Homeಮುಖಪುಟಮಹಾರಾಷ್ಟ್ರ ಚುನಾವಣೆ: ಬಿಜೆಪಿ, ಶಿವಸೇನೆ ಮೈತ್ರಿ ನಡುವೆ ಬಿರುಕು..

ಮಹಾರಾಷ್ಟ್ರ ಚುನಾವಣೆ: ಬಿಜೆಪಿ, ಶಿವಸೇನೆ ಮೈತ್ರಿ ನಡುವೆ ಬಿರುಕು..

- Advertisement -
- Advertisement -

ಮಹಾರಾಷ್ಟ್ರದ ಆಡಳಿತಾರೂಡ ಬಿಜೆಪಿ ಮತ್ತು ಶಿವಸೇನೆ ಪಕ್ಷಗಳು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯ ಮೈತ್ರಿಯಲ್ಲಿ ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಕಾಂಗ್ರೆಸ್ ಮತ್ತು ಶರದ್ ಪವಾರ್ ಅವರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್.ಸಿ.ಪಿ) ಸುಮಾರು 30 ನಾಯಕರು ಬಿಜೆಪಿ ಸೇರಿದ್ದಾರೆ. ಇದರಿಂದಾಗಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ ಪಕ್ಷಗಳು ಮೈತ್ರಿಕೂಟವಾಗಿ ಸ್ಪರ್ಧಿಸುತ್ತವೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅವರು ಹಾಗೆ ಮಾಡಿದರೆ, ಈಗ ಬಿಜೆಪಿ ಸೇರಿರುವ ನಾಯಕರಿಗೆ ಟಿಕೆಟ್ ಕೊಡುವುದು ವಾಗುತ್ತದೆ.

ಜೊತೆಗೆ ಮುಖ್ಯಮಂತ್ರಿ ಹುದ್ದೆಯ ಮೇಲೆ ಉಭಯ ಪಕ್ಷಗಳು ಕಣ್ಣಿಟ್ಟಿವೆ. ಟಿಕೆಟ್ ಹಂಚಿಕೆ ಮತ್ತು ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿಯಿಂದಾಗಿ ಕೊನೆಗೆ ಈ ಚುನಾವಣೆಯು ಬಿಜೆಪಿ ಮತ್ತು ಶಿವಸೇನೆ ನಡುವಿನ ಯುದ್ಧವಾಗಿ ಕೊನೆಗೊಳ್ಳಬಹುದು ಎಂಬ ಉಹಾಪೋಹಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ. ಮೈತ್ರಿ ಮುರಿದುಕೊಳ್ಳಲು ಶಿವಸೇನಾ ಉತ್ಸುಕನಾಗಿಲ್ಲ. ಆದರೆ ಅಂತಿಮವಾಗಿ ಅಂತಹ ಪರಿಸ್ಥಿತಿ ಬಂದರೆ ಹೇಗೆ ಎದುರಿಸಬೇಕು ಎಂಬುದರ ಕುರಿತಾಗಿ ಈಗಾಗಲೇ ಸಿದ್ಧತೆ ನಡೆಸುತ್ತಿದೆ.

ಬಿಜೆಪಿ ಈಗ “ದೊಡ್ಡಣ್ಣನಂತೆ” ವರ್ತಿಸುತ್ತಿದೆ. ಜೊತೆಗೆ ರಾಜ್ಯದ 288 ಸ್ಥಾನಗಳಲ್ಲಿ 120 ಕ್ಕಿಂತ ಹೆಚ್ಚಿನದನ್ನು ಶಿವಸೇನೆಗೆ ನೀಡಬಾರದು ಎಂದು ಬಿಜೆಪಿ ಭಾವಿಸಿದೆ. ಬೃಹತ್ ಸಂಪನ್ಮೂಲಗಳನ್ನು ಹೊಂದಿರುವ ಇದು ತನ್ನದೇ ಸ್ವಂತ ಬಲದಲ್ಲಿ ಬಹುಮತವನ್ನು ಗಳಿಸಬಹುದು ಮತ್ತು ತನ್ನ ಉದ್ರಿಕ್ತ ಮಿತ್ರನನ್ನು ಸೋಲಿಸಬಹುದೆಂದು ಭಾವಿಸುತ್ತಿದೆ. ಆದರೆ ಇದು ಈಗಲೂ ಆರೆ ಕಾಲೋನಿಯಲ್ಲಿ ಮರಗಳನ್ನು ಕಡಿಯುವುದರ ವಿರುದ್ಧ ಮತ್ತು ಆರ್ಥಿಕತೆಯ ಬಗ್ಗೆ ಸರ್ಕಾರ ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ರವರ ಮಾತನ್ನು ಕೇಳಬೇಕು ಮುಂತಾದ ವಿಷಯಗಳ ಬಗ್ಗೆ ಟೀಕೆಯನ್ನು ಎದುರಿಸುತ್ತಿದೆ.

