Homeಮುಖಪುಟಬಿಹಾರದಲ್ಲಿ ತೃತೀಯ ರಂಗ ರಚನೆ: ಮಾಜಿ ಕೇಂದ್ರ ಹಣಕಾಸು ಸಚಿವ ಯಶ್ವಂತ್ ಸಿನ್ಹಾ ಇಂಗಿತ

ಬಿಹಾರದಲ್ಲಿ ತೃತೀಯ ರಂಗ ರಚನೆ: ಮಾಜಿ ಕೇಂದ್ರ ಹಣಕಾಸು ಸಚಿವ ಯಶ್ವಂತ್ ಸಿನ್ಹಾ ಇಂಗಿತ

ಸಿನ್ಹಾ ಅವರ ತಂಡವನ್ನು ”ಏನನ್ನೂ ಸಾಧಿಸಲು ಸಾಧ್ಯವಾಗದೆ ಸೋತವರ ಗುಂಪು" ಎಂದು ಜೆಡಿಯು ನಾಯಕರೊಬ್ಬರು ವ್ಯಂಗ್ಯವಾಡಿದ್ದಾರೆಂದು ’ದಿ ಪ್ರಿಂಟ್’ ವರದಿ ಮಾಡಿದೆ.

- Advertisement -
- Advertisement -

ಬಿಹಾರದಲ್ಲಿ ಚುನಾವಣಾ ರಾಜಕೀಯ ಗರಿಗೆದರುತ್ತಿದ್ದು ಮಾಜಿ ಕೇಂದ್ರ ಹಣಕಾಸು ಸಚಿವ ಯಶ್ವಂತ್ ಸಿನ್ಹಾ ರಾಜ್ಯದಲ್ಲಿ ತೃತೀಯ ರಂಗ ರಚಿಸುವ ಇಂಗಿತವನ್ನು ಪ್ರಕಟಿಸಿದ್ದಾರೆ.

ಪಾಟ್ನಾದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿಸಿದ ಸಿನ್ಹಾ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಆಡಳಿತದ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದರು. ಎನ್‌ಡಿಎ ಸರ್ಕಾರದಿಂದ ರಾಜ್ಯಕ್ಕೆ ಬದಲಾವಣೆಯ ಅಗತ್ಯವಿದೆ ಎಂದು ಅವರು ಒತ್ತಿ ಹೇಳಿದರು.

“ನಮ್ಮೊಂದಿಗೆ ಸೇರಲು ಎಲ್ಲರಿಗೂ ಸ್ವಾಗತ. ಆದರೆ ಸೇರಲು ಯಾವುದೇ ಷರತ್ತು ವಿಧಿಸಬಾರದು” ಎಂದು ಹೇಳಿದ ಅವರು, ಶೀಘ್ರದಲ್ಲೇ ತಮ್ಮ ಒಕ್ಕೂಟದ ಹೆಸರನ್ನು ಪ್ರಕಟಿಸುವುದಾಗಿ ಹೇಳಿದರು.

“ಸಿನ್ಹಾ ಕಳೆದ ಮೂರು ವಾರಗಳಿಂದ ಪಾಟ್ನಾದಲ್ಲಿದ್ದಾರೆ” ಎಂದು ಅವರ ನಿಕಟವರ್ತಿ ನರೇಂದ್ರ ಸಿಂಗ್ ಹೇಳಿದರು. ಬಿಹಾರ ರಾಜಕಾರಣದ ಪ್ರಮುಖ ಪಕ್ಷವನ್ನು ಉಲ್ಲೇಖಿಸಿದ ಅವರು “ಎನ್‌ಡಿಎ ಮತ್ತು ಆರ್‌ಜೆಡಿಗೆ ಪರ್ಯಾಯವಾಗಿ ವಿಶ್ವಾಸಾರ್ಹ ಒಕ್ಕೂಟವನ್ನು ಉತ್ತೇಜಿಸುವುದು ನಮ್ಮ ಪ್ರಯತ್ನ” ಎಂದು ತಿಳಿಸಿದರು.

ಸಿನ್ಹಾ ಅವರ ತಂಡವನ್ನು ”ಏನನ್ನೂ ಸಾಧಿಸಲು ಸಾಧ್ಯವಾಗದೆ ಸೋತವರ ಗುಂಪು” ಎಂದು ಜೆಡಿಯು ನಾಯಕರೊಬ್ಬರು ವ್ಯಂಗ್ಯವಾಡಿದ್ದಾರೆಂದು ’ದಿ ಪ್ರಿಂಟ್’ ವರದಿ ಮಾಡಿದೆ.

ನಿನ್ನೆ (ಶನಿವಾರ) ನಡೆದ ಈ ಗೋಷ್ಠಿಯಲ್ಲಿ ಝಜರ್‌ಪುರದ ಮಾಜಿ ಸಂಸದ ದೇವೇಂದ್ರ ಪ್ರಸಾದ್ ಯಾದವ್, ಜೆಹಾನಾಬಾದ್‌ನ ಮಾಜಿ ಸಂಸದ ಅರುಣ್ ಕುಮಾರ್, ಮಾಜಿ ಕೇಂದ್ರ ಸಚಿವ ನಾಗಮಣಿ ಮತ್ತು ಬಿಹಾರದ ಮಾಜಿ ಬಿಜೆಪಿ ಮುಖಂಡ ಮತ್ತು ಸಂಸದ ರೇಣು ಕುಶ್ವಾಹ ಇದ್ದರು.

ಬಿಹಾರ ರಾಜ್ಯದಲ್ಲಿ ಈ ವರ್ಷದ ಅಂತ್ಯಕ್ಕೆ ವಿಧಾನಸಭಾ ಚುನಾವಣೆ ನಡೆಯಲಿದೆ.


ಓದಿ: ಬಿಹಾರದಲ್ಲಿ ಅಮಿತ್‌ ಶಾ ಬೆಂಗಾವಲು ವಾಹನದ ಮೇಲೆ ದಾಳಿ ನಡೆಯಿತೆ? ಈ ವಿಡಿಯೋದ ಅಸಲಿಯತ್ತೇನು ?


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...