Homeಮುಖಪುಟಪ್ರಯಾಣಕ್ಕೂ ಮುನ್ನ ಯೋಚಿಸಿ: ಬುಕ್‌ ಮಾಡಿದ ಟ್ರೈನ್‌ ಟಿಕೆಟ್‌ ರದ್ದುಗೊಳಿಸಿದರೆ ಜಿಎಸ್‌ಟಿ ಭಾರ!

ಪ್ರಯಾಣಕ್ಕೂ ಮುನ್ನ ಯೋಚಿಸಿ: ಬುಕ್‌ ಮಾಡಿದ ಟ್ರೈನ್‌ ಟಿಕೆಟ್‌ ರದ್ದುಗೊಳಿಸಿದರೆ ಜಿಎಸ್‌ಟಿ ಭಾರ!

- Advertisement -
- Advertisement -

ಬುಕ್ಕಿಂಗ್‌ ಮಾಡಲಾದ ಟ್ರೈನ್‌ ಟಿಕೆಟ್ ರದ್ದು ಮಾಡಿದರೆ ಗ್ರಾಹಕರು ನಿರ್ದಿಷ್ಟ ಪ್ರಮಾಣದ ಜಿಎಸ್‌ಟಿ ಭಾರವನ್ನು ಹೊರಬೇಕಾಗಿದೆ. ಆಗಸ್ಟ್ 3 ರಂದು ಹಣಕಾಸು ಸಚಿವಾಲಯ ಹೊರಡಿಸಿದ ಸುತ್ತೋಲೆ ಈ ಕುರಿತು ತಿಳಿಸಿದೆ.

ಹಣಕಾಸು ಸಚಿವಾಲಯದ ತೆರಿಗೆ ಸಂಶೋಧನಾ ಘಟಕವು ಹೊರಡಿಸಿದ ಸುತ್ತೋಲೆಯ ಪ್ರಕಾರ, ಬುಕಿಂಗ್ ಟಿಕೆಟ್‌ಗಳು ‘ಒಪ್ಪಂದ’ ಆಧಾರದಲ್ಲಿ ಆಗಿರುತ್ತವೆ. ಅದರ ಅಡಿಯಲ್ಲಿ ಐಆರ್‌ಸಿಟಿಸಿ/ಭಾರತೀಯ ರೈಲ್ವೆ ಗ್ರಾಹಕರಿಗೆ ಸೇವೆಗಳನ್ನು ಒದಗಿಸುವುದಾಗಿ ಭರವಸೆ ನೀಡಿರುತ್ತದೆ ಎಂದು ಪ್ರಸ್ತಾಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಧಿಸೂಚನೆಯ ಪ್ರಕಾರ ಫಸ್ಟ್ ಕ್ಲಾಸ್ ಅಥವಾ ಎಸಿ ಕೋಚ್ ಟಿಕೆಟ್‌ ರದ್ದು ಮಾಡಿದರೆ ಶೇಕಡಾ 5 ಜಿಎಸ್‌ಟಿಯನ್ನು ವಿಧಿಸಲಾಗುತ್ತದೆ. ಇದೇ ನಿಯಮ ವಿಮಾನ ಪ್ರಯಾಣ ಅಥವಾ ಹೋಟೆಲ್ ವಾಸ್ತವ್ಯದ ಬುಕ್ಕಿಂಗ್‌ ರದ್ದತಿಗೂ ಅನ್ವಯವಾಗುತ್ತದೆ.

ರದ್ದತಿ ಶುಲ್ಕವು ಒಪ್ಪಂದದ ಉಲ್ಲಂಘನೆಯ ಬದಲಿಗೆ ನೀಡುವ ಪಾವತಿಯಾಗಿರುತ್ತದೆ. ಆದ್ದರಿಂದ ಜಿಎಸ್ಟಿ ಪಾವತಿಸಬೇಕಾಗುತ್ತದೆ. ಟಿಕೆಟ್ ರದ್ದುಗೊಳಿಸಿದರೆ ರದ್ದತಿ ಶುಲ್ಕದ ಮೇಲೆ ಶೇಕಡಾ 5 ರಷ್ಟು ಜಿಎಸ್‌ಪಿ ಪಾವತಿಸಬೇಕಾಗುತ್ತದೆ.

