Homeಪುಸ್ತಕ ವಿಮರ್ಶೆಹಲವು ಮುತ್ತುಗಳ ಸಾಗರ ತಿರುವಳ್ಳುವರ್‍ರವರ ತಿರುಕ್ಕುರಳ್

ಹಲವು ಮುತ್ತುಗಳ ಸಾಗರ ತಿರುವಳ್ಳುವರ್‍ರವರ ತಿರುಕ್ಕುರಳ್

- Advertisement -
- Advertisement -

ತಿರು ಎಂದರೆ ಶ್ರೀ ಎಂದು ಗೌರವಿಸುವ ಪದ. ಕುರಳ್ ಎಂದರೆ ಚಿಕ್ಕ. ತಮಿಳಿನಲ್ಲಿ ಛಂದಸ್ಸಿನ ಹೆಸರೂ ಹೌದು. ಕುರಳ್ ವೆಣ್ಬಾ ಎಂಬುದು ಆ ಛಂದಸ್ಸಿನ ಪೂರ್ಣ ಹೆಸರು. ನಾವು ಚುಟುಕ ಎನ್ನುವುದಿಲ್ಲವೇ ಹಾಗೆ.

ಇನ್ನು ಪುಟ್ಟ ಗಾತ್ರದ್ದಾಗಿ, ಬರಿಯ ಎರಡೇ ಸಾಲಿನದುದಾಗಿರುವ ವಚನಗಳ ಸಂಕಲನವಾಗಿರುವ ತಿರುಕ್ಕುಳ್ ತಮಿಳು ನಾಡಿನ ಅತ್ಯಂತ ಪ್ರಸಿದ್ಧವಾದ ಮತ್ತು ನಾಡು ನುಡಿಯಲ್ಲಿ ಬೆರೆತು ಹೋಗಿರುವ ಕೃತಿ. ಭಾಷೆ, ರಚನೆ, ವಿಷಯ ಮತ್ತು ಆಶಯ ಎಲ್ಲಾ ವಿಚಾರಗಳಲ್ಲೂ ಅದು ಸಾಮಾಜಿಕವಾಗಿ ಮನ್ನಣೆ ಪಡೆದುಕೊಂಡಿದೆ.

ನಿಜ, ತಿರುವಳ್ಳುವರ್ ಕರ್ನಾಟಕದ ಸರ್ವಜ್ಞರಂತೆ ಪುಟ್ಟ ಪುಟ್ಟ ವಾಕ್ಯಗಳಲ್ಲಿ ಜೀವನ ದರ್ಶನವನ್ನು ಮಾಡಿಸುತ್ತಾರೆ. ಹಾಗೆಯೇ ಕಬೀರರಂತೆಯೇ ಇವರು ನೇಯ್ಗೆಯವರು. ನೇಯುವ ಕೆಲಸ ಮಾಡುತ್ತಿದ್ದ ತಿರುವಳ್ಳುವರ್ ಹೊಲಿಯುವ, ಬೆಸೆಯುವ, ಕೂಡಿಸುವ ಕೆಲಸವನ್ನೇ ತಮ್ಮ ಸಾಹಿತ್ಯದ ಮೂಲಕವೂ ಮಾಡುತ್ತಿದ್ದರು. ಅವರ ಸಾಹಿತ್ಯದ ವಸ್ತ್ರವು ಸಮಾಜ, ಅಧ್ಯಾತ್ಮ, ಆತ್ಮಾವಲೋಕನ, ವ್ಯವಸ್ಥೆಯ ವಿಮರ್ಶೆ, ಮನುಷ್ಯತ್ವ, ವಿನಯತೆ; ಹೀಗೆ ವ್ಯಕ್ತಿಗತವಾಗಿ ಒಬ್ಬನ ಹಿತವಾದ ಬದುಕು ಮತ್ತು ಸಮಾಜದಲ್ಲಿ ಹದವಾದ ಮಿಳಿತಗಳೊಂದಾಗಿರುವಂತೆ ಎಳೆಗಳು ಒಂದರೊಳಗೊಂದು ನೇಯ್ದುಕೊಂಡಿರುತ್ತಿದ್ದವು.

