Homeಮುಖಪುಟ‘ತಿರುಚಿತ್ರಂಬಲಂ’: ಧನುಷ್‌- ನಿತ್ಯಾ ಮೆನನ್‌ ನಟನೆಯ ನವಿರು ಪ್ರೇಮಕಥೆ

‘ತಿರುಚಿತ್ರಂಬಲಂ’: ಧನುಷ್‌- ನಿತ್ಯಾ ಮೆನನ್‌ ನಟನೆಯ ನವಿರು ಪ್ರೇಮಕಥೆ

- Advertisement -
- Advertisement -

ಅದೊಂದು ಸುಂದರ ಕುಟುಂಬ. ಆಕಸ್ಮಿಕವಾಗಿ ಘಟಿಸುವ ಅಪಘಾತ. ತಂದೆ- ಮಗನ ನಡುವೆ ಬಗೆಹರಿಯದ ಮನಸ್ತಾಪ. ಅಜ್ಜ ಮತ್ತು ಮೊಮ್ಮಗನ ಆತ್ಮೀಯತೆ. ಚಿಕ್ಕನಿಂದಲೂ ಕಥಾನಾಯಕನ ಜೊತೆಗಿರುವ ಗೆಳತಿ, ಆತನ ಏಳು ಬೀಳುಗಳ ಜೊತೆಯಲ್ಲಿ ಸಾಗುತ್ತಾಳೆ. ಕೊನೆಯಲ್ಲೊಂದು ಟ್ವಿಸ್ಟ್‌. ಪ್ರೀತಿ, ಸ್ನೇಹ, ಕೋಪದೊಳಗೆ ಅವಿತಿರುವ ವಾತ್ಸಲ್ಯ- ಇತ್ಯಾದಿಗಳನ್ನು ಹದವಾಗಿ ಬೆರೆಸಿದ ಸಿನಿಮಾ ತಮಿಳಿನ ‘ತಿರುಚಿತ್ರಂಬಲಂ’

ಮಿತ್ರನ್ ಆರ್ ಜವಾಹರ್ ನಿರ್ದೇಶನದ ‘ತಿರುಚಿತ್ರಂಬಲಂ’- ಎಲ್ಲಿಯೂ ಭಾರವೆನಿಸದೆ, ಮೊದಲಿನಿಂದ ಕೊನೆಯವರೆಗೂ ನವಿರು ಹಾಸ್ಯ ಹಾಗೂ ನವಿರು ಸಂಭಾಷಣೆ ಮೂಲಕ, ಖುಷಿ, ಕೋಪ, ದುಃಖ, ಪ್ರೀತಿ, ಸ್ನೇಹ, ಸಂಬಂಧಗಳ ಏರಿಳಿತದೊಂದಿಗೆ ಸಾಗುತ್ತದೆ. ಮನಸ್ಸನ್ನು ಮುದಗೊಳಿಸುತ್ತದೆ.

ಧನುಷ್‌, ನಿತ್ಯಾ ಮೆನನ್‌, ಪ್ರಕಾಶ್ ರಾಜ್‌, ಭಾರತೀರಾಜ ಮೊದಲಾದ ಕಲಾವಿದರು ಹಠಕ್ಕೆ ಬಿದ್ದಂತೆ ನಟಿಸಿರುವ ‘ತಿರುಚಿತ್ರಂಬಲಂ’- ಲವ್‌ಸ್ಟೋರಿ ಆಧಾರಿತ ಸಿನಿಮಾಗಳನ್ನು ಇಷ್ಟಪಡುವ ಪ್ರೇಕ್ಷಕ ವರ್ಗಕ್ಕೆ ಭರಪೂರ ಮನರಂಜನೆ ನೀಡಬಲ್ಲದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಥೆ ಸರಳವಾದರೂ ಚಿತ್ರಕಥೆಯ ನಿರೂಪಣಾ ಶೈಲಿ ಹೊಸ ಅನುಭವವನ್ನು ನೀಡುತ್ತದೆ. ಅನುರುದ್ಧ್ ಅವರ ಸಂಗೀತ- ಹಿತವೆನಿಸುತ್ತದೆ. ಕಥೆಯ ತೂಕವನ್ನು ಹೆಚ್ಚಿಸಿದೆ. ಪ್ರೀತಿಗಾಗಿ ಹಂಬಲಿಸುತ್ತಿರುವ ಪಡಮ್‌ (ತಿರುಚಿತ್ರಂಬಲಂ), ಸೋತು ಗೆಲ್ಲುತ್ತಾನೋ, ಪ್ರೀತಿಯನ್ನು ಧಕ್ಕಿಸಿಕೊಳ್ಳುತ್ತಾನೋ ಎಂಬುದು ಕಥೆ.

