Homeಮುಖಪುಟಬಾಬರಿ ಮಸೀದಿ ಧ್ವಂಸಕ್ಕೆ 31 ವರ್ಷ: ಅಜೆಂಡಾ ಯಶಸ್ವಿಗೊಳಿಸುವತ್ತ ಬಿಜೆಪಿ

ಬಾಬರಿ ಮಸೀದಿ ಧ್ವಂಸಕ್ಕೆ 31 ವರ್ಷ: ಅಜೆಂಡಾ ಯಶಸ್ವಿಗೊಳಿಸುವತ್ತ ಬಿಜೆಪಿ

- Advertisement -
- Advertisement -

ಭಾರತದ ಇತಿಹಾಸದಲ್ಲಿ ಡಿಸೆಂಬರ್ 6 ಎರಡು ಕಾರಣಕ್ಕೆ ಹೆಚ್ಚು ಪ್ರಾಶಸ್ತ್ಯವನ್ನು ಪಡೆದುಕೊಂಡಿದೆ. ಒಂದು ಅಂಬೇಡ್ಕರ್ ಅವರ ಪರಿನಿಬ್ಭಾಣ ದಿನ, ಎರಡು ಬಾಬರಿ ಮಸೀದಿ ಧ್ವಂಸ. 1992ರ ಡಿ.6 ರಂದು ಬಾಬರಿ ಮಸೀದಿಯನ್ನು ಕೆಡವಲಾಯಿತು. ಮಹಾತ್ಮಾ ಗಾಂಧಿಯವರ ಹತ್ಯೆಯ ನಂತರ ಸ್ವತಂತ್ರ ಭಾರತ ಎದುರಿಸಿದ ದೊಡ್ಡ ದುರಂತ ಇದು ಎಂದು ಮಾಜಿ ರಾಷ್ಟ್ರಪತಿ ಡಾ.ಕೆ.ಆರ್. ನಾರಾಯಣನ್ ಈ ಘಟನೆಯನ್ನು ಬಣ್ಣಿಸಿದ್ದರು.

ಬಾಬರಿ ಮಸೀದಿ ಧ್ವಂಸ ಘಟನೆಯು ಸಾಂವಿಧಾನಿಕ ಮೌಲ್ಯಗಳು ಮತ್ತು ಸಾಂವಿಧಾನಿಕ ಸಂಸ್ಥೆಗಳಲ್ಲಿ ಅಗಾಧ ನಂಬಿಕೆಯನ್ನು ಹೊಂದಿದ್ದ ಭಾರತೀಯ ಮುಸ್ಲಿಮರ ಮನಸ್ಸಿನ ಮೇಲೆ ಆಳವಾದ ಗಾಯವನ್ನು ಉಂಟುಮಾಡಿದೆ. ನ.25 1949ರಂದು ಸಂವಿಧಾನ ಸಭೆಯಲ್ಲಿ ಅಂಬೇಡ್ಕರ್‌ ಅವರು ಮಾಡಿದ ಭಾಷಣದಲ್ಲಿ ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯ ಎಲ್ಲರಿಗೂ ಸಿಗುವಂತಾಗಬೇಕು ಎಂದು ಹೇಳಿದ್ದರು. ಆದರೆ ಬಾಬರಿ ಮಸೀದಿ ಭೂ ವಿವಾದದ ವಿಚಾರದಲ್ಲಿ ನಮಗೆ ಅನ್ಯಾಯವಾಗಿದೆ ಎಂದು ಮುಸ್ಲಿಂ ಸಮುದಾಯ ಇಂದು ಕೂಡ ಹೇಳುತ್ತಿದೆ.

ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ಹಾಗೂ ನ್ಯಾಯಮೂರ್ತಿಗಳಾದ ಎಸ್‌.ಎ ಬೊಬ್ಡೆ, ಡಿ.ವೈ. ಚಂದ್ರಚೂಡ್‌, ಅಶೋಕ್‌ ಭೂಷಣ್‌ ಹಾಗೂ ಅಬ್ದುಲ್ ನಜೀರ್‌ ಅವರನ್ನೊಳಗೊಂಡ ಸುಪ್ರೀಂಕೋರ್ಟ್‌ ಪೀಠ, ಅಯೋಧ್ಯೆ-ಬಾಬರಿ ಮಸೀದಿ ಜಮೀನಿನ ಒಡೆತನದ ಬಗ್ಗೆ ನ. 9, 2019ರಂದು ತೀರ್ಪು ನೀಡಿತ್ತು. ವಿವಾದಿತ 2.77 ಎಕರೆ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದ ಸುಪ್ರೀಂಕೋರ್ಟ್, ರಾಮಮಂದಿರ ಜಮೀನನ್ನು ಸಂಪೂರ್ಣವಾಗಿ ಟ್ರಸ್ಟ್​​ ವಶಕ್ಕೆ ನೀಡಬೇಕು. ಇದರ ಹೊಣೆ ಸರ್ಕಾರದ್ದು ಎಂದು ಸೂಚಿಸಿತ್ತು. ಇದೇ ವೇಳೆ ಮಸೀದಿ ನಿರ್ಮಾಣಕ್ಕೆ ಸುನ್ನಿ ವಕ್ಫ್ ಬೋರ್ಡ್‌ಗೆ 5 ಎಕರೆ ಪರ್ಯಾಯ ಭೂಮಿ ನೀಡಲು ಸೂಚಿಸಿತ್ತು. ಇದಲ್ಲದೆ 2010ರಲ್ಲಿ ಇದೇ ವಿವಾದದಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸರ್ವೋಚ್ಛ ನ್ಯಾಯಾಲಯವು  ರದ್ದುಪಡಿಸಿತ್ತು. ರಾಮ್ ಲಲ್ಲಾ, ನಿರ್ಮೋಹಿ ಅಖಾಡಾ ಮತ್ತು ಸುನ್ನಿ ವಕ್ಫ್ ಬೋರ್ಡ್‌ಗೆ ವಿವಾದಿತ ಜಾಗವನ್ನು ಅಲಹಾಬಾದ್ ಹೈಕೋರ್ಟ್ ಸಮನಾಗಿ ಹಂಚಿಕೆ ಮಾಡಿರುವುದನ್ನು ರದ್ದುಪಡಿಸಿತ್ತು. ಆ.5, 2020ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭಾರತದ ಪ್ರಧಾನ ಮಂತ್ರಿಗಳು ಶಂಕುಸ್ಥಾಪನೆ ಮಾಡಿದ್ದರು.

