Homeಕರೋನಾ ತಲ್ಲಣಕೊರೊನಾ ಮೂರನೇ ಅಲೆಯ ಭೀತಿ; ಸನ್ನದ್ಧವಾಗಿದೆಯೇ ಸರ್ಕಾರ?

ಕೊರೊನಾ ಮೂರನೇ ಅಲೆಯ ಭೀತಿ; ಸನ್ನದ್ಧವಾಗಿದೆಯೇ ಸರ್ಕಾರ?

- Advertisement -
- Advertisement -

ವಿಶ್ವದಾದ್ಯಂತ ಭಾರಿ ಸಾವುನೋವುಗಳಿಗೆ, ಭಯ ಆತಂಕಗಳಿಗೆ ಕಷ್ಟ ನಷ್ಟಗಳಿಗೆ ಕಾರಣವಾಗಿರುವ ಕೊರೊನಾ ಸಾಂಕ್ರಾಮಿಕದ ಎರಡನೆ ಅಲೆ ಭಾರತದಲ್ಲಿ ಅಪ್ಪಳಿಸಿ ಮುಗಿದು, ಜನರು ಇನ್ನೇನು ನಿಟ್ಟುಸಿರು ಬಿಡುತ್ತಿರುವ ಹೊತ್ತಿಗೆ ಮತ್ತೆ ಮೂರನೆ ಅಲೆಯ ಭಯ ಪ್ರಾರಂಭವಾಗಿದೆ. ಎರಡನೆ ಅಲೆಯ ಬಿಕ್ಕಟ್ಟು ಎಷ್ಟು ಭೀಕರವಾಗಿತ್ತೆಂದರೆ ಇಡೀ ವಿಶ್ವವೇ ನಮ್ಮ ದೇಶದತ್ತ ತಿರುಗಿ ಅನುಕಂಪದಿಂದ ನೋಡಿತು. ವಿಶ್ವದ ಹಲವಾರು ದೇಶಗಳು ನಮಗೆ ಸಹಾಯಹಸ್ತವನ್ನೂ ಚಾಚಿದವು. ಅಲ್ಲದೆ ಎರಡನೆ ಅಲೆಯು ತೀವ್ರ ಉಲ್ಬಣಕ್ಕೆ ಕಾರಣ ದೇಶದ ಆಡಳಿತದ ನೀತಿಗಳು ಎಂದು ಹಲವು ಜಾಗತಿಕ ಮತ್ತು ಪ್ರಾದೇಶಿಕವಾದ ದಿಟ್ಟ ಮಾಧ್ಯಮಗಳು ಮತ್ತು ಪತ್ರಿಕೆಗಳು ಸಾರಿ ಸಾರಿ ಹೇಳಿದವು.

