲ. ಆದರೆ ಅದು ಏಕಾಂಗಿಯಾಗಿ ಹೋಗುವ ಸಾಧ್ಯತೆಗಾಗಿ ತಯಾರಿ ನಡೆಸುತ್ತಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಮೈತ್ರಿಯನ್ನು ಮುಂದುವರಿಸಲು ಉತ್ಸುಕರಾಗಿದ್ದಾರೆ. “ಮೈತ್ರಿಕೂಟದಲ್ಲಿ ಹೋರಾಡಬೇಕಾದರೆ ನಾವು ಕೆಲವನ್ನು ಪಡೆಯುತ್ತೇವೆ ಮತ್ತು ಕೆಲವನ್ನು ಪಡೆಯುವುದಿಲ್ಲ. ಅದರ ಬಗ್ಗೆ ನಮಗೆ ಚಿಂತೆ ಇಲ್ಲ” ಎಂದು ಹೇಳಿದ್ದಾರೆ. ಆದರೆ ರಾಜ್ಯ ಬಿಜೆಪಿ 50-50 ಸ್ಥಾನಗಳ ಹಂಚಿಕೆ ಒಪ್ಪಂದಕ್ಕೆ ಸಿದ್ಧವಾಗಿಲ್ಲ ಎಂದು ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಆಪ್ತ ಸಹಾಯಕರಿಗೆ ತಿಳಿಸಿದ್ದಾರೆ.

ಸೀಟು ಹಂಚಿಕೆ ಬಗ್ಗೆ ಕೇಳಿದಾಗ, ಉದ್ಧವ್ ಠಾಕ್ರೆ “ನಮ್ಮ ನಡುವಿನ ಎಲ್ಲವನ್ನೂ ಈಗಾಗಲೇ ನಿರ್ಧರಿಸಲಾಗಿದೆ”. “ಮುಖ್ಯಮಂತ್ರಿಯವರು ಶಿವಸೇನೆ ಅಭ್ಯರ್ಥಿಗಳ ಪಟ್ಟಿಯನ್ನು ಮತ್ತು ಸ್ಪರ್ಧಿಸಬಹುದಾದ ಸ್ಥಾನಗಳನ್ನು ಸಿದ್ಧಪಡಿಸುವವರೆಗೆ ನಾನು ಕಾಯುತ್ತೇನೆ. ನಂತರ ನಾನು ಆ ಪಟ್ಟಿಯನ್ನು ನಮ್ಮ ಪಕ್ಷದ ಮುಂದೆ ಇಡುತ್ತೇನೆ ಮತ್ತು ನಾವು ನಿರ್ಧರಿಸುತ್ತೇವೆ” ಎಂದು ಹೇಳಿದ್ದಾರೆ.

ಪಕ್ಷದ ಮುಖವಾಣಿ ಸಾಮ್ನಾದಲ್ಲಿ, ಕೈಗಾರಿಕಾ ಮತ್ತು ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರ ಐನ್ಸ್ ಸ್ಟೀನ್ ಗುರುತ್ವಾಕರ್ಷಣೆಯನ್ನು ಕಂಡುಹಿಡಿದಿದ್ದಾರೆ ಮತ್ತು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ವಾಹನ ಮಾರಾಟದಲ್ಲಿನ ಕುಸಿತಕ್ಕೆ ಮಿಲೇನಿಯಮ್ಸ್ ಕಾರಣವಾಗಿದ್ದಾರೆ ಎಂಬ ಹೇಳಿಕೆಗಳನ್ನು ತೀವ್ರವಾಗಿ ಟೀಕಿಸಲಾಗಿದೆ.

“ಲೋಕಸಭಾ ಚುನಾವಣೆಗೆ ಮೈತ್ರಿ ಘೋಷಿಸುವ ಮೊದಲು ಶಿವಸೇನೆಯವರು ಪ್ರಧಾನಿ ಮೋದಿಯವರ ಮೇಲೆ ಹೇಗೆ ದಾಳಿ ನಡೆಸಿದರು ಎಂಬುದನ್ನು ನಾವು ಮರೆತಿಲ್ಲ” ಎಂದು ಬಿಜೆಪಿಯ ಉನ್ನತ ನಾಯಕರೊಬ್ಬರು ಹೇಳಿಕೆ ನೀಡಿದ್ದಾರೆ. ಈ ನಡೆಗಳು ಇವರ ನಡುವೆ ಎಲ್ಲವೂ ಸರಿಯಿಲ್ಲ ಎಂಬುದನ್ನು ತೋರಿಸುತ್ತಿದ್ದು ಇದು ಯಾವಾಗ ಬೇಕಾದರೂ ಸ್ಫೋಟಗೊಳ್ಳಬಹದು ಅಥವಾ ಇದುವರೆಗೂ ಆಗಿರುವಂತೆ ಸ್ಪೋಟಗೊಳ್ಳದೆ ಇರಬಹದು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...