Homeಮುಖಪುಟಬಿಹಾರದಲ್ಲಿ ತೃತೀಯ ರಂಗ ರಚನೆ: ಮಾಜಿ ಕೇಂದ್ರ ಹಣಕಾಸು ಸಚಿವ ಯಶ್ವಂತ್ ಸಿನ್ಹಾ ಇಂಗಿತ

ಬಿಹಾರದಲ್ಲಿ ತೃತೀಯ ರಂಗ ರಚನೆ: ಮಾಜಿ ಕೇಂದ್ರ ಹಣಕಾಸು ಸಚಿವ ಯಶ್ವಂತ್ ಸಿನ್ಹಾ ಇಂಗಿತ

ಸಿನ್ಹಾ ಅವರ ತಂಡವನ್ನು ”ಏನನ್ನೂ ಸಾಧಿಸಲು ಸಾಧ್ಯವಾಗದೆ ಸೋತವರ ಗುಂಪು" ಎಂದು ಜೆಡಿಯು ನಾಯಕರೊಬ್ಬರು ವ್ಯಂಗ್ಯವಾಡಿದ್ದಾರೆಂದು ’ದಿ ಪ್ರಿಂಟ್’ ವರದಿ ಮಾಡಿದೆ.

- Advertisement -
- Advertisement -

ಬಿಹಾರದಲ್ಲಿ ಚುನಾವಣಾ ರಾಜಕೀಯ ಗರಿಗೆದರುತ್ತಿದ್ದು ಮಾಜಿ ಕೇಂದ್ರ ಹಣಕಾಸು ಸಚಿವ ಯಶ್ವಂತ್ ಸಿನ್ಹಾ ರಾಜ್ಯದಲ್ಲಿ ತೃತೀಯ ರಂಗ ರಚಿಸುವ ಇಂಗಿತವನ್ನು ಪ್ರಕಟಿಸಿದ್ದಾರೆ.

ಪಾಟ್ನಾದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿಸಿದ ಸಿನ್ಹಾ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಆಡಳಿತದ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದರು. ಎನ್‌ಡಿಎ ಸರ್ಕಾರದಿಂದ ರಾಜ್ಯಕ್ಕೆ ಬದಲಾವಣೆಯ ಅಗತ್ಯವಿದೆ ಎಂದು ಅವರು ಒತ್ತಿ ಹೇಳಿದರು.

“ನಮ್ಮೊಂದಿಗೆ ಸೇರಲು ಎಲ್ಲರಿಗೂ ಸ್ವಾಗತ. ಆದರೆ ಸೇರಲು ಯಾವುದೇ ಷರತ್ತು ವಿಧಿಸಬಾರದು” ಎಂದು ಹೇಳಿದ ಅವರು, ಶೀಘ್ರದಲ್ಲೇ ತಮ್ಮ ಒಕ್ಕೂಟದ ಹೆಸರನ್ನು ಪ್ರಕಟಿಸುವುದಾಗಿ ಹೇಳಿದರು.

“ಸಿನ್ಹಾ ಕಳೆದ ಮೂರು ವಾರಗಳಿಂದ ಪಾಟ್ನಾದಲ್ಲಿದ್ದಾರೆ” ಎಂದು ಅವರ ನಿಕಟವರ್ತಿ ನರೇಂದ್ರ ಸಿಂಗ್ ಹೇಳಿದರು. ಬಿಹಾರ ರಾಜಕಾರಣದ ಪ್ರಮುಖ ಪಕ್ಷವನ್ನು ಉಲ್ಲೇಖಿಸಿದ ಅವರು “ಎನ್‌ಡಿಎ ಮತ್ತು ಆರ್‌ಜೆಡಿಗೆ ಪರ್ಯಾಯವಾಗಿ ವಿಶ್ವಾಸಾರ್ಹ ಒಕ್ಕೂಟವನ್ನು ಉತ್ತೇಜಿಸುವುದು ನಮ್ಮ ಪ್ರಯತ್ನ” ಎಂದು ತಿಳಿಸಿದರು.

ಸಿನ್ಹಾ ಅವರ ತಂಡವನ್ನು ”ಏನನ್ನೂ ಸಾಧಿಸಲು ಸಾಧ್ಯವಾಗದೆ ಸೋತವರ ಗುಂಪು” ಎಂದು ಜೆಡಿಯು ನಾಯಕರೊಬ್ಬರು ವ್ಯಂಗ್ಯವಾಡಿದ್ದಾರೆಂದು ’ದಿ ಪ್ರಿಂಟ್’ ವರದಿ ಮಾಡಿದೆ.

ನಿನ್ನೆ (ಶನಿವಾರ) ನಡೆದ ಈ ಗೋಷ್ಠಿಯಲ್ಲಿ ಝಜರ್‌ಪುರದ ಮಾಜಿ ಸಂಸದ ದೇವೇಂದ್ರ ಪ್ರಸಾದ್ ಯಾದವ್, ಜೆಹಾನಾಬಾದ್‌ನ ಮಾಜಿ ಸಂಸದ ಅರುಣ್ ಕುಮಾರ್, ಮಾಜಿ ಕೇಂದ್ರ ಸಚಿವ ನಾಗಮಣಿ ಮತ್ತು ಬಿಹಾರದ ಮಾಜಿ ಬಿಜೆಪಿ ಮುಖಂಡ ಮತ್ತು ಸಂಸದ ರೇಣು ಕುಶ್ವಾಹ ಇದ್ದರು.

ಬಿಹಾರ ರಾಜ್ಯದಲ್ಲಿ ಈ ವರ್ಷದ ಅಂತ್ಯಕ್ಕೆ ವಿಧಾನಸಭಾ ಚುನಾವಣೆ ನಡೆಯಲಿದೆ.


ಓದಿ: ಬಿಹಾರದಲ್ಲಿ ಅಮಿತ್‌ ಶಾ ಬೆಂಗಾವಲು ವಾಹನದ ಮೇಲೆ ದಾಳಿ ನಡೆಯಿತೆ? ಈ ವಿಡಿಯೋದ ಅಸಲಿಯತ್ತೇನು ?


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...