ಮೈತ್ರಿಕೂಟವನ್ನು ಮುರಿಯಲು ಶಿವಸೇನೆ ಉತ್ಸುಕನಾಗಿಲ್ಲ. ಆದರೆ ಅದು ಏಕಾಂಗಿಯಾಗಿ ಹೋಗುವ ಸಾಧ್ಯತೆಗಾಗಿ ತಯಾರಿ ನಡೆಸುತ್ತಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಮೈತ್ರಿಯನ್ನು ಮುಂದುವರಿಸಲು ಉತ್ಸುಕರಾಗಿದ್ದಾರೆ. “ಮೈತ್ರಿಕೂಟದಲ್ಲಿ ಹೋರಾಡಬೇಕಾದರೆ ನಾವು ಕೆಲವನ್ನು ಪಡೆಯುತ್ತೇವೆ ಮತ್ತು ಕೆಲವನ್ನು ಪಡೆಯುವುದಿಲ್ಲ. ಅದರ ಬಗ್ಗೆ ನಮಗೆ ಚಿಂತೆ ಇಲ್ಲ” ಎಂದು ಹೇಳಿದ್ದಾರೆ. ಆದರೆ ರಾಜ್ಯ ಬಿಜೆಪಿ 50-50 ಸ್ಥಾನಗಳ ಹಂಚಿಕೆ ಒಪ್ಪಂದಕ್ಕೆ ಸಿದ್ಧವಾಗಿಲ್ಲ ಎಂದು ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಆಪ್ತ ಸಹಾಯಕರಿಗೆ ತಿಳಿಸಿದ್ದಾರೆ.

ಸೀಟು ಹಂಚಿಕೆ ಬಗ್ಗೆ ಕೇಳಿದಾಗ, ಉದ್ಧವ್ ಠಾಕ್ರೆ “ನಮ್ಮ ನಡುವಿನ ಎಲ್ಲವನ್ನೂ ಈಗಾಗಲೇ ನಿರ್ಧರಿಸಲಾಗಿದೆ”. “ಮುಖ್ಯಮಂತ್ರಿಯವರು ಶಿವಸೇನೆ ಅಭ್ಯರ್ಥಿಗಳ ಪಟ್ಟಿಯನ್ನು ಮತ್ತು ಸ್ಪರ್ಧಿಸಬಹುದಾದ ಸ್ಥಾನಗಳನ್ನು ಸಿದ್ಧಪಡಿಸುವವರೆಗೆ ನಾನು ಕಾಯುತ್ತೇನೆ. ನಂತರ ನಾನು ಆ ಪಟ್ಟಿಯನ್ನು ನಮ್ಮ ಪಕ್ಷದ ಮುಂದೆ ಇಡುತ್ತೇನೆ ಮತ್ತು ನಾವು ನಿರ್ಧರಿಸುತ್ತೇವೆ” ಎಂದು ಹೇಳಿದ್ದಾರೆ.

ಪಕ್ಷದ ಮುಖವಾಣಿ ಸಾಮ್ನಾದಲ್ಲಿ, ಕೈಗಾರಿಕಾ ಮತ್ತು ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರ ಐನ್ಸ್ ಸ್ಟೀನ್ ಗುರುತ್ವಾಕರ್ಷಣೆಯನ್ನು ಕಂಡುಹಿಡಿದಿದ್ದಾರೆ ಮತ್ತು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ವಾಹನ ಮಾರಾಟದಲ್ಲಿನ ಕುಸಿತಕ್ಕೆ ಮಿಲೇನಿಯಮ್ಸ್ ಕಾರಣವಾಗಿದ್ದಾರೆ ಎಂಬ ಹೇಳಿಕೆಗಳನ್ನು ತೀವ್ರವಾಗಿ ಟೀಕಿಸಲಾಗಿದೆ.

“ಲೋಕಸಭಾ ಚುನಾವಣೆಗೆ ಮೈತ್ರಿ ಘೋಷಿಸುವ ಮೊದಲು ಶಿವಸೇನೆಯವರು ಪ್ರಧಾನಿ ಮೋದಿಯವರ ಮೇಲೆ ಹೇಗೆ ದಾಳಿ ನಡೆಸಿದರು ಎಂಬುದನ್ನು ನಾವು ಮರೆತಿಲ್ಲ” ಎಂದು ಬಿಜೆಪಿಯ ಉನ್ನತ ನಾಯಕರೊಬ್ಬರು ಹೇಳಿಕೆ ನೀಡಿದ್ದಾರೆ. ಈ ನಡೆಗಳು ಇವರ ನಡುವೆ ಎಲ್ಲವೂ ಸರಿಯಿಲ್ಲ ಎಂಬುದನ್ನು ತೋರಿಸುತ್ತಿದ್ದು ಇದು ಯಾವಾಗ ಬೇಕಾದರೂ ಸ್ಫೋಟಗೊಳ್ಳಬಹದು ಅಥವಾ ಇದುವರೆಗೂ ಆಗಿರುವಂತೆ ಸ್ಪೋಟಗೊಳ್ಳದೆ ಇರಬಹದು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...