Homeಕರ್ನಾಟಕವೈದ್ಯಕೀಯ ಶಿಕ್ಷಣ ಶುಲ್ಕ ಕಡಿಮೆ ಮಾಡಲು ಚಿಂತನೆ: ಸಿಎಂ ಬೊಮ್ಮಾಯಿ ಭರವಸೆ

ವೈದ್ಯಕೀಯ ಶಿಕ್ಷಣ ಶುಲ್ಕ ಕಡಿಮೆ ಮಾಡಲು ಚಿಂತನೆ: ಸಿಎಂ ಬೊಮ್ಮಾಯಿ ಭರವಸೆ

- Advertisement -
- Advertisement -

ರಾಜ್ಯದಲ್ಲಿ ವೈದ್ಯಕೀಯ ಕೋರ್ಸ್‌ಗಳ ಶುಲ್ಕವನ್ನು ಕಡಿಮೆ ಮಾಡುವ ಕ್ರಮಗಳನ್ನು ಸರ್ಕಾರ ಪರಿಗಣಿಸುತ್ತಿದೆ. ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್‌ಎಂಸಿ) ಸಹ ಇದರ ಕುರಿತು ಪರಿಶೀಲಿಸುತ್ತಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಉಕ್ರೇನ್‌ನಲ್ಲಿ ಭಾರತದ ವೈದ್ಯಕೀಯ ವಿದ್ಯಾರ್ಥಿಗಳು ಸಿಲುಕಿ ತೊಂದರೆ ಅನುಭವಿಸಿದ ಬಳಿಕ ಈ ಹೇಳಿಕೆ ಹೊರ ಬಂದಿದೆ. “ಹೆಚ್ಚಿನ ವಿದ್ಯಾರ್ಥಿಗಳಿಗೆ ಇಲ್ಲಿ ಅಧ್ಯಯನ ಮಾಡಲು ಅನುಕೂಲ ಮಾಡಿಕೊಡುವ ಗುರಿ ಇಟ್ಟುಕೊಂಡಿದ್ದೇವೆ. ತಮ್ಮ ಕೋರ್ಸ್ಅನ್ನು ಪೂರ್ಣಗೊಳಿಸುವ ಮೊದಲು ಯುದ್ಧ ಪೀಡಿತ ಉಕ್ರೇನ್‌ನಿಂದ ಹಿಂದಿರುಗಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಪರ್ಯಾಯ ಕ್ರಮಗಳನ್ನು ಕೇಂದ್ರ ಸರ್ಕಾರ ಪರಿಗಣಿಸುತ್ತಿದೆ” ಎಂದು ತಿಳಿಸಿದ್ದಾರೆ.

“ಪ್ರಸ್ತುತ ವೈದ್ಯಕೀಯ ಶಿಕ್ಷಣದ ವೆಚ್ಚ ಹೆಚ್ಚುತ್ತಿದೆ. ಸರಕಾರಿ ಸೀಟುಗಳ ವೆಚ್ಚ ಕಡಿಮೆಯಾದರೂ ಖಾಸಗಿ ವಲಯದಲ್ಲಿ ಸೀಟುಗಳ ವೆಚ್ಚ ಹೆಚ್ಚಿದೆ. ಕೆಲವು ಸಂದರ್ಭಗಳಲ್ಲಿ ಶೇ.90-95 ಅಂಕ ಗಳಿಸಿದ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಸಾಧ್ಯವಾಗುತ್ತಿಲ್ಲ. ಮ್ಯಾನೇಜ್‌ಮೆಂಟ್‌ ಅಥವಾ ಎನ್‌ಆರ್‌ಐ ಸೀಟ್ ವೆಚ್ಚಗಳು ಸಹ ಹೆಚ್ಚಾಗಿದೆ. ಹೀಗಾಗಿ ಇತರ ಆಯ್ಕೆಗಳನ್ನು (ಉಕ್ರೇನ್‌ನಂತಹ ದೇಶಗಳಲ್ಲಿ ಅಧ್ಯಯನ ಮಾಡುವುದು) ನೋಡುವಂತಾಗಿದೆ” ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಉಕ್ರೇನ್‌ನಂತಹ ದೇಶಗಳಿಗೆ ಹೋಗುವ ಬದಲು ಭಾರತದಲ್ಲಿಯೇ ವೈದ್ಯಕೀಯ ಅಧ್ಯಯನ ಮಾಡಲು ಸಾಕಷ್ಟು ಅವಕಾಶವನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುವ ಸಂಬಂಧ ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಸರ್ಕಾರ ಚರ್ಚೆ ನಡೆಸಿದ್ದು, ರಾಜ್ಯದಲ್ಲಿ ಶುಲ್ಕ ಕಡಿತಗೊಳಿಸಲು ಎ,ಬಿ ಮತ್ತು ಸಿ ವರ್ಗೀಕರಣಕ್ಕೆ ಮುಂದಾಗಿದ್ದೇವೆ. ಆದರೆ ವೈದ್ಯಕೀಯ ಕೋರ್ಸ್‌ಗಳನ್ನು ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್‌ಎಂಸಿ) ನಿಯಂತ್ರಿಸುತ್ತದೆ. ಹೀಗಾಗಿ ಅವರೂ ಇದರ ಕುರಿತು ಗಮನ ಹರಿಸಿದ್ದಾರೆ. ಉಕ್ರೇನ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಶುಲ್ಕ ಕಡಿತದ ಕುರಿತು ಚರ್ಚಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಉಕ್ರೇನ್‌ನಿಂದ ಹಿಂತಿರುಗಿದ ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಸ್ಥಗಿತಗೊಳಿಸಿರುವುದರಿಂದ ಅವರಿಗೆ ಪರ್ಯಾಯ ವ್ಯವಸ್ಥೆಗಳನ್ನು ಸರ್ಕಾರ ನೀಡುವುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, “ಕೇಂದ್ರ ಸರ್ಕಾರವು ಈ ಬಗ್ಗೆ ಯೋಚಿಸುತ್ತಿದೆ” ಎಂದಿದ್ದಾರೆ.

