Homeಮುಖಪುಟಪ್ರಯಾಣಕ್ಕೂ ಮುನ್ನ ಯೋಚಿಸಿ: ಬುಕ್‌ ಮಾಡಿದ ಟ್ರೈನ್‌ ಟಿಕೆಟ್‌ ರದ್ದುಗೊಳಿಸಿದರೆ ಜಿಎಸ್‌ಟಿ ಭಾರ!

ಪ್ರಯಾಣಕ್ಕೂ ಮುನ್ನ ಯೋಚಿಸಿ: ಬುಕ್‌ ಮಾಡಿದ ಟ್ರೈನ್‌ ಟಿಕೆಟ್‌ ರದ್ದುಗೊಳಿಸಿದರೆ ಜಿಎಸ್‌ಟಿ ಭಾರ!

- Advertisement -
- Advertisement -

ಬುಕ್ಕಿಂಗ್‌ ಮಾಡಲಾದ ಟ್ರೈನ್‌ ಟಿಕೆಟ್ ರದ್ದು ಮಾಡಿದರೆ ಗ್ರಾಹಕರು ನಿರ್ದಿಷ್ಟ ಪ್ರಮಾಣದ ಜಿಎಸ್‌ಟಿ ಭಾರವನ್ನು ಹೊರಬೇಕಾಗಿದೆ. ಆಗಸ್ಟ್ 3 ರಂದು ಹಣಕಾಸು ಸಚಿವಾಲಯ ಹೊರಡಿಸಿದ ಸುತ್ತೋಲೆ ಈ ಕುರಿತು ತಿಳಿಸಿದೆ.

ಹಣಕಾಸು ಸಚಿವಾಲಯದ ತೆರಿಗೆ ಸಂಶೋಧನಾ ಘಟಕವು ಹೊರಡಿಸಿದ ಸುತ್ತೋಲೆಯ ಪ್ರಕಾರ, ಬುಕಿಂಗ್ ಟಿಕೆಟ್‌ಗಳು ‘ಒಪ್ಪಂದ’ ಆಧಾರದಲ್ಲಿ ಆಗಿರುತ್ತವೆ. ಅದರ ಅಡಿಯಲ್ಲಿ ಐಆರ್‌ಸಿಟಿಸಿ/ಭಾರತೀಯ ರೈಲ್ವೆ ಗ್ರಾಹಕರಿಗೆ ಸೇವೆಗಳನ್ನು ಒದಗಿಸುವುದಾಗಿ ಭರವಸೆ ನೀಡಿರುತ್ತದೆ ಎಂದು ಪ್ರಸ್ತಾಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಧಿಸೂಚನೆಯ ಪ್ರಕಾರ ಫಸ್ಟ್ ಕ್ಲಾಸ್ ಅಥವಾ ಎಸಿ ಕೋಚ್ ಟಿಕೆಟ್‌ ರದ್ದು ಮಾಡಿದರೆ ಶೇಕಡಾ 5 ಜಿಎಸ್‌ಟಿಯನ್ನು ವಿಧಿಸಲಾಗುತ್ತದೆ. ಇದೇ ನಿಯಮ ವಿಮಾನ ಪ್ರಯಾಣ ಅಥವಾ ಹೋಟೆಲ್ ವಾಸ್ತವ್ಯದ ಬುಕ್ಕಿಂಗ್‌ ರದ್ದತಿಗೂ ಅನ್ವಯವಾಗುತ್ತದೆ.

ರದ್ದತಿ ಶುಲ್ಕವು ಒಪ್ಪಂದದ ಉಲ್ಲಂಘನೆಯ ಬದಲಿಗೆ ನೀಡುವ ಪಾವತಿಯಾಗಿರುತ್ತದೆ. ಆದ್ದರಿಂದ ಜಿಎಸ್ಟಿ ಪಾವತಿಸಬೇಕಾಗುತ್ತದೆ. ಟಿಕೆಟ್ ರದ್ದುಗೊಳಿಸಿದರೆ ರದ್ದತಿ ಶುಲ್ಕದ ಮೇಲೆ ಶೇಕಡಾ 5 ರಷ್ಟು ಜಿಎಸ್‌ಪಿ ಪಾವತಿಸಬೇಕಾಗುತ್ತದೆ.

