Homeಕರ್ನಾಟಕವೈದ್ಯಕೀಯ ಶಿಕ್ಷಣ ಶುಲ್ಕ ಕಡಿಮೆ ಮಾಡಲು ಚಿಂತನೆ: ಸಿಎಂ ಬೊಮ್ಮಾಯಿ ಭರವಸೆ

ವೈದ್ಯಕೀಯ ಶಿಕ್ಷಣ ಶುಲ್ಕ ಕಡಿಮೆ ಮಾಡಲು ಚಿಂತನೆ: ಸಿಎಂ ಬೊಮ್ಮಾಯಿ ಭರವಸೆ

- Advertisement -
- Advertisement -

ರಾಜ್ಯದಲ್ಲಿ ವೈದ್ಯಕೀಯ ಕೋರ್ಸ್‌ಗಳ ಶುಲ್ಕವನ್ನು ಕಡಿಮೆ ಮಾಡುವ ಕ್ರಮಗಳನ್ನು ಸರ್ಕಾರ ಪರಿಗಣಿಸುತ್ತಿದೆ. ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್‌ಎಂಸಿ) ಸಹ ಇದರ ಕುರಿತು ಪರಿಶೀಲಿಸುತ್ತಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಉಕ್ರೇನ್‌ನಲ್ಲಿ ಭಾರತದ ವೈದ್ಯಕೀಯ ವಿದ್ಯಾರ್ಥಿಗಳು ಸಿಲುಕಿ ತೊಂದರೆ ಅನುಭವಿಸಿದ ಬಳಿಕ ಈ ಹೇಳಿಕೆ ಹೊರ ಬಂದಿದೆ. “ಹೆಚ್ಚಿನ ವಿದ್ಯಾರ್ಥಿಗಳಿಗೆ ಇಲ್ಲಿ ಅಧ್ಯಯನ ಮಾಡಲು ಅನುಕೂಲ ಮಾಡಿಕೊಡುವ ಗುರಿ ಇಟ್ಟುಕೊಂಡಿದ್ದೇವೆ. ತಮ್ಮ ಕೋರ್ಸ್ಅನ್ನು ಪೂರ್ಣಗೊಳಿಸುವ ಮೊದಲು ಯುದ್ಧ ಪೀಡಿತ ಉಕ್ರೇನ್‌ನಿಂದ ಹಿಂದಿರುಗಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಪರ್ಯಾಯ ಕ್ರಮಗಳನ್ನು ಕೇಂದ್ರ ಸರ್ಕಾರ ಪರಿಗಣಿಸುತ್ತಿದೆ” ಎಂದು ತಿಳಿಸಿದ್ದಾರೆ.

“ಪ್ರಸ್ತುತ ವೈದ್ಯಕೀಯ ಶಿಕ್ಷಣದ ವೆಚ್ಚ ಹೆಚ್ಚುತ್ತಿದೆ. ಸರಕಾರಿ ಸೀಟುಗಳ ವೆಚ್ಚ ಕಡಿಮೆಯಾದರೂ ಖಾಸಗಿ ವಲಯದಲ್ಲಿ ಸೀಟುಗಳ ವೆಚ್ಚ ಹೆಚ್ಚಿದೆ. ಕೆಲವು ಸಂದರ್ಭಗಳಲ್ಲಿ ಶೇ.90-95 ಅಂಕ ಗಳಿಸಿದ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಸಾಧ್ಯವಾಗುತ್ತಿಲ್ಲ. ಮ್ಯಾನೇಜ್‌ಮೆಂಟ್‌ ಅಥವಾ ಎನ್‌ಆರ್‌ಐ ಸೀಟ್ ವೆಚ್ಚಗಳು ಸಹ ಹೆಚ್ಚಾಗಿದೆ. ಹೀಗಾಗಿ ಇತರ ಆಯ್ಕೆಗಳನ್ನು (ಉಕ್ರೇನ್‌ನಂತಹ ದೇಶಗಳಲ್ಲಿ ಅಧ್ಯಯನ ಮಾಡುವುದು) ನೋಡುವಂತಾಗಿದೆ” ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಉಕ್ರೇನ್‌ನಂತಹ ದೇಶಗಳಿಗೆ ಹೋಗುವ ಬದಲು ಭಾರತದಲ್ಲಿಯೇ ವೈದ್ಯಕೀಯ ಅಧ್ಯಯನ ಮಾಡಲು ಸಾಕಷ್ಟು ಅವಕಾಶವನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುವ ಸಂಬಂಧ ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಸರ್ಕಾರ ಚರ್ಚೆ ನಡೆಸಿದ್ದು, ರಾಜ್ಯದಲ್ಲಿ ಶುಲ್ಕ ಕಡಿತಗೊಳಿಸಲು ಎ,ಬಿ ಮತ್ತು ಸಿ ವರ್ಗೀಕರಣಕ್ಕೆ ಮುಂದಾಗಿದ್ದೇವೆ. ಆದರೆ ವೈದ್ಯಕೀಯ ಕೋರ್ಸ್‌ಗಳನ್ನು ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್‌ಎಂಸಿ) ನಿಯಂತ್ರಿಸುತ್ತದೆ. ಹೀಗಾಗಿ ಅವರೂ ಇದರ ಕುರಿತು ಗಮನ ಹರಿಸಿದ್ದಾರೆ. ಉಕ್ರೇನ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಶುಲ್ಕ ಕಡಿತದ ಕುರಿತು ಚರ್ಚಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಉಕ್ರೇನ್‌ನಿಂದ ಹಿಂತಿರುಗಿದ ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಸ್ಥಗಿತಗೊಳಿಸಿರುವುದರಿಂದ ಅವರಿಗೆ ಪರ್ಯಾಯ ವ್ಯವಸ್ಥೆಗಳನ್ನು ಸರ್ಕಾರ ನೀಡುವುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, “ಕೇಂದ್ರ ಸರ್ಕಾರವು ಈ ಬಗ್ಗೆ ಯೋಚಿಸುತ್ತಿದೆ” ಎಂದಿದ್ದಾರೆ.