“ಸಾಸವೆಯ ಕೊರೆದು ಏಳ್ಕಡಲನೊಳಹೊಗಿಸಿ ಅಡಗುವೊಲು ಸಮರಿದುವು ಕುರಳು” ಅಂದರೆ ಸಾಸುವೆಯನ್ನು ಕೊರೆದು ಟೊಳ್ಳು ಮಾಡಿ ಏಳು ಸಮುದ್ರಗಳನ್ನೂ ಅದರೊಳಗೆ ನುಗ್ಗಿಸಿ ಅಡಗಿಸಿದ ಹಾಗೆ ಈ ಕುರಳು ಎಂದು ಅಭಿಮಾನದಿಂದ ವಿಮರ್ಶಕರೊಬ್ಬರು ಹೇಳುತ್ತಾರೆ. ಈ ಮಾತನ್ನು ಅತ್ಯುತ್ಪ್ರೇಕ್ಷೆ ಎಂದುಕೊಳ್ಳದೇ ರೂಪಕವೆಂದು ವ್ಯಾಕರಣದಲ್ಲಿ ಅಲಂಕಾರವೆಂದು ಬಗೆದರೆ ಒಪ್ಪಿಕೊಳ್ಳುವುದರಲ್ಲಿ ಸಮಸ್ಯೆಯೇನೂ ಇಲ್ಲ.

ಆಗಿನ ಸಮಾಜ ಸುಧಾರಣಾ ದೃಷ್ಟಿಯಿಂದ ಆಗಿನ ಸುಧಾರಕರು ತಮ್ಮ ಕೃತಿಗಳಲ್ಲಿ ವ್ಯವಸ್ಥೆಯ ಅಮಾನವೀಯತೆಯನ್ನು ಧಿಕ್ಕರಿಸಿರುತ್ತಾರೆ, ಅನ್ಯಾಯವನ್ನು ವಿರೋಧಿಸಿರುತ್ತಾರೆ, ಆಗ ಕೊರತೆಯಿರುವ ಮಾನವೀಯತೆಯನ್ನು ಎತ್ತಿ ಹಿಡಿದಿರುತ್ತಾರೆ, ವರ್ಣ ಮತ್ತು ವರ್ಗ ಬೇಧಗಳ ಶೋಷಣೆಯನ್ನು, ಮೌಢ್ಯ, ಅಂಧಾನುಕರಣೆ ಮತ್ತು ಶುಷ್ಕ ಆಚರಣೆಗಳನ್ನು ಖಂಡಿಸಿರುತ್ತಾರೆ. ಆ ಕೃತಿಗಳು ಈಗಲೂ ಪ್ರಸ್ತುತವಾಗಿವೆ ಎಂದರೆ ಆಗಿದ್ದ ಸಮಸ್ಯೆಗಳು ಇನ್ನೂ ಪರಿಹಾರವಾಗಿಲ್ಲ ಎಂದೇ ಅರ್ಥ. ಯಾವಾಗ ಪ್ರಾಚೀನ ಸಮಾಜ ಸುಧಾರಕರ ಕೃತಿಗಳು ಇಂದಿಗೂ ಪ್ರಸ್ತುತ ಎಂದು ಆ ಕೃತಿಕಾರರ ಆರಾಧಕರು ಅಭಿಮಾನದಿಂದ ಹೇಳಿಕೊಳ್ಳುವಾಗ ನನಗೆ ನಾಚಿಕೆಯಾಗುತ್ತದೆ. ಇಷ್ಟು ಹೊತ್ತಿಗೆ ಅವುಗಳು ಅಪ್ರಸ್ತುತವಾಗಬೇಕಿತ್ತು. ಆಗಿಲ್ಲ ಎಂದರೆ ನಮ್ಮ ಸಮಾಜ ಇನ್ನೂ ಸುಧಾರಿಸಿಲ್ಲ ಎಂದೇ ಅರ್ಥ. ಹಳೆಯ ಸಮಸ್ಯೆಗಳು ಹೊಸಹೊಸ ರೂಪಗಳನ್ನು ತಾಳಿಕೊಂಡು ನಮ್ಮೊಡನೆ ಇರುವುದರಿಂದ ಇನ್ನೂ ಬುದ್ಧ, ಬಸವ, ಸರ್ವಜ್ಞ, ತಿರುವಳ್ಳುವರ್, ಕಬೀರ್, ಅಂಬೇಡ್ಕರ್, ಗಾಂಧಿ ಎಲ್ಲಾ ಪ್ರಸ್ತುತವಾಗಿಯೇ ಇರುವುದು.

