Homeಮುಖಪುಟಬಾಬರಿ ಮಸೀದಿ ಧ್ವಂಸಕ್ಕೆ 31 ವರ್ಷ: ಅಜೆಂಡಾ ಯಶಸ್ವಿಗೊಳಿಸುವತ್ತ ಬಿಜೆಪಿ

ಬಾಬರಿ ಮಸೀದಿ ಧ್ವಂಸಕ್ಕೆ 31 ವರ್ಷ: ಅಜೆಂಡಾ ಯಶಸ್ವಿಗೊಳಿಸುವತ್ತ ಬಿಜೆಪಿ

- Advertisement -
- Advertisement -

ಭಾರತದ ಇತಿಹಾಸದಲ್ಲಿ ಡಿಸೆಂಬರ್ 6 ಎರಡು ಕಾರಣಕ್ಕೆ ಹೆಚ್ಚು ಪ್ರಾಶಸ್ತ್ಯವನ್ನು ಪಡೆದುಕೊಂಡಿದೆ. ಒಂದು ಅಂಬೇಡ್ಕರ್ ಅವರ ಪರಿನಿಬ್ಭಾಣ ದಿನ, ಎರಡು ಬಾಬರಿ ಮಸೀದಿ ಧ್ವಂಸ. 1992ರ ಡಿ.6 ರಂದು ಬಾಬರಿ ಮಸೀದಿಯನ್ನು ಕೆಡವಲಾಯಿತು. ಮಹಾತ್ಮಾ ಗಾಂಧಿಯವರ ಹತ್ಯೆಯ ನಂತರ ಸ್ವತಂತ್ರ ಭಾರತ ಎದುರಿಸಿದ ದೊಡ್ಡ ದುರಂತ ಇದು ಎಂದು ಮಾಜಿ ರಾಷ್ಟ್ರಪತಿ ಡಾ.ಕೆ.ಆರ್. ನಾರಾಯಣನ್ ಈ ಘಟನೆಯನ್ನು ಬಣ್ಣಿಸಿದ್ದರು.

ಬಾಬರಿ ಮಸೀದಿ ಧ್ವಂಸ ಘಟನೆಯು ಸಾಂವಿಧಾನಿಕ ಮೌಲ್ಯಗಳು ಮತ್ತು ಸಾಂವಿಧಾನಿಕ ಸಂಸ್ಥೆಗಳಲ್ಲಿ ಅಗಾಧ ನಂಬಿಕೆಯನ್ನು ಹೊಂದಿದ್ದ ಭಾರತೀಯ ಮುಸ್ಲಿಮರ ಮನಸ್ಸಿನ ಮೇಲೆ ಆಳವಾದ ಗಾಯವನ್ನು ಉಂಟುಮಾಡಿದೆ. ನ.25 1949ರಂದು ಸಂವಿಧಾನ ಸಭೆಯಲ್ಲಿ ಅಂಬೇಡ್ಕರ್‌ ಅವರು ಮಾಡಿದ ಭಾಷಣದಲ್ಲಿ ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯ ಎಲ್ಲರಿಗೂ ಸಿಗುವಂತಾಗಬೇಕು ಎಂದು ಹೇಳಿದ್ದರು. ಆದರೆ ಬಾಬರಿ ಮಸೀದಿ ಭೂ ವಿವಾದದ ವಿಚಾರದಲ್ಲಿ ನಮಗೆ ಅನ್ಯಾಯವಾಗಿದೆ ಎಂದು ಮುಸ್ಲಿಂ ಸಮುದಾಯ ಇಂದು ಕೂಡ ಹೇಳುತ್ತಿದೆ.

ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ಹಾಗೂ ನ್ಯಾಯಮೂರ್ತಿಗಳಾದ ಎಸ್‌.ಎ ಬೊಬ್ಡೆ, ಡಿ.ವೈ. ಚಂದ್ರಚೂಡ್‌, ಅಶೋಕ್‌ ಭೂಷಣ್‌ ಹಾಗೂ ಅಬ್ದುಲ್ ನಜೀರ್‌ ಅವರನ್ನೊಳಗೊಂಡ ಸುಪ್ರೀಂಕೋರ್ಟ್‌ ಪೀಠ, ಅಯೋಧ್ಯೆ-ಬಾಬರಿ ಮಸೀದಿ ಜಮೀನಿನ ಒಡೆತನದ ಬಗ್ಗೆ ನ. 9, 2019ರಂದು ತೀರ್ಪು ನೀಡಿತ್ತು. ವಿವಾದಿತ 2.77 ಎಕರೆ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದ ಸುಪ್ರೀಂಕೋರ್ಟ್, ರಾಮಮಂದಿರ ಜಮೀನನ್ನು ಸಂಪೂರ್ಣವಾಗಿ ಟ್ರಸ್ಟ್​​ ವಶಕ್ಕೆ ನೀಡಬೇಕು. ಇದರ ಹೊಣೆ ಸರ್ಕಾರದ್ದು ಎಂದು ಸೂಚಿಸಿತ್ತು. ಇದೇ ವೇಳೆ ಮಸೀದಿ ನಿರ್ಮಾಣಕ್ಕೆ ಸುನ್ನಿ ವಕ್ಫ್ ಬೋರ್ಡ್‌ಗೆ 5 ಎಕರೆ ಪರ್ಯಾಯ ಭೂಮಿ ನೀಡಲು ಸೂಚಿಸಿತ್ತು. ಇದಲ್ಲದೆ 2010ರಲ್ಲಿ ಇದೇ ವಿವಾದದಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸರ್ವೋಚ್ಛ ನ್ಯಾಯಾಲಯವು  ರದ್ದುಪಡಿಸಿತ್ತು. ರಾಮ್ ಲಲ್ಲಾ, ನಿರ್ಮೋಹಿ ಅಖಾಡಾ ಮತ್ತು ಸುನ್ನಿ ವಕ್ಫ್ ಬೋರ್ಡ್‌ಗೆ ವಿವಾದಿತ ಜಾಗವನ್ನು ಅಲಹಾಬಾದ್ ಹೈಕೋರ್ಟ್ ಸಮನಾಗಿ ಹಂಚಿಕೆ ಮಾಡಿರುವುದನ್ನು ರದ್ದುಪಡಿಸಿತ್ತು. ಆ.5, 2020ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭಾರತದ ಪ್ರಧಾನ ಮಂತ್ರಿಗಳು ಶಂಕುಸ್ಥಾಪನೆ ಮಾಡಿದ್ದರು.