ಮಧ್ಯಮ ವರ್ಗದ ಕುಟುಂಬಗಳ ಸುತ್ತ ನಡೆಯುವ ಈ ಸಿನಿಮಾದಲ್ಲಿ ಧನುಷ್‌ (ಪಡಂ) ಒಬ್ಬ ಡೆಲಿವರಿ ಬಾಯ್‌. ಅಪ್ಪ (ಪ್ರಕಾಶ್ ರಾಜ್‌) ಪೊಲೀಸ್‌ ಅಧಿಕಾರಿ. ತಾತ (ಭಾರತೀರಾಜ) ಜನರೇಷನ್‌ ಗ್ಯಾಪ್ ದಾಟಿ ಮೊಮ್ಮಗನೊಂದಿಗೆ ಜಾಲಿಯಾಗಿರುವ ವ್ಯಕ್ತಿ. ಜೊತೆಯಲ್ಲೇ ಕೂತು ಬಿಯರ್‌ ಹೀರುವ ಪ್ರೀತಿ. ಚಿಕ್ಕಂದಿನಿಂದಲೂ ಜೊತೆಯಲ್ಲೇ ಬೆಳೆದಿರುವ ಗೆಳತಿ ಶೋಭನಾ (ನಿತ್ಯಾ ಮೆನನ್‌), ಪಡಂನ ಎಲ್ಲ ಸುಖ, ದುಃಖ, ನೋವು, ನಲಿವು, ಇಷ್ಟ-ಕಷ್ಟಗಳ ಭಾಗ.

ಈ ಸಿನಿಮಾ ಕೇವಲ ಪ್ರೀತಿಯ ಹುಡುಕಾಟದ ಕಥೆಯಾಗಿಯಷ್ಟೇ ಉಳಿಯದೆ ಜನರೇಷನ್‌ಗಳ ನಡುವೆ ಇರುವ ಗೋಡೆಗಳನ್ನು ಕೆಡವುತ್ತ ಹೋಗುತ್ತದೆ. ಚಿತ್ರಕತೆಯ ಜೊತೆಗೆ ಕಥೆಗೆ ಪೂರಕವಾದ ಸಂಭಾಷಣೆ ಇಲ್ಲಿನ ಮತ್ತೊಂದು ಹೈಲೈಟ್‌. ಒಳ್ಳೆಯ ಕಥೆಗೆ ದೊಡ್ಡ ಬಜೆಟ್ ಬೇಕಿಲ್ಲ ಎಂಬುದನ್ನು ತಿರುಚಿತ್ರಂಬಲಂ ಮತ್ತೊಮ್ಮೆ ಸಾಬೀತು ಮಾಡಿದೆ.

ಇದನ್ನೂ ಓದಿರಿ: ಗಾಳಿಪಟ-2: ಯೋಗರಾಜ ಭಟ್ರ ಕಥೆಯಲ್ಲಿ ಲಾಜಿಕ್ಕೂ ಇಲ್ಲ ಮ್ಯಾಜಿಕ್ಕೂ ಇಲ್ಲ!

ವಿವಾದಿತ ಆಧಾತ್ಮಿಕ ಗುರುವೆನಿಸಿದ ಓಶೋ ರಜನೀಶ್‌, “ಪ್ರೀತಿ ಕೊಟ್ಟು ಸಂತೋಷ ಪಡುತ್ತದೆ. ಅಹಂಕಾರ ಕಿತ್ತುಕೊಂಡು ಸಂತೋಷಪಡುತ್ತದೆ (Love is happy when it is able to give something. The ego is happy when it is able to take something)” ಎಂದಿದ್ದರು. ಇಲ್ಲಿಯೂ ಅಷ್ಟೇ- ಕೊಟ್ಟು ಸಂತೋಷಪಡುವ ತಾತ್ವಿಕತೆಯೇ ಮೇಲುಗೈ ಸಾಧಿಸುತ್ತದೆ.

ಪಡಂನ ಮೂರು ಪ್ರೇಮ ಕಥೆಗಳು ಇಲ್ಲಿವೆ. ಸಿದ್ಧಮಾದರಿಗಳನ್ನು ಒಪ್ಪಿಕೊಂಡಿರುವ ವ್ಯವಸ್ಥೆಯಲ್ಲಿ ಮೂರನೇ ಪ್ರೇಮಕಥೆ- ತುಸು ಅವಸರವಾಯಿತೇನೋ ಎಂಬ ಅಳುಕು ಪ್ರೇಕ್ಷಕನನ್ನು ಕಾಡುವ ಹೊತ್ತಿಗೆ ಅದನ್ನು ಭಾವುಕ ಸನ್ನಿವೇಶಗಳ ಮೂಲಕ ಭಾರವೆನಿಸದಂತೆ ಕಟ್ಟಿಕೊಟ್ಟಿರುವುದು ಮಿತ್ರನ್‌ ಅವರ ನಿರೂಪಣಾ ಜಾಣ್ಮೆಗೆ ಕನ್ನಡಿ ಹಿಡಿದಿದೆ. ಕ್ಲೈಮ್ಯಾಕ್ಸ್‌ ನಿರೀಕ್ಷಿತವೆನಿಸಿದರೂ ಅದು ಪ್ರೇಕ್ಷಕನಿಗೆ ಒಪ್ಪಿತವಾಗುವುದು ಹೆಚ್ಚುಗಾರಿಕೆ. ಮನೆಮಂದಿಯೆಲ್ಲ ಒಟ್ಟಿಗೆ ಕೂತು ನೋಡಬಹುದಾದ ನವಿರು ಪ್ರೇಮಕಥೆ- ‘ತಿರುಚಿತ್ರಂಬಲಂ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...