Homeಮುಖಪುಟಜೈಲಿಗೆ ಹೋಗುತ್ತಿದ್ದ ಕಳ್ಳರು ಈಗ ಬಿಜೆಪಿ ಸೇರುತ್ತಿದ್ದಾರೆ, ಇದೆ 'ಮೋದಿ ಗ್ಯಾರಂಟಿ': ಅಭಿಷೇಕ್ ಬ್ಯಾನರ್ಜಿ

ಜೈಲಿಗೆ ಹೋಗುತ್ತಿದ್ದ ಕಳ್ಳರು ಈಗ ಬಿಜೆಪಿ ಸೇರುತ್ತಿದ್ದಾರೆ, ಇದೆ ‘ಮೋದಿ ಗ್ಯಾರಂಟಿ’: ಅಭಿಷೇಕ್ ಬ್ಯಾನರ್ಜಿ

- Advertisement -
- Advertisement -

2024ರ ಲೋಕಸಭೆ ಚುನಾವಣೆಯನ್ನು ‘ಬಂಗಾಳಿ ವಿರುದ್ಧ ಹೊರಗಿನವರ ಸ್ಪರ್ಧೆ ಎಂದು ಕರೆದಿರುವ ತೃಣ ಮೂಲ ಕಾಂಗ್ರೆಸ್ ಮುಖಂಡರು, ಪಕ್ಷ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ.

‘ಮೊದಲು ಕಳ್ಳರು ಜೈಲಿಗೆ ಹೋಗುತ್ತಿದ್ದರು, ಈಗ ಬಿಜೆಪಿಗೆ ಹೋಗ್ತಾರೆ, ಇದು ಮೋದಿ ಗ್ಯಾರಂಟಿ. ಮತ್ತೊಂದು ಕಡೆ ಮಹಿಳೆಯೊಬ್ಬರು (ಮಮತಾ ಬ್ಯಾನರ್ಜಿ), ಇನ್ನೂ ತವರು ಮನೆಯಲ್ಲಿ ವಾಸವಿದ್ದಾರೆ. ಆಕೆ ಹವಾಯಿ ಚಪ್ಪಲಿ ಧರಿಸಿದ್ದಾಳೆ, ಬಂಗಾಳಕ್ಕೆ ಯಾರು ಬೇಕು? ಮೋದಿ ಅಥವಾ ದೀದಿ? ಬಂಗಾಳದ ಮಣ್ಣಿನ ಮಗ ಅಥವಾ ಹೊರಗಿನವರು?’ ಎಂದು ಅವರು ಕೋಲ್ಕತ್ತಾದಲ್ಲಿ ನಡೆದ ಬೃಹತ್ ರ್ಯಾಲಿಯಲ್ಲಿ ಜನರನ್ನುದ್ದೇಶಿಸಿ ಮಾತನಾಡಿದರು.

ಮಮತಾ ಬ್ಯಾನರ್ಜಿ ಅವರನ್ನು ಅವರ ಬೆಂಬಲಿಗರು ಮತ್ತು ರಾಜಕೀಯ ವಲಯಗಳಲ್ಲಿ ಪ್ರೀತಿಯಿಂದ ದೀದಿ ಎಂದು ಕರೆಯುತ್ತಾರೆ.

2019ರ ಚುನಾವಣೆಯ ನಂತರ ಪಶ್ಚಿಮ ಬಂಗಾಳದಲ್ಲಿ ತನ್ನ ನೆಲೆಯನ್ನು ವಿಸ್ತರಿಸಿದ ನಂತರ ತೃಣಮೂಲವು ಬಿಜೆಪಿಯನ್ನು “ಬಂಗಾಳ ವಿರೋಧಿ” ಪಕ್ಷವೆಂದು ಆಗಾಗ್ಗೆ ಗುರಿಯಾಗಿಸಿಕೊಂಡಿದೆ.

ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಬಂಗಾಳದ 42 ಸ್ಥಾನಗಳಲ್ಲಿ 18 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿತ್ತು, ಇದು ಪೂರ್ವ ರಾಜ್ಯದಲ್ಲಿ ಇದುವರೆಗೆ ಗೆದ್ದ ಅತ್ಯಧಿಕವಾಗಿದೆ. 2021ರ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ, ಸಿಪಿಎಂ ಮತ್ತು ಕಾಂಗ್ರೆಸ್ ಅನ್ನು ಬದಿಗೊತ್ತಿ 77 ಸ್ಥಾನಗಳೊಂದಿಗೆ ಬಿಜೆಪಿ ಪ್ರಮುಖ ವಿರೋಧ ಪಕ್ಷವಾಗಿ ಹೊರಹೊಮ್ಮಿತು.