“ಮೊದಲ, ಎರಡನೇ ಮತ್ತು ಮೂರನೇ ವರ್ಷದ ವಿದ್ಯಾರ್ಥಿಗಳು ಉಕ್ರೇನ್‌ನಿಂದ ಹಿಂತಿರುಗಿದ್ದಾರೆ. ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ಈ ಸಮಸ್ಯೆಯನ್ನು ಅನುಭವಿಸಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಈ ಬಗ್ಗೆ ಚಿಂತನೆ ನಡೆಸುತ್ತಿದೆ” ಎಂದು ಪ್ರತಿಕ್ರಿಯೆಸಿದ್ದಾರೆ.

ಮಾರ್ಚ್ 1ರಂದು ಉಕ್ರೇನ್‌ನಲ್ಲಿ ರಷ್ಯಾದ ಕ್ಷಿಪಣಿ ದಾಳಿಗೆ ಬಲಿಯಾದ ಖಾರ್ಕಿವ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಜ್ಞಾನಗೌಡರ ಅವರಿಗೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸುವ ಮುನ್ನ ಬೊಮ್ಮಾಯಿ ಮಾತನಾಡಿದರು. ಇದಕ್ಕೂ ಮೊದಲು ಮುಖ್ಯಮಂತ್ರಿಗಳು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ನವೀನ್ ಅವರ ಪಾರ್ಥಿವ ಶರೀರವನ್ನು ಬರಮಾಡಿಕೊಂಡರು.

ನೀಟ್‌ ರದ್ದುಗೊಳಿಸಲು ಕುಮಾರಸ್ವಾಮಿ ಆಗ್ರಹ

ಧನದಾಹಕ್ಕೆ ಕಡಿವಾಣ ಹಾಕಿ ಎಲ್ಲರಿಗೂ ಮೆಡಿಕಲ್ ಸೀಟು ಕೊಡಿಸುವ ಉದ್ದೇಶದಿಂದ ಜಾರಿಗೆ ಬಂದ ನೀಟ್ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ನವೀನ್ ಸಾವಿನಿಂದ ಜ್ಞಾನೋದಯ ಆಗಿದೆ ಎನ್ನುವ ಮುಖ್ಯಮಂತ್ರಿಯವರು ವೈದ್ಯ ಶಿಕ್ಷಣ ಶುಲ್ಕ ಕಡಿಮೆ ಮಾಡುವ ಹೇಳಿಕೆ ನೀಡುತ್ತಾರೆ. ಆದರೆ, ನೀಟ್ ವಿರುದ್ಧ ಚಕಾರ ಎತ್ತುತ್ತಿಲ್ಲ, ಯಾಕೆ? ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ಖಾಸಗಿ ಕಾಲೇಜುಗಳಲ್ಲಿ ವೈದ್ಯ ಶಿಕ್ಷಣ ದುಬಾರಿ ಎಂದು ಸ್ವತಃ ಮುಖ್ಯಮಂತ್ರಿಯೇ ಒಪ್ಪಿಕೊಂಡಿದ್ದಾರೆ. ಹಾಗಾದರೆ, ಅಂಥ ಕಾಲೇಜುಗಳಿಗೆ ಶಕ್ತಿ ತುಂಬುತ್ತಿರುವುದು ಏಕೆ! ಸರಕಾರಿ ವೈದ್ಯ ಕಾಲೇಜುಗಳಲ್ಲಿ ಕನ್ನಡದ ಮಕ್ಕಳಿಗೆ ಸೀಟು ಸಿಗುತ್ತಿಲ್ಲ. ಟ್ಯೂಷನ್ ಅಂಗಡಿಗಳಿಗೆ ಲಕ್ಷ ಲಕ್ಷ ಕಟ್ಟುವುದು ಬಡ, ಮಧ್ಯಮ ವರ್ಗದ ಮಕ್ಕಳಿಗೆ ಸಾಧ್ಯವಿಲ್ಲ ಎಂದಿದ್ದಾರೆ.


ಇದನ್ನೂ ಓದಿರಿ: ವೈದ್ಯಕೀಯ ‘ಭಾರ‘ತ: ಉಕ್ರೇನ್‌ನಲ್ಲಿ ಸಿಲುಕಿದ ಇಂಡಿಯಾ ವಿದ್ಯಾರ್ಥಿಗಳ ನೋವಿನ ಮೂಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....