Homeಕರ್ನಾಟಕವೈದ್ಯಕೀಯ ಶಿಕ್ಷಣ ಶುಲ್ಕ ಕಡಿಮೆ ಮಾಡಲು ಚಿಂತನೆ: ಸಿಎಂ ಬೊಮ್ಮಾಯಿ ಭರವಸೆ

ವೈದ್ಯಕೀಯ ಶಿಕ್ಷಣ ಶುಲ್ಕ ಕಡಿಮೆ ಮಾಡಲು ಚಿಂತನೆ: ಸಿಎಂ ಬೊಮ್ಮಾಯಿ ಭರವಸೆ

- Advertisement -
- Advertisement -

ರಾಜ್ಯದಲ್ಲಿ ವೈದ್ಯಕೀಯ ಕೋರ್ಸ್‌ಗಳ ಶುಲ್ಕವನ್ನು ಕಡಿಮೆ ಮಾಡುವ ಕ್ರಮಗಳನ್ನು ಸರ್ಕಾರ ಪರಿಗಣಿಸುತ್ತಿದೆ. ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್‌ಎಂಸಿ) ಸಹ ಇದರ ಕುರಿತು ಪರಿಶೀಲಿಸುತ್ತಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಉಕ್ರೇನ್‌ನಲ್ಲಿ ಭಾರತದ ವೈದ್ಯಕೀಯ ವಿದ್ಯಾರ್ಥಿಗಳು ಸಿಲುಕಿ ತೊಂದರೆ ಅನುಭವಿಸಿದ ಬಳಿಕ ಈ ಹೇಳಿಕೆ ಹೊರ ಬಂದಿದೆ. “ಹೆಚ್ಚಿನ ವಿದ್ಯಾರ್ಥಿಗಳಿಗೆ ಇಲ್ಲಿ ಅಧ್ಯಯನ ಮಾಡಲು ಅನುಕೂಲ ಮಾಡಿಕೊಡುವ ಗುರಿ ಇಟ್ಟುಕೊಂಡಿದ್ದೇವೆ. ತಮ್ಮ ಕೋರ್ಸ್ಅನ್ನು ಪೂರ್ಣಗೊಳಿಸುವ ಮೊದಲು ಯುದ್ಧ ಪೀಡಿತ ಉಕ್ರೇನ್‌ನಿಂದ ಹಿಂದಿರುಗಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಪರ್ಯಾಯ ಕ್ರಮಗಳನ್ನು ಕೇಂದ್ರ ಸರ್ಕಾರ ಪರಿಗಣಿಸುತ್ತಿದೆ” ಎಂದು ತಿಳಿಸಿದ್ದಾರೆ.

“ಪ್ರಸ್ತುತ ವೈದ್ಯಕೀಯ ಶಿಕ್ಷಣದ ವೆಚ್ಚ ಹೆಚ್ಚುತ್ತಿದೆ. ಸರಕಾರಿ ಸೀಟುಗಳ ವೆಚ್ಚ ಕಡಿಮೆಯಾದರೂ ಖಾಸಗಿ ವಲಯದಲ್ಲಿ ಸೀಟುಗಳ ವೆಚ್ಚ ಹೆಚ್ಚಿದೆ. ಕೆಲವು ಸಂದರ್ಭಗಳಲ್ಲಿ ಶೇ.90-95 ಅಂಕ ಗಳಿಸಿದ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಸಾಧ್ಯವಾಗುತ್ತಿಲ್ಲ. ಮ್ಯಾನೇಜ್‌ಮೆಂಟ್‌ ಅಥವಾ ಎನ್‌ಆರ್‌ಐ ಸೀಟ್ ವೆಚ್ಚಗಳು ಸಹ ಹೆಚ್ಚಾಗಿದೆ. ಹೀಗಾಗಿ ಇತರ ಆಯ್ಕೆಗಳನ್ನು (ಉಕ್ರೇನ್‌ನಂತಹ ದೇಶಗಳಲ್ಲಿ ಅಧ್ಯಯನ ಮಾಡುವುದು) ನೋಡುವಂತಾಗಿದೆ” ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಉಕ್ರೇನ್‌ನಂತಹ ದೇಶಗಳಿಗೆ ಹೋಗುವ ಬದಲು ಭಾರತದಲ್ಲಿಯೇ ವೈದ್ಯಕೀಯ ಅಧ್ಯಯನ ಮಾಡಲು ಸಾಕಷ್ಟು ಅವಕಾಶವನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುವ ಸಂಬಂಧ ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಸರ್ಕಾರ ಚರ್ಚೆ ನಡೆಸಿದ್ದು, ರಾಜ್ಯದಲ್ಲಿ ಶುಲ್ಕ ಕಡಿತಗೊಳಿಸಲು ಎ,ಬಿ ಮತ್ತು ಸಿ ವರ್ಗೀಕರಣಕ್ಕೆ ಮುಂದಾಗಿದ್ದೇವೆ. ಆದರೆ ವೈದ್ಯಕೀಯ ಕೋರ್ಸ್‌ಗಳನ್ನು ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್‌ಎಂಸಿ) ನಿಯಂತ್ರಿಸುತ್ತದೆ. ಹೀಗಾಗಿ ಅವರೂ ಇದರ ಕುರಿತು ಗಮನ ಹರಿಸಿದ್ದಾರೆ. ಉಕ್ರೇನ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಶುಲ್ಕ ಕಡಿತದ ಕುರಿತು ಚರ್ಚಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಉಕ್ರೇನ್‌ನಿಂದ ಹಿಂತಿರುಗಿದ ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಸ್ಥಗಿತಗೊಳಿಸಿರುವುದರಿಂದ ಅವರಿಗೆ ಪರ್ಯಾಯ ವ್ಯವಸ್ಥೆಗಳನ್ನು ಸರ್ಕಾರ ನೀಡುವುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, “ಕೇಂದ್ರ ಸರ್ಕಾರವು ಈ ಬಗ್ಗೆ ಯೋಚಿಸುತ್ತಿದೆ” ಎಂದಿದ್ದಾರೆ.