‘ಬಾರ್ನ್ ಎ ಮುಸ್ಲಿಂ’ ಕೃತಿಯ ಲೇಖಕರಾದ ಗಜಾಲಾ ವಹಾಬ್ ಅವರು ರಾಮ ಜನ್ಮಭೂಮಿ-ಬಾಬರಿ ಮಸೀದಿ ವಿಷಯವು ಎಂದಿಗೂ ಭೂ ವಿವಾದವಾಗಿರಲಿಲ್ಲ ಮತ್ತು ಇದು ನಿಜವಾಗಿಯೂ ಭೂ ವಿವಾದವಾಗಿದ್ದರೆ, ಧಾವೆ ಹೂಡಿದ ಮುಸ್ಲಿಮರು ಮೊದಲೇ ಪರ್ಯಾಯ ಭೂಮಿ ಅಥವಾ ಹಣವನ್ನು ಸ್ವೀಕರಿಸುತ್ತಿದ್ದರು ಎಂದು ಲೇಖನವೊಂದರಲ್ಲಿ ಹೇಳಿದ್ದಾರೆ. ನ್ಯಾಯಕ್ಕೆ ಬದಲಾಗಿ ಭೂಮಿಯನ್ನು ಸ್ವೀಕರಿಸುವ ಮೂಲಕ, ಮುಸ್ಲಿಮರು ನ್ಯಾಯದ ಅಗತ್ಯವಿಲ್ಲದ ಸಮುದಾಯವಾಗಿ ತಮ್ಮ ದ್ವಿತೀಯ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ ಎಂದು ತೀರ್ಪಿನ ಬಗ್ಗೆ ವಹಾಬ್ ಹೇಳಿದರು.

ಡಿಸೆಂಬರ್ 6, 1992ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಸಾವಿರಾರು ಜನರ ಗುಂಪು ಮುಖ್ಯವಾಗಿ ಕರಸೇವಕರು ನೆಲಸಮಗೊಳಿಸಿದ್ದರು. 2,000ಕ್ಕೂ ಹೆಚ್ಚು ಜನರು ಆ ಬಳಿಕದ  ಕೋಮುಗಲಭೆಗಳಲ್ಲಿ ಕೊಲ್ಲಲ್ಪಟ್ಟರು. 1947ರಲ್ಲಿ ಸ್ವಾತಂತ್ರ್ಯದ ನಂತರ ಭಾರತವು ಕಂಡ ಅತ್ಯಂತ ಭೀಕರವಾದ ಗಲಭೆಗಳಲ್ಲಿ ಒಂದಾಗಿದೆ. ಈಗ 30 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ದಶಕದ ಹಿಂದಿನ ಚುನಾವಣಾ ಭರವಸೆಯನ್ನು ಈಡೇರಿಸುವ ಸಮೀಪದಲ್ಲಿದ್ದಾರೆ. 2024ರ ಜ.22ರಂದು ರಾಮ ಮಂದಿರದ ಉದ್ಘಾಟನೆ ನಡೆಯಲಿದ್ದು, ಬಳಿಕ ಮಂದಿರವು ಭಕ್ತರಿಗೆ ತೆರೆದಿರುತ್ತದೆ. ವಿಶೇಷ ಎಂದರೆ ಈ ಬೆಳವಣಿಗೆಯು 2024ರ ಲೋಕಸಭಾ ಸಮೀಪಿಸುತ್ತಿದ್ದಂತೆಯೇ ನಡೆಯಲಿದೆ.

