Homeಮುಖಪುಟ‘ತಿರುಚಿತ್ರಂಬಲಂ’: ಧನುಷ್‌- ನಿತ್ಯಾ ಮೆನನ್‌ ನಟನೆಯ ನವಿರು ಪ್ರೇಮಕಥೆ

‘ತಿರುಚಿತ್ರಂಬಲಂ’: ಧನುಷ್‌- ನಿತ್ಯಾ ಮೆನನ್‌ ನಟನೆಯ ನವಿರು ಪ್ರೇಮಕಥೆ

- Advertisement -
- Advertisement -

ಅದೊಂದು ಸುಂದರ ಕುಟುಂಬ. ಆಕಸ್ಮಿಕವಾಗಿ ಘಟಿಸುವ ಅಪಘಾತ. ತಂದೆ- ಮಗನ ನಡುವೆ ಬಗೆಹರಿಯದ ಮನಸ್ತಾಪ. ಅಜ್ಜ ಮತ್ತು ಮೊಮ್ಮಗನ ಆತ್ಮೀಯತೆ. ಚಿಕ್ಕನಿಂದಲೂ ಕಥಾನಾಯಕನ ಜೊತೆಗಿರುವ ಗೆಳತಿ, ಆತನ ಏಳು ಬೀಳುಗಳ ಜೊತೆಯಲ್ಲಿ ಸಾಗುತ್ತಾಳೆ. ಕೊನೆಯಲ್ಲೊಂದು ಟ್ವಿಸ್ಟ್‌. ಪ್ರೀತಿ, ಸ್ನೇಹ, ಕೋಪದೊಳಗೆ ಅವಿತಿರುವ ವಾತ್ಸಲ್ಯ- ಇತ್ಯಾದಿಗಳನ್ನು ಹದವಾಗಿ ಬೆರೆಸಿದ ಸಿನಿಮಾ ತಮಿಳಿನ ‘ತಿರುಚಿತ್ರಂಬಲಂ’

ಮಿತ್ರನ್ ಆರ್ ಜವಾಹರ್ ನಿರ್ದೇಶನದ ‘ತಿರುಚಿತ್ರಂಬಲಂ’- ಎಲ್ಲಿಯೂ ಭಾರವೆನಿಸದೆ, ಮೊದಲಿನಿಂದ ಕೊನೆಯವರೆಗೂ ನವಿರು ಹಾಸ್ಯ ಹಾಗೂ ನವಿರು ಸಂಭಾಷಣೆ ಮೂಲಕ, ಖುಷಿ, ಕೋಪ, ದುಃಖ, ಪ್ರೀತಿ, ಸ್ನೇಹ, ಸಂಬಂಧಗಳ ಏರಿಳಿತದೊಂದಿಗೆ ಸಾಗುತ್ತದೆ. ಮನಸ್ಸನ್ನು ಮುದಗೊಳಿಸುತ್ತದೆ.

ಧನುಷ್‌, ನಿತ್ಯಾ ಮೆನನ್‌, ಪ್ರಕಾಶ್ ರಾಜ್‌, ಭಾರತೀರಾಜ ಮೊದಲಾದ ಕಲಾವಿದರು ಹಠಕ್ಕೆ ಬಿದ್ದಂತೆ ನಟಿಸಿರುವ ‘ತಿರುಚಿತ್ರಂಬಲಂ’- ಲವ್‌ಸ್ಟೋರಿ ಆಧಾರಿತ ಸಿನಿಮಾಗಳನ್ನು ಇಷ್ಟಪಡುವ ಪ್ರೇಕ್ಷಕ ವರ್ಗಕ್ಕೆ ಭರಪೂರ ಮನರಂಜನೆ ನೀಡಬಲ್ಲದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಥೆ ಸರಳವಾದರೂ ಚಿತ್ರಕಥೆಯ ನಿರೂಪಣಾ ಶೈಲಿ ಹೊಸ ಅನುಭವವನ್ನು ನೀಡುತ್ತದೆ. ಅನುರುದ್ಧ್ ಅವರ ಸಂಗೀತ- ಹಿತವೆನಿಸುತ್ತದೆ. ಕಥೆಯ ತೂಕವನ್ನು ಹೆಚ್ಚಿಸಿದೆ. ಪ್ರೀತಿಗಾಗಿ ಹಂಬಲಿಸುತ್ತಿರುವ ಪಡಮ್‌ (ತಿರುಚಿತ್ರಂಬಲಂ), ಸೋತು ಗೆಲ್ಲುತ್ತಾನೋ, ಪ್ರೀತಿಯನ್ನು ಧಕ್ಕಿಸಿಕೊಳ್ಳುತ್ತಾನೋ ಎಂಬುದು ಕಥೆ.