“ಮೊದಲ, ಎರಡನೇ ಮತ್ತು ಮೂರನೇ ವರ್ಷದ ವಿದ್ಯಾರ್ಥಿಗಳು ಉಕ್ರೇನ್‌ನಿಂದ ಹಿಂತಿರುಗಿದ್ದಾರೆ. ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ಈ ಸಮಸ್ಯೆಯನ್ನು ಅನುಭವಿಸಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಈ ಬಗ್ಗೆ ಚಿಂತನೆ ನಡೆಸುತ್ತಿದೆ” ಎಂದು ಪ್ರತಿಕ್ರಿಯೆಸಿದ್ದಾರೆ.

ಮಾರ್ಚ್ 1ರಂದು ಉಕ್ರೇನ್‌ನಲ್ಲಿ ರಷ್ಯಾದ ಕ್ಷಿಪಣಿ ದಾಳಿಗೆ ಬಲಿಯಾದ ಖಾರ್ಕಿವ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಜ್ಞಾನಗೌಡರ ಅವರಿಗೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸುವ ಮುನ್ನ ಬೊಮ್ಮಾಯಿ ಮಾತನಾಡಿದರು. ಇದಕ್ಕೂ ಮೊದಲು ಮುಖ್ಯಮಂತ್ರಿಗಳು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ನವೀನ್ ಅವರ ಪಾರ್ಥಿವ ಶರೀರವನ್ನು ಬರಮಾಡಿಕೊಂಡರು.

ನೀಟ್‌ ರದ್ದುಗೊಳಿಸಲು ಕುಮಾರಸ್ವಾಮಿ ಆಗ್ರಹ

ಧನದಾಹಕ್ಕೆ ಕಡಿವಾಣ ಹಾಕಿ ಎಲ್ಲರಿಗೂ ಮೆಡಿಕಲ್ ಸೀಟು ಕೊಡಿಸುವ ಉದ್ದೇಶದಿಂದ ಜಾರಿಗೆ ಬಂದ ನೀಟ್ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ನವೀನ್ ಸಾವಿನಿಂದ ಜ್ಞಾನೋದಯ ಆಗಿದೆ ಎನ್ನುವ ಮುಖ್ಯಮಂತ್ರಿಯವರು ವೈದ್ಯ ಶಿಕ್ಷಣ ಶುಲ್ಕ ಕಡಿಮೆ ಮಾಡುವ ಹೇಳಿಕೆ ನೀಡುತ್ತಾರೆ. ಆದರೆ, ನೀಟ್ ವಿರುದ್ಧ ಚಕಾರ ಎತ್ತುತ್ತಿಲ್ಲ, ಯಾಕೆ? ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ಖಾಸಗಿ ಕಾಲೇಜುಗಳಲ್ಲಿ ವೈದ್ಯ ಶಿಕ್ಷಣ ದುಬಾರಿ ಎಂದು ಸ್ವತಃ ಮುಖ್ಯಮಂತ್ರಿಯೇ ಒಪ್ಪಿಕೊಂಡಿದ್ದಾರೆ. ಹಾಗಾದರೆ, ಅಂಥ ಕಾಲೇಜುಗಳಿಗೆ ಶಕ್ತಿ ತುಂಬುತ್ತಿರುವುದು ಏಕೆ! ಸರಕಾರಿ ವೈದ್ಯ ಕಾಲೇಜುಗಳಲ್ಲಿ ಕನ್ನಡದ ಮಕ್ಕಳಿಗೆ ಸೀಟು ಸಿಗುತ್ತಿಲ್ಲ. ಟ್ಯೂಷನ್ ಅಂಗಡಿಗಳಿಗೆ ಲಕ್ಷ ಲಕ್ಷ ಕಟ್ಟುವುದು ಬಡ, ಮಧ್ಯಮ ವರ್ಗದ ಮಕ್ಕಳಿಗೆ ಸಾಧ್ಯವಿಲ್ಲ ಎಂದಿದ್ದಾರೆ.


ಇದನ್ನೂ ಓದಿರಿ: ವೈದ್ಯಕೀಯ ‘ಭಾರ‘ತ: ಉಕ್ರೇನ್‌ನಲ್ಲಿ ಸಿಲುಕಿದ ಇಂಡಿಯಾ ವಿದ್ಯಾರ್ಥಿಗಳ ನೋವಿನ ಮೂಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...