ಅಧ್ಯಯನವೊಂದರ ಪ್ರಕಾರ ಕೊರೊನಾ ಮೂರನೆ ಅಲೆಯು ಆಗಸ್ಟ್‌ನಿಂದ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಅತಿಹೆಚ್ಚು ಪ್ರಕರಣಗಳು ದಾಖಲಾಗುತ್ತವೆ ಎನ್ನಲಾಗಿದೆ. ಮತ್ತೊಂದು ಅಧ್ಯಯನದ ಪ್ರಕಾರ ಆಗಸ್ಟ್ ತಿಂಗಳ ಕೊನೆಯಲ್ಲಿ ಮೂರನೇ ಅಲೆ ಅಪ್ಪಳಿಸಲಿದ್ದು ಅಕ್ಟೋಬರ್ ಹೊತ್ತಿಗೆ ಉತ್ತುಂಗಕ್ಕೆ ಏರಲಿದೆ ಎನ್ನುತ್ತದೆ. ಎರಡನೆ ಅಲೆಯ ಉತ್ತುಂಗದಲ್ಲಿ ಭಾರತದಲ್ಲಿ ದೈನಂದಿನ ನಾಲ್ಕು ಲಕ್ಷದವರೆಗೆ ಪ್ರಕರಣಗಳು ವರದಿಯಾಗಿದ್ದವು. ಮೇ 6 ರಂದು ಒಂದೇ ದಿನದಲ್ಲಿ 4.14 ಲಕ್ಷ ಪ್ರಕರಣಗಳು ದೇಶದಲ್ಲಿ ವರದಿಯಾಗಿದ್ದವು. ನಂತರ ದೇಶದಲ್ಲಿ ಪ್ರಕರಣಗಳ ಸಂಖ್ಯೆ ಇಳಿಯಲು ಪ್ರಾರಂಭವಾಗಿತ್ತು. ಜೂನ್ ತಿಂಗಳಲ್ಲಿ ದೈನಂದಿನ ಪ್ರಕರಣಗಳು ಸರಾಸರಿ 40 ಸಾವಿರ ಪ್ರಕರಣಗಳು ವರದಿಯಾಗಿದ್ದು, ಜುಲೈ ತಿಂಗಳ ಮಧ್ಯಕ್ಕೆ ಸರಾಸರಿ ಕೊರೊನಾ ಪಾಸಿಟಿವ್ ಪ್ರಕರಣಗಳ ದೈನಂದಿನ ಸಂಖ್ಯೆ 38 ಸಾವಿರಕ್ಕೆ ಇಳಿದಿದ್ದವು.

ಅದಾಗ್ಯೂ, ಜುಲೈ ಕೊನೆಯ ದಿನ ಮತ್ತು ಆಗಸ್ಟ್ ಆರಂಭದ ಈ ವಾರದಲ್ಲಿ, ವಾರದ ಸರಾಸರಿ ಪ್ರಕರಣಗಳು ದಿನಕ್ಕೆ 41 ಸಾವಿರದಂತೆ ಏರಿಕೆ ಕಾಣುತ್ತಿವೆ. ಇದು ಮೂರನೆ ಅಲೆಯ ಸೂಚನೆ ಇರಬಹುದು ಎಂದು ಆರೋಗ್ಯ ತಜ್ಞರು ಸೂಚಿಸುತ್ತಾರೆ. ಆದರೆ ಮೂರನೆ ಅಲೆಯು ಎರಡನೆ ಅಲೆಯಷ್ಟು ತೀವ್ರವಾಗಿ ಇರುವುದಿಲ್ಲ ಎಂದು ಕೂಡ ತಜ್ಞರು ಉಲ್ಲೇಖಿಸಿದ್ದಾರೆ. ದೈನಂದಿನ ಒಂದು ಲಕ್ಷದವರೆಗೂ ಮೂರನೆ ಅಲೆಯಲ್ಲಿ ಪ್ರಕರಣಗಳು ಏರಿಕೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಅಂದರೆ ಮೂರನೆ ಅಲೆಯ ಉತ್ತುಂಗದಲ್ಲಿ ಸುಮಾರು 1.5 ಲಕ್ಷದಷ್ಟು ಪ್ರಕರಣಗಳು ವರದಿಯಾಗಲಿರುವ ಅಂದಾಜಿದೆ ಎನ್ನುತ್ತಾರೆ ತಜ್ಞರು.

