Homeಕರ್ನಾಟಕವೈದ್ಯಕೀಯ ಶಿಕ್ಷಣ ಶುಲ್ಕ ಕಡಿಮೆ ಮಾಡಲು ಚಿಂತನೆ: ಸಿಎಂ ಬೊಮ್ಮಾಯಿ ಭರವಸೆ

ವೈದ್ಯಕೀಯ ಶಿಕ್ಷಣ ಶುಲ್ಕ ಕಡಿಮೆ ಮಾಡಲು ಚಿಂತನೆ: ಸಿಎಂ ಬೊಮ್ಮಾಯಿ ಭರವಸೆ

- Advertisement -
- Advertisement -

ರಾಜ್ಯದಲ್ಲಿ ವೈದ್ಯಕೀಯ ಕೋರ್ಸ್‌ಗಳ ಶುಲ್ಕವನ್ನು ಕಡಿಮೆ ಮಾಡುವ ಕ್ರಮಗಳನ್ನು ಸರ್ಕಾರ ಪರಿಗಣಿಸುತ್ತಿದೆ. ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್‌ಎಂಸಿ) ಸಹ ಇದರ ಕುರಿತು ಪರಿಶೀಲಿಸುತ್ತಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಉಕ್ರೇನ್‌ನಲ್ಲಿ ಭಾರತದ ವೈದ್ಯಕೀಯ ವಿದ್ಯಾರ್ಥಿಗಳು ಸಿಲುಕಿ ತೊಂದರೆ ಅನುಭವಿಸಿದ ಬಳಿಕ ಈ ಹೇಳಿಕೆ ಹೊರ ಬಂದಿದೆ. “ಹೆಚ್ಚಿನ ವಿದ್ಯಾರ್ಥಿಗಳಿಗೆ ಇಲ್ಲಿ ಅಧ್ಯಯನ ಮಾಡಲು ಅನುಕೂಲ ಮಾಡಿಕೊಡುವ ಗುರಿ ಇಟ್ಟುಕೊಂಡಿದ್ದೇವೆ. ತಮ್ಮ ಕೋರ್ಸ್ಅನ್ನು ಪೂರ್ಣಗೊಳಿಸುವ ಮೊದಲು ಯುದ್ಧ ಪೀಡಿತ ಉಕ್ರೇನ್‌ನಿಂದ ಹಿಂದಿರುಗಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಪರ್ಯಾಯ ಕ್ರಮಗಳನ್ನು ಕೇಂದ್ರ ಸರ್ಕಾರ ಪರಿಗಣಿಸುತ್ತಿದೆ” ಎಂದು ತಿಳಿಸಿದ್ದಾರೆ.

“ಪ್ರಸ್ತುತ ವೈದ್ಯಕೀಯ ಶಿಕ್ಷಣದ ವೆಚ್ಚ ಹೆಚ್ಚುತ್ತಿದೆ. ಸರಕಾರಿ ಸೀಟುಗಳ ವೆಚ್ಚ ಕಡಿಮೆಯಾದರೂ ಖಾಸಗಿ ವಲಯದಲ್ಲಿ ಸೀಟುಗಳ ವೆಚ್ಚ ಹೆಚ್ಚಿದೆ. ಕೆಲವು ಸಂದರ್ಭಗಳಲ್ಲಿ ಶೇ.90-95 ಅಂಕ ಗಳಿಸಿದ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಸಾಧ್ಯವಾಗುತ್ತಿಲ್ಲ. ಮ್ಯಾನೇಜ್‌ಮೆಂಟ್‌ ಅಥವಾ ಎನ್‌ಆರ್‌ಐ ಸೀಟ್ ವೆಚ್ಚಗಳು ಸಹ ಹೆಚ್ಚಾಗಿದೆ. ಹೀಗಾಗಿ ಇತರ ಆಯ್ಕೆಗಳನ್ನು (ಉಕ್ರೇನ್‌ನಂತಹ ದೇಶಗಳಲ್ಲಿ ಅಧ್ಯಯನ ಮಾಡುವುದು) ನೋಡುವಂತಾಗಿದೆ” ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಉಕ್ರೇನ್‌ನಂತಹ ದೇಶಗಳಿಗೆ ಹೋಗುವ ಬದಲು ಭಾರತದಲ್ಲಿಯೇ ವೈದ್ಯಕೀಯ ಅಧ್ಯಯನ ಮಾಡಲು ಸಾಕಷ್ಟು ಅವಕಾಶವನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುವ ಸಂಬಂಧ ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಸರ್ಕಾರ ಚರ್ಚೆ ನಡೆಸಿದ್ದು, ರಾಜ್ಯದಲ್ಲಿ ಶುಲ್ಕ ಕಡಿತಗೊಳಿಸಲು ಎ,ಬಿ ಮತ್ತು ಸಿ ವರ್ಗೀಕರಣಕ್ಕೆ ಮುಂದಾಗಿದ್ದೇವೆ. ಆದರೆ ವೈದ್ಯಕೀಯ ಕೋರ್ಸ್‌ಗಳನ್ನು ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್‌ಎಂಸಿ) ನಿಯಂತ್ರಿಸುತ್ತದೆ. ಹೀಗಾಗಿ ಅವರೂ ಇದರ ಕುರಿತು ಗಮನ ಹರಿಸಿದ್ದಾರೆ. ಉಕ್ರೇನ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಶುಲ್ಕ ಕಡಿತದ ಕುರಿತು ಚರ್ಚಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಉಕ್ರೇನ್‌ನಿಂದ ಹಿಂತಿರುಗಿದ ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಸ್ಥಗಿತಗೊಳಿಸಿರುವುದರಿಂದ ಅವರಿಗೆ ಪರ್ಯಾಯ ವ್ಯವಸ್ಥೆಗಳನ್ನು ಸರ್ಕಾರ ನೀಡುವುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, “ಕೇಂದ್ರ ಸರ್ಕಾರವು ಈ ಬಗ್ಗೆ ಯೋಚಿಸುತ್ತಿದೆ” ಎಂದಿದ್ದಾರೆ.