‘ಬಾರ್ನ್ ಎ ಮುಸ್ಲಿಂ’ ಕೃತಿಯ ಲೇಖಕರಾದ ಗಜಾಲಾ ವಹಾಬ್ ಅವರು ರಾಮ ಜನ್ಮಭೂಮಿ-ಬಾಬರಿ ಮಸೀದಿ ವಿಷಯವು ಎಂದಿಗೂ ಭೂ ವಿವಾದವಾಗಿರಲಿಲ್ಲ ಮತ್ತು ಇದು ನಿಜವಾಗಿಯೂ ಭೂ ವಿವಾದವಾಗಿದ್ದರೆ, ಧಾವೆ ಹೂಡಿದ ಮುಸ್ಲಿಮರು ಮೊದಲೇ ಪರ್ಯಾಯ ಭೂಮಿ ಅಥವಾ ಹಣವನ್ನು ಸ್ವೀಕರಿಸುತ್ತಿದ್ದರು ಎಂದು ಲೇಖನವೊಂದರಲ್ಲಿ ಹೇಳಿದ್ದಾರೆ. ನ್ಯಾಯಕ್ಕೆ ಬದಲಾಗಿ ಭೂಮಿಯನ್ನು ಸ್ವೀಕರಿಸುವ ಮೂಲಕ, ಮುಸ್ಲಿಮರು ನ್ಯಾಯದ ಅಗತ್ಯವಿಲ್ಲದ ಸಮುದಾಯವಾಗಿ ತಮ್ಮ ದ್ವಿತೀಯ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ ಎಂದು ತೀರ್ಪಿನ ಬಗ್ಗೆ ವಹಾಬ್ ಹೇಳಿದರು.

ಡಿಸೆಂಬರ್ 6, 1992ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಸಾವಿರಾರು ಜನರ ಗುಂಪು ಮುಖ್ಯವಾಗಿ ಕರಸೇವಕರು ನೆಲಸಮಗೊಳಿಸಿದ್ದರು. 2,000ಕ್ಕೂ ಹೆಚ್ಚು ಜನರು ಆ ಬಳಿಕದ  ಕೋಮುಗಲಭೆಗಳಲ್ಲಿ ಕೊಲ್ಲಲ್ಪಟ್ಟರು. 1947ರಲ್ಲಿ ಸ್ವಾತಂತ್ರ್ಯದ ನಂತರ ಭಾರತವು ಕಂಡ ಅತ್ಯಂತ ಭೀಕರವಾದ ಗಲಭೆಗಳಲ್ಲಿ ಒಂದಾಗಿದೆ. ಈಗ 30 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ದಶಕದ ಹಿಂದಿನ ಚುನಾವಣಾ ಭರವಸೆಯನ್ನು ಈಡೇರಿಸುವ ಸಮೀಪದಲ್ಲಿದ್ದಾರೆ. 2024ರ ಜ.22ರಂದು ರಾಮ ಮಂದಿರದ ಉದ್ಘಾಟನೆ ನಡೆಯಲಿದ್ದು, ಬಳಿಕ ಮಂದಿರವು ಭಕ್ತರಿಗೆ ತೆರೆದಿರುತ್ತದೆ. ವಿಶೇಷ ಎಂದರೆ ಈ ಬೆಳವಣಿಗೆಯು 2024ರ ಲೋಕಸಭಾ ಸಮೀಪಿಸುತ್ತಿದ್ದಂತೆಯೇ ನಡೆಯಲಿದೆ.