31 ವರ್ಷಗಳ ಹಿಂದೆ ಡಿ. 6ರಂದು ಭಾನುವಾರ ಸುಮಾರು 11 ಗಂಟೆಗೆ ಕರಸೇವಕರ ಒಂದು ದೊಡ್ಡ ಗುಂಪು ಮಸೀದಿಯನ್ನು ಸುತ್ತುವರೆದಿತ್ತು ಮತ್ತು ಮಂದಿರ ಯೇಹಿ ಬನೇಗಾ (ನಾವು ಇಲ್ಲಿ ದೇವಾಲಯವನ್ನು ನಿರ್ಮಿಸುತ್ತೇವೆ) ಎಂಬ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು. ಮಧ್ಯಾಹ್ನದ ನಂತರ ವಿಎಚ್ ಪಿ, ಶಿವ ಸೇನೆ, ಬಿಜೆಪಿಯ ಸದಸ್ಯರಿದ್ದ ಕರಸೇವಕರು ಮಸೀದಿಯ 3 ಗುಮ್ಮಟಗಳು ಒಂದರ ನಂತರ ಒಂದರಂತೆ  ಕೆಡವಿದ್ದಾರೆ.

ಬಾಬರಿ ಮಸೀದಿ ಧ್ವಂಸ ಅಪರಾಧ ಆದರೆ ಸುದೀರ್ಘ ವಿಚಾರಣೆಯ ನಂತರವೂ ವಿಚಾರಣಾ ನ್ಯಾಯಾಲಯದಿಂದ ಒಬ್ಬ ಆರೋಪಿಗೂ ಶಿಕ್ಷೆಯಾಗಲಿಲ್ಲ. ಉತ್ತರಪ್ರದೇಶ ಪೊಲೀಸರು ಬಾಬರಿ ಮಸೀದಿ ಧ್ವಂಸ, ಗಲಭೆ, ಕೋಮು ಸೌಹಾರ್ದತೆಗೆ ಭಂಗ ತರುವ ಭಾಷಣಗಳು ಮತ್ತು ಇತರ ಪತ್ರಕರ್ತರ ಮೇಲಿನ ಹಲ್ಲೆಗಳಿಗೆ ಸಂಬಂಧಿಸಿದಂತೆ ಒಟ್ಟು 49 ಪ್ರಕರಣಗಳನ್ನು ದಾಖಲಿಸಿದ್ದರು. ದಾಖಲೆಗಳ ಪ್ರಕಾರ ಅಂದಿನ ರಾಮಜನ್ಮಭೂಮಿ ಪೊಲೀಸ್ ಠಾಣೆಯ ಉಸ್ತುವಾರಿ ಪಿಎನ್ ಶುಕ್ಲಾ ಅವರು ಅಪರಿಚಿತ ಕರಸೇವಕರ ವಿರುದ್ಧ ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಅಶೋಕ್ ಸಿಂಘಾಲ್, ಗಿರಿರಾಜ್ ಕಿಶೋರ್, ವಿಷ್ಣು ಹರಿ ದಾಲ್ಮಿಯಾ, ಸಾಧ್ವಿ ಋತಂಭರ, ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ವಿನಯ್ ಕಟಿಯಾರ್ ಮತ್ತು ಉಮಾಭಾರತಿ ಸೇರಿ ಪ್ರಕರಣದಲ್ಲಿ ಹಲವರ ವಿರುದ್ಧ ಕೇಸ್ ದಾಖಲಾಗಿತ್ತು.

ರಾಮಮಂದಿರ ಆಂದೋಲನ ಮತ್ತು ಬಾಬರಿ ಮಸೀದಿ ಧ್ವಂಸವು ಹಿಂದೂ ಬಹುಸಂಖ್ಯಾತತೆಯ ಬಲವರ್ಧನೆಗೆ ಮತ್ತು ಭಾರತೀಯ ಜನತಾ ಪಕ್ಷದ ಬೆಳವಣಿಗೆಗೆ ಕಾರಣವಾಗುತ್ತದೆ. ಬಾಬರಿ ಮಸೀದಿ ಧ್ವಂಸದ ಬಳಿಕ ಸಮುದಾಯಗಳ ನಡುವಿನ ದ್ವೇಷಕ್ಕೆ ನಾಂದಿಯಾಡಿತು. ಬಾಬರಿ ಮಸೀದಿಯ ಜಾಗದ ಕಾನೂನು ವಿವಾದ ಸುದೀರ್ಘ ವರ್ಷಗಳ ಕಾಲ ನಡೆಯಿತು. ಕೊನೆಯಲ್ಲಿ 2019ರಲ್ಲಿ ಭಾರತದ ಸರ್ವೋಚ್ಚ ನ್ಯಾಯಾಲಯವು ಭಗವಾನ್ ರಾಮನು ಈ ಸ್ಥಳದಲ್ಲಿ ಜನಿಸಿದನು ಎಂದು ಹೇಳಿದೆ. ಈ ತೀರ್ಪನ್ನು ಹೆಚ್ಚಾಗಿ ಮೋದಿ ಮತ್ತು ಅವರ ಬೆಂಬಲಿಗರ ವಿಜಯವೆಂದು ಪರಿಗಣಿಸಲಾಗಿದೆ.

ಇದನ್ನು ಓದಿ: ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...