Homeಮುಖಪುಟ‘ತಿರುಚಿತ್ರಂಬಲಂ’: ಧನುಷ್‌- ನಿತ್ಯಾ ಮೆನನ್‌ ನಟನೆಯ ನವಿರು ಪ್ರೇಮಕಥೆ

‘ತಿರುಚಿತ್ರಂಬಲಂ’: ಧನುಷ್‌- ನಿತ್ಯಾ ಮೆನನ್‌ ನಟನೆಯ ನವಿರು ಪ್ರೇಮಕಥೆ

- Advertisement -
- Advertisement -

ಅದೊಂದು ಸುಂದರ ಕುಟುಂಬ. ಆಕಸ್ಮಿಕವಾಗಿ ಘಟಿಸುವ ಅಪಘಾತ. ತಂದೆ- ಮಗನ ನಡುವೆ ಬಗೆಹರಿಯದ ಮನಸ್ತಾಪ. ಅಜ್ಜ ಮತ್ತು ಮೊಮ್ಮಗನ ಆತ್ಮೀಯತೆ. ಚಿಕ್ಕನಿಂದಲೂ ಕಥಾನಾಯಕನ ಜೊತೆಗಿರುವ ಗೆಳತಿ, ಆತನ ಏಳು ಬೀಳುಗಳ ಜೊತೆಯಲ್ಲಿ ಸಾಗುತ್ತಾಳೆ. ಕೊನೆಯಲ್ಲೊಂದು ಟ್ವಿಸ್ಟ್‌. ಪ್ರೀತಿ, ಸ್ನೇಹ, ಕೋಪದೊಳಗೆ ಅವಿತಿರುವ ವಾತ್ಸಲ್ಯ- ಇತ್ಯಾದಿಗಳನ್ನು ಹದವಾಗಿ ಬೆರೆಸಿದ ಸಿನಿಮಾ ತಮಿಳಿನ ‘ತಿರುಚಿತ್ರಂಬಲಂ’

ಮಿತ್ರನ್ ಆರ್ ಜವಾಹರ್ ನಿರ್ದೇಶನದ ‘ತಿರುಚಿತ್ರಂಬಲಂ’- ಎಲ್ಲಿಯೂ ಭಾರವೆನಿಸದೆ, ಮೊದಲಿನಿಂದ ಕೊನೆಯವರೆಗೂ ನವಿರು ಹಾಸ್ಯ ಹಾಗೂ ನವಿರು ಸಂಭಾಷಣೆ ಮೂಲಕ, ಖುಷಿ, ಕೋಪ, ದುಃಖ, ಪ್ರೀತಿ, ಸ್ನೇಹ, ಸಂಬಂಧಗಳ ಏರಿಳಿತದೊಂದಿಗೆ ಸಾಗುತ್ತದೆ. ಮನಸ್ಸನ್ನು ಮುದಗೊಳಿಸುತ್ತದೆ.

ಧನುಷ್‌, ನಿತ್ಯಾ ಮೆನನ್‌, ಪ್ರಕಾಶ್ ರಾಜ್‌, ಭಾರತೀರಾಜ ಮೊದಲಾದ ಕಲಾವಿದರು ಹಠಕ್ಕೆ ಬಿದ್ದಂತೆ ನಟಿಸಿರುವ ‘ತಿರುಚಿತ್ರಂಬಲಂ’- ಲವ್‌ಸ್ಟೋರಿ ಆಧಾರಿತ ಸಿನಿಮಾಗಳನ್ನು ಇಷ್ಟಪಡುವ ಪ್ರೇಕ್ಷಕ ವರ್ಗಕ್ಕೆ ಭರಪೂರ ಮನರಂಜನೆ ನೀಡಬಲ್ಲದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಥೆ ಸರಳವಾದರೂ ಚಿತ್ರಕಥೆಯ ನಿರೂಪಣಾ ಶೈಲಿ ಹೊಸ ಅನುಭವವನ್ನು ನೀಡುತ್ತದೆ. ಅನುರುದ್ಧ್ ಅವರ ಸಂಗೀತ- ಹಿತವೆನಿಸುತ್ತದೆ. ಕಥೆಯ ತೂಕವನ್ನು ಹೆಚ್ಚಿಸಿದೆ. ಪ್ರೀತಿಗಾಗಿ ಹಂಬಲಿಸುತ್ತಿರುವ ಪಡಮ್‌ (ತಿರುಚಿತ್ರಂಬಲಂ), ಸೋತು ಗೆಲ್ಲುತ್ತಾನೋ, ಪ್ರೀತಿಯನ್ನು ಧಕ್ಕಿಸಿಕೊಳ್ಳುತ್ತಾನೋ ಎಂಬುದು ಕಥೆ.