“ಮೊದಲ, ಎರಡನೇ ಮತ್ತು ಮೂರನೇ ವರ್ಷದ ವಿದ್ಯಾರ್ಥಿಗಳು ಉಕ್ರೇನ್‌ನಿಂದ ಹಿಂತಿರುಗಿದ್ದಾರೆ. ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ಈ ಸಮಸ್ಯೆಯನ್ನು ಅನುಭವಿಸಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಈ ಬಗ್ಗೆ ಚಿಂತನೆ ನಡೆಸುತ್ತಿದೆ” ಎಂದು ಪ್ರತಿಕ್ರಿಯೆಸಿದ್ದಾರೆ.

ಮಾರ್ಚ್ 1ರಂದು ಉಕ್ರೇನ್‌ನಲ್ಲಿ ರಷ್ಯಾದ ಕ್ಷಿಪಣಿ ದಾಳಿಗೆ ಬಲಿಯಾದ ಖಾರ್ಕಿವ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಜ್ಞಾನಗೌಡರ ಅವರಿಗೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸುವ ಮುನ್ನ ಬೊಮ್ಮಾಯಿ ಮಾತನಾಡಿದರು. ಇದಕ್ಕೂ ಮೊದಲು ಮುಖ್ಯಮಂತ್ರಿಗಳು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ನವೀನ್ ಅವರ ಪಾರ್ಥಿವ ಶರೀರವನ್ನು ಬರಮಾಡಿಕೊಂಡರು.

ನೀಟ್‌ ರದ್ದುಗೊಳಿಸಲು ಕುಮಾರಸ್ವಾಮಿ ಆಗ್ರಹ

ಧನದಾಹಕ್ಕೆ ಕಡಿವಾಣ ಹಾಕಿ ಎಲ್ಲರಿಗೂ ಮೆಡಿಕಲ್ ಸೀಟು ಕೊಡಿಸುವ ಉದ್ದೇಶದಿಂದ ಜಾರಿಗೆ ಬಂದ ನೀಟ್ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ನವೀನ್ ಸಾವಿನಿಂದ ಜ್ಞಾನೋದಯ ಆಗಿದೆ ಎನ್ನುವ ಮುಖ್ಯಮಂತ್ರಿಯವರು ವೈದ್ಯ ಶಿಕ್ಷಣ ಶುಲ್ಕ ಕಡಿಮೆ ಮಾಡುವ ಹೇಳಿಕೆ ನೀಡುತ್ತಾರೆ. ಆದರೆ, ನೀಟ್ ವಿರುದ್ಧ ಚಕಾರ ಎತ್ತುತ್ತಿಲ್ಲ, ಯಾಕೆ? ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ಖಾಸಗಿ ಕಾಲೇಜುಗಳಲ್ಲಿ ವೈದ್ಯ ಶಿಕ್ಷಣ ದುಬಾರಿ ಎಂದು ಸ್ವತಃ ಮುಖ್ಯಮಂತ್ರಿಯೇ ಒಪ್ಪಿಕೊಂಡಿದ್ದಾರೆ. ಹಾಗಾದರೆ, ಅಂಥ ಕಾಲೇಜುಗಳಿಗೆ ಶಕ್ತಿ ತುಂಬುತ್ತಿರುವುದು ಏಕೆ! ಸರಕಾರಿ ವೈದ್ಯ ಕಾಲೇಜುಗಳಲ್ಲಿ ಕನ್ನಡದ ಮಕ್ಕಳಿಗೆ ಸೀಟು ಸಿಗುತ್ತಿಲ್ಲ. ಟ್ಯೂಷನ್ ಅಂಗಡಿಗಳಿಗೆ ಲಕ್ಷ ಲಕ್ಷ ಕಟ್ಟುವುದು ಬಡ, ಮಧ್ಯಮ ವರ್ಗದ ಮಕ್ಕಳಿಗೆ ಸಾಧ್ಯವಿಲ್ಲ ಎಂದಿದ್ದಾರೆ.


ಇದನ್ನೂ ಓದಿರಿ: ವೈದ್ಯಕೀಯ ‘ಭಾರ‘ತ: ಉಕ್ರೇನ್‌ನಲ್ಲಿ ಸಿಲುಕಿದ ಇಂಡಿಯಾ ವಿದ್ಯಾರ್ಥಿಗಳ ನೋವಿನ ಮೂಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...