Homeಮುಖಪುಟ‘ತಿರುಚಿತ್ರಂಬಲಂ’: ಧನುಷ್‌- ನಿತ್ಯಾ ಮೆನನ್‌ ನಟನೆಯ ನವಿರು ಪ್ರೇಮಕಥೆ

‘ತಿರುಚಿತ್ರಂಬಲಂ’: ಧನುಷ್‌- ನಿತ್ಯಾ ಮೆನನ್‌ ನಟನೆಯ ನವಿರು ಪ್ರೇಮಕಥೆ

- Advertisement -
- Advertisement -

ಅದೊಂದು ಸುಂದರ ಕುಟುಂಬ. ಆಕಸ್ಮಿಕವಾಗಿ ಘಟಿಸುವ ಅಪಘಾತ. ತಂದೆ- ಮಗನ ನಡುವೆ ಬಗೆಹರಿಯದ ಮನಸ್ತಾಪ. ಅಜ್ಜ ಮತ್ತು ಮೊಮ್ಮಗನ ಆತ್ಮೀಯತೆ. ಚಿಕ್ಕನಿಂದಲೂ ಕಥಾನಾಯಕನ ಜೊತೆಗಿರುವ ಗೆಳತಿ, ಆತನ ಏಳು ಬೀಳುಗಳ ಜೊತೆಯಲ್ಲಿ ಸಾಗುತ್ತಾಳೆ. ಕೊನೆಯಲ್ಲೊಂದು ಟ್ವಿಸ್ಟ್‌. ಪ್ರೀತಿ, ಸ್ನೇಹ, ಕೋಪದೊಳಗೆ ಅವಿತಿರುವ ವಾತ್ಸಲ್ಯ- ಇತ್ಯಾದಿಗಳನ್ನು ಹದವಾಗಿ ಬೆರೆಸಿದ ಸಿನಿಮಾ ತಮಿಳಿನ ‘ತಿರುಚಿತ್ರಂಬಲಂ’

ಮಿತ್ರನ್ ಆರ್ ಜವಾಹರ್ ನಿರ್ದೇಶನದ ‘ತಿರುಚಿತ್ರಂಬಲಂ’- ಎಲ್ಲಿಯೂ ಭಾರವೆನಿಸದೆ, ಮೊದಲಿನಿಂದ ಕೊನೆಯವರೆಗೂ ನವಿರು ಹಾಸ್ಯ ಹಾಗೂ ನವಿರು ಸಂಭಾಷಣೆ ಮೂಲಕ, ಖುಷಿ, ಕೋಪ, ದುಃಖ, ಪ್ರೀತಿ, ಸ್ನೇಹ, ಸಂಬಂಧಗಳ ಏರಿಳಿತದೊಂದಿಗೆ ಸಾಗುತ್ತದೆ. ಮನಸ್ಸನ್ನು ಮುದಗೊಳಿಸುತ್ತದೆ.

ಧನುಷ್‌, ನಿತ್ಯಾ ಮೆನನ್‌, ಪ್ರಕಾಶ್ ರಾಜ್‌, ಭಾರತೀರಾಜ ಮೊದಲಾದ ಕಲಾವಿದರು ಹಠಕ್ಕೆ ಬಿದ್ದಂತೆ ನಟಿಸಿರುವ ‘ತಿರುಚಿತ್ರಂಬಲಂ’- ಲವ್‌ಸ್ಟೋರಿ ಆಧಾರಿತ ಸಿನಿಮಾಗಳನ್ನು ಇಷ್ಟಪಡುವ ಪ್ರೇಕ್ಷಕ ವರ್ಗಕ್ಕೆ ಭರಪೂರ ಮನರಂಜನೆ ನೀಡಬಲ್ಲದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಥೆ ಸರಳವಾದರೂ ಚಿತ್ರಕಥೆಯ ನಿರೂಪಣಾ ಶೈಲಿ ಹೊಸ ಅನುಭವವನ್ನು ನೀಡುತ್ತದೆ. ಅನುರುದ್ಧ್ ಅವರ ಸಂಗೀತ- ಹಿತವೆನಿಸುತ್ತದೆ. ಕಥೆಯ ತೂಕವನ್ನು ಹೆಚ್ಚಿಸಿದೆ. ಪ್ರೀತಿಗಾಗಿ ಹಂಬಲಿಸುತ್ತಿರುವ ಪಡಮ್‌ (ತಿರುಚಿತ್ರಂಬಲಂ), ಸೋತು ಗೆಲ್ಲುತ್ತಾನೋ, ಪ್ರೀತಿಯನ್ನು ಧಕ್ಕಿಸಿಕೊಳ್ಳುತ್ತಾನೋ ಎಂಬುದು ಕಥೆ.

