Homeಮುಖಪುಟಮಹಾರಾಷ್ಟ್ರ ಚುನಾವಣೆ: ಬಿಜೆಪಿ, ಶಿವಸೇನೆ ಮೈತ್ರಿ ನಡುವೆ ಬಿರುಕು..

ಮಹಾರಾಷ್ಟ್ರ ಚುನಾವಣೆ: ಬಿಜೆಪಿ, ಶಿವಸೇನೆ ಮೈತ್ರಿ ನಡುವೆ ಬಿರುಕು..

- Advertisement -
- Advertisement -

ಮಹಾರಾಷ್ಟ್ರದ ಆಡಳಿತಾರೂಡ ಬಿಜೆಪಿ ಮತ್ತು ಶಿವಸೇನೆ ಪಕ್ಷಗಳು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯ ಮೈತ್ರಿಯಲ್ಲಿ ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಕಾಂಗ್ರೆಸ್ ಮತ್ತು ಶರದ್ ಪವಾರ್ ಅವರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್.ಸಿ.ಪಿ) ಸುಮಾರು 30 ನಾಯಕರು ಬಿಜೆಪಿ ಸೇರಿದ್ದಾರೆ. ಇದರಿಂದಾಗಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ ಪಕ್ಷಗಳು ಮೈತ್ರಿಕೂಟವಾಗಿ ಸ್ಪರ್ಧಿಸುತ್ತವೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅವರು ಹಾಗೆ ಮಾಡಿದರೆ, ಈಗ ಬಿಜೆಪಿ ಸೇರಿರುವ ನಾಯಕರಿಗೆ ಟಿಕೆಟ್ ಕೊಡುವುದು ವಾಗುತ್ತದೆ.

ಜೊತೆಗೆ ಮುಖ್ಯಮಂತ್ರಿ ಹುದ್ದೆಯ ಮೇಲೆ ಉಭಯ ಪಕ್ಷಗಳು ಕಣ್ಣಿಟ್ಟಿವೆ. ಟಿಕೆಟ್ ಹಂಚಿಕೆ ಮತ್ತು ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿಯಿಂದಾಗಿ ಕೊನೆಗೆ ಈ ಚುನಾವಣೆಯು ಬಿಜೆಪಿ ಮತ್ತು ಶಿವಸೇನೆ ನಡುವಿನ ಯುದ್ಧವಾಗಿ ಕೊನೆಗೊಳ್ಳಬಹುದು ಎಂಬ ಉಹಾಪೋಹಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ. ಮೈತ್ರಿ ಮುರಿದುಕೊಳ್ಳಲು ಶಿವಸೇನಾ ಉತ್ಸುಕನಾಗಿಲ್ಲ. ಆದರೆ ಅಂತಿಮವಾಗಿ ಅಂತಹ ಪರಿಸ್ಥಿತಿ ಬಂದರೆ ಹೇಗೆ ಎದುರಿಸಬೇಕು ಎಂಬುದರ ಕುರಿತಾಗಿ ಈಗಾಗಲೇ ಸಿದ್ಧತೆ ನಡೆಸುತ್ತಿದೆ.

ಬಿಜೆಪಿ ಈಗ “ದೊಡ್ಡಣ್ಣನಂತೆ” ವರ್ತಿಸುತ್ತಿದೆ. ಜೊತೆಗೆ ರಾಜ್ಯದ 288 ಸ್ಥಾನಗಳಲ್ಲಿ 120 ಕ್ಕಿಂತ ಹೆಚ್ಚಿನದನ್ನು ಶಿವಸೇನೆಗೆ ನೀಡಬಾರದು ಎಂದು ಬಿಜೆಪಿ ಭಾವಿಸಿದೆ. ಬೃಹತ್ ಸಂಪನ್ಮೂಲಗಳನ್ನು ಹೊಂದಿರುವ ಇದು ತನ್ನದೇ ಸ್ವಂತ ಬಲದಲ್ಲಿ ಬಹುಮತವನ್ನು ಗಳಿಸಬಹುದು ಮತ್ತು ತನ್ನ ಉದ್ರಿಕ್ತ ಮಿತ್ರನನ್ನು ಸೋಲಿಸಬಹುದೆಂದು ಭಾವಿಸುತ್ತಿದೆ. ಆದರೆ ಇದು ಈಗಲೂ ಆರೆ ಕಾಲೋನಿಯಲ್ಲಿ ಮರಗಳನ್ನು ಕಡಿಯುವುದರ ವಿರುದ್ಧ ಮತ್ತು ಆರ್ಥಿಕತೆಯ ಬಗ್ಗೆ ಸರ್ಕಾರ ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ರವರ ಮಾತನ್ನು ಕೇಳಬೇಕು ಮುಂತಾದ ವಿಷಯಗಳ ಬಗ್ಗೆ ಟೀಕೆಯನ್ನು ಎದುರಿಸುತ್ತಿದೆ.