PC : vijaya karnataka

ಈ ಮಧ್ಯೆ ಕೇರಳದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದ್ದು, ದಕ್ಷಿಣದ ರಾಜ್ಯಗಳಲ್ಲಿ ಮೂರನೆ ಅಲೆಯ ಎಚ್ಚರಿಕೆಯ ಕರೆಗಂಟೆ ಬಾರಿಸಿದೆ. ಆಗಸ್ಟ್ 2ರ ಸೋಮವಾರದಂದು ದೇಶದಲ್ಲಿ ಒಟ್ಟು ವರದಿಯಾದ ಕೊರೊನಾ ಪಾಟಿಸಿವ್ ಪ್ರಕರಣದ ಸಂಖ್ಯೆ 30 ಸಾವಿರವಿದ್ದರೆ, ಇದರಲ್ಲಿ 13 ಸಾವಿರದಷ್ಟು ಪ್ರಕರಣಗಳು ಕೇರಳ ಒಂದು ರಾಜ್ಯದಲ್ಲಿಯೇ ವರದಿಯಾಗಿದೆ. ಉಳಿದಂತೆ ಮಹಾರಾಷ್ಟ್ರ, ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ರಾಜ್ಯಗಳಲ್ಲಿ ಕೂಡ ಸ್ವಲ್ಪ ಮಟ್ಟಿಗೆ ಏರಿಕೆ ಕಂಡಿದೆ. ಅಂದರೆ ದೇಶದಲ್ಲಿ ವರದಿಯಾಗುತ್ತಿರುವ ಒಟ್ಟು ಕೊರೊನಾ ಪ್ರಕರಣಗಳು ಭಾಗಶಃ ದಕ್ಷಿಣ ಭಾರತದಲ್ಲೇ ವರದಿಯಾಗುತ್ತಿರುವುದು.
ಕೊರೊನಾವನ್ನು ಎದುರಿಸಲು ವ್ಯಾಕ್ಸಿನ್ ಒಂದೇ ಅಸ್ತ್ರ ಎಂದು ತಜ್ಞರು ಈಗಾಗಲೆ ಸ್ಪಷ್ಟವಾಗಿ ಹೇಳಿದ್ದಾರೆ. ಜಗತ್ತಿನಲ್ಲಿ ಲಸಿಕೆಗಳನ್ನು ಉತ್ಪಾದಿಸುವ ಅತೀ ದೊಡ್ಡ ದೇಶವಾದ ಭಾರತವು ಲಸಿಕೆ ಪ್ರಕ್ರಿಯೆಯನ್ನು ಪ್ರಾರಂಭ ಮಾಡಿ ಆರುವರೆ ತಿಂಗಳಾದರೂ ವ್ಯಾಕ್ಸಿನೇಷನ್ ರ್‍ಯಾಂಕಿಂಗ್‌ನಲ್ಲಿ ಜಗತ್ತಿನಲ್ಲಿ 94ನೇ ಸ್ಥಾನದಲ್ಲಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ವಿಶ್ವದ ಇತರ ರಾಷ್ಟ್ರಗಳಿಗೆ ಹೋಲಿಸಿದರೆ, ಕೊರೊನಾ ಲಸಿಕೆಗಳನ್ನು ನೀಡುವ ಪ್ರಕ್ರಿಯೆ ಭಾರತದಲ್ಲಿ ತಡವಾಗಿ ಪ್ರಾರಂಭವಾಯಿತು. ದೇಶದಲ್ಲಿ ಇದುವರೆಗೂ ಕೇವಲ 7.6% ಜನಸಂಖ್ಯೆಗಷ್ಟೇ ಎರಡು ಡೋಸ್ ವ್ಯಾಕ್ಸಿನೇಷನ್ ನೀಡಲಾಗಿದೆ. ಗಲ್ಫ್ ದೇಶವಾದ ಯುಎಇ ತನ್ನ ದೇಶದ 72% ಜನರಿಗೆ ಸಂಪೂರ್ಣ ಎರಡು ಡೋಸ್‌ಗಳ ಲಸಿಕೆಯನ್ನು ನೀಡಿ ವಿಶ್ವದಲ್ಲೇ ಪ್ರಥಮ ಸ್ಥಾನದಲ್ಲಿದೆ. ಅಮೆರಿಕ ಕೂಡಾ 50% ಜನರಿಗೆ ಎರಡು ಡೋಸ್ ಲಸಿಕೆಯನ್ನು ಈಗಾಗಲೆ ನೀಡಿದೆ. ನಮ್ಮ ದೇಶದ ಕೇವಲ 27% ಜನರಿಗಷ್ಟೇ ಒಂದು ಡೋಸ್ ವ್ಯಾಕ್ಸಿನೇಷನ್ ನೀಡಲಾಗಿದೆ. ವಿಶ್ವದ ಅತ್ಯಂತ ದೊಡ್ಡ ವ್ಯಾಕ್ಸಿನ್ ತಯಾರಕ ದೇಶವಾದ ಭಾರತದ ಹಲವು ರಾಜ್ಯಗಳಲ್ಲಿ ವ್ಯಾಕ್ಸಿನೇಷನ್ ಕೇಂದ್ರಗಳು ಬಂದ್ ಆಗಿರುವುದು ಒಂದು ವಾರದ ಹಿಂದೆ ವರದಿಯಾಗಿತ್ತು. ಅಂದರೆ ಒಕ್ಕೂಟ ಸರ್ಕಾರ ಎರಡನೆ ಅಲೆಯಲ್ಲಿ ನಡೆದ ದುರಂತದ ನಂತರ, ತಾನೇ ವ್ಯಾಕ್ಸಿನೇಶನ್ ಪ್ರಕ್ರಿಯೆಯನ್ನು ನಡೆಸುವುದಗಿ ಹೇಳಿಕೊಂಡರೂ, ಅದು ನಿರೀಕ್ಷಿತ ವೇಗದಲ್ಲಿಲ್ಲ ಎಂದು ಖಂಡಿತವಾಗಿಯು ಹೇಳಬಹುದು. ಅದಿನ್ನೂ ತನ್ನ ಇಮೇಜ್ ರಕ್ಷಿಸಿಕೊಳ್ಳುವ ಕೆಲಸದಲ್ಲೇ ಮುಂದುವರೆದಿದೆ.

