Homeಮುಖಪುಟಬಾಬರಿ ಮಸೀದಿ ಧ್ವಂಸಕ್ಕೆ 31 ವರ್ಷ: ಅಜೆಂಡಾ ಯಶಸ್ವಿಗೊಳಿಸುವತ್ತ ಬಿಜೆಪಿ

ಬಾಬರಿ ಮಸೀದಿ ಧ್ವಂಸಕ್ಕೆ 31 ವರ್ಷ: ಅಜೆಂಡಾ ಯಶಸ್ವಿಗೊಳಿಸುವತ್ತ ಬಿಜೆಪಿ

- Advertisement -
- Advertisement -

ಭಾರತದ ಇತಿಹಾಸದಲ್ಲಿ ಡಿಸೆಂಬರ್ 6 ಎರಡು ಕಾರಣಕ್ಕೆ ಹೆಚ್ಚು ಪ್ರಾಶಸ್ತ್ಯವನ್ನು ಪಡೆದುಕೊಂಡಿದೆ. ಒಂದು ಅಂಬೇಡ್ಕರ್ ಅವರ ಪರಿನಿಬ್ಭಾಣ ದಿನ, ಎರಡು ಬಾಬರಿ ಮಸೀದಿ ಧ್ವಂಸ. 1992ರ ಡಿ.6 ರಂದು ಬಾಬರಿ ಮಸೀದಿಯನ್ನು ಕೆಡವಲಾಯಿತು. ಮಹಾತ್ಮಾ ಗಾಂಧಿಯವರ ಹತ್ಯೆಯ ನಂತರ ಸ್ವತಂತ್ರ ಭಾರತ ಎದುರಿಸಿದ ದೊಡ್ಡ ದುರಂತ ಇದು ಎಂದು ಮಾಜಿ ರಾಷ್ಟ್ರಪತಿ ಡಾ.ಕೆ.ಆರ್. ನಾರಾಯಣನ್ ಈ ಘಟನೆಯನ್ನು ಬಣ್ಣಿಸಿದ್ದರು.

ಬಾಬರಿ ಮಸೀದಿ ಧ್ವಂಸ ಘಟನೆಯು ಸಾಂವಿಧಾನಿಕ ಮೌಲ್ಯಗಳು ಮತ್ತು ಸಾಂವಿಧಾನಿಕ ಸಂಸ್ಥೆಗಳಲ್ಲಿ ಅಗಾಧ ನಂಬಿಕೆಯನ್ನು ಹೊಂದಿದ್ದ ಭಾರತೀಯ ಮುಸ್ಲಿಮರ ಮನಸ್ಸಿನ ಮೇಲೆ ಆಳವಾದ ಗಾಯವನ್ನು ಉಂಟುಮಾಡಿದೆ. ನ.25 1949ರಂದು ಸಂವಿಧಾನ ಸಭೆಯಲ್ಲಿ ಅಂಬೇಡ್ಕರ್‌ ಅವರು ಮಾಡಿದ ಭಾಷಣದಲ್ಲಿ ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯ ಎಲ್ಲರಿಗೂ ಸಿಗುವಂತಾಗಬೇಕು ಎಂದು ಹೇಳಿದ್ದರು. ಆದರೆ ಬಾಬರಿ ಮಸೀದಿ ಭೂ ವಿವಾದದ ವಿಚಾರದಲ್ಲಿ ನಮಗೆ ಅನ್ಯಾಯವಾಗಿದೆ ಎಂದು ಮುಸ್ಲಿಂ ಸಮುದಾಯ ಇಂದು ಕೂಡ ಹೇಳುತ್ತಿದೆ.

ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ಹಾಗೂ ನ್ಯಾಯಮೂರ್ತಿಗಳಾದ ಎಸ್‌.ಎ ಬೊಬ್ಡೆ, ಡಿ.ವೈ. ಚಂದ್ರಚೂಡ್‌, ಅಶೋಕ್‌ ಭೂಷಣ್‌ ಹಾಗೂ ಅಬ್ದುಲ್ ನಜೀರ್‌ ಅವರನ್ನೊಳಗೊಂಡ ಸುಪ್ರೀಂಕೋರ್ಟ್‌ ಪೀಠ, ಅಯೋಧ್ಯೆ-ಬಾಬರಿ ಮಸೀದಿ ಜಮೀನಿನ ಒಡೆತನದ ಬಗ್ಗೆ ನ. 9, 2019ರಂದು ತೀರ್ಪು ನೀಡಿತ್ತು. ವಿವಾದಿತ 2.77 ಎಕರೆ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದ ಸುಪ್ರೀಂಕೋರ್ಟ್, ರಾಮಮಂದಿರ ಜಮೀನನ್ನು ಸಂಪೂರ್ಣವಾಗಿ ಟ್ರಸ್ಟ್​​ ವಶಕ್ಕೆ ನೀಡಬೇಕು. ಇದರ ಹೊಣೆ ಸರ್ಕಾರದ್ದು ಎಂದು ಸೂಚಿಸಿತ್ತು. ಇದೇ ವೇಳೆ ಮಸೀದಿ ನಿರ್ಮಾಣಕ್ಕೆ ಸುನ್ನಿ ವಕ್ಫ್ ಬೋರ್ಡ್‌ಗೆ 5 ಎಕರೆ ಪರ್ಯಾಯ ಭೂಮಿ ನೀಡಲು ಸೂಚಿಸಿತ್ತು. ಇದಲ್ಲದೆ 2010ರಲ್ಲಿ ಇದೇ ವಿವಾದದಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸರ್ವೋಚ್ಛ ನ್ಯಾಯಾಲಯವು  ರದ್ದುಪಡಿಸಿತ್ತು. ರಾಮ್ ಲಲ್ಲಾ, ನಿರ್ಮೋಹಿ ಅಖಾಡಾ ಮತ್ತು ಸುನ್ನಿ ವಕ್ಫ್ ಬೋರ್ಡ್‌ಗೆ ವಿವಾದಿತ ಜಾಗವನ್ನು ಅಲಹಾಬಾದ್ ಹೈಕೋರ್ಟ್ ಸಮನಾಗಿ ಹಂಚಿಕೆ ಮಾಡಿರುವುದನ್ನು ರದ್ದುಪಡಿಸಿತ್ತು. ಆ.5, 2020ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭಾರತದ ಪ್ರಧಾನ ಮಂತ್ರಿಗಳು ಶಂಕುಸ್ಥಾಪನೆ ಮಾಡಿದ್ದರು.