ಮಧ್ಯಮ ವರ್ಗದ ಕುಟುಂಬಗಳ ಸುತ್ತ ನಡೆಯುವ ಈ ಸಿನಿಮಾದಲ್ಲಿ ಧನುಷ್‌ (ಪಡಂ) ಒಬ್ಬ ಡೆಲಿವರಿ ಬಾಯ್‌. ಅಪ್ಪ (ಪ್ರಕಾಶ್ ರಾಜ್‌) ಪೊಲೀಸ್‌ ಅಧಿಕಾರಿ. ತಾತ (ಭಾರತೀರಾಜ) ಜನರೇಷನ್‌ ಗ್ಯಾಪ್ ದಾಟಿ ಮೊಮ್ಮಗನೊಂದಿಗೆ ಜಾಲಿಯಾಗಿರುವ ವ್ಯಕ್ತಿ. ಜೊತೆಯಲ್ಲೇ ಕೂತು ಬಿಯರ್‌ ಹೀರುವ ಪ್ರೀತಿ. ಚಿಕ್ಕಂದಿನಿಂದಲೂ ಜೊತೆಯಲ್ಲೇ ಬೆಳೆದಿರುವ ಗೆಳತಿ ಶೋಭನಾ (ನಿತ್ಯಾ ಮೆನನ್‌), ಪಡಂನ ಎಲ್ಲ ಸುಖ, ದುಃಖ, ನೋವು, ನಲಿವು, ಇಷ್ಟ-ಕಷ್ಟಗಳ ಭಾಗ.

ಈ ಸಿನಿಮಾ ಕೇವಲ ಪ್ರೀತಿಯ ಹುಡುಕಾಟದ ಕಥೆಯಾಗಿಯಷ್ಟೇ ಉಳಿಯದೆ ಜನರೇಷನ್‌ಗಳ ನಡುವೆ ಇರುವ ಗೋಡೆಗಳನ್ನು ಕೆಡವುತ್ತ ಹೋಗುತ್ತದೆ. ಚಿತ್ರಕತೆಯ ಜೊತೆಗೆ ಕಥೆಗೆ ಪೂರಕವಾದ ಸಂಭಾಷಣೆ ಇಲ್ಲಿನ ಮತ್ತೊಂದು ಹೈಲೈಟ್‌. ಒಳ್ಳೆಯ ಕಥೆಗೆ ದೊಡ್ಡ ಬಜೆಟ್ ಬೇಕಿಲ್ಲ ಎಂಬುದನ್ನು ತಿರುಚಿತ್ರಂಬಲಂ ಮತ್ತೊಮ್ಮೆ ಸಾಬೀತು ಮಾಡಿದೆ.

ಇದನ್ನೂ ಓದಿರಿ: ಗಾಳಿಪಟ-2: ಯೋಗರಾಜ ಭಟ್ರ ಕಥೆಯಲ್ಲಿ ಲಾಜಿಕ್ಕೂ ಇಲ್ಲ ಮ್ಯಾಜಿಕ್ಕೂ ಇಲ್ಲ!

ವಿವಾದಿತ ಆಧಾತ್ಮಿಕ ಗುರುವೆನಿಸಿದ ಓಶೋ ರಜನೀಶ್‌, “ಪ್ರೀತಿ ಕೊಟ್ಟು ಸಂತೋಷ ಪಡುತ್ತದೆ. ಅಹಂಕಾರ ಕಿತ್ತುಕೊಂಡು ಸಂತೋಷಪಡುತ್ತದೆ (Love is happy when it is able to give something. The ego is happy when it is able to take something)” ಎಂದಿದ್ದರು. ಇಲ್ಲಿಯೂ ಅಷ್ಟೇ- ಕೊಟ್ಟು ಸಂತೋಷಪಡುವ ತಾತ್ವಿಕತೆಯೇ ಮೇಲುಗೈ ಸಾಧಿಸುತ್ತದೆ.

ಪಡಂನ ಮೂರು ಪ್ರೇಮ ಕಥೆಗಳು ಇಲ್ಲಿವೆ. ಸಿದ್ಧಮಾದರಿಗಳನ್ನು ಒಪ್ಪಿಕೊಂಡಿರುವ ವ್ಯವಸ್ಥೆಯಲ್ಲಿ ಮೂರನೇ ಪ್ರೇಮಕಥೆ- ತುಸು ಅವಸರವಾಯಿತೇನೋ ಎಂಬ ಅಳುಕು ಪ್ರೇಕ್ಷಕನನ್ನು ಕಾಡುವ ಹೊತ್ತಿಗೆ ಅದನ್ನು ಭಾವುಕ ಸನ್ನಿವೇಶಗಳ ಮೂಲಕ ಭಾರವೆನಿಸದಂತೆ ಕಟ್ಟಿಕೊಟ್ಟಿರುವುದು ಮಿತ್ರನ್‌ ಅವರ ನಿರೂಪಣಾ ಜಾಣ್ಮೆಗೆ ಕನ್ನಡಿ ಹಿಡಿದಿದೆ. ಕ್ಲೈಮ್ಯಾಕ್ಸ್‌ ನಿರೀಕ್ಷಿತವೆನಿಸಿದರೂ ಅದು ಪ್ರೇಕ್ಷಕನಿಗೆ ಒಪ್ಪಿತವಾಗುವುದು ಹೆಚ್ಚುಗಾರಿಕೆ. ಮನೆಮಂದಿಯೆಲ್ಲ ಒಟ್ಟಿಗೆ ಕೂತು ನೋಡಬಹುದಾದ ನವಿರು ಪ್ರೇಮಕಥೆ- ‘ತಿರುಚಿತ್ರಂಬಲಂ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...