ಕರ್ನಾಟಕದಲ್ಲಿ ಕೊರೊನಾ ಮತ್ತು ವ್ಯಾಕ್ಸಿನೇಷನ್

2014 ರಂತೆ 6.41 ಕೋಟಿ ಜನ ಸಂಖ್ಯೆಯಿರುವ ರಾಜ್ಯದಲ್ಲಿ ಸುಮಾರು 4.9 ಕೋಟಿ ಜನರು ಕೊರೊನಾ ಲಸಿಕೆ ಪಡೆಯಲು ಅರ್ಹವಿರುವ ಜನರಿದ್ದಾರೆ ಎಂಬುದು ಅಂದಾಜು. ರಾಜ್ಯದಲ್ಲಿ ಇದುವರೆಗೂ ಒಟ್ಟು 29.08 ಲಕ್ಷ ಜನರಿಗೆ ಕೊರೊನಾ ಸಾಂಕ್ರಮಿಕವು ಸೋಂಕಿತ್ತು ಎಂದು ವರದಿಯಾಗಿದೆ. ಸೋಂಕಿನಿಂದಾಗಿ ಇದುವರೆಗೆ ಮೃತಪಟ್ಟವರು 36 ಸಾವಿರ ಎಂದು ಸರ್ಕಾರಿ ಅಂಕಿ ಅಂಶಗಳು ಹೇಳುತ್ತವೆಯಾದರೂ, ಈ ಸಂಖ್ಯೆ ಇದಕ್ಕೂ ಹೆಚ್ಚು ಎನ್ನುತ್ತವೆ ಹಲವು ಮಾಧ್ಯಮಗಳ ವರದಿಗಳು. ರಾಜ್ಯದಲ್ಲಿ 3 ಲಕ್ಷಕ್ಕಿಂತಲೂ ಹೆಚ್ಚು ಕೊರೊನಾದಿಂದ ಸಾವಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇತ್ತೀಚೆಗೆ ಆರೋಪಿಸಿದ್ದರು.

