Homeಮುಖಪುಟ‘ತಿರುಚಿತ್ರಂಬಲಂ’: ಧನುಷ್‌- ನಿತ್ಯಾ ಮೆನನ್‌ ನಟನೆಯ ನವಿರು ಪ್ರೇಮಕಥೆ

‘ತಿರುಚಿತ್ರಂಬಲಂ’: ಧನುಷ್‌- ನಿತ್ಯಾ ಮೆನನ್‌ ನಟನೆಯ ನವಿರು ಪ್ರೇಮಕಥೆ

- Advertisement -
- Advertisement -

ಅದೊಂದು ಸುಂದರ ಕುಟುಂಬ. ಆಕಸ್ಮಿಕವಾಗಿ ಘಟಿಸುವ ಅಪಘಾತ. ತಂದೆ- ಮಗನ ನಡುವೆ ಬಗೆಹರಿಯದ ಮನಸ್ತಾಪ. ಅಜ್ಜ ಮತ್ತು ಮೊಮ್ಮಗನ ಆತ್ಮೀಯತೆ. ಚಿಕ್ಕನಿಂದಲೂ ಕಥಾನಾಯಕನ ಜೊತೆಗಿರುವ ಗೆಳತಿ, ಆತನ ಏಳು ಬೀಳುಗಳ ಜೊತೆಯಲ್ಲಿ ಸಾಗುತ್ತಾಳೆ. ಕೊನೆಯಲ್ಲೊಂದು ಟ್ವಿಸ್ಟ್‌. ಪ್ರೀತಿ, ಸ್ನೇಹ, ಕೋಪದೊಳಗೆ ಅವಿತಿರುವ ವಾತ್ಸಲ್ಯ- ಇತ್ಯಾದಿಗಳನ್ನು ಹದವಾಗಿ ಬೆರೆಸಿದ ಸಿನಿಮಾ ತಮಿಳಿನ ‘ತಿರುಚಿತ್ರಂಬಲಂ’

ಮಿತ್ರನ್ ಆರ್ ಜವಾಹರ್ ನಿರ್ದೇಶನದ ‘ತಿರುಚಿತ್ರಂಬಲಂ’- ಎಲ್ಲಿಯೂ ಭಾರವೆನಿಸದೆ, ಮೊದಲಿನಿಂದ ಕೊನೆಯವರೆಗೂ ನವಿರು ಹಾಸ್ಯ ಹಾಗೂ ನವಿರು ಸಂಭಾಷಣೆ ಮೂಲಕ, ಖುಷಿ, ಕೋಪ, ದುಃಖ, ಪ್ರೀತಿ, ಸ್ನೇಹ, ಸಂಬಂಧಗಳ ಏರಿಳಿತದೊಂದಿಗೆ ಸಾಗುತ್ತದೆ. ಮನಸ್ಸನ್ನು ಮುದಗೊಳಿಸುತ್ತದೆ.

ಧನುಷ್‌, ನಿತ್ಯಾ ಮೆನನ್‌, ಪ್ರಕಾಶ್ ರಾಜ್‌, ಭಾರತೀರಾಜ ಮೊದಲಾದ ಕಲಾವಿದರು ಹಠಕ್ಕೆ ಬಿದ್ದಂತೆ ನಟಿಸಿರುವ ‘ತಿರುಚಿತ್ರಂಬಲಂ’- ಲವ್‌ಸ್ಟೋರಿ ಆಧಾರಿತ ಸಿನಿಮಾಗಳನ್ನು ಇಷ್ಟಪಡುವ ಪ್ರೇಕ್ಷಕ ವರ್ಗಕ್ಕೆ ಭರಪೂರ ಮನರಂಜನೆ ನೀಡಬಲ್ಲದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಥೆ ಸರಳವಾದರೂ ಚಿತ್ರಕಥೆಯ ನಿರೂಪಣಾ ಶೈಲಿ ಹೊಸ ಅನುಭವವನ್ನು ನೀಡುತ್ತದೆ. ಅನುರುದ್ಧ್ ಅವರ ಸಂಗೀತ- ಹಿತವೆನಿಸುತ್ತದೆ. ಕಥೆಯ ತೂಕವನ್ನು ಹೆಚ್ಚಿಸಿದೆ. ಪ್ರೀತಿಗಾಗಿ ಹಂಬಲಿಸುತ್ತಿರುವ ಪಡಮ್‌ (ತಿರುಚಿತ್ರಂಬಲಂ), ಸೋತು ಗೆಲ್ಲುತ್ತಾನೋ, ಪ್ರೀತಿಯನ್ನು ಧಕ್ಕಿಸಿಕೊಳ್ಳುತ್ತಾನೋ ಎಂಬುದು ಕಥೆ.