“ಮೊದಲ, ಎರಡನೇ ಮತ್ತು ಮೂರನೇ ವರ್ಷದ ವಿದ್ಯಾರ್ಥಿಗಳು ಉಕ್ರೇನ್‌ನಿಂದ ಹಿಂತಿರುಗಿದ್ದಾರೆ. ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ಈ ಸಮಸ್ಯೆಯನ್ನು ಅನುಭವಿಸಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಈ ಬಗ್ಗೆ ಚಿಂತನೆ ನಡೆಸುತ್ತಿದೆ” ಎಂದು ಪ್ರತಿಕ್ರಿಯೆಸಿದ್ದಾರೆ.

ಮಾರ್ಚ್ 1ರಂದು ಉಕ್ರೇನ್‌ನಲ್ಲಿ ರಷ್ಯಾದ ಕ್ಷಿಪಣಿ ದಾಳಿಗೆ ಬಲಿಯಾದ ಖಾರ್ಕಿವ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಜ್ಞಾನಗೌಡರ ಅವರಿಗೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸುವ ಮುನ್ನ ಬೊಮ್ಮಾಯಿ ಮಾತನಾಡಿದರು. ಇದಕ್ಕೂ ಮೊದಲು ಮುಖ್ಯಮಂತ್ರಿಗಳು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ನವೀನ್ ಅವರ ಪಾರ್ಥಿವ ಶರೀರವನ್ನು ಬರಮಾಡಿಕೊಂಡರು.

ನೀಟ್‌ ರದ್ದುಗೊಳಿಸಲು ಕುಮಾರಸ್ವಾಮಿ ಆಗ್ರಹ

ಧನದಾಹಕ್ಕೆ ಕಡಿವಾಣ ಹಾಕಿ ಎಲ್ಲರಿಗೂ ಮೆಡಿಕಲ್ ಸೀಟು ಕೊಡಿಸುವ ಉದ್ದೇಶದಿಂದ ಜಾರಿಗೆ ಬಂದ ನೀಟ್ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ನವೀನ್ ಸಾವಿನಿಂದ ಜ್ಞಾನೋದಯ ಆಗಿದೆ ಎನ್ನುವ ಮುಖ್ಯಮಂತ್ರಿಯವರು ವೈದ್ಯ ಶಿಕ್ಷಣ ಶುಲ್ಕ ಕಡಿಮೆ ಮಾಡುವ ಹೇಳಿಕೆ ನೀಡುತ್ತಾರೆ. ಆದರೆ, ನೀಟ್ ವಿರುದ್ಧ ಚಕಾರ ಎತ್ತುತ್ತಿಲ್ಲ, ಯಾಕೆ? ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ಖಾಸಗಿ ಕಾಲೇಜುಗಳಲ್ಲಿ ವೈದ್ಯ ಶಿಕ್ಷಣ ದುಬಾರಿ ಎಂದು ಸ್ವತಃ ಮುಖ್ಯಮಂತ್ರಿಯೇ ಒಪ್ಪಿಕೊಂಡಿದ್ದಾರೆ. ಹಾಗಾದರೆ, ಅಂಥ ಕಾಲೇಜುಗಳಿಗೆ ಶಕ್ತಿ ತುಂಬುತ್ತಿರುವುದು ಏಕೆ! ಸರಕಾರಿ ವೈದ್ಯ ಕಾಲೇಜುಗಳಲ್ಲಿ ಕನ್ನಡದ ಮಕ್ಕಳಿಗೆ ಸೀಟು ಸಿಗುತ್ತಿಲ್ಲ. ಟ್ಯೂಷನ್ ಅಂಗಡಿಗಳಿಗೆ ಲಕ್ಷ ಲಕ್ಷ ಕಟ್ಟುವುದು ಬಡ, ಮಧ್ಯಮ ವರ್ಗದ ಮಕ್ಕಳಿಗೆ ಸಾಧ್ಯವಿಲ್ಲ ಎಂದಿದ್ದಾರೆ.


ಇದನ್ನೂ ಓದಿರಿ: ವೈದ್ಯಕೀಯ ‘ಭಾರ‘ತ: ಉಕ್ರೇನ್‌ನಲ್ಲಿ ಸಿಲುಕಿದ ಇಂಡಿಯಾ ವಿದ್ಯಾರ್ಥಿಗಳ ನೋವಿನ ಮೂಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...