ಉತ್ತರದ ರಾಜ್ಯಗಳಲ್ಲಿ ಸಕ್ರಿಯ ಪ್ರಕರಣಗಳು ಮತ್ತು ಹೊಸದಾಗಿ ಪತ್ತೆಯಾಗುತ್ತಿರುವ ಪ್ರಕರಣಗಳು ಸಾವಿರಕ್ಕಿಂತ ಕಡಿಮೆಯಿದ್ದಾಗ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಸಾವಿರಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ನಮ್ಮ ರಾಜ್ಯದಲ್ಲೇ ಒಟ್ಟು ಸಕ್ರಿಯ ಪ್ರಕರಣಗಳು 24 ಸಾವಿರಕ್ಕಿಂತಲೂ ಹೆಚ್ಚಿದೆ. ಸೋಂಕಿನಿಂದಾಗಿ ಮೃತಪಟ್ಟವರರ ಸಂಖ್ಯೆ ಕೂಡಾ 1.97% ದಷ್ಟಿದೆ. ಇದು ಕೇರಳದಲ್ಲಿ 0.49% ಇದೆ.

ಸುಮಾರು 4.9 ಕೋಟಿ ಜನರು ಕೊರೊನಾ ಲಸಿಕೆ ಪಡೆಯಲು ಅರ್ಹವಿರುವ ಕರ್ನಾಟಕದಲ್ಲಿ ಎರಡು ಡೋಸ್ ಲಸಿಕೆಯನ್ನು ಪಡೆದಿರುವವರು 61.34 ಲಕ್ಷ ಜನರು ಮಾತ್ರ. ರಾಜ್ಯದ 2.43 ಕೋಟಿ ಜನರು ಲಸಿಕೆಯ ಒಂದು ಡೋಸ್ ಮಾತ್ರ ಇದುವರೆಗೂ ಪಡೆದಿದ್ದಾರೆ.

ಮೂರನೆ ಅಲೆ ಮಕ್ಕಳಿಗೆ ಅಪಾಯವೆ?

ಎರಡನೆ ಅಲೆಯ ಉತ್ತುಂಗದ ಸಮಯದಲ್ಲೇ ಮಾಧ್ಯಮಗಳಲ್ಲಿ ಕೊರೊನಾ ಮೂರನೆ ಅಲೆ ಬರಲಿದ್ದು, ಇದು ಮಕ್ಕಳಿಗೆ ಅಪಾಯಕಾರಿಯಾಗಿ ಪರಿಣಮಿಸಲಿದೆ ಎಂದು ಬಿಂಬಿಸುತ್ತಲೆ ಬರುತ್ತಿವೆ. ಆದರೆ ಇದಕ್ಕೆ ವೈಜ್ಞಾನಿಕ ಪುರಾವೆ ಇಲ್ಲ ಎಂದು ಒಕ್ಕೂಟ ಸರ್ಕಾರ ಸ್ಪಷ್ಟಪಡಿಸಿದೆ. ಇದು ಹಲವು ತಜ್ಞರ ಅಭಿಪ್ರಾಯವೂ ಆಗಿದೆ.
“ಒಂದು ಮತ್ತು ಎರಡನೆ ಅಲೆಯಲ್ಲಿ ಸೋಂಕಿಗೆ ಈಡಾದ ಜನರಲ್ಲಿ 10 ರಿಂದ 15% ಮಾತ್ರ ಮಕ್ಕಳಿದ್ದರು. ಮಕ್ಕಳಿಗೆ ಲಸಿಕೆ ನೀಡುವುದನ್ನು ಇನ್ನೂ ಪ್ರಾರಂಭಿಸದೆ ಇರುವುದರಿಂದ ಮೂರನೆ ಅಲೆಯಲ್ಲಿ 40% ಮಕ್ಕಳಿಗೆ ಸೋಂಕು ಹರಡಬಹುದು. ಆದರೆ ಕೊರೊನಾ ಮಕ್ಕಳಿಗೆ ಗಂಭೀರ ಅಪಾಯವನ್ನು ಉಂಟು ಮಾಡುವುದಿಲ್ಲ” ಎಂದು ವಿಕ್ರಂ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವ ಡಾ. ಉಮೇಶ್ ಹೇಳುತ್ತಾರೆ.

