Homeಪುಸ್ತಕ ವಿಮರ್ಶೆಹಲವು ಮುತ್ತುಗಳ ಸಾಗರ ತಿರುವಳ್ಳುವರ್‍ರವರ ತಿರುಕ್ಕುರಳ್

ಹಲವು ಮುತ್ತುಗಳ ಸಾಗರ ತಿರುವಳ್ಳುವರ್‍ರವರ ತಿರುಕ್ಕುರಳ್

- Advertisement -
- Advertisement -

ತಿರು ಎಂದರೆ ಶ್ರೀ ಎಂದು ಗೌರವಿಸುವ ಪದ. ಕುರಳ್ ಎಂದರೆ ಚಿಕ್ಕ. ತಮಿಳಿನಲ್ಲಿ ಛಂದಸ್ಸಿನ ಹೆಸರೂ ಹೌದು. ಕುರಳ್ ವೆಣ್ಬಾ ಎಂಬುದು ಆ ಛಂದಸ್ಸಿನ ಪೂರ್ಣ ಹೆಸರು. ನಾವು ಚುಟುಕ ಎನ್ನುವುದಿಲ್ಲವೇ ಹಾಗೆ.

ಇನ್ನು ಪುಟ್ಟ ಗಾತ್ರದ್ದಾಗಿ, ಬರಿಯ ಎರಡೇ ಸಾಲಿನದುದಾಗಿರುವ ವಚನಗಳ ಸಂಕಲನವಾಗಿರುವ ತಿರುಕ್ಕುಳ್ ತಮಿಳು ನಾಡಿನ ಅತ್ಯಂತ ಪ್ರಸಿದ್ಧವಾದ ಮತ್ತು ನಾಡು ನುಡಿಯಲ್ಲಿ ಬೆರೆತು ಹೋಗಿರುವ ಕೃತಿ. ಭಾಷೆ, ರಚನೆ, ವಿಷಯ ಮತ್ತು ಆಶಯ ಎಲ್ಲಾ ವಿಚಾರಗಳಲ್ಲೂ ಅದು ಸಾಮಾಜಿಕವಾಗಿ ಮನ್ನಣೆ ಪಡೆದುಕೊಂಡಿದೆ.

ನಿಜ, ತಿರುವಳ್ಳುವರ್ ಕರ್ನಾಟಕದ ಸರ್ವಜ್ಞರಂತೆ ಪುಟ್ಟ ಪುಟ್ಟ ವಾಕ್ಯಗಳಲ್ಲಿ ಜೀವನ ದರ್ಶನವನ್ನು ಮಾಡಿಸುತ್ತಾರೆ. ಹಾಗೆಯೇ ಕಬೀರರಂತೆಯೇ ಇವರು ನೇಯ್ಗೆಯವರು. ನೇಯುವ ಕೆಲಸ ಮಾಡುತ್ತಿದ್ದ ತಿರುವಳ್ಳುವರ್ ಹೊಲಿಯುವ, ಬೆಸೆಯುವ, ಕೂಡಿಸುವ ಕೆಲಸವನ್ನೇ ತಮ್ಮ ಸಾಹಿತ್ಯದ ಮೂಲಕವೂ ಮಾಡುತ್ತಿದ್ದರು. ಅವರ ಸಾಹಿತ್ಯದ ವಸ್ತ್ರವು ಸಮಾಜ, ಅಧ್ಯಾತ್ಮ, ಆತ್ಮಾವಲೋಕನ, ವ್ಯವಸ್ಥೆಯ ವಿಮರ್ಶೆ, ಮನುಷ್ಯತ್ವ, ವಿನಯತೆ; ಹೀಗೆ ವ್ಯಕ್ತಿಗತವಾಗಿ ಒಬ್ಬನ ಹಿತವಾದ ಬದುಕು ಮತ್ತು ಸಮಾಜದಲ್ಲಿ ಹದವಾದ ಮಿಳಿತಗಳೊಂದಾಗಿರುವಂತೆ ಎಳೆಗಳು ಒಂದರೊಳಗೊಂದು ನೇಯ್ದುಕೊಂಡಿರುತ್ತಿದ್ದವು.