ಮೈತ್ರಿಕೂಟವನ್ನು ಮುರಿಯಲು ಶಿವಸೇನೆ ಉತ್ಸುಕನಾಗಿಲ್ಲ. ಆದರೆ ಅದು ಏಕಾಂಗಿಯಾಗಿ ಹೋಗುವ ಸಾಧ್ಯತೆಗಾಗಿ ತಯಾರಿ ನಡೆಸುತ್ತಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಮೈತ್ರಿಯನ್ನು ಮುಂದುವರಿಸಲು ಉತ್ಸುಕರಾಗಿದ್ದಾರೆ. “ಮೈತ್ರಿಕೂಟದಲ್ಲಿ ಹೋರಾಡಬೇಕಾದರೆ ನಾವು ಕೆಲವನ್ನು ಪಡೆಯುತ್ತೇವೆ ಮತ್ತು ಕೆಲವನ್ನು ಪಡೆಯುವುದಿಲ್ಲ. ಅದರ ಬಗ್ಗೆ ನಮಗೆ ಚಿಂತೆ ಇಲ್ಲ” ಎಂದು ಹೇಳಿದ್ದಾರೆ. ಆದರೆ ರಾಜ್ಯ ಬಿಜೆಪಿ 50-50 ಸ್ಥಾನಗಳ ಹಂಚಿಕೆ ಒಪ್ಪಂದಕ್ಕೆ ಸಿದ್ಧವಾಗಿಲ್ಲ ಎಂದು ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಆಪ್ತ ಸಹಾಯಕರಿಗೆ ತಿಳಿಸಿದ್ದಾರೆ.

ಸೀಟು ಹಂಚಿಕೆ ಬಗ್ಗೆ ಕೇಳಿದಾಗ, ಉದ್ಧವ್ ಠಾಕ್ರೆ “ನಮ್ಮ ನಡುವಿನ ಎಲ್ಲವನ್ನೂ ಈಗಾಗಲೇ ನಿರ್ಧರಿಸಲಾಗಿದೆ”. “ಮುಖ್ಯಮಂತ್ರಿಯವರು ಶಿವಸೇನೆ ಅಭ್ಯರ್ಥಿಗಳ ಪಟ್ಟಿಯನ್ನು ಮತ್ತು ಸ್ಪರ್ಧಿಸಬಹುದಾದ ಸ್ಥಾನಗಳನ್ನು ಸಿದ್ಧಪಡಿಸುವವರೆಗೆ ನಾನು ಕಾಯುತ್ತೇನೆ. ನಂತರ ನಾನು ಆ ಪಟ್ಟಿಯನ್ನು ನಮ್ಮ ಪಕ್ಷದ ಮುಂದೆ ಇಡುತ್ತೇನೆ ಮತ್ತು ನಾವು ನಿರ್ಧರಿಸುತ್ತೇವೆ” ಎಂದು ಹೇಳಿದ್ದಾರೆ.

ಪಕ್ಷದ ಮುಖವಾಣಿ ಸಾಮ್ನಾದಲ್ಲಿ, ಕೈಗಾರಿಕಾ ಮತ್ತು ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರ ಐನ್ಸ್ ಸ್ಟೀನ್ ಗುರುತ್ವಾಕರ್ಷಣೆಯನ್ನು ಕಂಡುಹಿಡಿದಿದ್ದಾರೆ ಮತ್ತು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ವಾಹನ ಮಾರಾಟದಲ್ಲಿನ ಕುಸಿತಕ್ಕೆ ಮಿಲೇನಿಯಮ್ಸ್ ಕಾರಣವಾಗಿದ್ದಾರೆ ಎಂಬ ಹೇಳಿಕೆಗಳನ್ನು ತೀವ್ರವಾಗಿ ಟೀಕಿಸಲಾಗಿದೆ.

“ಲೋಕಸಭಾ ಚುನಾವಣೆಗೆ ಮೈತ್ರಿ ಘೋಷಿಸುವ ಮೊದಲು ಶಿವಸೇನೆಯವರು ಪ್ರಧಾನಿ ಮೋದಿಯವರ ಮೇಲೆ ಹೇಗೆ ದಾಳಿ ನಡೆಸಿದರು ಎಂಬುದನ್ನು ನಾವು ಮರೆತಿಲ್ಲ” ಎಂದು ಬಿಜೆಪಿಯ ಉನ್ನತ ನಾಯಕರೊಬ್ಬರು ಹೇಳಿಕೆ ನೀಡಿದ್ದಾರೆ. ಈ ನಡೆಗಳು ಇವರ ನಡುವೆ ಎಲ್ಲವೂ ಸರಿಯಿಲ್ಲ ಎಂಬುದನ್ನು ತೋರಿಸುತ್ತಿದ್ದು ಇದು ಯಾವಾಗ ಬೇಕಾದರೂ ಸ್ಫೋಟಗೊಳ್ಳಬಹದು ಅಥವಾ ಇದುವರೆಗೂ ಆಗಿರುವಂತೆ ಸ್ಪೋಟಗೊಳ್ಳದೆ ಇರಬಹದು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...