“ಪ್ರಯಾಣಿಕರಿಂದ ಒಪ್ಪಂದದ ಉಲ್ಲಂಘನೆಯಾದಾಗ ಸೇವಾ ಪೂರೈಕೆದಾರರಿಗೆ ಸಣ್ಣ ಮೊತ್ತದಲ್ಲಿ ಪರಿಹಾರವನ್ನು ನೀಡಲಾಗುತ್ತದೆ. ರದ್ದತಿ ಶುಲ್ಕವಾಗಿ ಅದನ್ನು ಸಂಗ್ರಹಿಸಲಾಗುತ್ತದೆ. ರದ್ದತಿ ಶುಲ್ಕವು ಪಾವತಿಯಾಗುವುದರಿಂದ ಒಪ್ಪಂದದ ಉಲ್ಲಂಘನೆಯಾಗುವುದಿಲ್ಲ” ಎಂದು ಅಧಿಸೂಚನೆಯನ್ನು ತಿಳಿಸಲಾಗಿದೆ.

ಇದನ್ನೂ ಓದಿರಿ: ಅತ್ಯಾಚಾರಕ್ಕೆ ಒಳಗಾಗಿರುವ ಬಾಲಕಿಯರಿಗೆ ‘ನ್ಯಾಯ’ ದೊರಕಬೇಕು: ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದ ಲೆಹರ್‌ ಸಿಂಗ್‌

ರೈಲಿನ ಹೊರಡುವ 48 ಗಂಟೆಗಳು ಅಥವಾ ಅದಕ್ಕಿಂತ ಹೆಚ್ಚು ಗಂಟೆಗಳ ಮೊದಲು ಟಿಕೆಟ್ ಅನ್ನು ರದ್ದುಗೊಳಿಸಿದಾಗ ಭಾರತೀಯ ರೈಲ್ವೆಯು ರದ್ದತಿಗೆ 240 ರೂಪಾಯಿಗಳನ್ನು ವಿಧಿಸುತ್ತದೆ. ರೈಲು ಹೊರಡುವ 48 ಗಂಟೆಗಳಿಂದ 12 ಗಂಟೆಗಳ ಒಳಗೆ ಟಿಕೆಟ್‌ ರದ್ದುಗೊಳಿಸಿದರೆ, ಟಿಕೆಟ್ ಮೊತ್ತದ ಶೇಕಡಾ 25ರಷ್ಟನ್ನು ರದ್ದತಿ ಶುಲ್ಕವಾಗಿ ವಿಧಿಸಲಾಗುತ್ತದೆ.

ಪ್ರಥಮ ದರ್ಜೆ ಅಥವಾ ಹವಾನಿಯಂತ್ರಿತ ಕೋಚ್ ಟಿಕೆಟ್‌ಗಳ ಮೇಲೆ 5 ಪ್ರತಿಶತ GST ವಿಧಿಸಲಾಗುತ್ತದೆ. ಆದ್ದರಿಂದ ಅದೇ ದರದಲ್ಲಿ ಜಿಎಸ್‌ಟಿಯನ್ನು ರದ್ದತಿ ಶುಲ್ಕವಾಗಿ ಅನ್ವಯಿಸುತ್ತದೆ. ಈ ಟಿಕೆಟ್‌ಗಳನ್ನು ಬುಕ್ ಮಾಡುವಾಗ ಪ್ರಯಾಣಿಕರು ಶೇ 5ರಷ್ಟು ಜಿಎಸ್‌ಟಿ ಪಾವತಿಸಿರುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....