“ಸಾಸವೆಯ ಕೊರೆದು ಏಳ್ಕಡಲನೊಳಹೊಗಿಸಿ ಅಡಗುವೊಲು ಸಮರಿದುವು ಕುರಳು” ಅಂದರೆ ಸಾಸುವೆಯನ್ನು ಕೊರೆದು ಟೊಳ್ಳು ಮಾಡಿ ಏಳು ಸಮುದ್ರಗಳನ್ನೂ ಅದರೊಳಗೆ ನುಗ್ಗಿಸಿ ಅಡಗಿಸಿದ ಹಾಗೆ ಈ ಕುರಳು ಎಂದು ಅಭಿಮಾನದಿಂದ ವಿಮರ್ಶಕರೊಬ್ಬರು ಹೇಳುತ್ತಾರೆ. ಈ ಮಾತನ್ನು ಅತ್ಯುತ್ಪ್ರೇಕ್ಷೆ ಎಂದುಕೊಳ್ಳದೇ ರೂಪಕವೆಂದು ವ್ಯಾಕರಣದಲ್ಲಿ ಅಲಂಕಾರವೆಂದು ಬಗೆದರೆ ಒಪ್ಪಿಕೊಳ್ಳುವುದರಲ್ಲಿ ಸಮಸ್ಯೆಯೇನೂ ಇಲ್ಲ.

ಆಗಿನ ಸಮಾಜ ಸುಧಾರಣಾ ದೃಷ್ಟಿಯಿಂದ ಆಗಿನ ಸುಧಾರಕರು ತಮ್ಮ ಕೃತಿಗಳಲ್ಲಿ ವ್ಯವಸ್ಥೆಯ ಅಮಾನವೀಯತೆಯನ್ನು ಧಿಕ್ಕರಿಸಿರುತ್ತಾರೆ, ಅನ್ಯಾಯವನ್ನು ವಿರೋಧಿಸಿರುತ್ತಾರೆ, ಆಗ ಕೊರತೆಯಿರುವ ಮಾನವೀಯತೆಯನ್ನು ಎತ್ತಿ ಹಿಡಿದಿರುತ್ತಾರೆ, ವರ್ಣ ಮತ್ತು ವರ್ಗ ಬೇಧಗಳ ಶೋಷಣೆಯನ್ನು, ಮೌಢ್ಯ, ಅಂಧಾನುಕರಣೆ ಮತ್ತು ಶುಷ್ಕ ಆಚರಣೆಗಳನ್ನು ಖಂಡಿಸಿರುತ್ತಾರೆ. ಆ ಕೃತಿಗಳು ಈಗಲೂ ಪ್ರಸ್ತುತವಾಗಿವೆ ಎಂದರೆ ಆಗಿದ್ದ ಸಮಸ್ಯೆಗಳು ಇನ್ನೂ ಪರಿಹಾರವಾಗಿಲ್ಲ ಎಂದೇ ಅರ್ಥ. ಯಾವಾಗ ಪ್ರಾಚೀನ ಸಮಾಜ ಸುಧಾರಕರ ಕೃತಿಗಳು ಇಂದಿಗೂ ಪ್ರಸ್ತುತ ಎಂದು ಆ ಕೃತಿಕಾರರ ಆರಾಧಕರು ಅಭಿಮಾನದಿಂದ ಹೇಳಿಕೊಳ್ಳುವಾಗ ನನಗೆ ನಾಚಿಕೆಯಾಗುತ್ತದೆ. ಇಷ್ಟು ಹೊತ್ತಿಗೆ ಅವುಗಳು ಅಪ್ರಸ್ತುತವಾಗಬೇಕಿತ್ತು. ಆಗಿಲ್ಲ ಎಂದರೆ ನಮ್ಮ ಸಮಾಜ ಇನ್ನೂ ಸುಧಾರಿಸಿಲ್ಲ ಎಂದೇ ಅರ್ಥ. ಹಳೆಯ ಸಮಸ್ಯೆಗಳು ಹೊಸಹೊಸ ರೂಪಗಳನ್ನು ತಾಳಿಕೊಂಡು ನಮ್ಮೊಡನೆ ಇರುವುದರಿಂದ ಇನ್ನೂ ಬುದ್ಧ, ಬಸವ, ಸರ್ವಜ್ಞ, ತಿರುವಳ್ಳುವರ್, ಕಬೀರ್, ಅಂಬೇಡ್ಕರ್, ಗಾಂಧಿ ಎಲ್ಲಾ ಪ್ರಸ್ತುತವಾಗಿಯೇ ಇರುವುದು.

