Homeಮುಖಪುಟಮಹಾರಾಷ್ಟ್ರ ಚುನಾವಣೆ: ಬಿಜೆಪಿ, ಶಿವಸೇನೆ ಮೈತ್ರಿ ನಡುವೆ ಬಿರುಕು..

ಮಹಾರಾಷ್ಟ್ರ ಚುನಾವಣೆ: ಬಿಜೆಪಿ, ಶಿವಸೇನೆ ಮೈತ್ರಿ ನಡುವೆ ಬಿರುಕು..

- Advertisement -
- Advertisement -

ಮಹಾರಾಷ್ಟ್ರದ ಆಡಳಿತಾರೂಡ ಬಿಜೆಪಿ ಮತ್ತು ಶಿವಸೇನೆ ಪಕ್ಷಗಳು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯ ಮೈತ್ರಿಯಲ್ಲಿ ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಕಾಂಗ್ರೆಸ್ ಮತ್ತು ಶರದ್ ಪವಾರ್ ಅವರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್.ಸಿ.ಪಿ) ಸುಮಾರು 30 ನಾಯಕರು ಬಿಜೆಪಿ ಸೇರಿದ್ದಾರೆ. ಇದರಿಂದಾಗಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ ಪಕ್ಷಗಳು ಮೈತ್ರಿಕೂಟವಾಗಿ ಸ್ಪರ್ಧಿಸುತ್ತವೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅವರು ಹಾಗೆ ಮಾಡಿದರೆ, ಈಗ ಬಿಜೆಪಿ ಸೇರಿರುವ ನಾಯಕರಿಗೆ ಟಿಕೆಟ್ ಕೊಡುವುದು ವಾಗುತ್ತದೆ.

ಜೊತೆಗೆ ಮುಖ್ಯಮಂತ್ರಿ ಹುದ್ದೆಯ ಮೇಲೆ ಉಭಯ ಪಕ್ಷಗಳು ಕಣ್ಣಿಟ್ಟಿವೆ. ಟಿಕೆಟ್ ಹಂಚಿಕೆ ಮತ್ತು ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿಯಿಂದಾಗಿ ಕೊನೆಗೆ ಈ ಚುನಾವಣೆಯು ಬಿಜೆಪಿ ಮತ್ತು ಶಿವಸೇನೆ ನಡುವಿನ ಯುದ್ಧವಾಗಿ ಕೊನೆಗೊಳ್ಳಬಹುದು ಎಂಬ ಉಹಾಪೋಹಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ. ಮೈತ್ರಿ ಮುರಿದುಕೊಳ್ಳಲು ಶಿವಸೇನಾ ಉತ್ಸುಕನಾಗಿಲ್ಲ. ಆದರೆ ಅಂತಿಮವಾಗಿ ಅಂತಹ ಪರಿಸ್ಥಿತಿ ಬಂದರೆ ಹೇಗೆ ಎದುರಿಸಬೇಕು ಎಂಬುದರ ಕುರಿತಾಗಿ ಈಗಾಗಲೇ ಸಿದ್ಧತೆ ನಡೆಸುತ್ತಿದೆ.

ಬಿಜೆಪಿ ಈಗ “ದೊಡ್ಡಣ್ಣನಂತೆ” ವರ್ತಿಸುತ್ತಿದೆ. ಜೊತೆಗೆ ರಾಜ್ಯದ 288 ಸ್ಥಾನಗಳಲ್ಲಿ 120 ಕ್ಕಿಂತ ಹೆಚ್ಚಿನದನ್ನು ಶಿವಸೇನೆಗೆ ನೀಡಬಾರದು ಎಂದು ಬಿಜೆಪಿ ಭಾವಿಸಿದೆ. ಬೃಹತ್ ಸಂಪನ್ಮೂಲಗಳನ್ನು ಹೊಂದಿರುವ ಇದು ತನ್ನದೇ ಸ್ವಂತ ಬಲದಲ್ಲಿ ಬಹುಮತವನ್ನು ಗಳಿಸಬಹುದು ಮತ್ತು ತನ್ನ ಉದ್ರಿಕ್ತ ಮಿತ್ರನನ್ನು ಸೋಲಿಸಬಹುದೆಂದು ಭಾವಿಸುತ್ತಿದೆ. ಆದರೆ ಇದು ಈಗಲೂ ಆರೆ ಕಾಲೋನಿಯಲ್ಲಿ ಮರಗಳನ್ನು ಕಡಿಯುವುದರ ವಿರುದ್ಧ ಮತ್ತು ಆರ್ಥಿಕತೆಯ ಬಗ್ಗೆ ಸರ್ಕಾರ ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ರವರ ಮಾತನ್ನು ಕೇಳಬೇಕು ಮುಂತಾದ ವಿಷಯಗಳ ಬಗ್ಗೆ ಟೀಕೆಯನ್ನು ಎದುರಿಸುತ್ತಿದೆ.