“ಪ್ರಯಾಣಿಕರಿಂದ ಒಪ್ಪಂದದ ಉಲ್ಲಂಘನೆಯಾದಾಗ ಸೇವಾ ಪೂರೈಕೆದಾರರಿಗೆ ಸಣ್ಣ ಮೊತ್ತದಲ್ಲಿ ಪರಿಹಾರವನ್ನು ನೀಡಲಾಗುತ್ತದೆ. ರದ್ದತಿ ಶುಲ್ಕವಾಗಿ ಅದನ್ನು ಸಂಗ್ರಹಿಸಲಾಗುತ್ತದೆ. ರದ್ದತಿ ಶುಲ್ಕವು ಪಾವತಿಯಾಗುವುದರಿಂದ ಒಪ್ಪಂದದ ಉಲ್ಲಂಘನೆಯಾಗುವುದಿಲ್ಲ” ಎಂದು ಅಧಿಸೂಚನೆಯನ್ನು ತಿಳಿಸಲಾಗಿದೆ.

ಇದನ್ನೂ ಓದಿರಿ: ಅತ್ಯಾಚಾರಕ್ಕೆ ಒಳಗಾಗಿರುವ ಬಾಲಕಿಯರಿಗೆ ‘ನ್ಯಾಯ’ ದೊರಕಬೇಕು: ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದ ಲೆಹರ್‌ ಸಿಂಗ್‌

ರೈಲಿನ ಹೊರಡುವ 48 ಗಂಟೆಗಳು ಅಥವಾ ಅದಕ್ಕಿಂತ ಹೆಚ್ಚು ಗಂಟೆಗಳ ಮೊದಲು ಟಿಕೆಟ್ ಅನ್ನು ರದ್ದುಗೊಳಿಸಿದಾಗ ಭಾರತೀಯ ರೈಲ್ವೆಯು ರದ್ದತಿಗೆ 240 ರೂಪಾಯಿಗಳನ್ನು ವಿಧಿಸುತ್ತದೆ. ರೈಲು ಹೊರಡುವ 48 ಗಂಟೆಗಳಿಂದ 12 ಗಂಟೆಗಳ ಒಳಗೆ ಟಿಕೆಟ್‌ ರದ್ದುಗೊಳಿಸಿದರೆ, ಟಿಕೆಟ್ ಮೊತ್ತದ ಶೇಕಡಾ 25ರಷ್ಟನ್ನು ರದ್ದತಿ ಶುಲ್ಕವಾಗಿ ವಿಧಿಸಲಾಗುತ್ತದೆ.

ಪ್ರಥಮ ದರ್ಜೆ ಅಥವಾ ಹವಾನಿಯಂತ್ರಿತ ಕೋಚ್ ಟಿಕೆಟ್‌ಗಳ ಮೇಲೆ 5 ಪ್ರತಿಶತ GST ವಿಧಿಸಲಾಗುತ್ತದೆ. ಆದ್ದರಿಂದ ಅದೇ ದರದಲ್ಲಿ ಜಿಎಸ್‌ಟಿಯನ್ನು ರದ್ದತಿ ಶುಲ್ಕವಾಗಿ ಅನ್ವಯಿಸುತ್ತದೆ. ಈ ಟಿಕೆಟ್‌ಗಳನ್ನು ಬುಕ್ ಮಾಡುವಾಗ ಪ್ರಯಾಣಿಕರು ಶೇ 5ರಷ್ಟು ಜಿಎಸ್‌ಟಿ ಪಾವತಿಸಿರುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...