ವ್ಯಕ್ತಿ ಪೂಜೆಯ ಗಮ್ಮತ್ತಿನಲ್ಲಿ ಕೆಲವೊಮ್ಮೆ ಆ ಕೃತಿಕಾರರ ಎಡವಟ್ಟುಗಳಿಗೆ ನಾವು ಒಂದೋ ಕುರುಡರಾಗಿಬಿಡುತ್ತೇವೆ ಅಥವಾ ಸಮರ್ಥಿಸಿಕೊಂಡು ಬಿಡುತ್ತೇವೆ. ಕುರುಡರಾಗುವುದು ತಪ್ಪು ಆದರೆ ಸಮರ್ಥಿಸುವುದು ಅಪರಾಧ. ತಿರುವಳ್ಳುವರ್ ವಿಷಯದಲ್ಲೇ ತೆಗೆದುಕೊಂಡರೆ, ಅವರ ಹೆಂಡತಿ ವಾಸುಗಿ ತಾನು ಪತಿವ್ರತೆಯೆಂದು ನಿರೂಪಿಸಲು ಮರಳಿನಲ್ಲಿ ಅನ್ನವನ್ನು ಮಾಡುತ್ತಾಳಂತೆ. ಇದೊಂದು ದಂತಕತೆಯೇ ಆಗಿದ್ದರೂ, ತಿರುವಳ್ಳುವರ್ ಹೆಣ್ಣಿನ ಪಾತಿವ್ರತ್ಯವನ್ನು ಎತ್ತಿ ಹಿಡಿಯುವ ಧೋರಣೆ ತೋರುತ್ತಾರೆ. ಇನ್ನು ತಿರುಕ್ಕುರಳಿನಲ್ಲಿಯೂ ಹೆಣ್ಣಾದವಳು ಮನೆಗಷ್ಟೇ ಶೋಭೆ ಮತ್ತು ಅವಳ ಬದ್ಧತೆ ಅವಳ ಸಂಸಾರವನ್ನು ಕಾಪಾಡುವುದು ಎಂದೇ ಪ್ರತಿಪಾದಿಸಿಕೊಂಡು ಬಂದಿದ್ದಾರೆ. ಅವರ ಕಾಲಘಟ್ಟದ ಅಗತ್ಯವೇ ಅವರಿಗೆ ಹಾಗೆ ನುಡಿಸಿರುತ್ತದೆ. ಪುರುಷರು ವ್ಯಾಪಾರಕ್ಕೆ, ವ್ಯವಹಾರಕ್ಕೆ, ಯುದ್ಧಕ್ಕೆ, ಇನ್ನಿತರ ಕಾರ್ಯಗಳಿಗೆಂದು