Homeಕರೋನಾ ತಲ್ಲಣಕೊರೊನಾ ಮೂರನೇ ಅಲೆಯ ಭೀತಿ; ಸನ್ನದ್ಧವಾಗಿದೆಯೇ ಸರ್ಕಾರ?

ಕೊರೊನಾ ಮೂರನೇ ಅಲೆಯ ಭೀತಿ; ಸನ್ನದ್ಧವಾಗಿದೆಯೇ ಸರ್ಕಾರ?

- Advertisement -
- Advertisement -

ವಿಶ್ವದಾದ್ಯಂತ ಭಾರಿ ಸಾವುನೋವುಗಳಿಗೆ, ಭಯ ಆತಂಕಗಳಿಗೆ ಕಷ್ಟ ನಷ್ಟಗಳಿಗೆ ಕಾರಣವಾಗಿರುವ ಕೊರೊನಾ ಸಾಂಕ್ರಾಮಿಕದ ಎರಡನೆ ಅಲೆ ಭಾರತದಲ್ಲಿ ಅಪ್ಪಳಿಸಿ ಮುಗಿದು, ಜನರು ಇನ್ನೇನು ನಿಟ್ಟುಸಿರು ಬಿಡುತ್ತಿರುವ ಹೊತ್ತಿಗೆ ಮತ್ತೆ ಮೂರನೆ ಅಲೆಯ ಭಯ ಪ್ರಾರಂಭವಾಗಿದೆ. ಎರಡನೆ ಅಲೆಯ ಬಿಕ್ಕಟ್ಟು ಎಷ್ಟು ಭೀಕರವಾಗಿತ್ತೆಂದರೆ ಇಡೀ ವಿಶ್ವವೇ ನಮ್ಮ ದೇಶದತ್ತ ತಿರುಗಿ ಅನುಕಂಪದಿಂದ ನೋಡಿತು. ವಿಶ್ವದ ಹಲವಾರು ದೇಶಗಳು ನಮಗೆ ಸಹಾಯಹಸ್ತವನ್ನೂ ಚಾಚಿದವು. ಅಲ್ಲದೆ ಎರಡನೆ ಅಲೆಯು ತೀವ್ರ ಉಲ್ಬಣಕ್ಕೆ ಕಾರಣ ದೇಶದ ಆಡಳಿತದ ನೀತಿಗಳು ಎಂದು ಹಲವು ಜಾಗತಿಕ ಮತ್ತು ಪ್ರಾದೇಶಿಕವಾದ ದಿಟ್ಟ ಮಾಧ್ಯಮಗಳು ಮತ್ತು ಪತ್ರಿಕೆಗಳು ಸಾರಿ ಸಾರಿ ಹೇಳಿದವು.