ಮೈತ್ರಿಕೂಟವನ್ನು ಮುರಿಯಲು ಶಿವಸೇನೆ ಉತ್ಸುಕನಾಗಿಲ್ಲ. ಆದರೆ ಅದು ಏಕಾಂಗಿಯಾಗಿ ಹೋಗುವ ಸಾಧ್ಯತೆಗಾಗಿ ತಯಾರಿ ನಡೆಸುತ್ತಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಮೈತ್ರಿಯನ್ನು ಮುಂದುವರಿಸಲು ಉತ್ಸುಕರಾಗಿದ್ದಾರೆ. “ಮೈತ್ರಿಕೂಟದಲ್ಲಿ ಹೋರಾಡಬೇಕಾದರೆ ನಾವು ಕೆಲವನ್ನು ಪಡೆಯುತ್ತೇವೆ ಮತ್ತು ಕೆಲವನ್ನು ಪಡೆಯುವುದಿಲ್ಲ. ಅದರ ಬಗ್ಗೆ ನಮಗೆ ಚಿಂತೆ ಇಲ್ಲ” ಎಂದು ಹೇಳಿದ್ದಾರೆ. ಆದರೆ ರಾಜ್ಯ ಬಿಜೆಪಿ 50-50 ಸ್ಥಾನಗಳ ಹಂಚಿಕೆ ಒಪ್ಪಂದಕ್ಕೆ ಸಿದ್ಧವಾಗಿಲ್ಲ ಎಂದು ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಆಪ್ತ ಸಹಾಯಕರಿಗೆ ತಿಳಿಸಿದ್ದಾರೆ.

ಸೀಟು ಹಂಚಿಕೆ ಬಗ್ಗೆ ಕೇಳಿದಾಗ, ಉದ್ಧವ್ ಠಾಕ್ರೆ “ನಮ್ಮ ನಡುವಿನ ಎಲ್ಲವನ್ನೂ ಈಗಾಗಲೇ ನಿರ್ಧರಿಸಲಾಗಿದೆ”. “ಮುಖ್ಯಮಂತ್ರಿಯವರು ಶಿವಸೇನೆ ಅಭ್ಯರ್ಥಿಗಳ ಪಟ್ಟಿಯನ್ನು ಮತ್ತು ಸ್ಪರ್ಧಿಸಬಹುದಾದ ಸ್ಥಾನಗಳನ್ನು ಸಿದ್ಧಪಡಿಸುವವರೆಗೆ ನಾನು ಕಾಯುತ್ತೇನೆ. ನಂತರ ನಾನು ಆ ಪಟ್ಟಿಯನ್ನು ನಮ್ಮ ಪಕ್ಷದ ಮುಂದೆ ಇಡುತ್ತೇನೆ ಮತ್ತು ನಾವು ನಿರ್ಧರಿಸುತ್ತೇವೆ” ಎಂದು ಹೇಳಿದ್ದಾರೆ.

ಪಕ್ಷದ ಮುಖವಾಣಿ ಸಾಮ್ನಾದಲ್ಲಿ, ಕೈಗಾರಿಕಾ ಮತ್ತು ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರ ಐನ್ಸ್ ಸ್ಟೀನ್ ಗುರುತ್ವಾಕರ್ಷಣೆಯನ್ನು ಕಂಡುಹಿಡಿದಿದ್ದಾರೆ ಮತ್ತು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ವಾಹನ ಮಾರಾಟದಲ್ಲಿನ ಕುಸಿತಕ್ಕೆ ಮಿಲೇನಿಯಮ್ಸ್ ಕಾರಣವಾಗಿದ್ದಾರೆ ಎಂಬ ಹೇಳಿಕೆಗಳನ್ನು ತೀವ್ರವಾಗಿ ಟೀಕಿಸಲಾಗಿದೆ.

“ಲೋಕಸಭಾ ಚುನಾವಣೆಗೆ ಮೈತ್ರಿ ಘೋಷಿಸುವ ಮೊದಲು ಶಿವಸೇನೆಯವರು ಪ್ರಧಾನಿ ಮೋದಿಯವರ ಮೇಲೆ ಹೇಗೆ ದಾಳಿ ನಡೆಸಿದರು ಎಂಬುದನ್ನು ನಾವು ಮರೆತಿಲ್ಲ” ಎಂದು ಬಿಜೆಪಿಯ ಉನ್ನತ ನಾಯಕರೊಬ್ಬರು ಹೇಳಿಕೆ ನೀಡಿದ್ದಾರೆ. ಈ ನಡೆಗಳು ಇವರ ನಡುವೆ ಎಲ್ಲವೂ ಸರಿಯಿಲ್ಲ ಎಂಬುದನ್ನು ತೋರಿಸುತ್ತಿದ್ದು ಇದು ಯಾವಾಗ ಬೇಕಾದರೂ ಸ್ಫೋಟಗೊಳ್ಳಬಹದು ಅಥವಾ ಇದುವರೆಗೂ ಆಗಿರುವಂತೆ ಸ್ಪೋಟಗೊಳ್ಳದೆ ಇರಬಹದು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...