ಒಕ್ಕೂಟ ಸರ್ಕಾರವು ಈಗಾಗಲೆ ಡಿಸೆಂಬರ್ ಹೊತ್ತಿಗೆ ಎಲ್ಲರಿಗೂ ಲಸಿಕೆ ನೀಡುತ್ತೇವೆ ಎಂದು ಹೇಳಿತ್ತು. ಆದರೆ ಮೂರನೆ ಅಲೆ ಆಗಸ್ಟ್‌ನಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ, ಆದ್ದರಿಂದ ಮೂರನೆ ಅಲೆ ಜನರಿಗೆ ಅಪಾಯವನ್ನು ಉಂಟು ಮಾಡಬಹುದಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಿದ ಡಾ. ಉಮೇಶ್, “ಜನರು ಕನಿಷ್ಟ ಒಂದು ಡೋಸ್‌ನಷ್ಟಾದರೂ ಲಸಿಕೆ ಪಡೆಯುವಂತಾದರೆ, ಅಪಾಯದಿಂದ ಪಾರಾಗಬಹುದು. ಎರಡನೆ ಅಲೆಯಲ್ಲಿ ಆದಷ್ಟು ಸಾವು ನೋವುಗಳಿಂದ ತಪ್ಪಿಸಿಕೊಳ್ಳಬಹುದು” ಎಂದು ಹೇಳುತ್ತಾರೆ.

ಕೇರಳದಲ್ಲಿ ಏರುತ್ತಿರುವ ಸೋಂಕಿನ ಪ್ರಕರಣಗಳು ಮತ್ತು ಮಹಾರಾಷ್ಟ್ರದಲ್ಲಿ ಪ್ರಸ್ತುತ ಇರುವ ಸೋಂಕಿನ ಪ್ರಮಾಣ ಕರ್ನಾಟಕದ ಮೇಲೆ ಕೂಡಾ ಪರಿಣಾಮ ಬೀರಬಹುದು ಎಂದೂ ಅವರು ತಿಳಿಸಿದ್ದಾರೆ.

PC : Fortis Banglore

ರಾಜ್ಯದ ಬಗ್ಗೆ ಹೇಳಬಹುದಾದರೆ ಪ್ರಸ್ತುತ 4.9 ಕೋಟಿ ಜನರು ಲಸಿಕೆ ಪಡೆಯಲು ಅರ್ಹರಿದ್ದಾರೆ. ಈಗಾಗಲೆ 2.43 ಕೋಟಿ ಜನರು ಕನಿಷ್ಠ ಒಂದು ಡೋಸ್ ಪಡೆದವರು ಇರುವುದರಿಂದ, ಹೆಚ್ಚು ಕೊರೊನಾ ಪ್ರಕರಣ ವರದಿಯಾಗುತ್ತಿರುವ ಪ್ರದೇಶಗಳಲ್ಲಿ ಸರ್ಕಾರವು ಈ ತಿಂಗಳಲ್ಲಿ ಲಸಿಕೆಯನ್ನು ಸಮರೋಪಾದಿಯಲ್ಲಿ ನೀಡಬೇಕಾಗುತ್ತದೆ. ಹೀಗಾದರೆ ಜನರು ಸೋಂಕಿನ ಗಂಭೀರ ಅಪಾಯದಿಂದ ಬಚಾವಾಗಬಲ್ಲರು. ಆದರೆ ಲಸಿಕೆ ಕೊರತೆಯಿಂದ ಮೊದಲ ಡೋಸ್ ನೀಡುವ ಲಸಿಕಾ ಕೇಂದ್ರಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಜುಲೈ 31ಕ್ಕೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ!.