ಅಧ್ಯಯನವೊಂದರ ಪ್ರಕಾರ ಕೊರೊನಾ ಮೂರನೆ ಅಲೆಯು ಆಗಸ್ಟ್‌ನಿಂದ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಅತಿಹೆಚ್ಚು ಪ್ರಕರಣಗಳು ದಾಖಲಾಗುತ್ತವೆ ಎನ್ನಲಾಗಿದೆ. ಮತ್ತೊಂದು ಅಧ್ಯಯನದ ಪ್ರಕಾರ ಆಗಸ್ಟ್ ತಿಂಗಳ ಕೊನೆಯಲ್ಲಿ ಮೂರನೇ ಅಲೆ ಅಪ್ಪಳಿಸಲಿದ್ದು ಅಕ್ಟೋಬರ್ ಹೊತ್ತಿಗೆ ಉತ್ತುಂಗಕ್ಕೆ ಏರಲಿದೆ ಎನ್ನುತ್ತದೆ. ಎರಡನೆ ಅಲೆಯ ಉತ್ತುಂಗದಲ್ಲಿ ಭಾರತದಲ್ಲಿ ದೈನಂದಿನ ನಾಲ್ಕು ಲಕ್ಷದವರೆಗೆ ಪ್ರಕರಣಗಳು ವರದಿಯಾಗಿದ್ದವು. ಮೇ 6 ರಂದು ಒಂದೇ ದಿನದಲ್ಲಿ 4.14 ಲಕ್ಷ ಪ್ರಕರಣಗಳು ದೇಶದಲ್ಲಿ ವರದಿಯಾಗಿದ್ದವು. ನಂತರ ದೇಶದಲ್ಲಿ ಪ್ರಕರಣಗಳ ಸಂಖ್ಯೆ ಇಳಿಯಲು ಪ್ರಾರಂಭವಾಗಿತ್ತು. ಜೂನ್ ತಿಂಗಳಲ್ಲಿ ದೈನಂದಿನ ಪ್ರಕರಣಗಳು ಸರಾಸರಿ 40 ಸಾವಿರ ಪ್ರಕರಣಗಳು ವರದಿಯಾಗಿದ್ದು, ಜುಲೈ ತಿಂಗಳ ಮಧ್ಯಕ್ಕೆ ಸರಾಸರಿ ಕೊರೊನಾ ಪಾಸಿಟಿವ್ ಪ್ರಕರಣಗಳ ದೈನಂದಿನ ಸಂಖ್ಯೆ 38 ಸಾವಿರಕ್ಕೆ ಇಳಿದಿದ್ದವು.

ಅದಾಗ್ಯೂ, ಜುಲೈ ಕೊನೆಯ ದಿನ ಮತ್ತು ಆಗಸ್ಟ್ ಆರಂಭದ ಈ ವಾರದಲ್ಲಿ, ವಾರದ ಸರಾಸರಿ ಪ್ರಕರಣಗಳು ದಿನಕ್ಕೆ 41 ಸಾವಿರದಂತೆ ಏರಿಕೆ ಕಾಣುತ್ತಿವೆ. ಇದು ಮೂರನೆ ಅಲೆಯ ಸೂಚನೆ ಇರಬಹುದು ಎಂದು ಆರೋಗ್ಯ ತಜ್ಞರು ಸೂಚಿಸುತ್ತಾರೆ. ಆದರೆ ಮೂರನೆ ಅಲೆಯು ಎರಡನೆ ಅಲೆಯಷ್ಟು ತೀವ್ರವಾಗಿ ಇರುವುದಿಲ್ಲ ಎಂದು ಕೂಡ ತಜ್ಞರು ಉಲ್ಲೇಖಿಸಿದ್ದಾರೆ. ದೈನಂದಿನ ಒಂದು ಲಕ್ಷದವರೆಗೂ ಮೂರನೆ ಅಲೆಯಲ್ಲಿ ಪ್ರಕರಣಗಳು ಏರಿಕೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಅಂದರೆ ಮೂರನೆ ಅಲೆಯ ಉತ್ತುಂಗದಲ್ಲಿ ಸುಮಾರು 1.5 ಲಕ್ಷದಷ್ಟು ಪ್ರಕರಣಗಳು ವರದಿಯಾಗಲಿರುವ ಅಂದಾಜಿದೆ ಎನ್ನುತ್ತಾರೆ ತಜ್ಞರು.