ಮಧ್ಯಮ ವರ್ಗದ ಕುಟುಂಬಗಳ ಸುತ್ತ ನಡೆಯುವ ಈ ಸಿನಿಮಾದಲ್ಲಿ ಧನುಷ್‌ (ಪಡಂ) ಒಬ್ಬ ಡೆಲಿವರಿ ಬಾಯ್‌. ಅಪ್ಪ (ಪ್ರಕಾಶ್ ರಾಜ್‌) ಪೊಲೀಸ್‌ ಅಧಿಕಾರಿ. ತಾತ (ಭಾರತೀರಾಜ) ಜನರೇಷನ್‌ ಗ್ಯಾಪ್ ದಾಟಿ ಮೊಮ್ಮಗನೊಂದಿಗೆ ಜಾಲಿಯಾಗಿರುವ ವ್ಯಕ್ತಿ. ಜೊತೆಯಲ್ಲೇ ಕೂತು ಬಿಯರ್‌ ಹೀರುವ ಪ್ರೀತಿ. ಚಿಕ್ಕಂದಿನಿಂದಲೂ ಜೊತೆಯಲ್ಲೇ ಬೆಳೆದಿರುವ ಗೆಳತಿ ಶೋಭನಾ (ನಿತ್ಯಾ ಮೆನನ್‌), ಪಡಂನ ಎಲ್ಲ ಸುಖ, ದುಃಖ, ನೋವು, ನಲಿವು, ಇಷ್ಟ-ಕಷ್ಟಗಳ ಭಾಗ.

ಈ ಸಿನಿಮಾ ಕೇವಲ ಪ್ರೀತಿಯ ಹುಡುಕಾಟದ ಕಥೆಯಾಗಿಯಷ್ಟೇ ಉಳಿಯದೆ ಜನರೇಷನ್‌ಗಳ ನಡುವೆ ಇರುವ ಗೋಡೆಗಳನ್ನು ಕೆಡವುತ್ತ ಹೋಗುತ್ತದೆ. ಚಿತ್ರಕತೆಯ ಜೊತೆಗೆ ಕಥೆಗೆ ಪೂರಕವಾದ ಸಂಭಾಷಣೆ ಇಲ್ಲಿನ ಮತ್ತೊಂದು ಹೈಲೈಟ್‌. ಒಳ್ಳೆಯ ಕಥೆಗೆ ದೊಡ್ಡ ಬಜೆಟ್ ಬೇಕಿಲ್ಲ ಎಂಬುದನ್ನು ತಿರುಚಿತ್ರಂಬಲಂ ಮತ್ತೊಮ್ಮೆ ಸಾಬೀತು ಮಾಡಿದೆ.

ಇದನ್ನೂ ಓದಿರಿ: ಗಾಳಿಪಟ-2: ಯೋಗರಾಜ ಭಟ್ರ ಕಥೆಯಲ್ಲಿ ಲಾಜಿಕ್ಕೂ ಇಲ್ಲ ಮ್ಯಾಜಿಕ್ಕೂ ಇಲ್ಲ!

ವಿವಾದಿತ ಆಧಾತ್ಮಿಕ ಗುರುವೆನಿಸಿದ ಓಶೋ ರಜನೀಶ್‌, “ಪ್ರೀತಿ ಕೊಟ್ಟು ಸಂತೋಷ ಪಡುತ್ತದೆ. ಅಹಂಕಾರ ಕಿತ್ತುಕೊಂಡು ಸಂತೋಷಪಡುತ್ತದೆ (Love is happy when it is able to give something. The ego is happy when it is able to take something)” ಎಂದಿದ್ದರು. ಇಲ್ಲಿಯೂ ಅಷ್ಟೇ- ಕೊಟ್ಟು ಸಂತೋಷಪಡುವ ತಾತ್ವಿಕತೆಯೇ ಮೇಲುಗೈ ಸಾಧಿಸುತ್ತದೆ.

ಪಡಂನ ಮೂರು ಪ್ರೇಮ ಕಥೆಗಳು ಇಲ್ಲಿವೆ. ಸಿದ್ಧಮಾದರಿಗಳನ್ನು ಒಪ್ಪಿಕೊಂಡಿರುವ ವ್ಯವಸ್ಥೆಯಲ್ಲಿ ಮೂರನೇ ಪ್ರೇಮಕಥೆ- ತುಸು ಅವಸರವಾಯಿತೇನೋ ಎಂಬ ಅಳುಕು ಪ್ರೇಕ್ಷಕನನ್ನು ಕಾಡುವ ಹೊತ್ತಿಗೆ ಅದನ್ನು ಭಾವುಕ ಸನ್ನಿವೇಶಗಳ ಮೂಲಕ ಭಾರವೆನಿಸದಂತೆ ಕಟ್ಟಿಕೊಟ್ಟಿರುವುದು ಮಿತ್ರನ್‌ ಅವರ ನಿರೂಪಣಾ ಜಾಣ್ಮೆಗೆ ಕನ್ನಡಿ ಹಿಡಿದಿದೆ. ಕ್ಲೈಮ್ಯಾಕ್ಸ್‌ ನಿರೀಕ್ಷಿತವೆನಿಸಿದರೂ ಅದು ಪ್ರೇಕ್ಷಕನಿಗೆ ಒಪ್ಪಿತವಾಗುವುದು ಹೆಚ್ಚುಗಾರಿಕೆ. ಮನೆಮಂದಿಯೆಲ್ಲ ಒಟ್ಟಿಗೆ ಕೂತು ನೋಡಬಹುದಾದ ನವಿರು ಪ್ರೇಮಕಥೆ- ‘ತಿರುಚಿತ್ರಂಬಲಂ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...