‘ಬಾರ್ನ್ ಎ ಮುಸ್ಲಿಂ’ ಕೃತಿಯ ಲೇಖಕರಾದ ಗಜಾಲಾ ವಹಾಬ್ ಅವರು ರಾಮ ಜನ್ಮಭೂಮಿ-ಬಾಬರಿ ಮಸೀದಿ ವಿಷಯವು ಎಂದಿಗೂ ಭೂ ವಿವಾದವಾಗಿರಲಿಲ್ಲ ಮತ್ತು ಇದು ನಿಜವಾಗಿಯೂ ಭೂ ವಿವಾದವಾಗಿದ್ದರೆ, ಧಾವೆ ಹೂಡಿದ ಮುಸ್ಲಿಮರು ಮೊದಲೇ ಪರ್ಯಾಯ ಭೂಮಿ ಅಥವಾ ಹಣವನ್ನು ಸ್ವೀಕರಿಸುತ್ತಿದ್ದರು ಎಂದು ಲೇಖನವೊಂದರಲ್ಲಿ ಹೇಳಿದ್ದಾರೆ. ನ್ಯಾಯಕ್ಕೆ ಬದಲಾಗಿ ಭೂಮಿಯನ್ನು ಸ್ವೀಕರಿಸುವ ಮೂಲಕ, ಮುಸ್ಲಿಮರು ನ್ಯಾಯದ ಅಗತ್ಯವಿಲ್ಲದ ಸಮುದಾಯವಾಗಿ ತಮ್ಮ ದ್ವಿತೀಯ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ ಎಂದು ತೀರ್ಪಿನ ಬಗ್ಗೆ ವಹಾಬ್ ಹೇಳಿದರು.

ಡಿಸೆಂಬರ್ 6, 1992ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಸಾವಿರಾರು ಜನರ ಗುಂಪು ಮುಖ್ಯವಾಗಿ ಕರಸೇವಕರು ನೆಲಸಮಗೊಳಿಸಿದ್ದರು. 2,000ಕ್ಕೂ ಹೆಚ್ಚು ಜನರು ಆ ಬಳಿಕದ  ಕೋಮುಗಲಭೆಗಳಲ್ಲಿ ಕೊಲ್ಲಲ್ಪಟ್ಟರು. 1947ರಲ್ಲಿ ಸ್ವಾತಂತ್ರ್ಯದ ನಂತರ ಭಾರತವು ಕಂಡ ಅತ್ಯಂತ ಭೀಕರವಾದ ಗಲಭೆಗಳಲ್ಲಿ ಒಂದಾಗಿದೆ. ಈಗ 30 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ದಶಕದ ಹಿಂದಿನ ಚುನಾವಣಾ ಭರವಸೆಯನ್ನು ಈಡೇರಿಸುವ ಸಮೀಪದಲ್ಲಿದ್ದಾರೆ. 2024ರ ಜ.22ರಂದು ರಾಮ ಮಂದಿರದ ಉದ್ಘಾಟನೆ ನಡೆಯಲಿದ್ದು, ಬಳಿಕ ಮಂದಿರವು ಭಕ್ತರಿಗೆ ತೆರೆದಿರುತ್ತದೆ. ವಿಶೇಷ ಎಂದರೆ ಈ ಬೆಳವಣಿಗೆಯು 2024ರ ಲೋಕಸಭಾ ಸಮೀಪಿಸುತ್ತಿದ್ದಂತೆಯೇ ನಡೆಯಲಿದೆ.