ವ್ಯಕ್ತಿ ಪೂಜೆಯ ಗಮ್ಮತ್ತಿನಲ್ಲಿ ಕೆಲವೊಮ್ಮೆ ಆ ಕೃತಿಕಾರರ ಎಡವಟ್ಟುಗಳಿಗೆ ನಾವು ಒಂದೋ ಕುರುಡರಾಗಿಬಿಡುತ್ತೇವೆ ಅಥವಾ ಸಮರ್ಥಿಸಿಕೊಂಡು ಬಿಡುತ್ತೇವೆ. ಕುರುಡರಾಗುವುದು ತಪ್ಪು ಆದರೆ ಸಮರ್ಥಿಸುವುದು ಅಪರಾಧ. ತಿರುವಳ್ಳುವರ್ ವಿಷಯದಲ್ಲೇ ತೆಗೆದುಕೊಂಡರೆ, ಅವರ ಹೆಂಡತಿ ವಾಸುಗಿ ತಾನು ಪತಿವ್ರತೆಯೆಂದು ನಿರೂಪಿಸಲು ಮರಳಿನಲ್ಲಿ ಅನ್ನವನ್ನು ಮಾಡುತ್ತಾಳಂತೆ. ಇದೊಂದು ದಂತಕತೆಯೇ ಆಗಿದ್ದರೂ, ತಿರುವಳ್ಳುವರ್ ಹೆಣ್ಣಿನ ಪಾತಿವ್ರತ್ಯವನ್ನು ಎತ್ತಿ ಹಿಡಿಯುವ ಧೋರಣೆ ತೋರುತ್ತಾರೆ. ಇನ್ನು ತಿರುಕ್ಕುರಳಿನಲ್ಲಿಯೂ ಹೆಣ್ಣಾದವಳು ಮನೆಗಷ್ಟೇ ಶೋಭೆ ಮತ್ತು ಅವಳ ಬದ್ಧತೆ ಅವಳ ಸಂಸಾರವನ್ನು ಕಾಪಾಡುವುದು ಎಂದೇ ಪ್ರತಿಪಾದಿಸಿಕೊಂಡು ಬಂದಿದ್ದಾರೆ. ಅವರ ಕಾಲಘಟ್ಟದ ಅಗತ್ಯವೇ ಅವರಿಗೆ ಹಾಗೆ ನುಡಿಸಿರುತ್ತದೆ. ಪುರುಷರು ವ್ಯಾಪಾರಕ್ಕೆ, ವ್ಯವಹಾರಕ್ಕೆ, ಯುದ್ಧಕ್ಕೆ, ಇನ್ನಿತರ ಕಾರ್ಯಗಳಿಗೆಂದು