PC : vijaya karnataka

ಈ ಮಧ್ಯೆ ಕೇರಳದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದ್ದು, ದಕ್ಷಿಣದ ರಾಜ್ಯಗಳಲ್ಲಿ ಮೂರನೆ ಅಲೆಯ ಎಚ್ಚರಿಕೆಯ ಕರೆಗಂಟೆ ಬಾರಿಸಿದೆ. ಆಗಸ್ಟ್ 2ರ ಸೋಮವಾರದಂದು ದೇಶದಲ್ಲಿ ಒಟ್ಟು ವರದಿಯಾದ ಕೊರೊನಾ ಪಾಟಿಸಿವ್ ಪ್ರಕರಣದ ಸಂಖ್ಯೆ 30 ಸಾವಿರವಿದ್ದರೆ, ಇದರಲ್ಲಿ 13 ಸಾವಿರದಷ್ಟು ಪ್ರಕರಣಗಳು ಕೇರಳ ಒಂದು ರಾಜ್ಯದಲ್ಲಿಯೇ ವರದಿಯಾಗಿದೆ. ಉಳಿದಂತೆ ಮಹಾರಾಷ್ಟ್ರ, ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ರಾಜ್ಯಗಳಲ್ಲಿ ಕೂಡ ಸ್ವಲ್ಪ ಮಟ್ಟಿಗೆ ಏರಿಕೆ ಕಂಡಿದೆ. ಅಂದರೆ ದೇಶದಲ್ಲಿ ವರದಿಯಾಗುತ್ತಿರುವ ಒಟ್ಟು ಕೊರೊನಾ ಪ್ರಕರಣಗಳು ಭಾಗಶಃ ದಕ್ಷಿಣ ಭಾರತದಲ್ಲೇ ವರದಿಯಾಗುತ್ತಿರುವುದು.
ಕೊರೊನಾವನ್ನು ಎದುರಿಸಲು ವ್ಯಾಕ್ಸಿನ್ ಒಂದೇ ಅಸ್ತ್ರ ಎಂದು ತಜ್ಞರು ಈಗಾಗಲೆ ಸ್ಪಷ್ಟವಾಗಿ ಹೇಳಿದ್ದಾರೆ. ಜಗತ್ತಿನಲ್ಲಿ ಲಸಿಕೆಗಳನ್ನು ಉತ್ಪಾದಿಸುವ ಅತೀ ದೊಡ್ಡ ದೇಶವಾದ ಭಾರತವು ಲಸಿಕೆ ಪ್ರಕ್ರಿಯೆಯನ್ನು ಪ್ರಾರಂಭ ಮಾಡಿ ಆರುವರೆ ತಿಂಗಳಾದರೂ ವ್ಯಾಕ್ಸಿನೇಷನ್ ರ್‍ಯಾಂಕಿಂಗ್‌ನಲ್ಲಿ ಜಗತ್ತಿನಲ್ಲಿ 94ನೇ ಸ್ಥಾನದಲ್ಲಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ವಿಶ್ವದ ಇತರ ರಾಷ್ಟ್ರಗಳಿಗೆ ಹೋಲಿಸಿದರೆ, ಕೊರೊನಾ ಲಸಿಕೆಗಳನ್ನು ನೀಡುವ ಪ್ರಕ್ರಿಯೆ ಭಾರತದಲ್ಲಿ ತಡವಾಗಿ ಪ್ರಾರಂಭವಾಯಿತು. ದೇಶದಲ್ಲಿ ಇದುವರೆಗೂ ಕೇವಲ 7.6% ಜನಸಂಖ್ಯೆಗಷ್ಟೇ ಎರಡು ಡೋಸ್ ವ್ಯಾಕ್ಸಿನೇಷನ್ ನೀಡಲಾಗಿದೆ. ಗಲ್ಫ್ ದೇಶವಾದ ಯುಎಇ ತನ್ನ ದೇಶದ 72% ಜನರಿಗೆ ಸಂಪೂರ್ಣ ಎರಡು ಡೋಸ್‌ಗಳ ಲಸಿಕೆಯನ್ನು ನೀಡಿ ವಿಶ್ವದಲ್ಲೇ ಪ್ರಥಮ ಸ್ಥಾನದಲ್ಲಿದೆ. ಅಮೆರಿಕ ಕೂಡಾ 50% ಜನರಿಗೆ ಎರಡು ಡೋಸ್ ಲಸಿಕೆಯನ್ನು ಈಗಾಗಲೆ ನೀಡಿದೆ. ನಮ್ಮ ದೇಶದ ಕೇವಲ 27% ಜನರಿಗಷ್ಟೇ ಒಂದು ಡೋಸ್ ವ್ಯಾಕ್ಸಿನೇಷನ್ ನೀಡಲಾಗಿದೆ. ವಿಶ್ವದ ಅತ್ಯಂತ ದೊಡ್ಡ ವ್ಯಾಕ್ಸಿನ್ ತಯಾರಕ ದೇಶವಾದ ಭಾರತದ ಹಲವು ರಾಜ್ಯಗಳಲ್ಲಿ ವ್ಯಾಕ್ಸಿನೇಷನ್ ಕೇಂದ್ರಗಳು ಬಂದ್ ಆಗಿರುವುದು ಒಂದು ವಾರದ ಹಿಂದೆ ವರದಿಯಾಗಿತ್ತು. ಅಂದರೆ ಒಕ್ಕೂಟ ಸರ್ಕಾರ ಎರಡನೆ ಅಲೆಯಲ್ಲಿ ನಡೆದ ದುರಂತದ ನಂತರ, ತಾನೇ ವ್ಯಾಕ್ಸಿನೇಶನ್ ಪ್ರಕ್ರಿಯೆಯನ್ನು ನಡೆಸುವುದಗಿ ಹೇಳಿಕೊಂಡರೂ, ಅದು ನಿರೀಕ್ಷಿತ ವೇಗದಲ್ಲಿಲ್ಲ ಎಂದು ಖಂಡಿತವಾಗಿಯು ಹೇಳಬಹುದು. ಅದಿನ್ನೂ ತನ್ನ ಇಮೇಜ್ ರಕ್ಷಿಸಿಕೊಳ್ಳುವ ಕೆಲಸದಲ್ಲೇ ಮುಂದುವರೆದಿದೆ.