31 ವರ್ಷಗಳ ಹಿಂದೆ ಡಿ. 6ರಂದು ಭಾನುವಾರ ಸುಮಾರು 11 ಗಂಟೆಗೆ ಕರಸೇವಕರ ಒಂದು ದೊಡ್ಡ ಗುಂಪು ಮಸೀದಿಯನ್ನು ಸುತ್ತುವರೆದಿತ್ತು ಮತ್ತು ಮಂದಿರ ಯೇಹಿ ಬನೇಗಾ (ನಾವು ಇಲ್ಲಿ ದೇವಾಲಯವನ್ನು ನಿರ್ಮಿಸುತ್ತೇವೆ) ಎಂಬ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು. ಮಧ್ಯಾಹ್ನದ ನಂತರ ವಿಎಚ್ ಪಿ, ಶಿವ ಸೇನೆ, ಬಿಜೆಪಿಯ ಸದಸ್ಯರಿದ್ದ ಕರಸೇವಕರು ಮಸೀದಿಯ 3 ಗುಮ್ಮಟಗಳು ಒಂದರ ನಂತರ ಒಂದರಂತೆ  ಕೆಡವಿದ್ದಾರೆ.

ಬಾಬರಿ ಮಸೀದಿ ಧ್ವಂಸ ಅಪರಾಧ ಆದರೆ ಸುದೀರ್ಘ ವಿಚಾರಣೆಯ ನಂತರವೂ ವಿಚಾರಣಾ ನ್ಯಾಯಾಲಯದಿಂದ ಒಬ್ಬ ಆರೋಪಿಗೂ ಶಿಕ್ಷೆಯಾಗಲಿಲ್ಲ. ಉತ್ತರಪ್ರದೇಶ ಪೊಲೀಸರು ಬಾಬರಿ ಮಸೀದಿ ಧ್ವಂಸ, ಗಲಭೆ, ಕೋಮು ಸೌಹಾರ್ದತೆಗೆ ಭಂಗ ತರುವ ಭಾಷಣಗಳು ಮತ್ತು ಇತರ ಪತ್ರಕರ್ತರ ಮೇಲಿನ ಹಲ್ಲೆಗಳಿಗೆ ಸಂಬಂಧಿಸಿದಂತೆ ಒಟ್ಟು 49 ಪ್ರಕರಣಗಳನ್ನು ದಾಖಲಿಸಿದ್ದರು. ದಾಖಲೆಗಳ ಪ್ರಕಾರ ಅಂದಿನ ರಾಮಜನ್ಮಭೂಮಿ ಪೊಲೀಸ್ ಠಾಣೆಯ ಉಸ್ತುವಾರಿ ಪಿಎನ್ ಶುಕ್ಲಾ ಅವರು ಅಪರಿಚಿತ ಕರಸೇವಕರ ವಿರುದ್ಧ ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಅಶೋಕ್ ಸಿಂಘಾಲ್, ಗಿರಿರಾಜ್ ಕಿಶೋರ್, ವಿಷ್ಣು ಹರಿ ದಾಲ್ಮಿಯಾ, ಸಾಧ್ವಿ ಋತಂಭರ, ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ವಿನಯ್ ಕಟಿಯಾರ್ ಮತ್ತು ಉಮಾಭಾರತಿ ಸೇರಿ ಪ್ರಕರಣದಲ್ಲಿ ಹಲವರ ವಿರುದ್ಧ ಕೇಸ್ ದಾಖಲಾಗಿತ್ತು.

ರಾಮಮಂದಿರ ಆಂದೋಲನ ಮತ್ತು ಬಾಬರಿ ಮಸೀದಿ ಧ್ವಂಸವು ಹಿಂದೂ ಬಹುಸಂಖ್ಯಾತತೆಯ ಬಲವರ್ಧನೆಗೆ ಮತ್ತು ಭಾರತೀಯ ಜನತಾ ಪಕ್ಷದ ಬೆಳವಣಿಗೆಗೆ ಕಾರಣವಾಗುತ್ತದೆ. ಬಾಬರಿ ಮಸೀದಿ ಧ್ವಂಸದ ಬಳಿಕ ಸಮುದಾಯಗಳ ನಡುವಿನ ದ್ವೇಷಕ್ಕೆ ನಾಂದಿಯಾಡಿತು. ಬಾಬರಿ ಮಸೀದಿಯ ಜಾಗದ ಕಾನೂನು ವಿವಾದ ಸುದೀರ್ಘ ವರ್ಷಗಳ ಕಾಲ ನಡೆಯಿತು. ಕೊನೆಯಲ್ಲಿ 2019ರಲ್ಲಿ ಭಾರತದ ಸರ್ವೋಚ್ಚ ನ್ಯಾಯಾಲಯವು ಭಗವಾನ್ ರಾಮನು ಈ ಸ್ಥಳದಲ್ಲಿ ಜನಿಸಿದನು ಎಂದು ಹೇಳಿದೆ. ಈ ತೀರ್ಪನ್ನು ಹೆಚ್ಚಾಗಿ ಮೋದಿ ಮತ್ತು ಅವರ ಬೆಂಬಲಿಗರ ವಿಜಯವೆಂದು ಪರಿಗಣಿಸಲಾಗಿದೆ.

ಇದನ್ನು ಓದಿ: ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...