ಮರಳಿ ಬರುವ ಭರವಸೆಯೇ ಇಲ್ಲದಂತೆ ಹೋಗುತ್ತಿದ್ದ ಸಂದರ್ಭದಲ್ಲಿ ಹೆಣ್ಣು ಮನೆಯಲ್ಲಿ ಹಿರಿಯರನ್ನು, ಮಕ್ಕಳನ್ನು, ಆಸ್ತಿಪಾಸ್ತಿಗಳನ್ನು ನೋಡಿಕೊಳ್ಳಬೇಕಾದ ಅನಿವಾರ್ಯತೆ ಮತ್ತು ಅಗತ್ಯತೆಗಳು ಇರುತ್ತಿದ್ದವು. ಆದರೆ ಅವು ಈಗ ನಮಗೆ ಪ್ರಸ್ತುತವಲ್ಲ. ಹಾಗೆಯೇ ಮನಸ್ಸಿನ ನಿಯಂತ್ರಣದ ಬಗ್ಗೆ, ಕೋಪವು ಉಂಟು ಮಾಡುವ ಕೆಡಕುಗಳ ಬಗ್ಗೆ ಹೇಳುವಂತಹ, ಆತ್ಮಾವಲೋಕನದ ಕುರಿತಾದ ಮಾತುಗಳು, ಅಲ್ಲಲ್ಲಿ ಒಂದಿಷ್ಟು ವ್ಯತ್ಯಾಸಗಳಿದ್ದರೂ, ಸಾಕಷ್ಟು ಅನ್ವಯವಾಗುವಂತವೇ ಆಗಿರುತ್ತವೆ. ಒಟ್ಟಾರೆ ಅವರೆಂತಹ ಮಹಾತ್ಮರೇ ಆಗಿರಲಿ, ಅವರೆಷ್ಟೇ ಜನಪ್ರಿಯರೇ ಆಗಿರಲಿ, ಅವರ ಮಾತುಗಳನ್ನು ಮತ್ತು ಅಭಿಪ್ರಾಯಗಳನ್ನು ತೆಗೆದುಕೊಳ್ಳುವಾಗ ಪ್ರಸ್ತುತ ಕಾಲದ ನಮ್ಮ ಬದುಕಿನಲ್ಲಿ, ನಾವಿರುವ ವ್ಯವಸ್ಥೆಯಲ್ಲಿ ಎಷ್ಟರಮಟ್ಟಿಗೆ ಪ್ರಸ್ತುತ ಎಂಬುದನ್ನು ಗಮನಿಸುವಷ್ಟರ ಮಟ್ಟಿಗಿನ ಪ್ರಜ್ಞೆಯ ಅವಶ್ಯಕತೆಯಂತೂ ಇದ್ದೇ ಇರುತ್ತದೆ.