ಕರ್ನಾಟಕದಲ್ಲಿ ಕೊರೊನಾ ಮತ್ತು ವ್ಯಾಕ್ಸಿನೇಷನ್

2014 ರಂತೆ 6.41 ಕೋಟಿ ಜನ ಸಂಖ್ಯೆಯಿರುವ ರಾಜ್ಯದಲ್ಲಿ ಸುಮಾರು 4.9 ಕೋಟಿ ಜನರು ಕೊರೊನಾ ಲಸಿಕೆ ಪಡೆಯಲು ಅರ್ಹವಿರುವ ಜನರಿದ್ದಾರೆ ಎಂಬುದು ಅಂದಾಜು. ರಾಜ್ಯದಲ್ಲಿ ಇದುವರೆಗೂ ಒಟ್ಟು 29.08 ಲಕ್ಷ ಜನರಿಗೆ ಕೊರೊನಾ ಸಾಂಕ್ರಮಿಕವು ಸೋಂಕಿತ್ತು ಎಂದು ವರದಿಯಾಗಿದೆ. ಸೋಂಕಿನಿಂದಾಗಿ ಇದುವರೆಗೆ ಮೃತಪಟ್ಟವರು 36 ಸಾವಿರ ಎಂದು ಸರ್ಕಾರಿ ಅಂಕಿ ಅಂಶಗಳು ಹೇಳುತ್ತವೆಯಾದರೂ, ಈ ಸಂಖ್ಯೆ ಇದಕ್ಕೂ ಹೆಚ್ಚು ಎನ್ನುತ್ತವೆ ಹಲವು ಮಾಧ್ಯಮಗಳ ವರದಿಗಳು. ರಾಜ್ಯದಲ್ಲಿ 3 ಲಕ್ಷಕ್ಕಿಂತಲೂ ಹೆಚ್ಚು ಕೊರೊನಾದಿಂದ ಸಾವಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇತ್ತೀಚೆಗೆ ಆರೋಪಿಸಿದ್ದರು.