ಮರಳಿ ಬರುವ ಭರವಸೆಯೇ ಇಲ್ಲದಂತೆ ಹೋಗುತ್ತಿದ್ದ ಸಂದರ್ಭದಲ್ಲಿ ಹೆಣ್ಣು ಮನೆಯಲ್ಲಿ ಹಿರಿಯರನ್ನು, ಮಕ್ಕಳನ್ನು, ಆಸ್ತಿಪಾಸ್ತಿಗಳನ್ನು ನೋಡಿಕೊಳ್ಳಬೇಕಾದ ಅನಿವಾರ್ಯತೆ ಮತ್ತು ಅಗತ್ಯತೆಗಳು ಇರುತ್ತಿದ್ದವು. ಆದರೆ ಅವು ಈಗ ನಮಗೆ ಪ್ರಸ್ತುತವಲ್ಲ. ಹಾಗೆಯೇ ಮನಸ್ಸಿನ ನಿಯಂತ್ರಣದ ಬಗ್ಗೆ, ಕೋಪವು ಉಂಟು ಮಾಡುವ ಕೆಡಕುಗಳ ಬಗ್ಗೆ ಹೇಳುವಂತಹ, ಆತ್ಮಾವಲೋಕನದ ಕುರಿತಾದ ಮಾತುಗಳು, ಅಲ್ಲಲ್ಲಿ ಒಂದಿಷ್ಟು ವ್ಯತ್ಯಾಸಗಳಿದ್ದರೂ, ಸಾಕಷ್ಟು ಅನ್ವಯವಾಗುವಂತವೇ ಆಗಿರುತ್ತವೆ. ಒಟ್ಟಾರೆ ಅವರೆಂತಹ ಮಹಾತ್ಮರೇ ಆಗಿರಲಿ, ಅವರೆಷ್ಟೇ ಜನಪ್ರಿಯರೇ ಆಗಿರಲಿ, ಅವರ ಮಾತುಗಳನ್ನು ಮತ್ತು ಅಭಿಪ್ರಾಯಗಳನ್ನು ತೆಗೆದುಕೊಳ್ಳುವಾಗ ಪ್ರಸ್ತುತ ಕಾಲದ ನಮ್ಮ ಬದುಕಿನಲ್ಲಿ, ನಾವಿರುವ ವ್ಯವಸ್ಥೆಯಲ್ಲಿ ಎಷ್ಟರಮಟ್ಟಿಗೆ ಪ್ರಸ್ತುತ ಎಂಬುದನ್ನು ಗಮನಿಸುವಷ್ಟರ ಮಟ್ಟಿಗಿನ ಪ್ರಜ್ಞೆಯ ಅವಶ್ಯಕತೆಯಂತೂ ಇದ್ದೇ ಇರುತ್ತದೆ.