ತಿರುವಳ್ಳುವರ್ ದೇವರ ಹಿರಿಮೆಯನ್ನು ವೈಭವೀಕರಿಸುವುದನ್ನು ನೋಡಿದಾಗ ಮನುಷ್ಯನ ಅಹಂಕಾರವನ್ನು ಮಣಿಸಿ ವಿನಯ ವಿಧೇಯತೆಯನ್ನು ತೋರಲು ಪ್ರಯತ್ನಿಸುವಂತೆ ತೋರುತ್ತದೆ. ತಿರುಕ್ಕುರಳ್ ಕೂಡಾ ಸುಂದರವಾದ ಮತ್ತು ಮೌಲ್ಯಗಳಿಂದ ಕೂಡಿರುವ ಕೃತಿಯೇ. ನಮ್ಮ ಈಗಿನ ಮಣ್ಣಿನಲ್ಲಿ ಬಿತ್ತಬೇಕಾದ ಬೀಜಗಳನ್ನು ಗೌರವದಿಂದಲೇ ಆಯ್ದುಕೊಳ್ಳಬೇಕು.

“ಮನದಲ್ಲಿ ತೊರೆಯದವರು, ತೊರೆದವರ ಹಾಗೆ ವಂಚಿಸುತ”
“ಬಾಳುವವರು, ಇವರಿಗಿಂತಲು ಬೇರೆ ಕಟುಕರಿಲ್ಲ.”
ಇದು ಮನಸ್ಸಿನಲ್ಲಿ ವೈರಾಗ್ಯವಿಲ್ಲದೇ ಹೆಸರಿಗೆ ಸಂನ್ಯಾಸಿಗಳಾಗಿರುವವರನ್ನು ಕುರಿತು ಮಾಡುವ ಟೀಕೆ.
“ತನ್ನ ತಾನ್ ಕಾಪಾಡಿಕೊಳ್ಳುವರೆ ಮುನಿಸ ತಡಕೊಳಬೇಕು
ತಡೆಯದಿರೆ ನನ್ನನೆ ಕೊಲ್ಲುವುದು ಮುನಿಸು”
“ತನಗೆ ಅಹಿತ ಎಂಬುದನು ತಾನು ಅರಿತವನು
ಬೇರೆ ಪ್ರಾಣಿಗೆ ಅಹಿತ ಮಾಡುವುದದೆಂತೊ.”
“ನುಣ್ಣನೆಯ ಶಾಸ್ತ್ರಗಳ ಹಲವ ಕಲಿತರೂ ತನ್ನ
ಸಹಜದರಿವೇ ಮತ್ತೆ ಮಿಕ್ಕು ನಿಲ್ಲುವುದು.”
ತಿರುವಳ್ಳುವರ್ ಸಂತೆಯಲ್ಲಿ ತಾವು ನೇಯ್ದ ವಸ್ತ್ರವನ್ನು ಮಾರಲು ಹೋದಾಗ ಮದಿಸಿದ ಯುವಕನೊಬ್ಬ ಬೆಲೆ ಕೇಳುತ್ತಾನೆ. ಅವರು ಎರಡು ಪಣ ಎನ್ನುತ್ತಾರೆ. ಅವನು ವಸ್ತ್ರವನ್ನು ಅರ್ಧಕ್ಕೆ ಹರಿದು ಕೇಳುತ್ತಾನೆ. ಅವರು ಒಂದು ಪಣವೆನ್ನುತ್ತಾರೆ. ಅದನ್ನೂ ಹರಿದ ಮೇಲೆ ಅರ್ಧ ಪಣ ಎನ್ನುತ್ತಾರೆ. ಆ ಯುವಕನು ವಸ್ತ್ರವನ್ನು ಸಂಪೂರ್ಣ ಹರಿದು ಚೂರು ಚೂರು ಮಾಡಿದ ಮೇಲೆ ಇದಕ್ಕೆ ಬೆಲೆ ಇಲ್ಲ. ನೀನೇ ತೆಗೆದಿಕೋ ಎನ್ನುತ್ತಾರೆ ತಿರುವಳ್ಳುವರ್. ನಿಮಗೇಕೆ ಕೋಪ ಬರಲಿಲ್ಲ ಎಂದು ಯುವಕ ಕೇಳಿದಾಗ ‘ತಾಳ್ಮೆ ಮತ್ತು ಕ್ಷಮೆಯ ಪಾಠ ನಿನಗೆ ಈಗ ಸಿಕ್ಕಿದೆ. ಅದರ ಮುಂದೆ ಈ ವಸ್ತ್ರದ ಬೆಲೆ ಏನು’ ಎಂದರಂತೆ. ಆತನಿಗೆ ತನ್ನ ಕೃತ್ಯದ ಬಗ್ಗೆ ನಾಚಿಕೆ ಎನಿಸಿ ಕ್ಷಮೆ ಕೇಳಿದನಂತೆ.

ಆಯ್ದಾದುಕೊಂಡಂತೆ ಹಲವು ಮುತ್ತುಗಳು ತಿರುಕ್ಕುರಳ್ಳಿನ ಸಾಗರದಲ್ಲಿ ಸಿಕ್ಕೇ ಸಿಗುವವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...