Homeರಾಷ್ಟ್ರೀಯಎಟಿಎಂ ದರೋಡೆಗೆ ಜೆಸಿಬಿ ಬಳಸಿದ ಕಳ್ಳರು: ನಿರುದ್ಯೋಗದ ಪರಿಣಾಮ ಎಂದ ನೆಟ್ಟಿಗರು

ಎಟಿಎಂ ದರೋಡೆಗೆ ಜೆಸಿಬಿ ಬಳಸಿದ ಕಳ್ಳರು: ನಿರುದ್ಯೋಗದ ಪರಿಣಾಮ ಎಂದ ನೆಟ್ಟಿಗರು

- Advertisement -
- Advertisement -

ಎಟಿಎಂನಿಂದ ಹಣ ದರೋಡೆ ಮಾಡಲು ಕಳ್ಳರು ಜೆಸಿಬಿಯನ್ನೇ ಬಳಸಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಭಾನುವಾರ ನಡೆದಿದೆ. ಕಳ್ಳರ ಈ ಕೃತ್ಯವು ಎಟಿಎಂ ಬೂತ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಕೃತ್ಯಕ್ಕೆ ಬಳಸಿರುವ ಜೆಸಿಬಿ ಪೆಟ್ರೋಲ್ ಪಂಪ್‌ವೊಂದರ ಹೊರಗೆ ಪತ್ತೆಯಾಗಿದ್ದು, ಎಟಿಎಂನಲ್ಲಿದ್ದ 27 ಲಕ್ಷ ರೂ. ಹಣವನ್ನು ಕಳ್ಳರು ದೋಚುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ಪತ್ರಕರ್ತರಿಗೆ ತಿಳಿಸಿದ್ದಾರೆ. ಕಳ್ಳರ ಪತ್ತೆಗೆ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೃತ್ಯದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೆಲವರು ಕಳ್ಳರ ಕೈಚಳಕವನ್ನು ವಿನೋದಮಯವಾಗಿ ಕಂಡಿದ್ದು, ಮತ್ತೆ ಕೆಲವರು ಇದು ದೇಶದಲ್ಲಿ ತಾಂಡವಾಡುತ್ತಿರುವ ನಿರುದ್ಯೋಗದ ಪರಿಣಾಮ ಎಂದು ದೂರಿದ್ದಾರೆ.

ಕಳೆದ ವಾರ, ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯಲ್ಲಿ ಹಾರ್ಡ್‌ವೇರ್ ಅಂಗಡಿಯನ್ನು ದರೋಡೆ ಮಾಡಲಾಗಿತ್ತು. ದರೋಡೆ ಮಾಡಿದ ನಂತರ ಕಳ್ಳನೊಬ್ಬ ಡ್ಯಾನ್ಸ್ ಮಾಡುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿತ್ತು. ಈ ಘಟನೆಯು ಪೊಲೀಸ್ ವರಿಷ್ಠಾಧಿಕಾರಿ ನಿವಾಸದ ಬಳಿ ನಡೆದಿತ್ತು.

ಕಳ್ಳನು ಅಂಗಡಿಯಲ್ಲಿದ್ದ ಎಲ್ಲಾ ನಗದನ್ನು ಕದ್ದಿದ್ದಲ್ಲದೆ, ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳನ್ನು ಕದ್ದಿದ್ದಾನೆ ಎಂದು ಅಂಗಡಿ ಮಾಲೀಕ ಅಂಶು ಸಿಂಗ್ ಹೇಳಿರುವುದಾಗಿ ಸ್ಥಳೀಯ ಮಾಧ್ಯಮಗಳು ತಿಳಿಸಿವೆ. ಮರುದಿನ ಷಟರ್ ಮುರಿದಿರುವುದನ್ನು ಗಮನಿಸಿದ ಅಂಶು ಸಿಂಗ್ ಅಂಗಡಿ ತೆರೆದು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಅಪರಾಧ ಬಯಲಾಗಿದೆ.

ಇದನ್ನೂ ಓದಿ: ತಮಿಳುನಾಡು: ತನ್ನ ಕಾರಿಗೆ ತಾನೇ ಬೆಂಕಿ ಹಚ್ಚಿ, ಪೆಟ್ರೋಲ್ ಬಾಂಬ್ ಹಾಕಿದ್ದಾರೆಂದು ನಾಟಕವಾಡಿದ್ದ ಬಿಜೆಪಿ ಮುಖಂಡನ ಬಂಧನ

ನೀರಾವರಿ ಇಲಾಖೆ ಅಧಿಕಾರಿಗಳು ಸ್ಥಳೀಯ ನಿವಾಸಿಗಳೊಂದಿಗೆ ಶಾಮೀಲಾಗಿ 500 ಟನ್ ತೂಕದ ಸೇತುವೆಯನ್ನು ಕೆಡವಿದ ಕಳ್ಳರ ತಂಡವು ಸರ್ಕಾರಿ ಅಧಿಕಾರಿಗಳಂತೆ ನಟಿಸಿ, ಬಳಕೆಯಲ್ಲಿಲ್ಲದ 60 ಅಡಿ ಉದ್ದದ ಉಕ್ಕಿನ ಸೇತುವೆಯನ್ನು ಕದ್ದಿರುವ ಘಟನೆ ಬಿಹಾರದ ರೋಹ್ತಾಸ್ ಜಿಲ್ಲೆಯಿಂದ ವರದಿಯಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...