ತಿರುವಳ್ಳುವರ್ ದೇವರ ಹಿರಿಮೆಯನ್ನು ವೈಭವೀಕರಿಸುವುದನ್ನು ನೋಡಿದಾಗ ಮನುಷ್ಯನ ಅಹಂಕಾರವನ್ನು ಮಣಿಸಿ ವಿನಯ ವಿಧೇಯತೆಯನ್ನು ತೋರಲು ಪ್ರಯತ್ನಿಸುವಂತೆ ತೋರುತ್ತದೆ. ತಿರುಕ್ಕುರಳ್ ಕೂಡಾ ಸುಂದರವಾದ ಮತ್ತು ಮೌಲ್ಯಗಳಿಂದ ಕೂಡಿರುವ ಕೃತಿಯೇ. ನಮ್ಮ ಈಗಿನ ಮಣ್ಣಿನಲ್ಲಿ ಬಿತ್ತಬೇಕಾದ ಬೀಜಗಳನ್ನು ಗೌರವದಿಂದಲೇ ಆಯ್ದುಕೊಳ್ಳಬೇಕು.

“ಮನದಲ್ಲಿ ತೊರೆಯದವರು, ತೊರೆದವರ ಹಾಗೆ ವಂಚಿಸುತ”
“ಬಾಳುವವರು, ಇವರಿಗಿಂತಲು ಬೇರೆ ಕಟುಕರಿಲ್ಲ.”
ಇದು ಮನಸ್ಸಿನಲ್ಲಿ ವೈರಾಗ್ಯವಿಲ್ಲದೇ ಹೆಸರಿಗೆ ಸಂನ್ಯಾಸಿಗಳಾಗಿರುವವರನ್ನು ಕುರಿತು ಮಾಡುವ ಟೀಕೆ.
“ತನ್ನ ತಾನ್ ಕಾಪಾಡಿಕೊಳ್ಳುವರೆ ಮುನಿಸ ತಡಕೊಳಬೇಕು
ತಡೆಯದಿರೆ ನನ್ನನೆ ಕೊಲ್ಲುವುದು ಮುನಿಸು”
“ತನಗೆ ಅಹಿತ ಎಂಬುದನು ತಾನು ಅರಿತವನು
ಬೇರೆ ಪ್ರಾಣಿಗೆ ಅಹಿತ ಮಾಡುವುದದೆಂತೊ.”
“ನುಣ್ಣನೆಯ ಶಾಸ್ತ್ರಗಳ ಹಲವ ಕಲಿತರೂ ತನ್ನ
ಸಹಜದರಿವೇ ಮತ್ತೆ ಮಿಕ್ಕು ನಿಲ್ಲುವುದು.”
ತಿರುವಳ್ಳುವರ್ ಸಂತೆಯಲ್ಲಿ ತಾವು ನೇಯ್ದ ವಸ್ತ್ರವನ್ನು ಮಾರಲು ಹೋದಾಗ ಮದಿಸಿದ ಯುವಕನೊಬ್ಬ ಬೆಲೆ ಕೇಳುತ್ತಾನೆ. ಅವರು ಎರಡು ಪಣ ಎನ್ನುತ್ತಾರೆ. ಅವನು ವಸ್ತ್ರವನ್ನು ಅರ್ಧಕ್ಕೆ ಹರಿದು ಕೇಳುತ್ತಾನೆ. ಅವರು ಒಂದು ಪಣವೆನ್ನುತ್ತಾರೆ. ಅದನ್ನೂ ಹರಿದ ಮೇಲೆ ಅರ್ಧ ಪಣ ಎನ್ನುತ್ತಾರೆ. ಆ ಯುವಕನು ವಸ್ತ್ರವನ್ನು ಸಂಪೂರ್ಣ ಹರಿದು ಚೂರು ಚೂರು ಮಾಡಿದ ಮೇಲೆ ಇದಕ್ಕೆ ಬೆಲೆ ಇಲ್ಲ. ನೀನೇ ತೆಗೆದಿಕೋ ಎನ್ನುತ್ತಾರೆ ತಿರುವಳ್ಳುವರ್. ನಿಮಗೇಕೆ ಕೋಪ ಬರಲಿಲ್ಲ ಎಂದು ಯುವಕ ಕೇಳಿದಾಗ ‘ತಾಳ್ಮೆ ಮತ್ತು ಕ್ಷಮೆಯ ಪಾಠ ನಿನಗೆ ಈಗ ಸಿಕ್ಕಿದೆ. ಅದರ ಮುಂದೆ ಈ ವಸ್ತ್ರದ ಬೆಲೆ ಏನು’ ಎಂದರಂತೆ. ಆತನಿಗೆ ತನ್ನ ಕೃತ್ಯದ ಬಗ್ಗೆ ನಾಚಿಕೆ ಎನಿಸಿ ಕ್ಷಮೆ ಕೇಳಿದನಂತೆ.

ಆಯ್ದಾದುಕೊಂಡಂತೆ ಹಲವು ಮುತ್ತುಗಳು ತಿರುಕ್ಕುರಳ್ಳಿನ ಸಾಗರದಲ್ಲಿ ಸಿಕ್ಕೇ ಸಿಗುವವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...