Homeಮುಖಪುಟಕೇಂದ್ರದ ಜೊತೆ 3ನೇ ಸುತ್ತಿನ ಮಾತುಕತೆ: ಈಡೇರದ ರೈತರ ಬೇಡಿಕೆಗಳು

ಕೇಂದ್ರದ ಜೊತೆ 3ನೇ ಸುತ್ತಿನ ಮಾತುಕತೆ: ಈಡೇರದ ರೈತರ ಬೇಡಿಕೆಗಳು

- Advertisement -
- Advertisement -

ಪಂಜಾಬ್-ಹರಿಯಾಣ ಗಡಿಯ ಎರಡು ಕಡೆಗಳಲ್ಲಿ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆಯ ನಡುವೆಯೇ ಗುರುವಾರ ರಾತ್ರಿ ಮೂವರು ಕೇಂದ್ರ ಸಚಿವರು ಪ್ರತಿಭಟನಾ ನಿರತ ರೈತ ಸಂಘಟನೆಗಳ ಮುಖಂಡರೊಂದಿಗೆ ಐದು ಗಂಟೆಗಳಿಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ.

ಚಂಡೀಗಢದ ಸೆಕ್ಟರ್ 26 ರ ಮಹಾತ್ಮ ಗಾಂಧಿ ಸ್ಟೇಟ್ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಡ್ಮಿನಿಸ್ಟ್ರೇಷನ್‌ನಲ್ಲಿ ನಡೆದ ಸಭೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಭಾಗವಹಿಸಿದ್ದರು. ಭಾನುವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿಪಡಿಸುವ ಕಾನೂನು ಜಾರಿ ಸೇರಿದಂತೆ ರೈತ ವಿವಿಧ ಬೇಡಿಕೆಗಳ ಕುರಿತ ಸಭೆಯಲ್ಲಿ ಕೇಂದ್ರ ಸರ್ಕಾರದ ಪರವಾಗಿ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಅರ್ಜುನ್ ಮುಂಡಾ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಮತ್ತು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಹಾಗೂ ರೈತ ಸಂಘಟನೆಗಳ ಪರವಾಗಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವಾನ್ ಸಿಂಗ್ ಪಂಧೇರ್ ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಅರ್ಜುನ್ ಮುಂಡಾ, ಐದು ಗಂಟೆಗೂ ಹೆಚ್ಚು ಕಾಲ ನಡೆದ ಮಾತುಕತೆ ಶುಕ್ರವಾರ ಮುಂಜಾನೆ ಮುಕ್ತಾಯವಾಗಿದೆ. ಸಭೆಯಲ್ಲಿ ಸಕಾರತ್ಮ ಚರ್ಚೆಗಳು ನಡೆದಿವೆ. ಭಾನುವಾರ ಸಂಜೆ 6 ಗಂಟೆಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಎರಡೂ ಕಡೆಯವರು ಪ್ರತಿಯೊಂದು ವಿಷಯಗಳ ಬಗ್ಗೆ ವಿವರವಾದ ಚರ್ಚೆ ನಡೆಸಿದ್ದಾತೆ. ಹಲವಾರು ವಿಷಯಗಳ ಬಗ್ಗೆ ಒಮ್ಮತಕ್ಕೆ ಬರಲಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಹೇಳಿದ್ದಾರೆ.

ರೈತರು ಮತ್ತು ಕೇಂದ್ರ ಸರ್ಕಾರದ ನಡುವಿನ ಮೂರನೇ ಸುತ್ತಿನ ಮಾತುಕತೆ ಇದಾಗಿದೆ. ಈ ಹಿಂದೆ ಫೆಬ್ರವರಿ 8 ಮತ್ತು 12 ರಂದು ಎರಡು ಸುತ್ತಿನ ಮಾತುಕತೆ ನಡೆದಿದ್ದು, ಯಾವುದೇ ಪ್ರಯೋಜನ ಕಂಡಿಲ್ಲ.

ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು “ದೆಹಲಿ ಚಲೋ” ಗೆ ಕರೆ ನೀಡಿವೆ. ಪಂಜಾಬ್‌ನಿಂದ ರೈತರು ಕಳೆದ ಮಂಗಳವಾರ ರಾಷ್ಟ್ರ ರಾಜಧಾನಿಗೆ ತಮ್ಮ ಮೆರವಣಿಗೆಯನ್ನು ಪ್ರಾರಂಭಿಸಿದ್ದು, ಪಂಜಾಬ್- ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಗಳಲ್ಲಿ ಭದ್ರತಾ ಸಿಬ್ಬಂದಿ ಅವರನ್ನು ತಡೆದಿದ್ದಾರೆ.

ಕೇಂದ್ರ ಸಚಿವರುಗಳ ಜೊತೆಗಿನ ಮಾತುಕತೆ ಕೊನೆಗೊಳ್ಳುವ ತನಕ ದೆಹಲಿ ಪ್ರವೇಶಸುವ ಪ್ರಯತ್ನ ಮಾಡುವುದಿಲ್ಲ. ಸರ್ಕಾರದ ನಿರ್ಧಾರ ಮೇಲೆ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

‘ದೆಹಲಿ ಚಲೋ’ ಹಮ್ಮಿಕೊಂಡಿರುವ ರೈತರ ವಿರುದ್ಧ ಹರಿಯಾಣ ಪೊಲೀಸರ ದೌರ್ಜನ್ಯ ಖಂಡಿಸಿ ರೈತರು ಪಂಜಾಬ್‌ನ ಹಲವೆಡೆ ರೈಲ್ವೆ ಹಳಿಗಳ ಮೇಲೆ ಕುಳಿತು ಪ್ರತಿಭಟಿಸಿದ್ದಾರೆ. ಭಾರತೀಯ ಕಿಸಾನ್ ಯೂನಿಯನ್ (ಏಕ್ತಾ ಉಗ್ರನ್) ಮತ್ತು ಬಾಕು ದಕೌಂಡ (ಧನೇರ್) “ರೈಲ್ ರೋಕೋ” ಕರೆ ನೀಡಿವೆ.

ಶಂಭು ಮತ್ತು ಖಾನೌರಿ ಗಡಿಗಳಲ್ಲಿ ಹರಿಯಾಣದ ಭದ್ರತಾ ಸಿಬ್ಬಂದಿ ಪ್ರತಿಭಟನಾ ನಿರತ ರೈತರ ಮೇಲೆ ಅಶ್ರುವಾಯು ಮತ್ತು ಜಲಫಿರಂಗಿಗಳನ್ನು ಬಳಸಿರುವುದನ್ನು ವಿರೋಧಿಸಿ ರೈತರು ರೈಲ್ ರೋಕೋಗೆ ಕರೆ ಕೊಟ್ಟಿದ್ದಾರೆ. ಹರಿಯಾಣ ಪೊಲೀಸರ ಕ್ರಮವನ್ನು ಖಂಡಿಸಿ ರೈತರು ಪಂಜಾಬ್‌ನ ಹಲವು ಟೋಲ್ ಪ್ಲಾಜಾಗಳಿಗೆ ನುಗ್ಗಿ ಪ್ರತಿಭಟಿಸಿದ್ದಾರೆ.

ಒಂದೆಡೆ ಕೇಂದ್ರ ಸಚಿವರ ಜೊತೆಗಿನ ಮಾತುಕತೆಯಲ್ಲಿ ಯಾವುದೇ ತೀರ್ಮಾನಕ್ಕೆ ಬರಲು ಆಗಿಲ್ಲ. ಮತ್ತೊಂದೆಡೆ ರೈತರು ದಿಲ್ಲಿ ಚಲೋ ಮುಂದುವರೆಸಲು ಅಣಿಯಾಗಿದ್ದಾರೆ. ಇವೆಲ್ಲದರ ನಡುವೆ ಇಂದು (ಫೆ.16) ಗ್ರಾಮೀಣ ಭಾರತ ಬಂದ್‌ಗೆ ರೈತ ಸಂಘಟನೆಗಳು ಕರೆಕೊಟ್ಟಿವೆ.

ಇದನ್ನೂ ಓದಿ : ರೈತ ಸಂಘಟನೆಗಳಿಂದ ಇಂದು ‘ಗ್ರಾಮೀಣ ಭಾರತ ಬಂದ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...