ಮಧ್ಯಮ ವರ್ಗದ ಕುಟುಂಬಗಳ ಸುತ್ತ ನಡೆಯುವ ಈ ಸಿನಿಮಾದಲ್ಲಿ ಧನುಷ್‌ (ಪಡಂ) ಒಬ್ಬ ಡೆಲಿವರಿ ಬಾಯ್‌. ಅಪ್ಪ (ಪ್ರಕಾಶ್ ರಾಜ್‌) ಪೊಲೀಸ್‌ ಅಧಿಕಾರಿ. ತಾತ (ಭಾರತೀರಾಜ) ಜನರೇಷನ್‌ ಗ್ಯಾಪ್ ದಾಟಿ ಮೊಮ್ಮಗನೊಂದಿಗೆ ಜಾಲಿಯಾಗಿರುವ ವ್ಯಕ್ತಿ. ಜೊತೆಯಲ್ಲೇ ಕೂತು ಬಿಯರ್‌ ಹೀರುವ ಪ್ರೀತಿ. ಚಿಕ್ಕಂದಿನಿಂದಲೂ ಜೊತೆಯಲ್ಲೇ ಬೆಳೆದಿರುವ ಗೆಳತಿ ಶೋಭನಾ (ನಿತ್ಯಾ ಮೆನನ್‌), ಪಡಂನ ಎಲ್ಲ ಸುಖ, ದುಃಖ, ನೋವು, ನಲಿವು, ಇಷ್ಟ-ಕಷ್ಟಗಳ ಭಾಗ.

ಈ ಸಿನಿಮಾ ಕೇವಲ ಪ್ರೀತಿಯ ಹುಡುಕಾಟದ ಕಥೆಯಾಗಿಯಷ್ಟೇ ಉಳಿಯದೆ ಜನರೇಷನ್‌ಗಳ ನಡುವೆ ಇರುವ ಗೋಡೆಗಳನ್ನು ಕೆಡವುತ್ತ ಹೋಗುತ್ತದೆ. ಚಿತ್ರಕತೆಯ ಜೊತೆಗೆ ಕಥೆಗೆ ಪೂರಕವಾದ ಸಂಭಾಷಣೆ ಇಲ್ಲಿನ ಮತ್ತೊಂದು ಹೈಲೈಟ್‌. ಒಳ್ಳೆಯ ಕಥೆಗೆ ದೊಡ್ಡ ಬಜೆಟ್ ಬೇಕಿಲ್ಲ ಎಂಬುದನ್ನು ತಿರುಚಿತ್ರಂಬಲಂ ಮತ್ತೊಮ್ಮೆ ಸಾಬೀತು ಮಾಡಿದೆ.

ಇದನ್ನೂ ಓದಿರಿ: ಗಾಳಿಪಟ-2: ಯೋಗರಾಜ ಭಟ್ರ ಕಥೆಯಲ್ಲಿ ಲಾಜಿಕ್ಕೂ ಇಲ್ಲ ಮ್ಯಾಜಿಕ್ಕೂ ಇಲ್ಲ!

ವಿವಾದಿತ ಆಧಾತ್ಮಿಕ ಗುರುವೆನಿಸಿದ ಓಶೋ ರಜನೀಶ್‌, “ಪ್ರೀತಿ ಕೊಟ್ಟು ಸಂತೋಷ ಪಡುತ್ತದೆ. ಅಹಂಕಾರ ಕಿತ್ತುಕೊಂಡು ಸಂತೋಷಪಡುತ್ತದೆ (Love is happy when it is able to give something. The ego is happy when it is able to take something)” ಎಂದಿದ್ದರು. ಇಲ್ಲಿಯೂ ಅಷ್ಟೇ- ಕೊಟ್ಟು ಸಂತೋಷಪಡುವ ತಾತ್ವಿಕತೆಯೇ ಮೇಲುಗೈ ಸಾಧಿಸುತ್ತದೆ.

ಪಡಂನ ಮೂರು ಪ್ರೇಮ ಕಥೆಗಳು ಇಲ್ಲಿವೆ. ಸಿದ್ಧಮಾದರಿಗಳನ್ನು ಒಪ್ಪಿಕೊಂಡಿರುವ ವ್ಯವಸ್ಥೆಯಲ್ಲಿ ಮೂರನೇ ಪ್ರೇಮಕಥೆ- ತುಸು ಅವಸರವಾಯಿತೇನೋ ಎಂಬ ಅಳುಕು ಪ್ರೇಕ್ಷಕನನ್ನು ಕಾಡುವ ಹೊತ್ತಿಗೆ ಅದನ್ನು ಭಾವುಕ ಸನ್ನಿವೇಶಗಳ ಮೂಲಕ ಭಾರವೆನಿಸದಂತೆ ಕಟ್ಟಿಕೊಟ್ಟಿರುವುದು ಮಿತ್ರನ್‌ ಅವರ ನಿರೂಪಣಾ ಜಾಣ್ಮೆಗೆ ಕನ್ನಡಿ ಹಿಡಿದಿದೆ. ಕ್ಲೈಮ್ಯಾಕ್ಸ್‌ ನಿರೀಕ್ಷಿತವೆನಿಸಿದರೂ ಅದು ಪ್ರೇಕ್ಷಕನಿಗೆ ಒಪ್ಪಿತವಾಗುವುದು ಹೆಚ್ಚುಗಾರಿಕೆ. ಮನೆಮಂದಿಯೆಲ್ಲ ಒಟ್ಟಿಗೆ ಕೂತು ನೋಡಬಹುದಾದ ನವಿರು ಪ್ರೇಮಕಥೆ- ‘ತಿರುಚಿತ್ರಂಬಲಂ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಒಪ್ಪುವುದಿಲ್ಲ : ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...