ದೇಶಕ್ಕೆ ಕನಿಷ್ಠವೆಂದರೂ ದಿನವೊಂದಕ್ಕೆ ಸುಮಾರು ಒಂದು ಕೋಟಿ ಲಸಿಕೆಗಳು ಅಗತ್ಯವಿದ್ದು, ಸ್ವಾತಂತ್ರ್ಯೋತ್ಸವ ದಿನಕ್ಕೆ ದೇಶವು ಲಸಿಕಾ ಪ್ರಕ್ರಿಯೆಯನ್ನು ಪ್ರಾರಂಭಿಸಿ ಏಳು ತಿಂಗಳನ್ನು ಪೂರೈಸಲಿದೆ. ಒಕ್ಕೂಟ ಸರ್ಕಾರ ಡಿಸೆಂಬರ್ ಹೊತ್ತಿಗೆ ದೇಶದ ಎಲ್ಲರಿಗೂ ಲಸಿಕೆಯನ್ನು ನೀಡುತ್ತೇವೆ ಎಂದು ಹೇಳಿದೆ. ಆದರೆ ಆರು ತಿಂಗಳು ಕಳೆದರೂ, ದೇಶದ 7.6% ಜನರಿಗಷ್ಟೇ ಸಂಪೂರ್ಣ ಲಸಿಕೆಯನ್ನು ನೀಡಲಾಗಿದೆ. ಈ ನಡುವೆ ದೇಶದ ಹಲವು ರಾಜ್ಯಗಳು ಜುಲೈ ಕೊನೆಯ ವಾರದಲ್ಲೇ ವ್ಯಾಕ್ಸಿನೇಷನ್ ಕೇಂದ್ರಗಳನ್ನು ಮುಚ್ಚುತ್ತಿರುವ ಬಗ್ಗೆ ಮಾಧ್ಯಮಗಳು ವರದಿ ಮಾಡಿವೆ. ಇದೆಲ್ಲದರ ಮಧ್ಯೆ ಮೂರನೆ ಅಲೆ ಅಪ್ಪಳಿಸಲು ತಯಾರಾಗಿ ನಿಂತಿದೆ.

ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿಗಳೇನೋ ಬಂದಿದ್ದಾರೆ ಆದರೆ ಹೊಸ ಸಂಪುಟ ರಚನೆ ಇನ್ನೂ ಆಗಿಲ್ಲ. ಆರೋಗ್ಯಮಂತ್ರಿಯಾಗಿ ಹಿಂದಿನ ಸಚಿವರೇ ಉಳಿಯುವರೋ, ಹೊಸ ಸಚಿವರು ಬರುವರೋ ತಿಳಿದಿಲ್ಲ. ಒಟ್ಟಿನಲ್ಲಿ ಬಿಜೆಪಿ ಆಡಳಿತದ ಎರಡನೇ ವರ್ಶನ್ ಸರ್ಕಾರ ಕೊರೊನಾ ತಡೆಗಟ್ಟುವುದಕ್ಕೆ ಮತ್ತು ಲಸಿಕಾ ಅಭಿಯಾನಕ್ಕೆ, ಹಿಂದಿನ ತಪ್ಪುಗಳನ್ನು ಸರಿಪಡಿಸಿಕೊಂಡು ಚುರುಕಾಗಿ ಕೆಲಸ ಮಾಡುತ್ತದೋ ಇಲ್ಲವೋ ಕಾದು ನೋಡಬೇಕಿದೆ.


ಇದನ್ನೂ ಓದಿ: ಚೀನಾದಲ್ಲಿ ಏರಿಕೆಯಾದ ಕೊರೊನಾ: ಸ್ಥಳೀಯವಾಗಿ 80 ಪ್ರಕರಣಗಳು ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...