ಉತ್ತರದ ರಾಜ್ಯಗಳಲ್ಲಿ ಸಕ್ರಿಯ ಪ್ರಕರಣಗಳು ಮತ್ತು ಹೊಸದಾಗಿ ಪತ್ತೆಯಾಗುತ್ತಿರುವ ಪ್ರಕರಣಗಳು ಸಾವಿರಕ್ಕಿಂತ ಕಡಿಮೆಯಿದ್ದಾಗ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಸಾವಿರಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ನಮ್ಮ ರಾಜ್ಯದಲ್ಲೇ ಒಟ್ಟು ಸಕ್ರಿಯ ಪ್ರಕರಣಗಳು 24 ಸಾವಿರಕ್ಕಿಂತಲೂ ಹೆಚ್ಚಿದೆ. ಸೋಂಕಿನಿಂದಾಗಿ ಮೃತಪಟ್ಟವರರ ಸಂಖ್ಯೆ ಕೂಡಾ 1.97% ದಷ್ಟಿದೆ. ಇದು ಕೇರಳದಲ್ಲಿ 0.49% ಇದೆ.

ಸುಮಾರು 4.9 ಕೋಟಿ ಜನರು ಕೊರೊನಾ ಲಸಿಕೆ ಪಡೆಯಲು ಅರ್ಹವಿರುವ ಕರ್ನಾಟಕದಲ್ಲಿ ಎರಡು ಡೋಸ್ ಲಸಿಕೆಯನ್ನು ಪಡೆದಿರುವವರು 61.34 ಲಕ್ಷ ಜನರು ಮಾತ್ರ. ರಾಜ್ಯದ 2.43 ಕೋಟಿ ಜನರು ಲಸಿಕೆಯ ಒಂದು ಡೋಸ್ ಮಾತ್ರ ಇದುವರೆಗೂ ಪಡೆದಿದ್ದಾರೆ.

ಮೂರನೆ ಅಲೆ ಮಕ್ಕಳಿಗೆ ಅಪಾಯವೆ?

ಎರಡನೆ ಅಲೆಯ ಉತ್ತುಂಗದ ಸಮಯದಲ್ಲೇ ಮಾಧ್ಯಮಗಳಲ್ಲಿ ಕೊರೊನಾ ಮೂರನೆ ಅಲೆ ಬರಲಿದ್ದು, ಇದು ಮಕ್ಕಳಿಗೆ ಅಪಾಯಕಾರಿಯಾಗಿ ಪರಿಣಮಿಸಲಿದೆ ಎಂದು ಬಿಂಬಿಸುತ್ತಲೆ ಬರುತ್ತಿವೆ. ಆದರೆ ಇದಕ್ಕೆ ವೈಜ್ಞಾನಿಕ ಪುರಾವೆ ಇಲ್ಲ ಎಂದು ಒಕ್ಕೂಟ ಸರ್ಕಾರ ಸ್ಪಷ್ಟಪಡಿಸಿದೆ. ಇದು ಹಲವು ತಜ್ಞರ ಅಭಿಪ್ರಾಯವೂ ಆಗಿದೆ.
“ಒಂದು ಮತ್ತು ಎರಡನೆ ಅಲೆಯಲ್ಲಿ ಸೋಂಕಿಗೆ ಈಡಾದ ಜನರಲ್ಲಿ 10 ರಿಂದ 15% ಮಾತ್ರ ಮಕ್ಕಳಿದ್ದರು. ಮಕ್ಕಳಿಗೆ ಲಸಿಕೆ ನೀಡುವುದನ್ನು ಇನ್ನೂ ಪ್ರಾರಂಭಿಸದೆ ಇರುವುದರಿಂದ ಮೂರನೆ ಅಲೆಯಲ್ಲಿ 40% ಮಕ್ಕಳಿಗೆ ಸೋಂಕು ಹರಡಬಹುದು. ಆದರೆ ಕೊರೊನಾ ಮಕ್ಕಳಿಗೆ ಗಂಭೀರ ಅಪಾಯವನ್ನು ಉಂಟು ಮಾಡುವುದಿಲ್ಲ” ಎಂದು ವಿಕ್ರಂ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವ ಡಾ. ಉಮೇಶ್ ಹೇಳುತ್ತಾರೆ.