ಮಧ್ಯಮ ವರ್ಗದ ಕುಟುಂಬಗಳ ಸುತ್ತ ನಡೆಯುವ ಈ ಸಿನಿಮಾದಲ್ಲಿ ಧನುಷ್‌ (ಪಡಂ) ಒಬ್ಬ ಡೆಲಿವರಿ ಬಾಯ್‌. ಅಪ್ಪ (ಪ್ರಕಾಶ್ ರಾಜ್‌) ಪೊಲೀಸ್‌ ಅಧಿಕಾರಿ. ತಾತ (ಭಾರತೀರಾಜ) ಜನರೇಷನ್‌ ಗ್ಯಾಪ್ ದಾಟಿ ಮೊಮ್ಮಗನೊಂದಿಗೆ ಜಾಲಿಯಾಗಿರುವ ವ್ಯಕ್ತಿ. ಜೊತೆಯಲ್ಲೇ ಕೂತು ಬಿಯರ್‌ ಹೀರುವ ಪ್ರೀತಿ. ಚಿಕ್ಕಂದಿನಿಂದಲೂ ಜೊತೆಯಲ್ಲೇ ಬೆಳೆದಿರುವ ಗೆಳತಿ ಶೋಭನಾ (ನಿತ್ಯಾ ಮೆನನ್‌), ಪಡಂನ ಎಲ್ಲ ಸುಖ, ದುಃಖ, ನೋವು, ನಲಿವು, ಇಷ್ಟ-ಕಷ್ಟಗಳ ಭಾಗ.

ಈ ಸಿನಿಮಾ ಕೇವಲ ಪ್ರೀತಿಯ ಹುಡುಕಾಟದ ಕಥೆಯಾಗಿಯಷ್ಟೇ ಉಳಿಯದೆ ಜನರೇಷನ್‌ಗಳ ನಡುವೆ ಇರುವ ಗೋಡೆಗಳನ್ನು ಕೆಡವುತ್ತ ಹೋಗುತ್ತದೆ. ಚಿತ್ರಕತೆಯ ಜೊತೆಗೆ ಕಥೆಗೆ ಪೂರಕವಾದ ಸಂಭಾಷಣೆ ಇಲ್ಲಿನ ಮತ್ತೊಂದು ಹೈಲೈಟ್‌. ಒಳ್ಳೆಯ ಕಥೆಗೆ ದೊಡ್ಡ ಬಜೆಟ್ ಬೇಕಿಲ್ಲ ಎಂಬುದನ್ನು ತಿರುಚಿತ್ರಂಬಲಂ ಮತ್ತೊಮ್ಮೆ ಸಾಬೀತು ಮಾಡಿದೆ.

ಇದನ್ನೂ ಓದಿರಿ: ಗಾಳಿಪಟ-2: ಯೋಗರಾಜ ಭಟ್ರ ಕಥೆಯಲ್ಲಿ ಲಾಜಿಕ್ಕೂ ಇಲ್ಲ ಮ್ಯಾಜಿಕ್ಕೂ ಇಲ್ಲ!

ವಿವಾದಿತ ಆಧಾತ್ಮಿಕ ಗುರುವೆನಿಸಿದ ಓಶೋ ರಜನೀಶ್‌, “ಪ್ರೀತಿ ಕೊಟ್ಟು ಸಂತೋಷ ಪಡುತ್ತದೆ. ಅಹಂಕಾರ ಕಿತ್ತುಕೊಂಡು ಸಂತೋಷಪಡುತ್ತದೆ (Love is happy when it is able to give something. The ego is happy when it is able to take something)” ಎಂದಿದ್ದರು. ಇಲ್ಲಿಯೂ ಅಷ್ಟೇ- ಕೊಟ್ಟು ಸಂತೋಷಪಡುವ ತಾತ್ವಿಕತೆಯೇ ಮೇಲುಗೈ ಸಾಧಿಸುತ್ತದೆ.

ಪಡಂನ ಮೂರು ಪ್ರೇಮ ಕಥೆಗಳು ಇಲ್ಲಿವೆ. ಸಿದ್ಧಮಾದರಿಗಳನ್ನು ಒಪ್ಪಿಕೊಂಡಿರುವ ವ್ಯವಸ್ಥೆಯಲ್ಲಿ ಮೂರನೇ ಪ್ರೇಮಕಥೆ- ತುಸು ಅವಸರವಾಯಿತೇನೋ ಎಂಬ ಅಳುಕು ಪ್ರೇಕ್ಷಕನನ್ನು ಕಾಡುವ ಹೊತ್ತಿಗೆ ಅದನ್ನು ಭಾವುಕ ಸನ್ನಿವೇಶಗಳ ಮೂಲಕ ಭಾರವೆನಿಸದಂತೆ ಕಟ್ಟಿಕೊಟ್ಟಿರುವುದು ಮಿತ್ರನ್‌ ಅವರ ನಿರೂಪಣಾ ಜಾಣ್ಮೆಗೆ ಕನ್ನಡಿ ಹಿಡಿದಿದೆ. ಕ್ಲೈಮ್ಯಾಕ್ಸ್‌ ನಿರೀಕ್ಷಿತವೆನಿಸಿದರೂ ಅದು ಪ್ರೇಕ್ಷಕನಿಗೆ ಒಪ್ಪಿತವಾಗುವುದು ಹೆಚ್ಚುಗಾರಿಕೆ. ಮನೆಮಂದಿಯೆಲ್ಲ ಒಟ್ಟಿಗೆ ಕೂತು ನೋಡಬಹುದಾದ ನವಿರು ಪ್ರೇಮಕಥೆ- ‘ತಿರುಚಿತ್ರಂಬಲಂ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...