ತೃಣಮೂಲ ಇಂದು ‘ಜೊನೊಗೊನರ್ ಗೊರ್ಜೊನ್ ಬಾಂಗ್ಲಾ ಬಿರೋಧಿದರ್ ಬಿಸೊರ್ಜೊನ್’ ಅಭಿಯಾನವನ್ನು ಪ್ರಾರಂಭಿಸಿದೆ. ಇದು ‘ಜನರು ಬಂಗಾಳ ವಿರೋಧಿ ಶಕ್ತಿಗಳನ್ನು ಹೊರಹಾಕಲು ಒತ್ತಾಯಿಸುತ್ತಾರೆ’ ಎಂದು ಅನುವಾದಿಸಿದ್ದಾರೆ. ಬಿಜೆಪಿಯ “ಬಂಗಾಳ ವಿರೋಧಿ ಗುಣಲಕ್ಷಣಗಳು” ಎಂದು ಪಕ್ಷವು ನಂಬಿರುವುದನ್ನು ಎತ್ತಿ ತೋರಿಸುತ್ತದೆ.

‘ಅವರು (ಬಿಎಪಿ) ನಿರಂತರವಾಗಿ ಬಂಗಾಳ ವಿರೋಧಿ ಧೋರಣೆಯನ್ನು ಪ್ರದರ್ಶಿಸಿದರು, ಬಂಗಾಳದ ಜನರಿಗೆ ಮೂಲಭೂತ ಅವಶ್ಯಕತೆಗಳಾದ ರೊಟ್ಟಿ, ಕಪ್ಡಾ, ಮಕಾನ್‌ಗಳಿಂದ ವಂಚಿತರಾಗಿದ್ದಾರೆ. ಬಂಗಾಳಿಗಳ ಧ್ವನಿಯನ್ನು ಹತ್ತಿಕ್ಕಲು ಅಧಿಕಾರವನ್ನು ದುರುಪಯೋಗಪಡಿಸಿಕೊಂಡರು’ ಎಂದು ಹೇಳಿದರು.

‘ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರವು ಬಂಗಾಳದ ವಿರುದ್ಧ ಪಿತೂರಿ ನಡೆಸುತ್ತಿದೆ ಮತ್ತು “ಬಿಜೆಪಿಯ ಪ್ರತಿಯೊಂದು ಕ್ರಿಯೆಯಲ್ಲಿ ಬಂಗಾಳ ವಿರೋಧಿ ಗುಣಲಕ್ಷಣಗಳನ್ನು ಪ್ರದರ್ಶಿಸಲಾಗುತ್ತದೆ’ ಎಂದು ಪಕ್ಷವು ಆರೋಪಿಸಿದೆ.

‘ಈ ಕಳೆದ 10 ವರ್ಷಗಳಲ್ಲಿ ಬಂಗಾಳದ ಹೊರಗಿನ ಈ ಅಧಿಪತಿಗಳ ನಿರಂತರ ಪ್ರಯತ್ನಕ್ಕೆ ಸಾಕ್ಷಿಯಾಗಿದೆ. ಆಗಾಗ್ಗೆ ಹಿಂಸಾತ್ಮಕ ಪಿತೂರಿಗಳ ಮೂಲಕ ರಾಜ್ಯ ಮತ್ತು ಅದರ ಜನರ ಚಿತ್ರಣವನ್ನು ಕೆಡಿಸಲು ಯತ್ನಿಸಿದೆ’ ಎಂದು ತೃಣಮೂಲ ಹೇಳಿದೆ.

ಇದನ್ನೂ ಓದಿ; ರಾಮ ಈಗ ಇದ್ದಿದ್ದರೆ ಆತನಿಗೂ ಪಕ್ಷ ಸೇರುವಂತೆ ಇಡಿ-ಸಿಬಿಐ ಅನ್ನು ಬಿಜೆಪಿ ಕಳುಹಿಸುತ್ತಿತ್ತು: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...