ಒಕ್ಕೂಟ ಸರ್ಕಾರವು ಈಗಾಗಲೆ ಡಿಸೆಂಬರ್ ಹೊತ್ತಿಗೆ ಎಲ್ಲರಿಗೂ ಲಸಿಕೆ ನೀಡುತ್ತೇವೆ ಎಂದು ಹೇಳಿತ್ತು. ಆದರೆ ಮೂರನೆ ಅಲೆ ಆಗಸ್ಟ್‌ನಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ, ಆದ್ದರಿಂದ ಮೂರನೆ ಅಲೆ ಜನರಿಗೆ ಅಪಾಯವನ್ನು ಉಂಟು ಮಾಡಬಹುದಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಿದ ಡಾ. ಉಮೇಶ್, “ಜನರು ಕನಿಷ್ಟ ಒಂದು ಡೋಸ್‌ನಷ್ಟಾದರೂ ಲಸಿಕೆ ಪಡೆಯುವಂತಾದರೆ, ಅಪಾಯದಿಂದ ಪಾರಾಗಬಹುದು. ಎರಡನೆ ಅಲೆಯಲ್ಲಿ ಆದಷ್ಟು ಸಾವು ನೋವುಗಳಿಂದ ತಪ್ಪಿಸಿಕೊಳ್ಳಬಹುದು” ಎಂದು ಹೇಳುತ್ತಾರೆ.

ಕೇರಳದಲ್ಲಿ ಏರುತ್ತಿರುವ ಸೋಂಕಿನ ಪ್ರಕರಣಗಳು ಮತ್ತು ಮಹಾರಾಷ್ಟ್ರದಲ್ಲಿ ಪ್ರಸ್ತುತ ಇರುವ ಸೋಂಕಿನ ಪ್ರಮಾಣ ಕರ್ನಾಟಕದ ಮೇಲೆ ಕೂಡಾ ಪರಿಣಾಮ ಬೀರಬಹುದು ಎಂದೂ ಅವರು ತಿಳಿಸಿದ್ದಾರೆ.

PC : Fortis Banglore

ರಾಜ್ಯದ ಬಗ್ಗೆ ಹೇಳಬಹುದಾದರೆ ಪ್ರಸ್ತುತ 4.9 ಕೋಟಿ ಜನರು ಲಸಿಕೆ ಪಡೆಯಲು ಅರ್ಹರಿದ್ದಾರೆ. ಈಗಾಗಲೆ 2.43 ಕೋಟಿ ಜನರು ಕನಿಷ್ಠ ಒಂದು ಡೋಸ್ ಪಡೆದವರು ಇರುವುದರಿಂದ, ಹೆಚ್ಚು ಕೊರೊನಾ ಪ್ರಕರಣ ವರದಿಯಾಗುತ್ತಿರುವ ಪ್ರದೇಶಗಳಲ್ಲಿ ಸರ್ಕಾರವು ಈ ತಿಂಗಳಲ್ಲಿ ಲಸಿಕೆಯನ್ನು ಸಮರೋಪಾದಿಯಲ್ಲಿ ನೀಡಬೇಕಾಗುತ್ತದೆ. ಹೀಗಾದರೆ ಜನರು ಸೋಂಕಿನ ಗಂಭೀರ ಅಪಾಯದಿಂದ ಬಚಾವಾಗಬಲ್ಲರು. ಆದರೆ ಲಸಿಕೆ ಕೊರತೆಯಿಂದ ಮೊದಲ ಡೋಸ್ ನೀಡುವ ಲಸಿಕಾ ಕೇಂದ್ರಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಜುಲೈ 31ಕ್ಕೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ!.