31 ವರ್ಷಗಳ ಹಿಂದೆ ಡಿ. 6ರಂದು ಭಾನುವಾರ ಸುಮಾರು 11 ಗಂಟೆಗೆ ಕರಸೇವಕರ ಒಂದು ದೊಡ್ಡ ಗುಂಪು ಮಸೀದಿಯನ್ನು ಸುತ್ತುವರೆದಿತ್ತು ಮತ್ತು ಮಂದಿರ ಯೇಹಿ ಬನೇಗಾ (ನಾವು ಇಲ್ಲಿ ದೇವಾಲಯವನ್ನು ನಿರ್ಮಿಸುತ್ತೇವೆ) ಎಂಬ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು. ಮಧ್ಯಾಹ್ನದ ನಂತರ ವಿಎಚ್ ಪಿ, ಶಿವ ಸೇನೆ, ಬಿಜೆಪಿಯ ಸದಸ್ಯರಿದ್ದ ಕರಸೇವಕರು ಮಸೀದಿಯ 3 ಗುಮ್ಮಟಗಳು ಒಂದರ ನಂತರ ಒಂದರಂತೆ  ಕೆಡವಿದ್ದಾರೆ.

ಬಾಬರಿ ಮಸೀದಿ ಧ್ವಂಸ ಅಪರಾಧ ಆದರೆ ಸುದೀರ್ಘ ವಿಚಾರಣೆಯ ನಂತರವೂ ವಿಚಾರಣಾ ನ್ಯಾಯಾಲಯದಿಂದ ಒಬ್ಬ ಆರೋಪಿಗೂ ಶಿಕ್ಷೆಯಾಗಲಿಲ್ಲ. ಉತ್ತರಪ್ರದೇಶ ಪೊಲೀಸರು ಬಾಬರಿ ಮಸೀದಿ ಧ್ವಂಸ, ಗಲಭೆ, ಕೋಮು ಸೌಹಾರ್ದತೆಗೆ ಭಂಗ ತರುವ ಭಾಷಣಗಳು ಮತ್ತು ಇತರ ಪತ್ರಕರ್ತರ ಮೇಲಿನ ಹಲ್ಲೆಗಳಿಗೆ ಸಂಬಂಧಿಸಿದಂತೆ ಒಟ್ಟು 49 ಪ್ರಕರಣಗಳನ್ನು ದಾಖಲಿಸಿದ್ದರು. ದಾಖಲೆಗಳ ಪ್ರಕಾರ ಅಂದಿನ ರಾಮಜನ್ಮಭೂಮಿ ಪೊಲೀಸ್ ಠಾಣೆಯ ಉಸ್ತುವಾರಿ ಪಿಎನ್ ಶುಕ್ಲಾ ಅವರು ಅಪರಿಚಿತ ಕರಸೇವಕರ ವಿರುದ್ಧ ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಅಶೋಕ್ ಸಿಂಘಾಲ್, ಗಿರಿರಾಜ್ ಕಿಶೋರ್, ವಿಷ್ಣು ಹರಿ ದಾಲ್ಮಿಯಾ, ಸಾಧ್ವಿ ಋತಂಭರ, ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ವಿನಯ್ ಕಟಿಯಾರ್ ಮತ್ತು ಉಮಾಭಾರತಿ ಸೇರಿ ಪ್ರಕರಣದಲ್ಲಿ ಹಲವರ ವಿರುದ್ಧ ಕೇಸ್ ದಾಖಲಾಗಿತ್ತು.

ರಾಮಮಂದಿರ ಆಂದೋಲನ ಮತ್ತು ಬಾಬರಿ ಮಸೀದಿ ಧ್ವಂಸವು ಹಿಂದೂ ಬಹುಸಂಖ್ಯಾತತೆಯ ಬಲವರ್ಧನೆಗೆ ಮತ್ತು ಭಾರತೀಯ ಜನತಾ ಪಕ್ಷದ ಬೆಳವಣಿಗೆಗೆ ಕಾರಣವಾಗುತ್ತದೆ. ಬಾಬರಿ ಮಸೀದಿ ಧ್ವಂಸದ ಬಳಿಕ ಸಮುದಾಯಗಳ ನಡುವಿನ ದ್ವೇಷಕ್ಕೆ ನಾಂದಿಯಾಡಿತು. ಬಾಬರಿ ಮಸೀದಿಯ ಜಾಗದ ಕಾನೂನು ವಿವಾದ ಸುದೀರ್ಘ ವರ್ಷಗಳ ಕಾಲ ನಡೆಯಿತು. ಕೊನೆಯಲ್ಲಿ 2019ರಲ್ಲಿ ಭಾರತದ ಸರ್ವೋಚ್ಚ ನ್ಯಾಯಾಲಯವು ಭಗವಾನ್ ರಾಮನು ಈ ಸ್ಥಳದಲ್ಲಿ ಜನಿಸಿದನು ಎಂದು ಹೇಳಿದೆ. ಈ ತೀರ್ಪನ್ನು ಹೆಚ್ಚಾಗಿ ಮೋದಿ ಮತ್ತು ಅವರ ಬೆಂಬಲಿಗರ ವಿಜಯವೆಂದು ಪರಿಗಣಿಸಲಾಗಿದೆ.

ಇದನ್ನು ಓದಿ: ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...