ದೇಶಕ್ಕೆ ಕನಿಷ್ಠವೆಂದರೂ ದಿನವೊಂದಕ್ಕೆ ಸುಮಾರು ಒಂದು ಕೋಟಿ ಲಸಿಕೆಗಳು ಅಗತ್ಯವಿದ್ದು, ಸ್ವಾತಂತ್ರ್ಯೋತ್ಸವ ದಿನಕ್ಕೆ ದೇಶವು ಲಸಿಕಾ ಪ್ರಕ್ರಿಯೆಯನ್ನು ಪ್ರಾರಂಭಿಸಿ ಏಳು ತಿಂಗಳನ್ನು ಪೂರೈಸಲಿದೆ. ಒಕ್ಕೂಟ ಸರ್ಕಾರ ಡಿಸೆಂಬರ್ ಹೊತ್ತಿಗೆ ದೇಶದ ಎಲ್ಲರಿಗೂ ಲಸಿಕೆಯನ್ನು ನೀಡುತ್ತೇವೆ ಎಂದು ಹೇಳಿದೆ. ಆದರೆ ಆರು ತಿಂಗಳು ಕಳೆದರೂ, ದೇಶದ 7.6% ಜನರಿಗಷ್ಟೇ ಸಂಪೂರ್ಣ ಲಸಿಕೆಯನ್ನು ನೀಡಲಾಗಿದೆ. ಈ ನಡುವೆ ದೇಶದ ಹಲವು ರಾಜ್ಯಗಳು ಜುಲೈ ಕೊನೆಯ ವಾರದಲ್ಲೇ ವ್ಯಾಕ್ಸಿನೇಷನ್ ಕೇಂದ್ರಗಳನ್ನು ಮುಚ್ಚುತ್ತಿರುವ ಬಗ್ಗೆ ಮಾಧ್ಯಮಗಳು ವರದಿ ಮಾಡಿವೆ. ಇದೆಲ್ಲದರ ಮಧ್ಯೆ ಮೂರನೆ ಅಲೆ ಅಪ್ಪಳಿಸಲು ತಯಾರಾಗಿ ನಿಂತಿದೆ.

ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿಗಳೇನೋ ಬಂದಿದ್ದಾರೆ ಆದರೆ ಹೊಸ ಸಂಪುಟ ರಚನೆ ಇನ್ನೂ ಆಗಿಲ್ಲ. ಆರೋಗ್ಯಮಂತ್ರಿಯಾಗಿ ಹಿಂದಿನ ಸಚಿವರೇ ಉಳಿಯುವರೋ, ಹೊಸ ಸಚಿವರು ಬರುವರೋ ತಿಳಿದಿಲ್ಲ. ಒಟ್ಟಿನಲ್ಲಿ ಬಿಜೆಪಿ ಆಡಳಿತದ ಎರಡನೇ ವರ್ಶನ್ ಸರ್ಕಾರ ಕೊರೊನಾ ತಡೆಗಟ್ಟುವುದಕ್ಕೆ ಮತ್ತು ಲಸಿಕಾ ಅಭಿಯಾನಕ್ಕೆ, ಹಿಂದಿನ ತಪ್ಪುಗಳನ್ನು ಸರಿಪಡಿಸಿಕೊಂಡು ಚುರುಕಾಗಿ ಕೆಲಸ ಮಾಡುತ್ತದೋ ಇಲ್ಲವೋ ಕಾದು ನೋಡಬೇಕಿದೆ.


ಇದನ್ನೂ ಓದಿ: ಚೀನಾದಲ್ಲಿ ಏರಿಕೆಯಾದ ಕೊರೊನಾ: ಸ್ಥಳೀಯವಾಗಿ 80 ಪ್ರಕರಣಗಳು ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...